Breaking News

ರಾಷ್ಟ್ರೀಯ

ಆನೆದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿ ಬಂಧನ

ಬೆಂಗಳೂರು: ಆನೆದಂತ (Elephant Ivory) ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಆರ್​ಎಂಸಿ ಯ‍ಾರ್ಡ್ ಪೊಲೀಸರು (Police) ಬಂಧಿಸಿದ್ದಾರೆ. ಶ್ರೀಶೈಲ ಬಂಧಿತ ಆರೋಪಿ. ಆರೋಪಿ ಶ್ರೀಶೈಲ್​ ಗುರುವಾರ ಸಂಜೆ 6.30 ರ ಸುಮಾರಿಗೆ ಆರ್​ಎಂಸಿ ಯಾರ್ಡ್ ಠಾಣಾ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿ ಆನೆ ದಂತ ಮಾರಾಟಕ್ಕೆ ಯತ್ನಿಸುತ್ತಿದ್ದನು. ಈ ಬಗ್ಗೆ ಆರ್​ಎಂಸಿ ಯಾರ್ಡ್ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಕೂಡಲೆ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 7.42 ಕೆಜಿ ತೂಕದ 5 ಆನೆ …

Read More »

ಫೋರ್ಜರಿ ಮಾಡಿದ್ದ ಬಸವತೀರ್ಥ ಮಠದ ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ DC ಆದೇಶ

ಬೀದರ್, (ಆಗಸ್ಟ್ 09): ಕೋರ್ಟ್​ ತೀರ್ಪು (Court Verdict) ಫೋರ್ಜರಿ ಮಾಡಿದ್ದ ಹುಮ್ನಾಬಾದ್(humnabad) ತಾಲೂಕಿನ ಬಸವತೀರ್ಥ ಮಠದ  ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಬೀದರ್ ಜಿಲ್ಲಾಧಿಕಾರಿ (Bidar DC) ಆದೇಶಿಸಿದ್ದಾರೆ. ಭೂವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣದ(ಕೆಎಟಿ ) ತೀರ್ಪನ್ನು ತಿದ್ದಿದ್ದ ಪ್ರಕರಣಕ್ಕೆ  ಬಸವತೀರ್ಥ ಮಠದ ಡಾ.ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ತಹಶೀಲ್ದಾರ್​​ಗೆ ಜಿಲ್ಲಾಧಿಕಾರಿ ಗೋಂವಿದರೆಡ್ಡಿ ಸೂಚನೆ ನೀಡಿದ್ದಾರೆ. ದೂರುದಾರ ಚಂದ್ರಕಾಂತ ಜಲಾದಾರ, ಸ್ವಾಮೀಜಿ ನಡುವೆ ಭೂವಿವಾದಕ್ಕೆ ಸಂಬಂಧಿಸಿದಂತೆ 2017ರ …

Read More »

ಕರ್ನಾಟಕ ಗೆಲುವಿನ ಹುಮ್ಮಸ್ಸು, ತೆಲಂಗಾಣದಲ್ಲೂ ಪಕ್ಷವನ್ನು ಗೆಲ್ಲಿಸುವ ಗಟ್ಟಿ ವಿಶ್ವಾಸ: ಡಿಕೆಶಿ- ಪ್ರಿಯಾಂಕಾಗೆ ಹೆಚ್ಚಿನ ಹೊಣೆ!?

ಹೈದರಾಬಾದ್: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಅಭೂತಪೂರ್ವ ಗೆಲುವು, ಕೈ ಹಕಮಾಂಡ್​​​ಗೆ ಭರ್ಜರಿ ಬೂಸ್ಟ್ ನೀಡಿದೆ. ಹೀಗಾಗಿ ಮುಂಬರುವ ಚುನಾವಣೆಗಳನ್ನು ಎದುರಿಸಲು ಕಾಂಗ್ರೆಸ್​​​ ರಣೋತ್ಸಾಹದಿಂದ ಮುನ್ನುಗ್ಗುತ್ತಿದೆ. ಯಾವುದೇ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿ ಮುನ್ನಡೆಯುವ ಛಾತಿಯಲ್ಲಿದೆ. ಕರ್ನಾಟಕ ಗೆಲುವಿನ ಹುಮ್ಮಸ್ಸು, ತೆಲಂಗಾಣದಲ್ಲೂ ಪಕ್ಷವನ್ನು ಗೆಲ್ಲಿಸುವ ಗಟ್ಟಿ ವಿಶ್ವಾಸವನ್ನು ಪಕ್ಷದ ನಾಯಕರಲ್ಲಿ ಬಲಗೊಳಿಸಿದೆ. ಹೀಗಾಗಿ ಕಾಂಗ್ರೆಸ್ ಮತ್ತಷ್ಟು ಸಮರ್ಥವಾಗಿ ಮುನ್ನಡೆಯಲು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮುಂಬರುವ ಚುನಾವಣೆಯಲ್ಲಿ ಪಕ್ಷದ ಪ್ರಧಾನ …

Read More »

ರಾಜ್ಯದ ಮೊದಲ ‘ಬೀದಿ ನಾಯಿಗಳ ಪುನರ್ವಸತಿ ಕೇಂದ್ರ’ ಉದ್ಘಾಟನೆಗೆ ಸಿದ್ದ: ಇಲ್ಲಿರುವ ಸೌಲಭ್ಯಗಳೇನು?

ಮೈಸೂರು: ರಾಜ್ಯದಲ್ಲಿ ಮೊದಲ ಬಾರಿಗೆ ಮೈಸೂರಿನ ಮಹಾನಗರ ಪಾಲಿಕೆಯ ವತಿಯಿಂದ ಬೀದಿ ನಾಯಿಗಳ ಪುನರ್ವಸತಿ ಕೇಂದ್ರ ನಿರ್ಮಾಣಗೊಂಡಿದೆ. ಇದು ಹಲವಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಮೂಲಕ ರಾಜ್ಯದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೊದಲ ‘ಬೀದಿ ನಾಯಿಗಳ ಆರೈಕೆ ಕೇಂದ್ರ’ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಇಲ್ಲಿ ಯಾವ ರೀತಿಯ ಸೌಲಭ್ಯಗಳಿವೆ? ಎಷ್ಟು ವೆಚ್ಚದಲ್ಲಿ ಕೇಂದ್ರವನ್ನು ಸ್ಥಾಪಿಸಲಾಗಿದೆ? ಎಂಬಿತ್ಯಾದಿ ವಿಚಾರಗಳ ಬಗ್ಗೆ ಪಾಲಿಕೆಯ ಆರೋಗ್ಯಾಧಿಕಾರಿ ಡಾ.ನಾಗರಾಜ್ ಈಟಿವಿ ಭಾರತಕ್ಕೆ ವಿವರ ನೀಡಿದರು. ಶೀಘ್ರದಲ್ಲೇ ಉದ್ಘಾಟನೆ: ಕೇಂದ್ರ ಸರ್ಕಾರದ ಸಹಯೋಗದೊಂದಿಗೆ …

Read More »

ಮಾರ್ಗದರ್ಶಿ ಚಿಟ್ ಗ್ರೂಪ್​ಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವ ಕುರಿತು ಚಿಟ್​ ರಿಜಿಸ್ಟ್ರಾರ್​ ಹೊರಡಿಸಿದ್ದ ಸಾರ್ವಜನಿಕ ನೊಟೀಸ್​ಗೆ ಆಂಧ್ರ ಪ್ರದೇಶ ಹೈಕೋರ್ಟ್​ ತಡೆಯಾಜ್ಞೆ

ಅಮರಾವತಿ (ಆಂಧ್ರ ಪ್ರದೇಶ): ಮಾರ್ಗದರ್ಶಿ ಚಿಟ್ ಗ್ರೂಪ್​ಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವ ಕುರಿತು ಚಿಟ್​ ರಿಜಿಸ್ಟ್ರಾರ್​ ಹೊರಡಿಸಿದ್ದ ಸಾರ್ವಜನಿಕ ನೊಟೀಸ್​ಗೆ ಆಂಧ್ರ ಪ್ರದೇಶ ಹೈಕೋರ್ಟ್ ಇಂದು​ ತಡೆ ನೀಡಿತು. ಸಾರ್ವಜನಿಕ ನೊಟೀಸ್​ ಆಧಾರದ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವುದಕ್ಕೆ ಹೈಕೋರ್ಟ್​ ತಡೆ ಕೊಟ್ಟಿದೆ. ಚಂದಾದಾರರು ಈಗಾಗಲೇ ಸಲ್ಲಿಸಿರುವ ಅರ್ಜಿಗಳ ಕುರಿತಂತೆ ಮಧ್ಯಂತರ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಅರ್ಜಿಗಳನ್ನು ಜೊತೆಯಾಗಿಯೇ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಾಲಯ ತಿಳಿಸಿತು. ಚಂದಾದಾರರು ತಮ್ಮ …

Read More »

ರೈಲು ಟಿಕೆಟನ್ನು ಆನ್‌ಲೈನ್‌ನಲ್ಲಿ ರದ್ದು ಮಾಡಲು ಪ್ರಯತ್ನಿಸುವಾಗ 3.5 ಲಕ್ಷ ರೂಪಾಯಿ ಕಳೆದುಕೊಂಡ

ಸೈಬರ್ ಕಳ್ಳರು ಜನರ ಖಾತೆಗಳಿಂದ ಹಣ ದೋಚುವ ಪ್ರಕರಣಗಳು ಮುಂದುವರೆದಿವೆ. ಈ ಕುರಿತು ಮತ್ತೊಂದು ಘಟನೆ ವರದಿಯಾಗಿದ್ದು, ಕೋಝಿಕ್ಕೋಡ್ ಮೂಲದ ವ್ಯಕ್ತಿ ಸೈಬರ್ ವಂಚನೆಗೆ ಬಲಿಯಾಗಿದ್ದಾರೆ. ಕೋಝಿಕ್ಕೋಡ್‌ನ ವ್ಯಕ್ತಿ ತನ್ನ ರೈಲು ಟಿಕೆಟನ್ನು ಆನ್‌ಲೈನ್‌ನಲ್ಲಿ ರದ್ದು ಮಾಡಲು ಪ್ರಯತ್ನಿಸುವಾಗ 3.5 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಅವರ ಎಸ್​ಬಿ ಮತ್ತು ಎಫ್​ಡಿ ಖಾತೆಗಳಿಂದ ಹಣ ದೋಚಲಾಗಿದೆ. 3 ಸೀಕ್ರೆಟ್ ಕೋಡ್ ವೆರಿಫಿಕೇಶನ್ ಮತ್ತು 2 ಒಟಿಪಿ ವೆರಿಫಿಕೇಶನ್​ಗಳ ನಂತರ ಖಾತೆಯಿಂದ ಹಣ …

Read More »

ಗುತ್ತಿಗೆದಾರರಿಗೆ ಬಿಲ್ ಕೊಡುವುದು ಬೇಡ ಅನ್ನೋದಿಲ್ಲ. ತನಿಖೆಯಲ್ಲಿ ತಪ್ಪು ಮಾಡಿಲ್ಲ ಅನ್ನೋದು ಸಾಬೀತಾದರೆ ಬಿಲ್​ ಖಂಡಿತ ಕೊಡುತ್ತೇವೆ ಎಂದ ಸಿಎಂ‌

ಬೆಳಗಾವಿ: ಈ ರಾಜ್ಯವನ್ನು ಬಿಜೆಪಿಗರು ಹಾಳು ಮಾಡಿದ್ದಾರೆ. ಆರ್ಥಿಕವಾಗಿ, ಭ್ರಷ್ಟಾಚಾರ, ಧರ್ಮ ರಾಜಕಾರಣ ಮಾಡಿದ್ದಾರೆ. ನಾವು 135 ಸ್ಥಾನ ಗೆದ್ದಿದ್ದರಿಂದ ಬಿಜೆಪಿಗರಿಗೆ ಭಯ ಆರಂಭವಾಗಿದೆ. ಎಷ್ಟೇ ದುಡ್ಡು ಖರ್ಚು ಮಾಡಿದರೂ, ಗೆಲ್ಲಲಿಲ್ಲ ಎಂದು ಹತಾಶರಾಗಿದ್ದಾರೆ. ಲೋಕಸಭೆಯಲ್ಲಿ ಅವರಿಗೆ ಸೋಲುವ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬಿನ್ ಲಾಡನ್ ಸರ್ಕಾರ ಎಂಬ ಆರ್.ಅಶೋಕ್​ ಹೇಳಿಕೆ …

Read More »

ಕ ಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನಾಗಿ ಅಜಯ್ ಸಿಂಗ್ ನೇಮಕ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನಾಗಿ ಅಜಯ್ ಸಿಂಗ್ ಅವರನ್ನು ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿನಿಯಮ 2013ರ ನಿಯಮಿತ ಅನ್ವಯ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ 11 ಸದಸ್ಯರನ್ನೊಳಗೊಂಡಂತೆ ಮಂಡಳಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ತೀವ್ರ ಅಸಮಾಧಾನಗೊಂಡಿದ್ದರು. ಈ ಸಂಬಂಧ ಕೆಲ ದಿನಗಳಿಂದ ಪಕ್ಷದ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದರು. …

Read More »

ರಾಜ್ಯಾದ್ಯಂತ ಆಗಸ್ಟ್ 27ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ‘ಬಹುನಿರೀಕ್ಷಿತ’ ಗೃಹ ಲಕ್ಷ್ಮೀ ಯೋಜನೆಗೆ ಆಗಸ್ಟ್​ 27ರಂದು ಚಾಲನೆ ನೀಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಆಗಸ್ಟ್ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ …

Read More »

ಬೆಂಗಳೂರಲ್ಲಿ ಮಹಿಳೆ ಮೇಲೆ ಹಲ್ಲೆ ಆರೋಪ: ಕ್ಯಾಬ್ ಚಾಲಕ ಪೊಲೀಸ್​ ವಶಕ್ಕೆ

ಬೆಂಗಳೂರು: ಮಹಿಳೆಗೆ ನಿಂದಿಸಿ ಹಲ್ಲೆ ಮಾಡಿದ ಆರೋಪದ ಮೇಲೆ ಕ್ಯಾಬ್ ಚಾಲಕನನ್ನು ಬೆಳ್ಳಂದೂರು ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪತ್ನಿಯ ಮೇಲೆ ಹಲ್ಲೆ ಮಾಡಿರುವುದಾಗಿ ಮಹಿಳೆಯ ಪತಿ ನೀಡಿದ ದೂರಿನ ಆಧಾರದ ಮೇಲೆ ಕ್ಯಾಬ್ ಚಾಲಕ ಬಸವರಾಜ್​ ಎಂಬಾತನನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೆಳ್ಳಂದೂರಿ‌ನ ಬೋಗನಹಳ್ಳಿಯ ಅಪಾರ್ಟ್​​ಮೆಂಟ್​​​ನಲ್ಲಿ ಮಹಿಳೆಯ ಕುಟುಂಬ ವಾಸವಾಗಿದೆ. ಮಗನ ಚಿಕಿತ್ಸೆ ಸಲುವಾಗಿ ಬುಧವಾರ ಬೋಗನಹಳ್ಳಿಯಿಂದ ಮಣಿಪಾಲ್ ಆಸ್ಪತ್ರೆಗೆ ತೆರಳಲು ಮಹಿಳೆಯು ಕ್ಯಾಬ್ ಬುಕ್ …

Read More »