Breaking News

ರಾಷ್ಟ್ರೀಯ

ಏಕಕಾಲಕ್ಕೆ ಚುನಾವಣೆ ನಡೆದರೆ ಇವಿಎಂ-ವಿವಿಪ್ಯಾಟ್ ಖರೀದಿಗೆ ₹9,300 ಕೋಟಿ ವೆಚ್ಚ: ಚುನಾವಣಾ ಆಯೋಗ

ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಹೆಚ್ಚುವರಿ ಎಲೆಕ್ಟ್ರಾನಿಕ್ ಮತ ಯಂತ್ರಗಳು (ಇವಿಎಂ) ಮತ್ತು ಪೇಪರ್-ಟ್ರಯಲ್ ಯಂತ್ರಗಳನ್ನು ಖರೀದಿಸಲು ಸುಮಾರು 9,300 ಕೋಟಿ ವೆಚ್ಚವಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಒಂದೇ ಸಮಯಕ್ಕೆ ಚುನಾವಣೆಗಳನ್ನು ನಡೆಸಲು ಅಗತ್ಯ ಕಾರ್ಯಸೂಚಿಯನ್ನು ಪರಿಶೀಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಇತ್ತೀಚೆಗೆ ಉನ್ನತ ಮಟ್ಟದ ಸಮಿತಿ ರಚಿಸಿತ್ತು. ‘ಒಂದು ರಾಷ್ಟ್ರ ಒಂದು ಚುನಾವಣೆ’ಯಡಿ ಏಕಕಾಲಕ್ಕೆ ಚುನಾವಣೆ ನಡೆಸುವಾಗ …

Read More »

ಎದ್ದು ನಿಂತು ಮರ್ಯಾದೆ ಕೊಟ್ಟಿಲ್ಲವೆಂದು ಯುವಕನ ಮೇಲೆ ಅಟ್ಟಾಡಿಸಿ ಮಾರಕಾಸ್ತ್ರ ಬೀಸಿದ ಪುಂಡರು

ಬೆಂಗಳೂರು: ರಸ್ತೆಯಲ್ಲಿ ತಾವು ಬಂದಾಗ ಎದ್ದು ಮರ್ಯಾದೆ ಕೊಡಲಿಲ್ಲವೆಂದು ಯುವಕನೊಬ್ಬನನ್ನು ಪುಂಡರ ಗುಂಪೊಂದು ಮಾರಕಾಸ್ತ್ರ ಹಿಡಿದು ಅಟ್ಟಾಡಿಸಿ ಹಲ್ಲೆ ಮಾಡಿರುವ ಘಟನೆ ಆಗಸ್ಟ್ 27ರಂದು ಮಡಿವಾಳದ ವೆಂಕಟಾಪುರದಲ್ಲಿ ನಡೆದಿದೆ. ರಮೇಶ್ ಹಲ್ಲೆಗೊಳಗಾದ ಯುವಕ. ಸಂಜೆ 6:30 ರ ಸುಮಾರಿಗೆ ರಮೇಶ್ ವೆಂಕಟಾಪುರ ಬಳಿ ಟೀ ಕುಡಿಯಲು ತೆರಳಿದ್ದ. ಈ ವೇಳೆ ಟೀ ಅಂಗಡಿ ಬಳಿ ಬಂದಿದ್ದ ಕಾವೇರಿ ಶಿವು ಮತ್ತವನ ಗ್ಯಾಂಗ್ ರಮೇಶನಿಗೆ ‘ಏನೋ ನಾವ್ ಬಂದ್ರು ಎದ್ದೇಳಲ್ವಾ?’ ಎಂದು ಅವಾಜ್ …

Read More »

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಜೂನ್ 2ರಂದು ಸಂಭವಿಸಿದ್ದ ತ್ರಿವಳಿ ರೈಲು ದುರಂತಕ್ಕೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಯ ಮೂವರು ಅಧಿಕಾರಿಗಳ ವಿರುದ್ಧ ಸಿಬಿಐ ಚಾರ್ಜ್​ ಶೀಟ್​ ದಾಖಲಿಸಿದೆ.

ನವದೆಹಲಿ: ದೇಶದ ಕಂಡ ಅತ್ಯಂತ ಭೀಕರ ರೈಲು ದುರಂತಗಳಲ್ಲಿ ಒಂದಾದ ಒಡಿಶಾದ ಬಾಲಸೋರ್ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಶನಿವಾರ ಚಾರ್ಜ್​ಶೀಟ್​ ಸಲ್ಲಿಸಿದೆ. ಈಗಾಗಲೇ ಬಂಧಿತ ರೈಲ್ವೆ ಇಲಾಖೆಯ ಮೂವರು ಅಧಿಕಾರಿಗಳ ವಿರುದ್ಧ ಭುವನೇಶ್ವರದಲ್ಲಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್​ ಶೀಟ್​ ಸಲ್ಲಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 2ರಂದು ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ನಿಲ್ದಾಣದ ಸಮೀಪ ತ್ರಿವಳಿ ರೈಲು ದುರಂತ ಸಂಭವಿಸಿತ್ತು. …

Read More »

ಮಗನ ಮದುವೆಗೆ ಹಾಜರಾಗಲು ಅಪರಾಧಿ ತಂದೆಗೆ ಪೆರೋಲ್​ ನೀಡಲು ಹೈಕೋರ್ಟ್ ಸೂಚನೆ

ಬೆಂಗಳೂರು : ಕಾರಣಾಂತರಗಳಿಂದ ಜೈಲು ಸೇರಿರುವ ಅಪರಾಧಿಯ ಮಗನ ಮದುವೆಯಾಗುತ್ತಿದ್ದು, ತಂದೆ ಹಾಜರಾಗುವುದು ಮಕ್ಕಳ ಬಯಕೆಯಾಗಿರುತ್ತದೆ. ಇದು ಸಂವಿಧಾನದ ಪರಿಚ್ಛೇದ 21ರ ಪ್ರಕಾರ ಮಾನವೀಯ ಗುಣಗಳಡಿ ಪರಿಗಣನೆಗೆ ಒಳಪಡಲಿದೆ ಎಂದು ತಿಳಿಸಿರುವ ಹೈಕೋರ್ಟ್, ಅಪರಾಧಿಯನ್ನು ಪೆರೋಲ್​ ಮೇಲೆ ಬಿಡುಗಡೆ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.   ತನ್ನ ಮದುವೆಗೆ ತಂದೆ ಹಾಜರಿ ಆಪೇಕ್ಷೆಯಾಗಿದೆ. ಈ ನಿಟ್ಟಿನಲ್ಲಿ ಮದುವೆಗಾಗಿ 30 ದಿನಗಳ ಕಾಲ ಪೆರೋಲ್​ ಮೇಲೆ ಬಿಡುಗಡೆ ಮಾಡಬೇಕು ಎಂದು ಕೋರಿ …

Read More »

ಒಂದು ದೇಶ ಒಂದೇ ಚುನಾವಣೆ ಸಮಿತಿಗೆ 8 ಮಂದಿ ಸದಸ್ಯರ ನೇಮಕ

ನವದೆಹಲಿ: ‘ಒಂದು ದೇಶ ಒಂದೇ ಚುನಾವಣೆ’ಯ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಇದೀಗ ಸಮಿತಿಗೆ ಎಂಟು ಜನ ಸದಸ್ಯರನ್ನು ನೇಮಿಸಿ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ಆಡಳಿತ, ವಿರೋಧ ಪಕ್ಷಗಳ ನಾಯಕರ ಜತೆಗೆ ರಾಜಕಾರಣಿಗಳು, ಕಾನೂನು, ಆರ್ಥಿಕ ತಜ್ಞರಿಗೂ ಅವಕಾಶ ಕಲ್ಪಿಸಲಾಗಿದೆ. ಅವಧಿಗೂ ಮೊದಲೇ ಸಂಸತ್​ ಚುನಾವಣೆ ನಡೆಯಲಿದೆ ಎಂಬ ಊಹಾಪೋಹಗಳ ನಡುವೆಯೇ ಕೇಂದ್ರದ ಈ ನಡೆ ಮತ್ತಷ್ಟು ಕುತೂಹಲ …

Read More »

ನಿವೃತ್ತ ಯೋಧನನ್ನು ಹತ್ಯೆಗೈದ ಬಾಮೈದ

ಚಿಕ್ಕೋಡಿ (ಬೆಳಗಾವಿ): ಚಾಕುವಿನಿಂದ ಕತ್ತು ಸೀಳಿ ನಿವೃತ್ತ ಯೋಧನನ್ನು ಬಾಮೈದ ಹತ್ಯೆಗೈದಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಶನಿವಾರ ನಡೆದಿದೆ. ಮೃತರನ್ನು ಚಿಕ್ಕೋಡಿಯ ವಿದ್ಯಾನಗರ ನಿವಾಸಿ ನಿವೃತ್ತ ಯೋಧ ಈರಗೌಡ ಟೋಪಗೋಳ(45) ಎಂದು ಗುರುತಿಸಲಾಗಿದೆ. ಮೃತ ಈರಗೌಡ ಪತ್ನಿಯ ಸಹೋದರ ಸಂಜಯ್ ಭಾಕರೆ ಕೊಲೆಗೈದ ಆರೋಪಿ ಎಂದು ತಿಳಿದುಬಂದಿದೆ. ಮೂಲತಃ ಜೈನಾಪುರ ಗ್ರಾಮದವರಾಗಿದ್ದ ಈರಗೌಡ ಟೋಪಗೋಳ ಸೇನೆಯಿಂದ ನಿವೃತ್ತಿ ಹೊಂದಿದ ಬಳಿಕ ಸ್ಟೋನ್‌ ಕ್ರಷರ್ ಘಟಕ ನಡೆಸುತ್ತಿದ್ದರು. ಶನಿವಾರ ಸಂಜೆ …

Read More »

ಆದಿತ್ಯ – ಎಲ್1 ಉಡಾವಣೆ ಯಶಸ್ವಿ: ಗಗನನೌಕೆಗೆ ಶುಭ ಹಾರೈಸೋಣ ಎಂದ ಇಸ್ರೋ ಅಧ್ಯಕ್ಷ.. ರಾಷ್ಟ್ರಪತಿ, ಪ್ರಧಾನಿ ಅಭಿನಂದನೆ

ಶ್ರೀಹರಿಕೋಟಾ (ಆಂಧ್ರಪ್ರದೇಶ): ಸೂರ್ಯ ಅಧ್ಯಯನಕ್ಕಾಗಿ ಭಾರತದ ಇಸ್ರೋ ಸಂಸ್ಥೆಯು ಇಂದು ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಉಡಾವಣೆ ಮಾಡಿದೆ. ನಿರೀಕ್ಷೆಯಂತೆ ಪಿಎಸ್‌ಎಲ್‌ವಿ ರಾಕೆಟ್‌ನಿಂದ ಆದಿತ್ಯ-ಎಲ್1 ಗಗನನೌಕೆ ಯಶಸ್ವಿಯಾಗಿ ಬೇರ್ಪಟ್ಟಿದೆ. ಇಂದಿನಿಂದ 125 ದಿನಗಳ ಸುದೀರ್ಘ ಪ್ರಯಣ ನಡೆಸಲಿದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ತಿಳಿಸಿದರು. ಇದೇ ವೇಳೆ, ಆದಿತ್ಯ-ಎಲ್1 ಯಶಸ್ವಿ ಉಡಾವಣೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ರಾಷ್ಟ್ರಪತಿ ಹಾಗೂ ಪ್ರಧಾನಿ ಅಭಿನಂದನೆಗಳನ್ನು ತಿಳಿಸಿದ್ದಾರೆ.     ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ …

Read More »

ಶಾಸಕ ರಾಯರೆಡ್ಡಿಯಿಂದ ಸಿಎಂಗೆ ಮತ್ತೊಂದು ಪತ್ರ

ಬೆಂಗಳೂರು: ಕಾಂಗ್ರೆಸ್​ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಸಿಎಂ ಸಿದ್ಧರಾಮಯ್ಯಗೆ ಮತ್ತೆ ಪತ್ರ ಬರೆದಿದ್ದು, ಜೆಸ್ಕಾಂ ಅಧಿಕಾರಿಗಳ ಜೊತೆ ಸಭೆ ನಡೆಸುವಂತೆ ಮನವಿ ಮಾಡಿದ್ದಾರೆ. ಶಾಸಕರ ಅಹವಾಲು ಕೇಳುವಂತೆ ಕೋರಿ ಕಳೆದ ಬಾರಿ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಆಗ್ರಹಿಸಿ ಪತ್ರ ಬರೆದಿದ್ದ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಇದೀಗ ಜೆಸ್ಕಾಂ ಅಧಿಕಾರಿಗಳ ಸಭೆ ಕರೆಯಲು ಒತ್ತಾಯಿಸಿ ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದಿದ್ದಾರೆ.‌ ಜೆಸ್ಕಾಂ ಅಧಿಕಾರಿಗಳು ಹಾಗೂ ಇಂಧನ ಸಚಿವರ ಜೊತೆ …

Read More »

ತಲೆ ಮೇಲೆ ಕಲ್ಲು ಹೊತ್ತುಕೊಂಡು ಮಂಡ್ಯದಲ್ಲಿ ರೈತರ ಪ್ರತಿಭನೆ.. ಕಾವೇರಿ ಕಿಚ್ಚಿಗೆ ದಳಪತಿಗಳು ಎಂಟ್ರಿ, ಸರ್ಕಾರಕ್ಕೆ ಎಚ್ಚರಿಕೆ

ಮಂಡ್ಯ: ಕೆ ಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರ ಮಂಡ್ಯದಲ್ಲಿ ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಹಲವು ದಿನಗಳಿಂದ ರೈತರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಇವತ್ತು ರೈತರಿಗೆ ಬೆಂಬಲ ವ್ಯಕ್ತಪಡಿಸಿ ಜೆಡಿಎಸ್​ ನಾಯಕರು ಕಾವೇರಿ ಕಿಚ್ಚಿನಲ್ಲಿ ಪಾಲ್ಗೊಂಡಿದ್ದರು. ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮಣಿದಿರೋ ರಾಜ್ಯ ಸರ್ಕಾರ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ …

Read More »

ಸ್ನೇಹಿತನನ್ನೇ ಕೊಂದು, ಬೇರೊಬ್ಬರ ಮೇಲೆ ಹಾಕಲು ಯತ್ನಿಸಿ ಸಿಕ್ಕಿಬಿದ್ದ ಖದೀಮರು

ಮೈಸೂರು : ಸ್ನೇಹಿತನ ಕೊಲೆ ಮಾಡಿ, ಕೃತ್ಯವನ್ನು ಮತ್ತೊಬ್ಬರ ಹೆಸರಿಗೆ ಕಟ್ಟಲು ಯತ್ನಿಸಿದ ಇಬ್ಬರು ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದ ಸಿನಿಮೀಯ ಶೈಲಿಯ ಪ್ರಕರಣ ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಒಂದೇ ದಿನದಲ್ಲಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಹಿನ್ನೆಲೆ : ಅಂತರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯ ಬೀಚನಹಳ್ಳಿಯ ಯುವಕ ಭಾನುಪ್ರಕಾಶ್ ಅಲಿಯಾಸ್ ಸಿದ್ದು ಎಂಬಾತ ಮಹಿಳೆಯೊಬ್ಬರಿಗೆ …

Read More »