ಹೈದರಾಬಾದ್ (ತೆಲಂಗಾಣ): ಮಾನವನ ದೇಹ ರಹಸ್ಯಗಳ ಗೂಡು. ದೇಹದಲ್ಲಿ ಕೆಲವೊಮ್ಮೆ ವಿಶೇಷತೆಗಳು ಘಟಿಸಿ ವೈದ್ಯಲೋಕಕ್ಕೇ ಅಚ್ಚರಿ ಉಂಟು ಮಾಡುತ್ತವೆ. ಅಂಥಹದ್ದೇ ಒಂದು ಅಪರೂಪದ ವಿದ್ಯಮಾನ ಬೆಳಕಿಗೆ ಬಂದಿದೆ. ಹೊಟ್ಟೆ ನೋವೆಂದು ಹೋದ ವ್ಯಕ್ತಿಗೆ ತಪಾಸಣೆಯ ವೇಳೆ ದೇಹದಲ್ಲಿ ಪುರುಷ ಮತ್ತು ಸ್ತ್ರೀ ಜನನಾಂಗ ಎರಡೂ ಇರುವುದು ಕಂಡುಬಂದಿದೆ. ಇದರಲ್ಲಿ ಒಂದನ್ನು ಶಸ್ತ್ರಚಿಕಿತ್ಸೆ ನಡೆಸಿ ತೆಗೆದುಹಾಕಲಾಗಿದೆ. 40 ವರ್ಷದ ವ್ಯಕ್ತಿಯೊಬ್ಬರು ಇತ್ತೀಚೆಗೆ ಸಿಕಂದರಾಬಾದ್ನ ಕಿಮ್ಸ್ ಆಸ್ಪತ್ರೆಗೆ ಹೊಟ್ಟೆ ನೋವೆಂದು ದಾಖಲಾಗಿದ್ದರು. ಅವರಿಗೆ ನಡೆಸಿದ …
Read More »ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ಕಲ್ಪಿಸದೇ ಇರುವುದು ಖಂಡನೀಯ ಎಂದು ಕಸಾಪ ಅಧ್ಯಕ್ಷ ಡಾ. ಮಹೇಶ ಜೋಶಿ ವಾಗ್ದಾಳಿ ನಡೆಸಿದ್ದಾರೆ
ಬೆಂಗಳೂರು : ಪರಿಷತ್ತು ಸಮಸ್ತ ಕನ್ನಡಿಗರ ಪರವಾಗಿ ಮಾಡಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅವಕಾಶ ನೀಡಬೇಕು ಎನ್ನುವ ಬೇಡಿಕೆಯ ನಂತರವೂ ಕೇಂದ್ರ ಸರ್ಕಾರ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ ಎನ್ನುವುದು ಖೇದದ ಸಂಗತಿ. ಕನ್ನಡ ಸಾಹಿತ್ಯ ಪರಿಷತ್ತು ಸಹಿಸುವುದಿಲ್ಲ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಕಿಡಿಕಾರಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ಕಲ್ಪಿಸದೇ ಇರುವುದು ಸಮಸ್ತ …
Read More »ಬಸವನಕುಡಚಿಯ ಗ್ರಾಮದಲ್ಲಿನ ಸಮಸ್ಯೆ ಆಲಿಸಲು ಪಾಲಿಕೆಯ ಆಯುಕ್ತರು ಭೇಟಿ ನೀಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಬೆಳಗಾವಿ : ಮಹಾನಗರ ಪಾಲಿಕೆಯ 48ನೇ ವಾರ್ಡ್ಗೆ ಒಳಪಡುವ ಬಸವನಕುಡಚಿಯ ಜನರ ಸಮಸ್ಯೆ ಆಲಿಸಲು ಕಳೆದ ನಾಲ್ಕು ದಶಕಗಳಿಂದ ಒಬ್ಬ ಪಾಲಿಕೆ ಆಯುಕ್ತರು ಭೇಟಿ ಕೊಟ್ಟಿಲ್ಲ ಎಂಬ ಆರೋಪ ಕೇಳಿಬಂದಿದೆ. 1984ರಲ್ಲಿ ಈ ಪಾಲಿಕೆ ಅಸ್ತಿತ್ವಕ್ಕೆ ಬಂದಿದೆ. ಆದರೆ ಈವರೆಗೆ ಒಬ್ಬರೇ ಒಬ್ಬ ಪಾಲಿಕೆ ಆಯುಕ್ತರು ಬಂದು ಜನರ ಸಮಸ್ಯೆ ಆಲಿಸಿಲ್ಲವಂತೆ. ನಾವು ಹೆಸರಿಗಷ್ಟೇ ಪಾಲಿಕೆ ವ್ಯಾಪ್ತಿಯಲ್ಲಿದ್ದೇವೆ. ಹಾಗಾಗಿ ನಾವು ಪಾಲಿಕೆಯಲ್ಲಿ ಮುಂದುವರಿಯಲ್ಲ. ನಮ್ಮ ಊರಿಗೆ ಪ್ರತ್ಯೇಕ ಗ್ರಾಮ ಪಂಚಾಯತಿ ರಚಿಸಿ …
Read More »ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡರ್ ಇಳಿಸಿದ ಮೊದಲ ದೇಶ ಭಾರತ! ಇತಿಹಾಸ ಸೃಷ್ಟಿಸಿದ ಇಸ್ರೋ!
ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಇಂದು ಭಾರತ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿತು. ಇಡೀ ವಿಶ್ವವೇ ಎದುರು ನೀಡುತ್ತಿದ್ದ ಚಂದ್ರಯಾನ-3 ಗಗನ ನೌಕೆಯ ಲ್ಯಾಂಡರ್ ವಿಕ್ರಮ್ ಅನ್ನು ಇಸ್ರೋ ವಿಜ್ಞಾನಿಗಳು ಸಂಜೆ 6:04ಕ್ಕೆ ಸರಿಯಾಗಿ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದರು. ಈ ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಯಶಸ್ವಿಯಾಗಿ ಇಳಿಸಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು. ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬ್ಯಾಹಾಕಾಶ ಕೇಂದ್ರದಿಂದ …
Read More »ರೇಷನ್ ಸರಿಯಾಗಿ ವಿತರಿಸುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ತಹಶಿಲ್ದಾರ ಕಚೇರಿ ಎದುರು ನಡೆದಿದೆ.ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ಅಕ್ಕಿ ಸರಿಯಾಗಿ ವಿತರಣೆ ಮಾಡಲ್ಲ ಜೊತೆಗೆ ರೇಷನ್ ಅಂಗಡಿಯಲ್ಲಿ ಮರ್ಯಾದೆ ಕೊಟ್ಟು ಮಾತನಾಡಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಅಂಗಡಿ ಮಾಲೀಕ ಸರಿಯಾಗಿ ರೇಷನ್ ವಿತರಣೆ ಮಾಡುವದಿಲ್ಲ,ಕೇಳಲು ಹೋದರೆ ಗಲಾಟೆ ಮಾಡುತ್ತಾರೆ ಅವರನ್ನು ಬದಲಿಸಿ ಬೇರೆಯವರಿಗೆ ರೇಷನ್ ಹಂಚಲು ಕೊಡಬೇಕು ಎಂದು ಸಿಂದಗಿ ತಹಶಿಲ್ದಾರ ಕಚೇರಿ ಎದುರು ಬಸವ್ವ ಡಾಂಗಿ ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡುತ್ತಾ ಅಧಿಕಾರಿಗಳಿಗೆ ಮನವಿ ಮಾಡಿದರು.
ರೇಷನ್ ಸರಿಯಾಗಿ ವಿತರಿಸುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ತಹಶಿಲ್ದಾರ ಕಚೇರಿ ಎದುರು ನಡೆದಿದೆ. ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ಅಕ್ಕಿ ಸರಿಯಾಗಿ ವಿತರಣೆ ಮಾಡಲ್ಲ ಜೊತೆಗೆ ರೇಷನ್ ಅಂಗಡಿಯಲ್ಲಿ ಮರ್ಯಾದೆ ಕೊಟ್ಟು ಮಾತನಾಡಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಅಂಗಡಿ ಮಾಲೀಕ ಸರಿಯಾಗಿ ರೇಷನ್ ವಿತರಣೆ ಮಾಡುವದಿಲ್ಲ, ಕೇಳಲು ಹೋದರೆ ಗಲಾಟೆ ಮಾಡುತ್ತಾರೆ ಅವರನ್ನು ಬದಲಿಸಿ …
Read More »ಅಶುದ್ಧ ನೀರು ಸೇವನೆಯಿಂದ ಸಾವು ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಸಿಎಂ ಎಚ್ಚರಿಕೆ
ಬೆಂಗಳೂರು: ಅಶುದ್ಧ ನೀರು ಕುಡಿದು ಸಾವನ್ನಪ್ಪುವ ಪ್ರಕರಣಗಳು ಭವಿಷ್ಯದಲ್ಲಿ ಮರುಕಳಿಸಿದರೆ ಜಿಲ್ಲಾ ಪಂಚಾಯಿತಿ ಸಿಇಒಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಅಲ್ಲದೇ ನಗರ ಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನೀರಿನ ಸಮಸ್ಯೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ (ಮಂಗಳವಾರ) ನಡೆದ ಸಭೆಯಲ್ಲಿ ಅವರು ಮಾತನಾಡಿದರು. ನೀರಿನ ಸಮಸ್ಯೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಡವರು ವಾಸಿಸುವ …
Read More »ಚಂದ್ರಯಾನ 3 ಯಶಸ್ವಿಯಾಗಲೆಂದು ದೇಶ, ವಿದೇಶಗಳಲ್ಲಿ ಪ್ರಾರ್ಥನೆ: ಹೋಮ, ಹವನ, ಪೂಜೆ ನಡೆಸುತ್ತಿರುವ ಭಕ್ತರು
ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಕೈಗೊಂಡಿರುವ ಅತ್ಯಂತ ಮಹತ್ವದ ಸಾಹಸಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ದೇಶ ಮಾತ್ರವಲ್ಲದೇ ಜಗತ್ತಿನಾದ್ಯಂತ ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ, ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗಲೆಂದು ಪ್ರಪಂಚಾದ್ಯಂತ ವಿವಿಧ ಧಾರ್ಮಿಕ ಸಮುದಾಯಗಳಿಂದ ಹೋಮ, ಹವನ, ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಕೆ ಮಾಡಲಾಗುತ್ತಿದೆ. ಚಂದ್ರಯಾನ 3 ಮಿಷನ್ ಯಶಸ್ಸಿಯಾಗಲಿ ಎಂದು ಭಾರತಾದ್ಯಂತ ವಿವಿಧ …
Read More »ದಕ್ಷಿಣ ಆಫ್ರಿಕಾದಿಂದ ‘Chandrayaan 3’ ಲ್ಯಾಂಡಿಂಗ್ ವರ್ಚುಯಲ್ ಆಗಿ ವೀಕ್ಷಿಸಲಿರುವ ಪ್ರಧಾನಿ
ಜೋಹಾನ್ಸ್ಬರ್ಗ್(ದಕ್ಷಿಣ ಆಫ್ರಿಕಾ): 15ನೇ ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ಸೌತ್ ಆಫ್ರಿಕಾದ ಜೋಹಾನ್ಸ್ಬರ್ಗ್ ತಲುಪಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾದಿಂದಲೇ ಮೋದಿ ವರ್ಚುಯಲ್ ಆಗಿ ಐತಿಹಾಸಿಕ ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ವೀಕ್ಷಣೆ ಮಾಡಲಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ 3 ಚಂದ್ರನ ಅಜ್ಞಾತ ದಕ್ಷಿಣ ಧ್ರುವದಲ್ಲಿ ಇಳಿಯುವ ಮೂಲಕ ಇತಿಹಾಸ ಸೃಷ್ಟಿಸಲು ಸಿದ್ಧವಾಗಿದೆ ಎಂದು ಹೇಳಿದೆ. ದೇಶಾದ್ಯಂತ ಪೂಜೆ ಪ್ರಾರ್ಥನೆ: ಇಂದು ಸಂಜೆ 6.04ಕ್ಕೆ ಸಾಫ್ಟ್ ಲ್ಯಾಂಡಿಂಗ್ ಸಮಯ ನಿಗದಿಪಡಿಸಲಾಗಿದೆ. …
Read More »ನಗರದಾದ್ಯಂತ ಕಳೆದ 24 ಗಂಟೆಯಲ್ಲಿ 15 ರಸ್ತೆ ಅಪಘಾತ, ಐವರ ಸಾವು
ಬೆಂಗಳೂರು: ನಗರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಸಂಭವಿಸಿದ್ದು, ಹದಿನೈದು ಅಪಘಾತಗಳ ಪ್ರಕರಣಗಳು ಸಂಭವಿಸಿವೆ. ಈ ವೇಳೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಹೆಬ್ಬಾಳದಲ್ಲಿ – 1, ರಾಜಾಜಿನಗರ – 2, ಹೆಣ್ಣೂರು – 2, ಬಸವನಗುಡಿ – 2, ಕೆ.ಆರ್ ಪುರಂ – 1 ವೈಟ್ ಫೀಲ್ಡ್ – 2 ಹುಳಿಮಾವು – 2 ಹಾಗೂ ಸದಾಶಿವನಗರ – 1 ಮೈಕೊ ಲೇಔಟ್ – 1, ಎಲೆಕ್ಟ್ರಾನಿಕ್- 1 …
Read More »ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಮಹಿಳಾ ಶಕ್ತಿ: 39 ಸದಸ್ಯರ ಪೈಕಿ 15 ಮಂದಿಗೆ ಸ್ಥಾನ
ನವದೆಹಲಿ : ಈ ವರ್ಷಾಂತ್ಯದ ಪಂಚರಾಜ್ಯಗಳ ವಿಧಾನಸಭೆ ಮತ್ತು ಮುಂದಿನ ವರ್ಷದಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷ, ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ 84 ಜನರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಹೊಸದಾಗಿ ರಚಿಸಿದೆ. ಅದರಲ್ಲಿ ಪಕ್ಷದ ವಿರುದ್ಧ ಬಹಿರಂಗವಾಗಿ ಬಂಡಾಯವೇಳುತ್ತಿದ್ದ ನಾಯಕರೂ ಸೇರಿದಂತೆ 15 ಮಹಿಳೆಯರಿಗೆ ಅವಕಾಶ ನೀಡಲಾಗಿದೆ. ಪಕ್ಷದ ಅತ್ಯುನ್ನತ ನೀತಿ ನಿರ್ಧಾರಗಳನ್ನು ಕೈಗೊಳ್ಳುವ ಸಂಸ್ಥೆಯಾದ ಸಿಡಬ್ಲ್ಯೂಸಿಗೆ ಇಷ್ಟು ಪ್ರಮಾಣದಲ್ಲಿ ಮಹಿಳೆಯರಿಗೆ ಅವಕಾಶ ನೀಡಿದ್ದು, …
Read More »
Laxmi News 24×7