Breaking News

ರಾಷ್ಟ್ರೀಯ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

ನವದೆಹಲಿ : ಮಾಜಿ ಪ್ರಧಾನಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಧೀಮಂತ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ 5ನೇ ವರ್ಷದ ಪುಣ್ಯತಿಥಿ ನಿಮಿತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು. ಜೊತೆಗೆ,” ವಾಜಪೇಯಿ ನಾಯಕತ್ವದಿಂದ ಭಾರತಕ್ಕೆ ಹೆಚ್ಚಿನ ಲಾಭವಾಗಿದೆ, ಅವರ ನಾಯಕತ್ವದಲ್ಲಿ ದೇಶವು ಹಿಂದೆಂದಿಗಿಂತಲೂ ಹೆಚ್ಚಿನ ಪ್ರಗತಿ ಸಾಧಿಸಿತ್ತು” ಎಂದು ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.     ಈ ಕುರಿತು ಟ್ವೀಟ್​ …

Read More »

ಕೊಪ್ಪಳದ ಗಂಗಾವತಿಯಲ್ಲಿ ಅನಧಿಕೃತವಾಗಿ ಹೋಟೆಲ್​ ರೆಸಾರ್ಟ್​ಗಳು ಕಾರ್ಯನಿರ್ವಹಿಸಿದ್ದ ಹಿನ್ನೆಲೆ ದಾಳಿ ಮಾಡಿದ ಪೊಲೀಸರು

ಗಂಗಾವತಿ: ಹಂಪಿ ಪ್ರಾಧಿಕಾರದ ನಿಯಮ ಮೀರಿಯೂ ಅನಧಿಕೃತವಾಗಿ ಹೋಟೆಲ್​ ರೆಸಾರ್ಟ್​ಗಳು ಕಾರ್ಯನಿರ್ವಹಿಸಿದ್ದ ಹಿನ್ನೆಲೆ ದಾಳಿ ಮಾಡಿದ ಪ್ರಾಧಿಕಾರದ ಅಧಿಕಾರಿಗಳು, ಹನ್ನೊಂದು ರೆಸಾರ್ಟ್​ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ರೂಪಕ ಕುಮಾರ ಬಿಸ್ವಾಸ್​, ರಾಜು , ವರುಣ್ , ಕರುಣಾಕರ್ , ಗಾಳೇಶ್ , ಆಸೀಫ್ , ಚಂದ್ರಶೇಖರಗೌಡ , ಶ್ರೀಕಾಂತ್ ಹೊಸಳ್ಳಿ, ರವಿಚಂದ್ರ, ಸಂದೀಪ್ ಶೇಟ್ ಹಾಗೂ ಮೌಲಾಲಿ ಎಂಬುವವರಿಗೆ ಸೇರಿದ ರೆಸಾರ್ಟ್​ಗಳ ಮೇಲೆ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಈ …

Read More »

ವ್ಹೀಲಿಂಗ್ ವೇಳೆ ಮತ್ತೊಂದು ಬೈಕ್​ಗೆ ಡಿಕ್ಕಿ.. ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆಗೆ ರಜೆ ಸಿಕ್ಕಿರುವ ಹಿನ್ನೆಲೆ ನಂದಿಬೆಟ್ಟದ ರಸ್ತೆಯಲ್ಲಿ ವ್ಹೀಲಿಂಗ್ ಮಾಡಲು ಹೋದ ಯುವಕನೊಬ್ಬ ಮತ್ತೊಂದು ಬೈಕ್​ಗೆ ಡಿಕ್ಕಿ ಹೊಡೆದು, ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಸಮೀಪ ಇಂದು ನಡೆದಿದೆ. ಬೆಂಗಳೂರು ಮೂಲದ ಆದಿಲ್ (25) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ಇಂದು ಸ್ವಾತಂತ್ರ್ಯ ದಿನಾಚರಣೆಯಾಗಿದ್ದು, ಬೆಂಗಳೂರಿನಿಂದ ಆಗಮಿಸುವ ಕೆಲವರು ಏರ್ಪೋರ್ಟ್​ ರಸ್ತೆ ಕಡೆ ಬಂದು ವ್ಹೀಲಿಂಗ್ ಮಾಡ್ತಾರೆ. ಹೀಗೆ ದೇವನಹಳ್ಳಿಯಿಂದ ನಂದಿಬೆಟ್ಟದ …

Read More »

ಶಿಕಾರಿಪುರದ ನಳಿನಕೊಪ್ಪ ಶಾಲೆಯಲ್ಲಿ‌ ನಡೆಯದ ಸ್ವಾತಂತ್ರ್ಯ ದಿನಾಚರಣೆ: ಶಾಲೆಯ ಮುಖ್ಯ ಶಿಕ್ಷಕಿ ಅಮಾನತು

ಶಿವಮೊಗ್ಗ: ಇಂದು ದೇಶಾದ್ಯಂತ ಎಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಕಳೆಗಟ್ಟಿದೆ. ಸರ್ಕಾರಿ ಶಾಲೆ, ಕಾಲೇಜು, ಕಚೇರಿಗಳಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಗಿದೆ. ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ್ದಾರೆ. ಆದ್ರೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಎಳನೀರು‌ಕೊಪ್ಪ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸದೆ ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಎಲ್ಲಾ ಸರ್ಕಾರಿ‌ ಶಾಲೆ, ಕಾಲೇಜು ಸೇರಿದಂತೆ ಸರ್ಕಾರಿ ಇಲಾಖೆಯ ಕಚೇರಿಯಲ್ಲಿ ಕಡ್ಡಾಯವಾಗಿ …

Read More »

ಬಸನಗೌಡ ಯತ್ನಾಳ್ ಅವರ ಮನಸ್ಥಿತಿ ಸರಿ ಇಲ್ಲ; ಸಚಿವ ಮಂಕಾಳು ವೈದ್ಯ ತಿರುಗೇಟು

ಕಾರವಾರ (ಉತ್ತರ ಕನ್ನಡ) : 7-8 ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಭವಿಷ್ಯ ಹೇಳಿದ್ದರು. ಅವರು ಏನಾದರೂ ಹೇಳಬೇಕೆಂದು ಹೇಳಿಕೆ ನೀಡುತ್ತಾರೆ. ಅವರ ಮನಸ್ಥಿತಿ ಸರಿ ಇಲ್ಲ ಎಂದು ಮೀನುಗಾರಿಕೆ ಇಲಾಖೆ ಸಚಿವ ಮಂಕಾಳು ವೈದ್ಯ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರವೇ ಬೀಳುವುದಾಗಿ 5 ವರ್ಷದ ಹಿಂದೆ ಹೇಳಿದ್ದರು. ಆದರೆ ಸರ್ಕಾರವನ್ನು ಬೀಳಿಸಲು ಸಾಧ್ಯವಾಗಿಲ್ಲ. ಸಿಎಂ ಕುರ್ಚಿಗೆ ಒಂದೂವರೆ ಸಾವಿರ ಕೋಟಿ ನೀಡಬೇಕು ಎಂದಿದ್ದರು. ಅವರು …

Read More »

ತಾಯಿಯೊಬ್ಬಳು ತನ್ನ ಮಗನನ್ನೇ ಕೊಂದ ಘಟನೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ನಡೆದಿತ್ತು. ಇದೀಗ ಅಪರಾಧಿಗೆ ಚಿಕ್ಕೋಡಿ ಕೋರ್ಟ್‌ ದಂಡಸಹಿತ ಜೈಲುಶಿಕ್ಷೆ ವಿಧಿಸಿದೆ.

ಚಿಕ್ಕೋಡಿ (ಬೆಳಗಾವಿ) : ತನ್ನ ಅನೈತಿಕ ಸಂಬಂಧ ಗೊತ್ತಾಯಿತು ಎಂದು ಮಗನನ್ನು ಬಾವಿಗೆ ತಳ್ಳಿ ಕೊಲೆಗೈದ ಮಹಿಳೆಗೆ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 7 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಸುಧಾ ಸುರೇಶ ಕರಿಗಾರ (31) ಶಿಕ್ಷೆಗೊಳಗಾದವರು. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (22/10/2019ರಲ್ಲಿ) ನಡೆದ ಕೊಲೆ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶ ಎಸ್.ಎಲ್.ಚೌವ್ಹಾಣ …

Read More »

ಬೆಳಗಾವಿ ಜಿಲ್ಲಾ ವಿಭಜನೆಗೆ ನಮ್ಮ ಒತ್ತಡ ಇದ್ದೇ ಇದೆ.: ಸತೀಶ ಜಾರಕಿಹೊಳಿ

ಬೆಳಗಾವಿ: “ಬೆಳಗಾವಿ ಜಿಲ್ಲಾ ವಿಭಜನೆಗೆ ನಮ್ಮ ಒತ್ತಡ ಇದ್ದೇ ಇದೆ. ಅದಕ್ಕಿಂತಲೂ ಮೊದಲು 8 ಲಕ್ಷ ಮತದಾರರನ್ನು ಹೊಂದಿರುವ ಬೆಳಗಾವಿ ತಾಲೂಕು ರಚನೆಯಾಗಬೇಕಿದೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಶೀಘ್ರವೇ ಹೊಸ ಬೆಳಗಾವಿ ತಾಲೂಕು ರಚನೆ ಆಗಬೇಕು ಎಂಬುದು ನಮ್ಮ ಬೇಡಿಕೆ. ಬೆಳಗಾವಿ ಉತ್ತರ, ದಕ್ಷಿಣ ಮತ್ತು ಗ್ರಾಮೀಣ ಯಾವುದಾದರೂ ಒಂದು …

Read More »

ಮಹಾನ್ ಪುರುಷರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಸಂತ ಶ್ರೇಷ್ಠ ಕನಕದಾಸ ಮತ್ತು ಶೂರ ಸಂಗೊಳ್ಳಿ ರಾಯಣ್ಣನಂತಹ ಅಪ್ರತಿಮ ಸಾಧಕರನ್ನು ಪಡೆದಿರುವುದು ಹಾಲುಮತ ಸಮಾಜದ ಸೌಭಾಗ್ಯವಾಗಿದೆ. ಆದರೂ ಇಂತಹ ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮಿತಗೊಳಿಸದೇ ಎಲ್ಲ ಸಮಾಜಗಳು ಇವರ ತತ್ವಾದರ್ಶಗಳನ್ನು ಪಾಲನೆ ಮಾಡಬೇಕಾದ ಅಗತ್ಯವಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಮಂಗಳವಾರದಂದು ಜರುಗಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಹಾಗೂ ವಿಶ್ವಜ್ಯೋತಿ ಕನಕದಾಸರ ನೂರೆಂಟು ನಾಮಾವಳಿಯ …

Read More »

ಆಕ್ಷೇಪಾರ್ಹ ಪದ ಬಳಕೆ ಆರೋಪ; ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್ ವಿರುದ್ಧ ದೂರು

ಬೆಂಗಳೂರು : ಆಕ್ಷೇಪಾರ್ಹ ಪದ ಬಳಕೆ ಆರೋಪದಲ್ಲಿ ರಾಜ್ಯ ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ವಿರುದ್ಧ ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.   ದಿವಾಕರ್ ಎಂಬವರು ನೀಡಿದ ದೂರಿನ ಮೇರೆಗೆ ಸಚಿವರ ವಿರುದ್ಧ ಗಂಭೀರವಲ್ಲದ ಅಪರಾಧ ಪ್ರಕರಣ (ಎನ್‌ಸಿಆರ್) ದಾಖಲಾಗಿದೆ. ಸಂದರ್ಶನವೊಂದರಲ್ಲಿ ಮಾತನಾಡುವಾಗ ಸಚಿವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು ಎನ್ನಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪೊಲೀಸರಿಗೆ ನೀಡಲಾಗಿದೆ. ಸಚಿವರು ಮಾತನಾಡಿರುವ ಸ್ಥಳ …

Read More »

SBI ಗ್ರಾಹಕರೇ, ಯಾವುದೇ ಗ್ಯಾರೆಂಟಿ ಇಲ್ಲದೇ ಬ್ಯಾಂಕ್ 50 ಸಾವಿರ ಸಾಲ ನೀಡ್ತಿದೆ, ನೀವೂ ಅರ್ಜಿ ಸಲ್ಲಿಸಿ

ಕೆಲವರು ತಾವು ಮಾಡುತ್ತಿರುವ ಉದ್ಯೋಗಕ್ಕಿಂತ ವ್ಯಾಪಾರದಲ್ಲಿ ಹೆಚ್ಚು ಆಸಕ್ತಿ ಹೊಂದಿರುತ್ತಾರೆ. ಇನ್ನು ಕೆಲವರು ಯಾವುದಾದರೂ ಸಣ್ಣ ವ್ಯಾಪಾರ ಮಾಡಿದರೆ ಉತ್ತಮ ಎಂದು ಭಾವಿಸುತ್ತಾರೆ. ಆದ್ರೆ, ಹಣದ ಸಮಸ್ಯೆ ಅವರನ್ನ ಹಿಂದೆ ಸರಿಯುವಂತೆ ಮಾಡುತ್ತೆ. ಅಂತಹವರ ಪಟ್ಟಿಯಲ್ಲಿ ನೀವೂ ಇದ್ದೀರಾ.? ಹಾಗಿದ್ರೆ, ನಿಮಗಿದು ಗುಡ್ ನ್ಯೂಸ್ ಆಗುವುದು. ನಿಮಗಾಗಿ SBI ಮುದ್ರಾ ಸಾಲವನ್ನ ಒದಗಿಸಲಾಗಿದೆ. ಈ ಯೋಜನೆಯ ಮೂಲಕ ತಕ್ಷಣವೇ 50 ಸಾವಿರದಿಂದ 10 ಲಕ್ಷದವರೆಗೆ ಸಾಲ ಪಡೆಯುವ ಸೌಲಭ್ಯ ಒದಗಿಸುತ್ತಿದೆ. …

Read More »