ಮಂಡ್ಯ : ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಹಿನ್ನೆಲೆ, ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ಬುಧವಾರ ಜಂಟಿ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿ ಮಂಗಳವಾರ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ, ಐಜಿ ಪ್ರವೀಣ್ ಮಧುಕರ್ ಪವಾರ್ ನೇತೃತ್ವದ ತಂಡ ಜಿಲ್ಲಾಧಿಕಾರಿ …
Read More »ಆನೆಗಳು ಬಲಿಷ್ಠ ವನ್ಯಜೀವಿಗಳಾದರೂ ಭಾರತ ಸೇರಿದಂತೆ ವಿಶ್ವಾದ್ಯಂತ ಅಪಾಯದಲ್ಲಿವೆ : ಈಶ್ವರಖಂಡ್ರೆ
ಬೆಂಗಳೂರು : ರಾಜ್ಯದ ಆನೆಗಳ ಸಂಖ್ಯೆಯಲ್ಲಿ 350ರಷ್ಟು ಹೆಚ್ಚಳವಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಆನೆಗಳ ಗಣತಿಯ ವರದಿ ಬಿಡುಗಡೆ ಮಾಡಿ ಮಾತನಾಡಿದ ಅವರು, 2017ರಲ್ಲಿ ರಾಜ್ಯದಲ್ಲಿ ಸುಮಾರು 6049 ಆನೆಗಳಿದ್ದವು. ಈ ಬಾರಿ ಗಣತಿಯ ವೇಳೆ 6,395 ಆನೆಗಳಿವೆ ಎಂದು ಅಂದಾಜು ಮಾಡಲಾಗಿದ್ದು, ಸುಮಾರು 350ರಷ್ಟು ಹೆಚ್ಚಳವಾಗಿದೆ ಎಂದರು. ಅವಸಾನದ ಅಂಚಿನಲ್ಲಿರುವ ಆನೆಗಳನ್ನು ಸಂರಕ್ಷಿಸುವ ಸಲುವಾಗಿ, ಆನೆಗಳಿಗೂ ನೆಮ್ಮದಿಯಿಂದ …
Read More »ಅಕ್ಕಿ, ಗೋಧಿ ಮಾರಾಟ; ಬೆಲೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ
ನವದೆಹಲಿ : ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಒಎಂಎಸ್ಎಸ್) ಅಡಿಯಲ್ಲಿ ಹೆಚ್ಚುವರಿ 50 ಲಕ್ಷ ಟನ್ ಗೋಧಿ ಮತ್ತು 25 ಲಕ್ಷ ಟನ್ ಅಕ್ಕಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸ್ಥಳೀಯ ಮಾರುಕಟ್ಟೆಗಳಲ್ಲಿ ಅಕ್ಕಿ ಮತ್ತು ಗೋಧಿಯ ಬೆಲೆಗಳನ್ನು ನಿಯಂತ್ರಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಆಗಸ್ಟ್ 7 ರ ಹೊತ್ತಿಗೆ ಕಳೆದ ಒಂದು ವರ್ಷದಲ್ಲಿ ಗೋಧಿ ಬೆಲೆಗಳು ಚಿಲ್ಲರೆ ಮಾರುಕಟ್ಟೆಯಲ್ಲಿ ಶೇಕಡಾ 6.77 ಮತ್ತು ಸಗಟು ಮಾರುಕಟ್ಟೆಯಲ್ಲಿ ಶೇಕಡಾ 7.37 …
Read More »ಸತತ ಮಳೆ ಮತ್ತು ವರದಾ ನದಿಯ ಪ್ರವಾಹದಿಂದ ರೈತ ನಾಲ್ಕೂವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಟೊಮೆಟೊ ಬೆಳೆ ಹಾನಿ
ಹಾವೇರಿ: ಕಳೆದ ಎರಡು ತಿಂಗಳಿಂದ ಎಲ್ಲೆಡೆ ಕಿಚನ್ ಕ್ವೀನ್ ಟೊಮೆಟೊದ್ದೇ ಮಾತು. ಟೊಮೆಟೊ ಬೆಳೆ ಈ ಬಾರಿ ರೈತರ ಕೈ ಹಿಡಿದಿದ್ದು, ಅಧಿಕ ಲಾಭ ತಂದುಕೊಟ್ಟಿದೆ. ಇದರ ನಡುವೆ ಕೆಲ ರೈತರು ಟೊಮೆಟೊ ಕಳ್ಳತನವಾಗಬಾರದು ಎಂದು ಜಮೀನಿನಲ್ಲಿ ಕಾವಲು ಕಾಯುತ್ತಿದ್ದಾರೆ. ಆದರೆ ಹಾವೇರಿ ಸಮೀಪದ ದೇವಗಿರಿ ಗ್ರಾಮದ ಟೊಮೆಟೊ ಬೆಳೆಗಾರ ದುರ್ಗಪ್ಪ ಎಂಬುವನ ಕಥೆ ಇದಕ್ಕೆ ಭಿನ್ನವಾಗಿದೆ. ದೇವಗಿರಿಯ ವರದಾ ನದಿ ತಟದಲ್ಲಿ ನಾಲ್ಕೂವರೆ ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದ ರೈತ …
Read More »ಯುವ ರೈತ ಕೇವಲ 30 ಗುಂಟೆಯಲ್ಲಿ ಟೊಮೆಟೊ ಬೆಳೆದು ಲಕ್ಷ ಲಕ್ಷ ಸಂಪಾದಿಸಿದ್ದಾನೆ.
ದಾವಣಗೆರೆ : ಟೊಮೆಟೊಗೆ ಚಿನ್ನದ ಬೆಲೆ ಸಿಕ್ಕಿದ್ದರಿಂದ ರೈತರು ಹೆಚ್ಚಿನ ಲಾಭ ಪಡೆಯುತ್ತಿದ್ದು, ಕೆಂಪು ಸುಂದರಿ ಬೆಳೆಯಲು ಮುಂದಾಗಿದ್ದಾರೆ. ಕೆಲ ರೈತರು ಕೋಟಿಗಟ್ಟಲೇ ಲಾಭ ಪಡೆದರೆ ಇನ್ನೂ ಕೆಲವರು ಲಕ್ಷಗಟ್ಟಲೇ ಆದಾಯ ಗಳಿಸಿದ್ದಾರೆ. ಈ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದ ರೈತರೊಬ್ಬರು ಸೇರಿದ್ದಾರೆ. ಕೇವಲ ಮೂವತ್ತು ಗುಂಟೆ ಜಮೀನಿನಲ್ಲಿ 7 ಲಕ್ಷ ರೂ. ಲಾಭ ಪಡೆದಿದ್ದು, ಇನ್ನೂ ಮೂರು ಲಕ್ಷ ಲಾಭದ ನಿರೀಕ್ಷೆಯಲ್ಲಿದ್ದಾರೆ. ಹೌದು, ದಾವಣಗೆರೆ ಜಿಲ್ಲೆಯ …
Read More »ಸ್ಪಂದನಾ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಬೆಂಗಳೂರಿಗೆ ತಲುಪಿದ್ದು, ಅಂತಿಮ ದರ್ಶನದ ಬಳಿಕ ಇಂದು ಮಧ್ಯಾಹ್ನ ಅಂತ್ಯ ಸಂಸ್ಕಾರ ನಡೆಯಲಿದೆ.
ಬೆಂಗಳೂರು: ಬ್ಯಾಂಕಾಕ್ ಪ್ರವಾಸದ ವೇಳೆ ನಿಧನರಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಬೆಂಗಳೂರಿಗೆ ತಲುಪಿದ್ದು, ಅಂತಿಮ ದರ್ಶನ ನಡೆಯುತ್ತಿದೆ. ಅಂತಿಮ ದರ್ಶನದ ಬಳಿಕ ಇಂದು ಮಧ್ಯಾಹ್ನ ಅಂತ್ಯ ಸಂಸ್ಕಾರ ನಡೆಯಲಿದೆ. ಮಂಗಳವಾರ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಥಾಯ್ ಏರ್ ವೇಸ್ ವಿಮಾನದಲ್ಲಿ ಕರೆತರಲಾಗಿದ್ದು, ಕಾರ್ಗೋ ಟರ್ಮಿನಲ್ನಲ್ಲಿ ಕುಟುಂಬಸ್ಥರಿಗೆ ಪಾರ್ಥಿವ ಶರೀರ ಹಸ್ತಾಂತರ ಮಾಡಲಾಗಿದೆ. ಇದೇ ವಿಮಾನದಲ್ಲಿ ಪತಿ ವಿಜಯ ರಾಘವೇಂದ್ರ …
Read More »ಬಾಬಾ ಸಾಹೇಬರ ಲೇಖನಿಯಿಂದ ಭಾರತ ಬದಲಾಯಿತು: ಜ್ಞಾನಪ್ರಕಾಶ ಸ್ವಾಮೀಜಿ
ಬೆಳಗಾವಿ: “ಜೀವ ಜಗತ್ತಿನಲ್ಲಿ ಮಹಿಳೆಯೇ ಶ್ರೇಷ್ಠ ಎಂದಿದ್ದರೂ ದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಶೋಷಿತ ಸಮುದಾಯಗಳೂ ಹೊರತಾಗಿಲ್ಲ. ಇದೆಲ್ಲದಕ್ಕೂ ಕಡಿವಾಣ ಹಾಕಬೇಕಿದ್ದರೆ ಶೋಷಿತ ಸಮುದಾಯಗಳು ಸುಶಿಕ್ಷಿತರಾಗಬೇಕು. ಆಗ ಮಾತ್ರ ಶಾಹುಮಹಾರಾಜರು ಮತ್ತು ಮಹಾತ್ಮಾ ಫುಲೆ ದಂಪತಿಯ ಕನಸು ನನಸಾಗಿಸಲು ಸಾಧ್ಯ” ಎಂದು ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಅಭಿಪ್ರಾಯಪಟ್ಟರು. ಬೆಳಗಾವಿಯ ಕುಮಾರ ಗಂಧರ್ವ ಕಲಾಭವನದಲ್ಲಿ ಛತ್ರಪತಿ ಶಾಹುಮಹಾರಾಜರ 144ನೇ ಜಯಂತಿ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ …
Read More »DON 3: ಮುಂದಿನ ಡಾನ್ ಶಾರುಖ್ ಅಲ್ಲ ರಣ್ವೀರ್
DON 3. ಬಿಟೌನ್ಲ್ಲಿ ಡಾನ್ ಸದ್ದಾಗುತ್ತಿದೆ. ಆಗಸ್ಟ್ 8ರಂದು ಬಾಲಿವುಡ್ನ ಸೆನ್ಸೇಶನಲ್ ಸುದ್ದಿ ಅಂದ್ರೆ ಅದು ‘ಡಾನ್ 3’. ನಟ, ನಿರ್ದೇಶಕ, ನಿರ್ಮಾಪಕ ಮತ್ತು ಬಹುಮುಖ ಪ್ರತಿಭೆ ಫರ್ಹಾನ್ ಅಖ್ತರ್ ಇಂದು ‘ಡಾನ್ 3’ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಬಹಳ ಸಮಯದಿಂದ ಕಾದು ಕುಳಿತಿದ್ದರು. ಅಂತಿಮವಾಗಿ ‘ಡಾನ್ 3’ ಘೋಷಣೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹೌದು, ಡಾನ್ 3 ಸಿನಿಪ್ರಿಯರ …
Read More »ಏಕದಿನ ಕ್ರಿಕೆಟ್ ವಿಶ್ವಕಪ್ಗೆ ಸಿದ್ಧತೆ; ಭಾರತದ ಸಂಭಾವ್ಯ ತಂಡ:
ನವದೆಹಲಿ: ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್ಗೆ ಇನ್ನು ಎರಡು ತಿಂಗಳು ಮಾತ್ರ ಬಾಕಿ. ಅಕ್ಟೋಬರ್ 5ರಿಂದ ಪ್ರಾರಂಭವಾಗುವ ಪಂದ್ಯಾವಳಿಗೆ ಸಪ್ಟೆಂಬರ್ 5ರೊಳಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ಗೆ (ಐಸಿಸಿ) ಎಲ್ಲ ಕ್ರಿಕೆಟ್ ಮಂಡಳಿಗಳು ತಾತ್ಕಾಲಿಕ 15 ಆಟಗಾರರ ಪಟ್ಟಿ ಸಲ್ಲಿಸಬೇಕಿದೆ. ಸೆಪ್ಟಂಬರ್ 27ರೊಳಗೆ ಅಂತಿಮ ತಂಡ ಪ್ರಕಟಿಸಬೇಕು. ಆಸ್ಟ್ರೇಲಿಯಾ ಈಗಾಗಲೇ 18 ಸದಸ್ಯರ ತಂಡವನ್ನು ಪ್ರಕಟಿಸಿದೆ. ಭಾರತ ತಂಡದ ಆಯ್ಕೆಯಲ್ಲಿ ಹಲವು ಗೊಂದಲಗಳಿದ್ದು ಗಾಯದಿಂದ ಚೇತರಿಸಿಕೊಂಡು ಯಾರೆಲ್ಲಾ ಸ್ಥಾನ ಪಡೆಯುತ್ತಾರೆ, …
Read More »ಇನ್ಮುಂದೆ ಕನ್ನಡ ಸೇರಿದಂತೆ ಈ ಪ್ರಾದೇಶಿಕ ಭಾಷೆಯಲ್ಲೂ ಪಡೆಯಬಹುದು ಫೋನ್ ಪೇ ಪೇಮೆಂಟ್ ನೋಟಿಫಿಕೇಶನ್
ಬೆಂಗಳೂರು: ಡಿಜಿಟಲ್ ಪೇಮೆಂಟ್ ಪ್ಲಾಟ್ಫಾರ್ಮ್ನಲ್ಲಿ ಜನಸಾಮಾನ್ಯರ ಜನಪ್ರಿಯ ತಾಣವಾಗಿರುವ ಫೋನ್ಪೇ ಇದೀಗ ಮತ್ತಷ್ಟು ವ್ಯಾಪಾರಿ ಸ್ನೇಹಿಯಾಗುವತ್ತ ಹೆಜ್ಜೆ ಇಟ್ಟಿದೆ. ಈ ಹಿಂದೆ ವ್ಯಾಪಾರಿಗಳಿಗೆ ಗ್ರಾಹಕರ ಪೇಮೆಂಟ್ ಇತಿಹಾಸವನ್ನು ಸುಲಭವಾಗಿ ತಿಳಿಯುವ ಉದ್ದೇಶದಿಂದ ಪಾವತಿ ಕುರಿತು ಸ್ಮಾರ್ಟ್ ಸ್ಪೀಕರ್ ನೋಟಿಫಿಕೇಶನ್ ಅನ್ನು ಪರಿಚಯಿಸಿತು. ಇಷ್ಟು ದಿನ ಇಂಗ್ಲಿಷ್ನಲ್ಲಿ ಈ ನೋಟಿಫಿಕೇಶನ್ ಧ್ವನಿ ಕೇಳಿ ಬರುತ್ತಿತ್ತು. ಆದರೆ, ಇದೀಗ ಪ್ರಾದೇಶಿಕ ಭಾಷೆಗಳಲ್ಲೂ ಪರಿಚಯಿಸಿದೆ. ಈ ಸ್ಮಾರ್ಟ್ ಸ್ಪೀಕರ್ ಇನ್ಮುಂದೆ ಹಣದ ವಾಹಿವಾಟಿನ ಮಾಹಿತಿಯನ್ನು ಕನ್ನಡ, …
Read More »
Laxmi News 24×7