ಹೈದರಾಬಾದ್: ತೆಲಂಗಾಣ ವಿಧಾನಸಭೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆಗೂ ಮೊದಲೇ ಮುಖ್ಯಮಂತ್ರಿ ಕೆ.ಚಂದ್ರಶೇಖರ್ರಾವ್ ಅವರು ಭಾರತ್ ರಾಷ್ಟ್ರ ಸಮಿತಿಯ (ಬಿಆರ್ಎಸ್) ಎಲ್ಲ 118 ಹುರಿಯಾಳುಗಳನ್ನು ಇಂದು (ಸೋಮವಾರ) ಘೋಷಿಸಿದರು. ಸ್ವತಃ ಅವರು ಗಜ್ವೆಲ್ ಮತ್ತು ಕಾಮರೆಡ್ಡಿಯ ಎರಡು ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದರೆ, ಪುತ್ರ, ಸಚಿವ ಕೆ.ಟಿ.ರಾಮರಾವ್ ಸಿರ್ಸಿಲ್ಲಾದಿಂದ ಕಣಕ್ಕಿಳಿಯಲಿದ್ದಾರೆ. ಬಿಆರ್ಎಸ್ ಪಕ್ಷದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆಗೆ ಪೂರ್ವ ಸಿದ್ಧತೆ …
Read More »ಪ್ರತಿ ವರ್ಷ ಮನೆಯಲ್ಲಿ ಜೀವಂತ ನಾಗರನಿಗೆ ಪೂಜೆ!
ಶಿರಸಿ (ಉತ್ತರಕನ್ನಡ) : ಇಂದು ನಾಗರ ಪಂಚಮಿ ಹಬ್ಬ. ಶಿರಸಿಯ ಉರಗ ಪ್ರೇಮಿಯೊಬ್ಬರು ಜೀವಂತ ನಾಗರಹಾವಿನ ಮರಿಗೆ ಹಾಲೆರೆದು ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಈ ಮೂಲಕ ಉರಗ ಲೋಕದ ವೈಶಿಷ್ಟ್ಯ ಹಾಗೂ ಪ್ರಾಮುಖ್ಯತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಪ್ರಶಾಂತ್ ಹುಲೇಕಲ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ನಿಜ ನಾಗರಹಾವಿಗೆ ಹಾಲೆರೆದು ನಾಗರ ಪಂಚಮಿ ಆಚರಿಸಿದರು. ಪ್ರತಿ ವರ್ಷ ನಾಗರ ಪಂಚಮಿ …
Read More »ನಮಗೆ ಒಟ್ಟು 124 ಟಿಎಂಸಿ ನೀರು ಬೇಕು; ಈಗ ಇರುವುದು 55 ಟಿಎಂಸಿ ಮಾತ್ರ: ಡಿ.ಕೆ.ಶಿವಕುಮಾರ್
ಬೆಂಗಳೂರು: “ನಾವು ಮತ್ತು ತಮಿಳುನಾಡಿನವರು ಅಣ್ಣ-ತಮ್ಮಂದಿರಂತೆ ಕಾವೇರಿ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಹಿಂದೆ ಹೇಳಿದ್ದರು. ಅವರ ಮಾತಿನಂತೇ ನಾನು ನಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿಂದು ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನೀರಿನ ವಿಚಾರವಾಗಿ ದಿನಾ ಜಗಳ ಮಾಡುವುದಕ್ಕಿಂತ, ಮಾತನಾಡಿ ಬಗೆಹರಿಸಿಕೊಳ್ಳಬೇಕು ಎಂಬುದು ನನ್ನ ಆಶಯ. ತಮಿಳುನಾಡು ಮತ್ತು ಕರ್ನಾಟಕದ ಜನ ಪರಸ್ಪರ ಎರಡೂ ಕಡೆ ಜೀವನ ಮಾಡುತ್ತಿದ್ದಾರೆ. ಹೀಗಿದ್ದಾಗ ಜಗಳ ಮಾಡುವುದು ಸರಿಯೇ? …
Read More »ವರಮಹಾಲಕ್ಷ್ಮಿ ಹಬ್ಬ: ಸರ್ಕಾರದಿಂದ ಮಹಿಳೆಯರಿಗೆ ಅರಿಶಿನ, ಕುಂಕುಮ, ಬಳೆ ಉಡುಗೊರೆ
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಾಲಯಗಳಲ್ಲಿ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ರಾಜ್ಯದ ಮಹಿಳೆಯರಿಗೆ ಉಡುಗೊರೆಯಾಗಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆಗಸ್ಟ್ 25 ರಂದು ವರಮಹಾಲಕ್ಷ್ಮಿ ವ್ರತ ನಡೆಯಲಿದೆ. ಈ ದಿನದಂದು ಎಲ್ಲಾ ಅನುಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಅರಿಶಿನ, ಕುಂಕುಮ ಹಾಗೂ ಬಳೆಗಳನ್ನು ನೀಡಲಾಗುತ್ತದೆ. ರಾಜ್ಯ ಸರ್ಕಾರದ ಸುತ್ತೋಲೆಆಯಾ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿನ, ಕುಂಕುಮ ಮತ್ತು ಹಸಿರು ಬಳೆಗಳನ್ನು …
Read More »ಸದ್ದಿಲ್ಲದೇ ‘ಆಪರೇಷನ್ ಹಸ್ತ’: ಎಸ್.ಟಿ.ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು : 2019ರಲ್ಲಿ ಕಾಂಗ್ರೆಸ್, ಜೆಡಿಎಸ್ ತೊರೆದು ತಮ್ಮ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಶಾಸಕರು ಬಿಜೆಪಿ ತೊರೆಯದಂತೆ ನಿಗಾ ವಹಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಸೂಚಿಸಿರುವ ಬೆನ್ನಲ್ಲೇ ಸದ್ದಿಲ್ಲದೇ ‘ಆಪರೇಷನ್ ಹಸ್ತ’ ಕಾರ್ಯಾಚರಣೆ ಬಿರುಸುಗೊಂಡಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಪಕ್ಷ ತೊರೆಯದಂತೆ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವೊಲಿಸುವ ಪ್ರಯತ್ನ ನಡೆಸಿದರು. ಆದರೆ ಸೋಮವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ …
Read More »ಕೋಲಾರದಲ್ಲಿ ಮಾರ್ಗದರ್ಶಿ ಚಿಟ್ಸ್ನ 109ನೇ ಶಾಖೆ ಉದ್ಘಾಟನೆ
ಕೋಲಾರ: ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್ಸ್ನ 22ನೇ ಶಾಖೆ ಉದ್ಘಾಟನೆಗೊಂಡಿದೆ. ಸಂಸ್ಥೆಯ ಒಟ್ಟಾರೆ 109 ನೇ ಶಾಖೆ ಇದಾಗಿದೆ. ಕಂಪನಿ ಎಂಡಿ ಶೈಲಜಾ ಕಿರಣ್ ಅವರು ಈ ಶಾಖೆಯನ್ನು ವರ್ಚುಯಲ್ ಆಗಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಚಂದಾದಾರರು ಭಾಗವಹಿಸಿದ್ದರು. ನೂತನ ಶಾಖೆ ಉದ್ಘಾಟನೆ ಬಳಿಕ ಮಾತನಾಡಿದ ಮಾರ್ಗದರ್ಶಿ ಚಿಟ್ಸ್ ನಿರ್ದೇಶಕರಾದ ಪಿ ಲಕ್ಷ್ಮಣ್ರಾವ್, ಕೋಲಾರ ಜನತೆಯ ಸಹಕಾರ ಅಮೂಲ್ಯವಾದದ್ದು ಎಂದು ಹೇಳಿದರು. ಜನತೆ ಮಾರ್ಗದರ್ಶಿ ಚಿಟ್ಸ್ ಕಂಪನಿಯಿಂದ ಸೌಲಭ್ಯಗಳನ್ನು …
Read More »ಜಿಲ್ಲಾ ಆರೋಗ್ಯ ಅಧಿಕಾರಿಗಳ ಒಂದೇ ಹುದ್ದೆಗಾಗಿ ಪರಸ್ಪರ ಹಗ್ಗಜಗ್ಗಾಟ
ಬಾಗಲಕೋಟೆ: ಜಿಲ್ಲಾ ಮಟ್ಟದ ಅಧಿಕಾರಿಗಳಿಬ್ಬರು ಒಂದೇ ಹುದ್ದೆಗಾಗಿ ಪರಸ್ಪರ ಹಗ್ಗಜಗ್ಗಾಟ ನಡೆಸಿದ ಘಟನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹಾಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಯಶ್ರೀ ಎಮ್ಮಿ ಅವರು ತಮ್ಮ ವರ್ಗಾವಣೆ ಆದೇಶ ಪ್ರಶ್ನಿಸಿ ಕರ್ನಾಟಕ ಆಡಳಿತ ನ್ಯಾಯಮಂಡಳಿಯಿಂದ ತಡೆಯಾಜ್ಞೆ ತಂದಿದ್ದರು. ಈ ಮಧ್ಯೆ ಡಾ.ಜಯಶ್ರೀ ಎಮ್ಮಿ ರಜೆಯಲ್ಲಿ ತೆರಳಿದ್ದಾಗ ಸರ್ಕಾರದ ಆದೇಶ ತಂದು ಡಾ.ರಾಜಕುಮಾರ್ ಯರಗಲ್ ಅಧಿಕಾರ ವಹಿಸಿಕೊಂಡಿದ್ದಾರೆ. ಹೀಗಾಗಿ ಒಂದೇ ಹುದ್ದೆಗೆ ಒಬ್ಬರ ನಡುವೆ ಕಿತ್ತಾಟ ನಡೆಯಿತು. ”ವಿಜಯಪುರ ಜಿಲ್ಲೆಯಲ್ಲಿ …
Read More »ಗುಜರಾತ್ನಲ್ಲಿ ಹಾವು ಕಡಿತ: ಉತ್ತರ ಪ್ರದೇಶದಲ್ಲಿ ಚಿಕಿತ್ಸೆ… 1300ಕಿ.ಮೀ ಕ್ರಮಿಸಿ ಬದುಕುಳಿದ ಧೀರ
ಕಾನ್ಪುರ(ಉತ್ತರ ಪ್ರದೇಶ): ಗುಜರಾತಿನಲ್ಲಿ ಹಾವು ಕಡಿತಕ್ಕೊಳಗಾದ ಯುವಕನೊಬ್ಬ ಚಿಕಿತ್ಸೆಗಾಗಿ ಸುಮಾರು 1,300 ಕಿ.ಮೀ ಕ್ರಮಿಸಿ ಉತ್ತರ ಪ್ರದೇಶದ ಕಾನ್ಪುರ ತಲುಪಿ ಬದುಕುಳಿದಿರುವ ಅಚ್ಚರಿಯ ಘಟನೆ ನಡೆದಿದೆ. ಕಿಶನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮ ಫತೇಪುರದ ಸುನಿಲ್ ಕುಮಾರ್ (20) ನೇ ಹೀಗೆ ಬದುಕುಳಿದ ಯುವಕನಾಗಿದ್ದಾನೆ. ಈತ ಗುಜರಾತ್ನ ರಾಜ್ಕೋಟ್ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಗಸ್ಟ್ 15ರಂದು ಆತನಿಗೆ ಹಾವು ಕಚ್ಚಿದೆ. ತಕ್ಷಣವೇ ಅವನನ್ನು ಸ್ಥಳೀಯ ಆರೋಗ್ಯ ಕೇಂದ್ರಕ್ಕೆ …
Read More »ಪಾಟ್ನಾ-ಕೋಟಾ ಎಕ್ಸ್ಪ್ರೆಸ್ ರೈಲಿನಲ್ಲಿ ಇಬ್ಬರು ಪ್ರಯಾಣಿಕರ ಸಾವು: 6 ಮಂದಿ ಅಸ್ವಸ್ಥ
ಆಗ್ರಾ(ಉತ್ತರ ಪ್ರದೇಶ): ಭಾನುವಾರ ವಾರಣಸಿಯಿಂದ ಮಥುರಾಗೆ ಪ್ರಯಾಣಿಸುತ್ತಿದ್ದ ಪಾಟ್ನಾ-ಕೋಟಾ ಎಕ್ಸ್ಪ್ರೆಸ್ (13237) ರೈಲಿನಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ, ಆರು ಮಂದಿ ಅಸ್ವಸ್ಥರಾಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಪ್ರಯಾಣಿಕರು ಹವಾನಿಯಂತ್ರಿತವಲ್ಲದ ಸ್ಲೀಪರ್ ಕೋಚ್ ಸಂಖ್ಯೆ ಎಸ್-2ರಲ್ಲಿ ಪ್ರಯಾಣಿಸುತ್ತಿದ್ದರು. ಪ್ರಯಾಣಿಕರ ಆರೋಗ್ಯ ಹದಗೆಟ್ಟಿರುವ ಕುರಿತು ಆಗ್ರಾದ ರೈಲ್ವೆ ಅಧಿಕಾರಿಗಳಿಗೆ ತುರ್ತು ಕರೆ ಬಂದಿದೆ. ಭಾನುವಾರ ಸಂಜೆ ರೈಲು ಆಗ್ರಾ ಕ್ಯಾಂಟ್ ನಿಲ್ದಾಣಕ್ಕೆ ಆಗಮಿಸಿದ ಬಳಿಕ ವೈದ್ಯಕೀಯ ಚಿಕಿತ್ಸೆ ನೀಡಲಾಯಿತು. ಆದರೆ, …
Read More »ಬೆಳಗಾವಿ ಬಿಜೆಪಿ ಲೋಕಸಭಾ ಟಿಕೆಟ್ ಯಾರಿಗೆ?
ಲೋಕಸಭಾ ಟಿಕೆಟ್ ಗಾಗಿ ಬೆಳೆಗಾವಿ ಬಿಜೆಪಿಯಲ್ಲಿ ಪೈಪೋಟಿ ಹೇಗಿದೆ ಬನ್ನಿ ನೋಡಣ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಪೈಪೋಟಿ ಆರಂಭವಾಗಿದೆ ಈಗಾಗಲೇ ಮಾಜಿ ಶಾಸಕರಾದ ಸಂಜಯ ಪಾಟೀಲ್, ಅನಿಲ್ ಬೆನಕೆ, ಮಾಜಿ ಎಂಎಲಸಿ ಮಹಾಂತೇಶ ಕವಟಗಿಮಠ, ಬಿಎಸವೈ ಆಪ್ತ ಶಂಕರಗೌಡ ಪಾಟೀಲ್ ಲಾಬಿ ನಡೆಸಿದ್ದಾರೆ ಇನ್ನೂ ಗೋಕಾಕ, ಅರಬಾವಿ, ರಾಮದುರ್ಗ, ಸವದತ್ತಿ, ಬೈಲಹೊಂಗಲ ತಾಲ್ಲೂಕಿನಲ್ಲಿ ಲಿಂಗಾಯತ ಮತಗಳೇ ಪ್ರಾಬಲ್ಯ ಇರುವುದರಿಂದ ರಾಜ್ಯಸಭಾ …
Read More »
Laxmi News 24×7