ಬೆಂಗಳೂರು : ಪತಿಯೋರ್ವ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿ ಭಾನುವಾರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತಳನ್ನು ಸರಿತಾ(35) ಎಂದು ಗುರುತಿಸಲಾಗಿದೆ. ತಾರಾನಾಥ್ ಕೊಲೆಗೈದ ಆರೋಪಿ. ಪತ್ನಿ ಸರಿತಾಳ ಕುತ್ತಿಗೆಗೆ ಹಗ್ಗದಿಂದ ಬಿಗಿದು ಹತ್ಯೆಗೈದಿರುವ ಪತಿ ತಾರಾನಾಥ್ ವೈಟ್ ಫೀಲ್ಡ್ ಠಾಣೆಗೆ ಬಂದು ಶರಣಾಗಿದ್ದಾನೆ. ಮೂಲತಃ ಮಂಗಳೂರಿನವರಾದ ಈ ದಂಪತಿ ಬೆಂಗಳೂರಿನಲ್ಲಿ ನೆಲೆಸಿ, ಪಾನೀಪುರಿ ಅಂಗಡಿ ನಡೆಸುತ್ತಿದ್ದರು. ಭಾನುವಾರ ಸಂಜೆ …
Read More »ಗಣೇಶೋತ್ಸವ ಮಂಡಳಿಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್, ಏಕಗವಾಕ್ಷಿ ಮೂಲಕ ತಕ್ಷಣ ಪರವಾನಿಗೆ..: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ನಗರದಲ್ಲಿ ಅತ್ಯಂತ ಸಂಭ್ರಮದಿಂದ ಗಣೇಶೋತ್ಸವ ಆಚರಣೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಹಾಗೂ ಉತ್ಸವ ಮಂಡಳಿಗಳಿಗೆ ಯಾವುದೇ ರೀತಿಯ ವಿಳಂಬವಾಗದಂತೆ ಏಕಗವಾಕ್ಷಿ ಯೋಜನೆ ಮೂಲಕ ಕೂಡಲೇ ಪರವಾನಿಗೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶೋತ್ಸವ ಹಿನ್ನೆಲೆ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಿನ್ನೆ ಸಂಜೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣೇಶೋತ್ಸವ ಮಂಡಳಿಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಒದಗಿಸುವ ಕುರಿತು ಸರ್ಕಾರದ …
Read More »‘ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯ: ಸತೀಶ ಜಾರಕಿಹೊಳಿ
ಬೆಳಗಾವಿ: ”ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯವಾಗುತ್ತದೆ” ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದ ಮಚ್ಛೆ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಇಂದು (ಮಂಗಳವಾರ) 260 ಕೋಟಿ ರೂಪಾಯಿ ವೆಚ್ಚದ 220 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಹಾಗೂ ಬಹುವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ”ಬೆಳಗಾವಿ ನಗರ ರಾಜ್ಯದಲ್ಲಿ ಶರವೇಗದಲ್ಲಿ …
Read More »5 ಜನರ ಬಾಳಿಗೆ ಬೆಳಕಾಗಿದ್ದಾರೆ.ಚಿಕ್ಕಮಗಳೂರಿನ ಮಹಿಳೆ
ಚಿಕ್ಕಮಗಳೂರು: ಇಲ್ಲಿನ ಗೌರಿ ಕಾಲುವೆಯ ನಿವಾಸಿ ಸಹನಾ ಮೊಸೆಸ್ ಎಂಬವರು ಸಾವಿನಲ್ಲೂ ಸಾರ್ಥಕತೆ ಮೆರೆದು ಮಾದರಿಯಾಗಿದ್ದಾರೆ. ತಮ್ಮ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಒಂದಲ್ಲ, ಎರಡಲ್ಲ 5 ಜನರ ಬಾಳಿಗೆ ಬೆಳಕಾಗಿದ್ದಾರೆ. ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ಅವರ ಕುಟುಂಬದವರ ದೃಢ ನಿರ್ಧಾರ ಹಾಗೂ ಸಹನಾ ಅವರ ಆಸೆಯಂತೆಯೇ ಅಂಗಾಂಗಗಳನ್ನು ದಾನ ಮಾಡಲಾಗಿದೆ. ಇಂದು ನಗರದ ಜಿಲ್ಲಾಸ್ಪತ್ರೆಯಲ್ಲಿ ಸಹನಾರ ಕಣ್ಣು, ಕಿಡ್ನಿ ಹಾಗೂ ಯಕೃತ್ತನ್ನು ತಜ್ಞ ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಆಂಬುಲೆನ್ಸ್ …
Read More »ಮೂರು ಜಿಲ್ಲೆಗಳಾದ ತುಮಕೂರು, ಯಾದಗಿರಿ ಹಾಗೂ ಚಿತ್ರದುರ್ಗ ಶಾಸಕರು ಹಾಗೂ ಸಚಿವರ ಸಭೆ ಅಸಮಾಧಾನಕ್ಕೆ ಸಿಎಂ ಮದ್ದು
ಬೆಂಗಳೂರು: ಮೂರು ಜಿಲ್ಲೆಗಳಾದ ತುಮಕೂರು, ಯಾದಗಿರಿ ಹಾಗೂ ಚಿತ್ರದುರ್ಗ ಶಾಸಕರು ಹಾಗೂ ಸಚಿವರ ಸಭೆ ಮುಕ್ತಾಯವಾಗಿದೆ. ಈ ವೇಳೆ ಶಾಸಕರು ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ತುಮಕೂರು, ಯಾದಗಿರಿ, ಚಿತ್ರದುರ್ಗ ಜಿಲ್ಲೆಗಳ ಕ್ಷೇತ್ರವಾರು ಸಮಸ್ಯೆ, ಅನುದಾನ, ಅಭಿವೃದ್ಧಿ ಸಂಬಂಧ ಸಭೆ ನಡೆಯಿತು. ಮೊದಲಿಗೆ ತುಮಕೂರು ಜಿಲ್ಲೆಯ ಸಚಿವರು, ಶಾಸಕರ ಜೊತೆ ಸಭೆ ನಡೆಸಿದರು. ಸಭೆಯ ಬಳಿಕ ಕುಣಿಗಲ್ ಶಾಸಕ ಡಾ.ರಂಗನಾಥ್ ಮಾತನಾಡಿ, …
Read More »ಬೆನ್ನುಮೂಳೆಗೆ ಪೆಟ್ಟುಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಲುಮರದ ತಿಮ್ಮಕ್ಕ ಅವರನ್ನು ಇಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.
ಬೆಂಗಳೂರು: ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆಗೆ ಪೆಟ್ಟುಬಿದ್ದ ಕಾರಣ ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶತಾಯುಷಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕರನ್ನು ಅರಣ್ಯ ಹಾಗೂ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. “ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಸಾಕಿರುವ ಮಹಾತಾಯಿಯಾದ ನಿಮಗೆ ಇಡೀ ಕರುನಾಡಿ ಜನರಷ್ಟೇ ಅಲ್ಲದೇ ವಿಶ್ವ ಪರಿಸರ ಪ್ರೇಮಿಗಳ ದಿವ್ಯ ಶುಭ ಹಾರೈಕೆ ಇದೆ. ನೀವು ಶೀಘ್ರ ಗುಣಮುಖರಾಗುತ್ತೀರಿ” ಎಂದು …
Read More »ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ನಡೆದ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.
ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ನಡೆದಿದೆ ಎನ್ನಲಾದ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ಬಗ್ಗೆ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. “ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಲಾಗಿದೆ” ಎಂದು ತಿಳಿಸಿದ್ದಾರೆ. ಈ ಪ್ರಕರಣ ರಾಜಕೀಯವಾಗಿ ಭಾರಿ ಸದ್ದು ಮಾಡಿದೆ. ಬಿಜೆಪಿ, …
Read More »ಖುದ್ದು ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಫಿಲ್ಡಿಗಿಳಿಯುವ ಮೂಲಕ ಕಸ ವಿಲೇವಾರಿ ಪರಿಶೀಲನೆ
ಬೆಳಗಾವಿ : ನಗರದ ಕೆಲವು ವಾರ್ಡ್ಗಳಿಗೆ ಕಸ ಸಂಗ್ರಹಿಸುವ ವಾಹನಗಳು ಹೋಗುತ್ತಿರಲಿಲ್ಲ. ಕೆಲವು ಕಡೆಗಳಲ್ಲಿ ಸರಿಯಾದ ಸಮಯಕ್ಕೆ ವಾಹನ ತೆರಳುತ್ತಿಲ್ಲವೆಂದು ಆಯುಕ್ತರಿಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿದ್ದವು. ಇದರಿಂದ ಎಚ್ಚೆತ್ತುಕೊಂಡ ಆಯುಕ್ತ ಅಶೋಕ ದುಡಗುಂಟಿ ಸೋಮವಾರ ಬೆಳಗ್ಗೆ 5.30ಕ್ಕೆ ಸೈಕಲ್ ಮೇಲೆ ಕಸ ಸಂಗ್ರಹಿಸುವ ವಾಹನಗಳ ಶಾಖೆಗೆ ದಿಢೀರ್ ಭೇಟಿ ನೀಡಿದ್ದರು. ಈ ವೇಳೆ ಚಾಲಕರು, ಕ್ಲೀನರ್ ಗಳು ಎಷ್ಟು ಗಂಟೆಗೆ ಡ್ಯೂಟಿಗೆ ಬರುತ್ತಾರೆ ಎಂದು ಹಾಜರಿ ಪುಸ್ತಕ ಪರೀಕ್ಷಿಸಿದರು. ಸರಿಯಾದ …
Read More »ಕೆಎಸ್ಆರ್ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್ಪೆಕ್ಟರ್ ಹತ್ಯೆ
ಬಳ್ಳಾರಿ: ನಗರದ ಕೆಎಎಸ್ಆರ್ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್ಪೆಕ್ಟರ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಗರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಹುಸೇನಪ್ಪ (54) ಕೊಲೆಯಾದ ಸೆಕ್ಯುರಿಟಿ ಇನ್ಸ್ಪೆಕ್ಟರ್. ದುಷ್ಕರ್ಮಿಗಳು ಬೈಕ್ನಲ್ಲಿ ಬಂದು ಮಾರಕಾಸ್ತ್ರಗಳಿಂದ ಹುಸೇನಪ್ಪ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದಾರೆ. ಹುಸೇನಪ್ಪ ಕೆಎಸ್ಆರ್ಟಿಸಿನಲ್ಲಿ ಕಳೆದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ನಾಳೆ ಬೀದರ್ನಲ್ಲಿ ಚಾಲಕರ ನೇಮಕಾತಿ ಪರೀಕ್ಷೆಗೆ ತೆರಳುತ್ತಿದ್ದ ಅವರು ಮನೆಯಿಂದ ಬಸ್ ನಿಲ್ದಾಣಕ್ಕೆ ಹೋಗುವ ವೇಳೆ ಕೊಲೆ ಮಾಡಲಾಗಿದೆ. ಸ್ಥಳಕ್ಕೆ …
Read More »ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಮೇಲೆ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ಧಾರವಾಡ ಹೈಕೋರ್ಟ್
ಧಾರವಾಡ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಮೇಲೆ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ಧಾರವಾಡ ಹೈಕೋರ್ಟ್ ತೀರ್ಪು ನೀಡಿದೆ. ವಿಧಾನಸಭಾ ಚುನಾವಣೆ ವೇಳೆ ಜೆಪಿ ನಡ್ಡಾ ಅವರ ಮೇಲೆ ಎಫ್ಐಆರ್ ದಾಖಲಾಗಿತ್ತು. ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಮೇ 11, 2023ರಂದು ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ದೂರು ದಾಖಲಾಗಿತ್ತು. ಮೇ 7, 2023 ರಂದು ಬಹಿರಂಗ ಸಭೆ ನಡೆದಿತ್ತು. ಬಹಿರಂಗ ಸಭೆಯಲ್ಲಿ ಜೆ ಪಿ ನಡ್ಡಾ ಭಾಷಣ ಮಾಡಿದ್ದರು. …
Read More »