Breaking News

ರಾಷ್ಟ್ರೀಯ

ಗೋದ್ರಾ ರೈಲಿಗೆ ಬೆಂಕಿ ಹಚ್ಚಿದ ಮೂವರು ಅಪರಾಧಿಗಳಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್​

ನವದೆಹಲಿ: ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಘಟನೆ ಗಂಭೀರವಾದುದು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಕೋಚ್‌ಗೆ ಕಲ್ಲೆಸೆದು, ಪ್ರಯಾಣಿಕರನ್ನು ದೋಚಿದ್ದ ಮೂವರು ಆರೋಪಿಗಳ ಜಾಮೀನನ್ನು ಸೋಮವಾರ ತಿರಸ್ಕರಿಸಿದೆ.   2002 ರ ಫೆಬ್ರವರಿ 27 ರಂದು ಗುಜರಾತ್​ನ ಗೋಧ್ರಾದಲ್ಲಿ ರೈಲಿನ ಕೋಚ್​ಗೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿತ್ತು. ದುರ್ಘಟನೆಯಲ್ಲಿ 59 ಜನರು ಅಗ್ನಿಗಾಹುತಿಯಾಗಿ, ಹಲವರು ಗಾಯಗೊಂಡಿದ್ದರು. ಬಳಿಕ ಇದು ರಾಜ್ಯದ ಅನೇಕ ಭಾಗಗಳಲ್ಲಿ ದೊಡ್ಡ ಗಲಭೆ, ಹತ್ಯಾಕಾಂಡಕ್ಕೆ ಕಾರಣವಾಗಿತ್ತು. ಅಂತಹ ಪ್ರಕರಣದ …

Read More »

ಶನಿವಾರ ಒಂದೇ ದಿನ ರಾಜ್ಯಾದ್ಯಂತ 31 ಅಪಘಾತದಲ್ಲಿ 38 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಕುರಿತು ಆತಂಕ ವ್ಯಕ್ತಪಡಿಸಿರುವ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಶನಿವಾರ ಒಂದೇ ದಿನ ಸಂಭವಿಸಿದ ಅಪಘಾತಗಳನ್ನ ಆಧರಿಸಿ ‘ಕರಾಳ ಶನಿವಾರ’ ಎಂದಿದ್ದಾರೆ‌. ಶನಿವಾರ ಒಂದೇ ದಿನ ರಾಜ್ಯದಲ್ಲಿ, ಚಿತ್ರದುರ್ಗದಲ್ಲಿ ಕಾರು-ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಸಾವನ್ನಪ್ಪಿದ ಪ್ರಕರಣ ಸೇರಿದಂತೆ ಶನಿವಾರ ಒಂದೇ ದಿನ ರಾಜ್ಯಾದ್ಯಂತ ವಿವಿಧ ಅಪಘಾತಗಳಲ್ಲಿ ಒಟ್ಟು 38 ಜನ ಪ್ರಾಣ …

Read More »

ಉಪೇಂದ್ರ ಅವರ ಹೇಳಿಕೆಯಿಂದ ಇಡೀ ಸಮಾಜಕ್ಕೆ ನೋವಾಗಿದೆ: ಸಚಿವ ಮಹದೇವಪ್ಪ

ಮೈಸೂರು: ಸಮಾಜಕ್ಕೆ ಮಾರ್ಗದರ್ಶನ ಮಾಡುವವರೇ ಈ ರೀತಿ ಮಾತನಾಡುವುದು ಎಷ್ಟು ಸರಿ. ಶತಮಾನಗಳಿಂದ ಶೋಷಿತವಾಗಿರುವ ಸಮುದಾಯವನ್ನು ಮತ್ತೆ ಯಾಕೆ ನೋಯಿಸುತ್ತೀರಿ. ಉಪೇಂದ್ರ ಅವರ ಹೇಳಿಕೆಯಿಂದ ಇಡೀ ಸಮಾಜಕ್ಕೆ ನೋವಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ ಸಿ.ಮಹದೇವಪ್ಪ ಹೇಳಿದರು. ಇಂದು ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಟ ಉಪೇಂದ್ರ ಹೇಳಿಕೆ ಅವರ ಕೊಳಕು ಮನಸ್ಸನ್ನು ತೋರಿಸುತ್ತದೆ. ಅವರಾಡಿದ ಮಾತಿನಿಂದ ಇಡೀ ಸಮಾಜಕ್ಕೆ ನೋವಾಗಿದೆ. ಅವರ ವಿರುದ್ಧ …

Read More »

ಮಾನಸಿಕ ಖಿನ್ನತೆಯಲ್ಲಿ ಅಶ್ವತ್ಥನಾರಾಯಣ್​ ಅವರಿದ್ದಾರೆ ಎಂದ ಡಿ ಕೆ ಶಿವಕುಮಾರ್

ಬೆಂಗಳೂರು : ಇವರು ಅಶ್ವತ್ಥನಾರಾಯಣ್​ ಅಲ್ಲ. ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾಜಿ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ರಾಮನಗರ ಕ್ಲೀನ್ ಮಾಡುತ್ತೇನೆ ಎಂದು ಬಂದವರು, ಜಿಲ್ಲೆಯಲ್ಲಿ ಅವರ ಪಕ್ಷವನ್ನೇ ಕ್ಲೀನ್ ಮಾಡಿದರು. ಆ ಮಾನಸಿಕ ಖಿನ್ನತೆಯಲ್ಲಿ ಅವರಿದ್ದಾರೆ. ಅಶ್ವತ್ಥನಾರಾಯಣ್ ಅವರು ತಮ್ಮ ಇಲಾಖೆಯಲ್ಲಿ ಹಾಗೂ ಬೆಂಗಳೂರಿನಲ್ಲಿ ಏನೆಲ್ಲಾ ಮಾಡಿದ್ದಾರೆ ಎಂಬ …

Read More »

ಲೋಕಸಭೆಗೆ ಶೀಘ್ರದಲ್ಲೇ ಬಿಜೆಪಿ ಆಕಾಂಕ್ಷಿಗಳ ಪಟ್ಟಿ:B.S.Y.

ಶಿವಮೊಗ್ಗ : “ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಆಕಾಂಕ್ಷಿಗಳ ಪಟ್ಟಿಯನ್ನು ಶೀಘ್ರದಲ್ಲೇ ತಯಾರಿಸಲಾಗುವುದು” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಇಂದು ಶಿವಮೊಗ್ಗದ ವಿನೋಬ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಲೋಕಸಭೆ ಚುನಾವಣೆ ಆಕಾಂಕ್ಷಿಗಳ ಬಗ್ಗೆ ಚರ್ಚೆ ಶುರುವಾಗಿಲ್ಲ. ಆದಷ್ಟು ಬೇಗ ಸ್ಪರ್ಧಿಸುವ ಆಕಾಂಕ್ಷಿಗಳ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಕಳೆದ ಲೋಕಸಭೆ ಚುನಾವಣೆಯಂತೆ ಈ ಬಾರಿಯೂ 25ಕ್ಕೆ 25 ಕ್ಷೇತ್ರವನ್ನೂ ಗೆಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ” …

Read More »

ವೆಸ್ಟ್​ ಇಂಡೀಸ್​ ವಿರುದ್ಧ ಸರಣಿ ಕೈಚೆಲ್ಲಿದ ಭಾರತ.. ಹಾರ್ದಿಕ್​ ಬಗ್ಗೆ ವೆಂಕಟೇಶ್​ ಪ್ರಸಾದ್​ ಬೇಸರ

ಮಾಜಿ ಬೌಲರ್ ವೆಂಕಟೇಶ್​ ಪ್ರಸಾದ್​ ಅವರು ಭಾರತೀಯ ತಂಡದ ಆಟಗಾರರಿಗೆ ತಮ್ಮ ಕೌಶಲ್ಯವನ್ನು ಸುಧಾರಿಸಲು ಸಲಹೆ ನೀಡಿದ್ದಾರೆ ಮತ್ತು ಕ್ಯಾಪ್ಟನ್ ಹಾರ್ದಿಕ್ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಲಾಡರ್​ಹಿಲ್​, ಫ್ಲೋರಿಡಾ: ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನ್ನು ಕಂಡಿತು. ಪಂದ್ಯ ಹಾಗೂ ಸರಣಿ ಸೋತ ಬಳಿಕ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ನೀಡಿರುವ ಹೇಳಿಕೆ ಟೀಕೆಗೆ ಗುರಿಯಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಎರಡು T20 …

Read More »

MSP: 9 ವರ್ಷಗಳಲ್ಲಿ ಜೋಳ, ಸಜ್ಜೆ, ರಾಗಿಯ ಕನಿಷ್ಠ ಬೆಂಬಲ ಬೆಲೆ ಶೇ 100ರಿಂದ 150ರಷ್ಟು ಹೆಚ್ಚಳ

ನವದೆಹಲಿ : ಕಳೆದ ಒಂಬತ್ತು ವರ್ಷಗಳಲ್ಲಿ ಜೋಳ, ಸಜ್ಜೆ ಮತ್ತು ರಾಗಿಯ ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್​​ಪಿ) ಶೇ 100ರಿಂದ ಶೇ 150ರಷ್ಟು ಹೆಚ್ಚಳವಾಗಿದೆ. ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2014-15 ಮತ್ತು 2023-24ರ ನಡುವೆ ಜೋಳದ ಎಂಎಸ್​ಪಿ ಶೇಕಡಾ 108 ರಷ್ಟು ಹೆಚ್ಚಾಗಿದೆ. 2014-15ರಲ್ಲಿ ಜೋಳದ ಕನಿಷ್ಠ ಬೆಂಬಲ ಬೆಲೆ ಕ್ವಿಂಟಾಲ್​ಗೆ 1,550 ರೂ.ಗಳಷ್ಟಿತ್ತು. ಇದು 2023-24ರಲ್ಲಿ ಪ್ರತಿ ಕ್ವಿಂಟಾಲ್​ಗೆ ಶೇ 108ರಷ್ಟು ಏರಿಕೆಯಾಗಿ 3,225 …

Read More »

ಮಾಯಾವತಿ ಜನ್ಮದಿನದಂದು ಮಣ್ಣಿನ ಕೇಕ್ ಕತ್ತರಿಸಿದ ಆರೋಪ: ಮೂವರ ಬಂಧನ

ಸಂಭಾಲ್ (ಉತ್ತರ ಪ್ರದೇಶ): ಎಂಟು ವರ್ಷಗಳ ಹಿಂದೆ ಬಹುಜನ ಸಮಾಜ ಪಕ್ಷದ (ಬಿಎಸ್​ಪಿ) ಮುಖ್ಯಸ್ಥೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರ ಜನ್ಮದಿನದಂದು ಮಣ್ಣಿನ ಕೇಕ್ ಕತ್ತರಿಸಿ, ಮಣ್ಣಿನ ಲಡ್ಡುಗಳನ್ನು ವಿತರಿಸಿದ್ದ ಆರೋಪ ಪ್ರಕರಣದಲ್ಲಿ ​ಮೂವರನ್ನು ಸಂಭಾಲ್ ಪೊಲೀಸರು ಬಂಧಿಸಿದ್ದಾರೆ. ಶನಿವಾರ ನ್ಯಾಯಾಲಯ ಹೊರಡಿಸಿದ ಬಂಧನ ವಾರೆಂಟ್​ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಶಕೀಲ್ ಉರ್ ರೆಹಮಾನ್ ಮಲಿಕ್, ನೂರ್ ಖಾನ್ ಹಾಗೂ ಜುಲ್ಫಿಕರ್​ ಎಂಬುವವರೇ ಬಂಧಿತರೆಂದು ಗುರುತಿಸಲಾಗಿದೆ. …

Read More »

ಗಂಗಾವತಿ: ಗ್ರಾ.ಪಂಚಾಯಿತಿ ಅಧ್ಯಕ್ಷಗಿರಿ ಮೀಸಲಾತಿ ಸಂಘರ್ಷ; ಹಲವರಿಗೆ ಗಾಯ, ಬೂದಗುಂಪಾ ಉದ್ವಿಗ್ನ

ಗಂಗಾವತಿ (ಕೊಪ್ಪಳ): ಗ್ರಾಮ ಪಂಚಾಯಿತಿಗೆ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಪ್ರಕಟವಾದ ಮೀಸಲಾತಿ ಅವೈಜ್ಞಾನಿಕವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗಿದೆ. ಪರಸ್ಪರ ದೊಣ್ಣೆ, ರಾಡ್ ಸೇರಿದಂತೆ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಕಾರಟಗಿ ತಾಲ್ಲೂಕಿನ ಬೂದಗುಂಪಾ ಗ್ರಾಮದಲ್ಲಿ ಇಂದು (ಭಾನುವಾರ) ಘಟನೆ ನಡೆಯಿತು. ಗಂಭೀರ ಗಾಯಗೊಳಗಾದವರನ್ನು ಸಮುದಾಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರನ್ನು ಗಂಗಾವತಿ ಉಪವಿಭಾಗ ಆಸ್ಪತ್ರೆಗೆ ಕಳುಹಿಸಲಾಗಿದೆ. ಸದ್ಯ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. …

Read More »

ಬೊಮ್ಮಾಯಿ ಸರ್ಕಾರ ₹1.5 ಲಕ್ಷ ಕೋಟಿ ಮೌಲ್ಯದ ಟೆಂಡರ್​ ಕರೆದು ಕಿಕ್‌ಬ್ಯಾಕ್ ಪಡೆದಿತ್ತು- ಹೆಚ್.ವಿಶ್ವನಾಥ್

ಬೆಳಗಾವಿ : “ವಿಧಾನಸಭೆ ಚುನಾವಣೆಗೂ ಮುನ್ನ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದೂವರೆ ಲಕ್ಷ ಕೋಟಿ ರೂಪಾಯಿ ಮೌಲ್ಯದ ಟೆಂಡರ್ ಕರೆದು ಕಿಕ್ ಬ್ಯಾಕ್ ತೆಗೆದುಕೊಂಡಿದೆ” ಎಂದು ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ ಗಂಭೀರ ಆರೋಪ ಮಾಡಿದ್ದಾರೆ. ಬಿಬಿಎಂಪಿ ಗುತ್ತಿಗೆದಾರರಿಂದ ಕಮಿಷನ್ ಆರೋಪದ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಮಾತನಾಡುವುದು ಸುಲಭ, ಮಾತನಾಡುವವನು ಸತ್ಯವಂತನಿರಬೇಕು. ಇಡೀ ದೇಶ, ರಾಜ್ಯದಲ್ಲಿ ನೀ ಕಳ್ಳ, ನೀ ಕಳ್ಳ ಎನ್ನುತ್ತಾರೆ. ಆದರೆ ಯಾರು ಕಳ್ಳ …

Read More »