ಕೊಪ್ಪಳ: ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇಂದಿನ ರಾಜಕಾರಣ ನನಗೆ ಒಗ್ಗುವುದಿಲ್ಲ. 12 ಚುನಾವಣೆಗಳನ್ನು ಎದುರಿಸಿದ್ದೇನೆ. ಈಗಿನ ರಾಜಕೀಯ ವ್ಯವಸ್ಥೆ ಸರಿಯಿಲ್ಲ. ಬಹುಶಃ ನನ್ನ ಕೊನೆಯ ಚುನಾವಣೆ ಮುಗಿದಿದೆ ಎಂದು ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಶ್ರಾವಣ ಸಂಭ್ರಮ ಹೆಸರಿನಲ್ಲಿ ಕೊಪ್ಪಳದಲ್ಲಿ ಶನಿವಾರ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರಿಗೆ ಅವರು ಆಯೋಜಿಸಿದ್ದ ಔತಣ ಕೂಟದ ವೇಳೆ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ಭ್ರಷ್ಟಾಚಾರದ ವಿಷಯದಲ್ಲಿ ಕರ್ನಾಟಕ ಬ್ರ್ಯಾಂಡ್ ಆಗುತ್ತಿರುವುದು …
Read More »ಶಾರುಖ್ ಪುತ್ರಿಯ ಹೃದಯವಂತಿಕೆಗೆ ನೆಟ್ಟಿಗರ ಪ್ರಶಂಸೆ
ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಅವರ ವಿಡಿಯೋವೊಂದು ವೈರಲ್ ಆಗಿದ್ದು, ಅಭಿಮಾನಿಗಳ ಮೆಚ್ಚುಗೆ ಮತ್ತು ಪ್ರಶಂಸೆಗೆ ಪಾತ್ರವಾಗಿದೆ. ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಮತ್ತು ಗೌರಿ ಖಾನ್ ಪುತ್ರಿ ಸುಹಾನಾ ಖಾನ್ ಭಾರತೀಯ ಜನಪ್ರಿಯ ತಾರೆಯರಲ್ಲಿ ಒಬ್ಬರು. ಇವರು ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ವಿಚಾರವಾಗಿಯೂ ಸುದ್ದಿಯಲ್ಲಿರುತ್ತಾರೆ. ಸದ್ಯ ನಟಿಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಶುಕ್ರವಾರ ರಾತ್ರಿ ಮುಂಬೈನ ಸ್ಟ್ರೀಟ್ನಿಂದ ಪಾಪರಾಜಿಯೊಬ್ಬರು ಸೆರೆ ಹಿಡಿದ …
Read More »ಏಳು ವರ್ಷದ ಬಾಲಕಿ ಮೇಲೆ ತಂದೆ ಮಗನಿಂದ ಅತ್ಯಾಚಾರ
ಹೈದರಾಬಾದ್, ತೆಲಂಗಾಣ: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ನಿತ್ಯ ಎಲ್ಲಾದರೂ ಒಂದು ಕಡೆ ಲೈಂಗಿಕ ದೌರ್ಜನ್ಯ ಅಥವಾ ಅತ್ಯಾಚಾರ ಪ್ರಕರಣಗಳ ನಡೆಯುತ್ತಿರುವುದರ ಬಗ್ಗೆ ಬೆಳಕಿಗೆ ಬರುತ್ತಿವೆ. ಅದರಂತೆ ಇತ್ತೀಚೆಗಷ್ಟೇ ಹೈದರಾಬಾದ್ನಲ್ಲಿ ತಂದೆ ಮತ್ತು ಮಗ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ನಗರಕ್ಕೆ ವಲಸೆ ಬಂದಿದ್ದ ಕುಟುಂಬ: ಬಾಲಕಿಗೆ ಮೊಬೈಲ್ ಕೊಡಿಸುವುದಾಗಿ ಆಸೆ ತೋರಿಸಿ ತಂದೆ ಮತ್ತು ಮಗ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ …
Read More »ವಿಜೇತರ ಪಟ್ಟಿ: ಪ್ರಶಸ್ತಿ ಮುಡಿಗೇರಿಸಿಕೊಂಡ ‘ಸೀತಾ ರಾಮಂ’ , ‘ಪಠಾಣ್’
ಮೆಲ್ಬೋರ್ನ್ (ಆಸ್ಟ್ರೇಲಿಯಾ): ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್’ ಚಿತ್ರ ಭಾರಿ ಗಳಿಕೆ ಮಾಡುವ ಮೂಲದ ದೇಶ ಮಾತ್ರವಲ್ಲದೇ, ವಿಶ್ವದೆಲ್ಲೆಡೆ ಸದ್ದು ಮಾಡಿತ್ತು. ಇದೀಗ ಮತ್ತೊಮ್ಮೆ ‘ಪಠಾಣ್’ ಶಾರುಖ್ ಖಾನ್ ಅಭಿಮಾನಿಗಳಲ್ಲಿ ಸಂತಸವನ್ನ ತಂದಿದೆ. ಶುಕ್ರವಾರ ನಡೆದ ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಆಫ್ ಮೆಲ್ಬೋರ್ನ್ (IFFM) ನ 14 ನೇ ಆವೃತ್ತಿಯಲ್ಲಿ ಪೀಪಲ್ಸ್ ಚಾಯ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಪಠಾಣ್ ಸಿನಿಮಾ ಜನವರಿ …
Read More »ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ.
ಬೆಂಗಳೂರು: ”ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯ ನೀಡಬೇಕಿದೆ. ಸಮಯಾವಕಾಶ ನೀಡಿ, ಬಳಿಕ ಹಂತಹಂತವಾಗಿ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ. ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯ. ಮುಂದಿನ ದಿನಗಳಲ್ಲಿ ಕ್ರಮ ಜರುಗಿಸಲಾಗುವುದು” ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ …
Read More »13 – 15 ರವರೆಗೆ ನಡೆಯುವ ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ರಾಷ್ಟ್ರದ ಜನತೆಗೆ ಮನವಿ
ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಸಂದಿವೆ. ಈ ಸಂದರ್ಭದಲ್ಲಿ ಈ ವರ್ಷ ಆ.13 ರಿಂದ 15ರವರೆಗೆ ‘ಹರ್ ಘರ್ ತಿರಂಗಾ'(ಪ್ರತಿ ಮನೆಯಲ್ಲೂ ತ್ರಿವರ್ಣ) ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ದೇಶದ ಜನತೆಗೆ ಕರೆ ನೀಡಿದರು. ‘ಹರ್ ಘರ್ ತಿರಂಗ’ ವೆಬ್ ಸೈಟ್ನಲ್ಲಿ ತಿರಂಗದೊಂದಿಗೆ ನಿಮ್ಮ ಭಾವಚಿತ್ರಗಳನ್ನು ಅಪ್ಲೋಡ್ ಮಾಡಿ ಎಂದು ಪ್ರಧಾನಿ ಹೇಳಿದರು. “ತಿರಂಗ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಚೈತನ್ಯವನ್ನು …
Read More »ಬೆಳಗಾವಿಯಲ್ಲಿ ಆಗಸ್ಟ್ 29 ಅಥವಾ 30ರಂದು ಗೃಹಲಕ್ಷ್ಮಿಗೆ ಚಾಲನೆ :ಸಿಎಂ ಸಿದ್ದರಾಮಯ್ಯ
ಬೆಳಗಾವಿ: ”ಬೆಳಗಾವಿಯಲ್ಲಿ ಆಗಸ್ಟ್ 29 ಅಥವಾ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತೇವೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಸ್ಥಳ ಪರಿಶೀಲನೆ ನಡೆಸಿ, ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ”ಕಾರ್ಯಕ್ರಮಕ್ಕಾಗಿ ಈ ಜಾಗ ಗುರುತಿಸಲಾಗಿದೆ. ರಾಹುಲ್ ಗಾಂಧಿ ಅವರೂ ಆಗಮಿಸುತ್ತಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆಯಿದೆ” ಎಂದರು. ”ಒಂದು ವಿಭಾಗದಲ್ಲಿ ಒಂದು ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಶಕ್ತಿ ಯೋಜನೆ, …
Read More »ಆನೆದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿ ಬಂಧನ
ಬೆಂಗಳೂರು: ಆನೆದಂತ (Elephant Ivory) ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಆರ್ಎಂಸಿ ಯಾರ್ಡ್ ಪೊಲೀಸರು (Police) ಬಂಧಿಸಿದ್ದಾರೆ. ಶ್ರೀಶೈಲ ಬಂಧಿತ ಆರೋಪಿ. ಆರೋಪಿ ಶ್ರೀಶೈಲ್ ಗುರುವಾರ ಸಂಜೆ 6.30 ರ ಸುಮಾರಿಗೆ ಆರ್ಎಂಸಿ ಯಾರ್ಡ್ ಠಾಣಾ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿ ಆನೆ ದಂತ ಮಾರಾಟಕ್ಕೆ ಯತ್ನಿಸುತ್ತಿದ್ದನು. ಈ ಬಗ್ಗೆ ಆರ್ಎಂಸಿ ಯಾರ್ಡ್ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಕೂಡಲೆ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 7.42 ಕೆಜಿ ತೂಕದ 5 ಆನೆ …
Read More »ಫೋರ್ಜರಿ ಮಾಡಿದ್ದ ಬಸವತೀರ್ಥ ಮಠದ ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ DC ಆದೇಶ
ಬೀದರ್, (ಆಗಸ್ಟ್ 09): ಕೋರ್ಟ್ ತೀರ್ಪು (Court Verdict) ಫೋರ್ಜರಿ ಮಾಡಿದ್ದ ಹುಮ್ನಾಬಾದ್(humnabad) ತಾಲೂಕಿನ ಬಸವತೀರ್ಥ ಮಠದ ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಬೀದರ್ ಜಿಲ್ಲಾಧಿಕಾರಿ (Bidar DC) ಆದೇಶಿಸಿದ್ದಾರೆ. ಭೂವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣದ(ಕೆಎಟಿ ) ತೀರ್ಪನ್ನು ತಿದ್ದಿದ್ದ ಪ್ರಕರಣಕ್ಕೆ ಬಸವತೀರ್ಥ ಮಠದ ಡಾ.ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ತಹಶೀಲ್ದಾರ್ಗೆ ಜಿಲ್ಲಾಧಿಕಾರಿ ಗೋಂವಿದರೆಡ್ಡಿ ಸೂಚನೆ ನೀಡಿದ್ದಾರೆ. ದೂರುದಾರ ಚಂದ್ರಕಾಂತ ಜಲಾದಾರ, ಸ್ವಾಮೀಜಿ ನಡುವೆ ಭೂವಿವಾದಕ್ಕೆ ಸಂಬಂಧಿಸಿದಂತೆ 2017ರ …
Read More »ಕರ್ನಾಟಕ ಗೆಲುವಿನ ಹುಮ್ಮಸ್ಸು, ತೆಲಂಗಾಣದಲ್ಲೂ ಪಕ್ಷವನ್ನು ಗೆಲ್ಲಿಸುವ ಗಟ್ಟಿ ವಿಶ್ವಾಸ: ಡಿಕೆಶಿ- ಪ್ರಿಯಾಂಕಾಗೆ ಹೆಚ್ಚಿನ ಹೊಣೆ!?
ಹೈದರಾಬಾದ್: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಅಭೂತಪೂರ್ವ ಗೆಲುವು, ಕೈ ಹಕಮಾಂಡ್ಗೆ ಭರ್ಜರಿ ಬೂಸ್ಟ್ ನೀಡಿದೆ. ಹೀಗಾಗಿ ಮುಂಬರುವ ಚುನಾವಣೆಗಳನ್ನು ಎದುರಿಸಲು ಕಾಂಗ್ರೆಸ್ ರಣೋತ್ಸಾಹದಿಂದ ಮುನ್ನುಗ್ಗುತ್ತಿದೆ. ಯಾವುದೇ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿ ಮುನ್ನಡೆಯುವ ಛಾತಿಯಲ್ಲಿದೆ. ಕರ್ನಾಟಕ ಗೆಲುವಿನ ಹುಮ್ಮಸ್ಸು, ತೆಲಂಗಾಣದಲ್ಲೂ ಪಕ್ಷವನ್ನು ಗೆಲ್ಲಿಸುವ ಗಟ್ಟಿ ವಿಶ್ವಾಸವನ್ನು ಪಕ್ಷದ ನಾಯಕರಲ್ಲಿ ಬಲಗೊಳಿಸಿದೆ. ಹೀಗಾಗಿ ಕಾಂಗ್ರೆಸ್ ಮತ್ತಷ್ಟು ಸಮರ್ಥವಾಗಿ ಮುನ್ನಡೆಯಲು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮುಂಬರುವ ಚುನಾವಣೆಯಲ್ಲಿ ಪಕ್ಷದ ಪ್ರಧಾನ …
Read More »
Laxmi News 24×7