ಮಂಡ್ಯ/ಬೆಂಗಳೂರು: ಕೃಷಿ ಸಚಿವರು ಲಂಚಕ್ಕಾಗಿ ಪೀಡಿಸುತ್ತಿದ್ದಾರೆ ಎಂದು ಸ್ವತಃ ಕೃಷಿ ಇಲಾಖೆಯ ಅಧಿಕಾರಿಗಳೇ ನೇರವಾಗಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿ ರಾಜ್ಯಪಾಲರಿಗೆ ನೀಡಿರುವ ದೂರು ಪಿತೂರಿ ಸ್ವರೂಪದಲ್ಲಿದ್ದು, ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಾಗಿದೆ ಎಂದು ಕಿಡಿಕಾರಿದ್ದಾರೆ. ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಆರೋಪಿಸಿ ಮಂಡ್ಯ ಜಿಲ್ಲೆಯ ಏಳು ಕೃಷಿ ಅಧಿಕಾರಿಗಳಿಂದ ದೂರು ಅರ್ಜಿ ಬಂದಿದ್ದು, ಈ ಬಗ್ಗೆ …
Read More »ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನಿಗೆ 136 ಎಂ ಎಲ್ ಎ ಗಳ ಸಪೋರ್ಟ್ ಇದೆ:
ಬಾಗಲಕೋಟೆ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆಯಲ್ಲ. ಅಲ್ಲಿಯ ಸ್ಪೀಕರ್, ಎಷ್ಟು ಬಾರಿ ನಮ್ಮ ನಾಯಕರನ್ನು ಹೊರ ಹಾಕಿದ್ದಾರೆ? ಎಷ್ಟು ಹೊತ್ತು ಹೊರಹಾಕಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಪಕ್ಷದ ಮುಖಂಡರಿಗೆ ಅಬಕಾರಿ ಇಲಾಖೆ ಸಚಿವ ಆರ್ ಬಿ ತಿಮ್ಮಾಪೂರ ಟಾಂಗ್ ನೀಡಿದ್ದಾರೆ. ಬಾಗಲಕೋಟೆ ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಮಾಡುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು. ಅದ್ರ ಬಗ್ಗೆ ಮಾತನಾಡಲು ಯೋಗ್ಯತೆ ಅವರಿಗೆ ಇಲ್ಲ, ಮೊದಲು ಬಿಜೆಪಿಗರು ತಾವು …
Read More »ಮುಸ್ಲಿಮರೇ ಇಲ್ಲದ ಗ್ರಾಮದಲ್ಲಿ ಹಿಂದೂಗಳಿಂದ ಮೊಹರಂ ಹಬ್ಬಾಚರಣೆ
ಬಾಗಲಕೋಟೆ : ದೇಶಾದ್ಯಂತ ಶನಿವಾರ ಶಿಯಾ ಮುಸ್ಲಿಮರು ಮೊಹರಂ ಆಚರಿಸಿದರು. ರಾಜ್ಯದಲ್ಲೂ ಶ್ರದ್ಧಾ ಭಕ್ತಿಯ ಮೊಹರಂ ನಡೆದಿದೆ. ಬಾಗಲಕೋಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಶೋಕ ಮೆರವಣಿಗೆಗಳು ನಡೆದವು. ಮುಸ್ಲಿಮರೊಂದಿಗೆ ಹಿಂದೂಗಳೂ ಭಾಗಿಯಾಗಿದ್ದರು. ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ಮೊಹರಂ ಆಚರಿಸಿಕೊಂಡು ಬರಲಾಗುತ್ತಿದೆ. ಈ ಗ್ರಾಮದಲ್ಲಿ ಮುಸ್ಲಿಮರು ಇಲ್ಲ. ಹೀಗಿದ್ದರೂ ಬೇರೆ ಗ್ರಾಮದಿಂದ ಸಮುದಾಯದವರನ್ನು ಕರೆಸಿ ಮೊಹರಂ ಮಾಡಲಾಗುತ್ತದೆ. ಹಿಂದೂಗಳು ಮತ್ತು ಮುಸ್ಲಿಮರು ಪರಸ್ಪರ ಒಟ್ಟಾಗಿ ಸೇರಿ ಹಬ್ಬ …
Read More »ಎಚ್ಡಿಕೆ ನೈಸ್ ದಾಖಲೆ ಕೊಟ್ರೆ ತನಿಖೆ ಎಂದ ಜೋಶಿ; ಪ್ರತ್ಯುತ್ತರ ಕೊಡುವೆನೆಂದ ಡಿಕೆಶಿ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ (Karnataka Politics) ಹಲವಾರು ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, “ನೈಸ್” ವಿವಾದ (Nice controversy) ತಾರಕಕ್ಕೇರಿದೆ. ಬಿಎಂಐಸಿ ಯೋಜನೆಯ ಅವ್ಯವಹಾರದ ದಾಖಲೆಗಳನ್ನು ಪ್ರಧಾನಿ ನರೇಂದ್ರ ಮೋದಿಗೆ (PM Narendra Modi) ಸಲ್ಲಿಸುವುದಾಗಿ ಹೇಳಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ಕೆಂಡವಾಗಿದೆ. ಅಲ್ಲದೆ, ನೈಸ್ ಸಂಸ್ಥೆ ಜತೆ ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಸೇರಿಕೊಂಡಿದ್ದಾರೆ ಎಂಬ ಆರೋಪಕ್ಕೆ ಡಿಕೆಶಿ ಖಡಕ್ ಪ್ರತಿಕ್ರಿಯೆ ನೀಡಿದ್ದು, ಎಚ್ಡಿಕೆಗೆ …
Read More »ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಭಾಗ್ಯಗಳ ಹೆಸರಿನಲ್ಲಿ ನಾಯಕರು ಭಾಗ್ಯ ಪಡೆಯುತ್ತಿದ್ದಾರೆ.: ಅಶ್ವತ್ಥ್ ನಾರಾಯಣ
ಬೆಂಗಳೂರು, ಆಗಸ್ಟ್ 06: ಭಾಗ್ಯಗಳ ಹೆಸರಿನಲ್ಲಿ ಆಶ್ರಯ ಪಡೆದು ರಾಜಕಾರಣ ಮಾಡುತ್ತಿದ್ದಾರೆ. ಇವರಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಇದೆಯಾ, ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ(Ashwath Narayan)ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ಅರ್ಹತೆ, ಯೋಗ್ಯತೆ ಇಲ್ಲ. ಭ್ರಷ್ಟಾಚಾರ ಮಾಡಿಕೊಂಡು ಕುಳಿತಿರುವ ಕಾಂಗ್ರೆಸ್ಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ. ಜನರ ಮೇಲೆ ಪ್ರೀತಿ ಇಟ್ಟುಕೊಂಡು ಕಾಂಗ್ರೆಸ್ ಗ್ಯಾರಂಟಿ ಕೊಟ್ಟಿದ್ದಲ್ಲ. …
Read More »ಜೆಡಿಎಸ್ ಶಾಸಕರ ಮೇಲೆ ಕಾಂಗ್ರೆಸ್ ಕಣ್ಣು ಶಾಸಕರನ್ನ ಉಳಿಸಿಕೊಳ್ಳಲು ದಳಪತಿ ಮಾಸ್ಟರ್ ಪ್ಲ್ಯಾನ್!
ಬೆಂಗಳೂರು, (ಆಗಸ್ಟ್. 06): ಕರ್ನಾಟಕದಲ್ಲಿ (karnataka) ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಯಾರನ್ನು ಮಾಡುತ್ತೆ ಎನ್ನುವುದರಲ್ಲಿ ರಾಜ್ಯ ಬಿಜೆಪಿ(BJP) ನಾಯಕರು ಇದ್ದಾರೆ. ಇದರ ನಡುವೆ ಅತ್ತ ಜೆಡಿಎಸ್ನ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಆಡಳಿತ ಪಕ್ಷ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ವರ್ಗಾವಣೆ ದಂಧೆ ವಿಚಾರವಾಗಿ ಪೆನ್ಡ್ರೈವ್ ಬಂಬ್ ಸಿಡಿಸಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಒಂದು ಸಾವಿರ ಕೋಟಿ ವಸೂಲಿ ಪಕ್ಷ.. ಪೆನ್ಡ್ರೈವ್ ಎಂದು …
Read More »ಟೊಮ್ಯಾಟೊ ಬೆಳೆದು ಕೋಟ್ಯಧಿಪತಿಗಳಾದ ಅಣ್ತಮ್ಮ
ಈ ಕುಟುಂಬ ಮೊದಲಿಗೆ ಸ್ವಂತ ಜಮೀನಿನಲ್ಲಿ ಮಳೆ ಆಶ್ರಿತ ಬೆಳೆ ಬೆಳೆದು ಜೀವನ ಸಾಗಿಸುತ್ತಿತ್ತು. ಬಳಿಕ ಸಹೋದರರು ಎಸ್ಎಸ್ಎಲ್ಸಿ ಮುಗಿಸಿ, ಕಾಲೇಜು ಮೆಟ್ಟಿಲು ಏರದೆ ಕೃಷಿ ಮಾಡುವ ನಿರ್ಧಾರ ಕೈಗೊಂಡರು. 3-4 ವರ್ಷಗಳಿಂದ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಸಹೋದರರು ಟೊಮ್ಯಾಟೊ ಬೆಳೆಯುವುದನ್ನೇ ರೂಢಿಯಾಗಿಸಿಕೊಂಡಿದ್ದಾರೆ. 2 ವರ್ಷಗಳ ಹಿಂದೆ ಟೊಮ್ಯಾಟೊ ಬೆಲೆ ಕಡಿಮೆ ಇದ್ದ ಕಾರಣ ಅಷ್ಟೇನೂ ಲಾಭ ಸಿಕ್ಕಿರಲಿಲ್ಲ. ಹಿಂದಿನ ವರ್ಷವೂ ಖರ್ಚು ಸಿಕ್ಕಿತ್ತೇ ಹೊರತು ಲಾಭ ಕಂಡಿರಲಿಲ್ಲ. ಆದರೂ ಟೊಮ್ಯಾಟೊ …
Read More »ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲು
ಬೆಂಗಳೂರು : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು ಮಾಡಿಕೊಂಡಿದ್ದು, ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ಸಂಜೆ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂಆರ್ಐ ಸ್ಕ್ಯಾನಿಂಗ್ ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೇರೆ ಯಾವುದೇ ತೊಂದರೆಯಾಗಿಲ್ಲ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಇಂದು ಹಾಸನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಿದ ಸಾಲುಮರದ …
Read More »ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಸೋಮವಾರ ವಿವಿಧ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಆಗಸ್ಟ್ 7 ರಂದು (ನಾಳೆ) ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದ್ದಾರೆ. ಆಡಳಿತರೂಢ ಕಾಂಗ್ರೆಸ್ ಸರ್ಕಾರವೂ ಬಿಜೆಪಿ ಸರ್ಕಾರ ತಂದಿದ್ದ ರೈತ ಪರ ಯೋಜನೆಗಳನ್ನು ಕೈ ಬಿಟ್ಟಿದ್ದು, ರಾಜ್ಯದ ಅನ್ನದಾತರ ವಿರುದ್ಧವಾಗಿ ನಡೆದುಕೊಂಡಿದೆ. ರೈತ ವಿರೋಧಿ ನೀತಿಯನ್ನು ಖಂಡಿಸಿ ಸೋಮವಾರ ವಿವಿಧ ಜಿಲ್ಲಾ …
Read More »ವಾರಾಂತ್ಯದ ಪಾರ್ಟಿ ನೆಪದಲ್ಲಿ ಪುಂಡಾಟಿಕೆ ಮದ್ಯದ ಅಮಲಿನಲ್ಲಿದ್ದ ಯುವತಿಯ ರಂಪಾಟ
ಬೆಂಗಳೂರು: ವಾರಾಂತ್ಯದ ಪಾರ್ಟಿ ನೆಪದಲ್ಲಿ ಪುಂಡಾಟಿಕೆ ಮೆರೆಯುವ ಪ್ರಕರಣಗಳು ನಗರದಲ್ಲಿ ಆಗಾಗ ವರದಿಯಾಗುತ್ತಲೇ ಇರುತ್ತವೆ. ಅಂಥಹದ್ದೇ ಮತ್ತೊಂದು ಪ್ರಕರಣ ಶನಿವಾರ ತಡರಾತ್ರಿ ನಗರದ ಚರ್ಚ್ ಸ್ಟ್ರೀಟ್ನಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಯುವತಿಯೊಬ್ಬಳು ತೂರಾಡುತ್ತ ಸಾರ್ವಜನಿಕರಿಗೆ ತಲೆ ನೋವಾದ ಘಟನೆ ನಡೆದಿದೆ. ಬುದ್ಧಿ ಹೇಳಲು ಹೋದವರ ಮೇಲೆಯೇ ಮುಗಿ ಬೀಳುತ್ತಿದ್ದ ಯುವತಿಯನ್ನು ಸಂಬಾಳಿಸುವಲ್ಲಿ ಪೊಲೀಸರೇ ಹೈರಾಣಾಗಿದ್ದಾರೆ. ರಾತ್ರಿ ಪಾಳಿಯಲ್ಲಿದ್ದ ಪೊಲೀಸ್ ಸಿಬ್ಬಂದಿ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲು ಯತ್ನಿಸಿದ್ದಾರೆ. ಆದರೆ ಮಹಿಳಾ ಸಿಬ್ಬಂದಿಗಳಿಲ್ಲದ …
Read More »