ಮೈಸೂರು: ರಾಜ್ಯದಲ್ಲಿ ಮೊದಲ ಬಾರಿಗೆ ಮೈಸೂರಿನ ಮಹಾನಗರ ಪಾಲಿಕೆಯ ವತಿಯಿಂದ ಬೀದಿ ನಾಯಿಗಳ ಪುನರ್ವಸತಿ ಕೇಂದ್ರ ನಿರ್ಮಾಣಗೊಂಡಿದೆ. ಇದು ಹಲವಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಮೂಲಕ ರಾಜ್ಯದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೊದಲ ‘ಬೀದಿ ನಾಯಿಗಳ ಆರೈಕೆ ಕೇಂದ್ರ’ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಇಲ್ಲಿ ಯಾವ ರೀತಿಯ ಸೌಲಭ್ಯಗಳಿವೆ? ಎಷ್ಟು ವೆಚ್ಚದಲ್ಲಿ ಕೇಂದ್ರವನ್ನು ಸ್ಥಾಪಿಸಲಾಗಿದೆ? ಎಂಬಿತ್ಯಾದಿ ವಿಚಾರಗಳ ಬಗ್ಗೆ ಪಾಲಿಕೆಯ ಆರೋಗ್ಯಾಧಿಕಾರಿ ಡಾ.ನಾಗರಾಜ್ ಈಟಿವಿ ಭಾರತಕ್ಕೆ ವಿವರ ನೀಡಿದರು. ಶೀಘ್ರದಲ್ಲೇ ಉದ್ಘಾಟನೆ: ಕೇಂದ್ರ ಸರ್ಕಾರದ ಸಹಯೋಗದೊಂದಿಗೆ …
Read More »ಮಾರ್ಗದರ್ಶಿ ಚಿಟ್ ಗ್ರೂಪ್ಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವ ಕುರಿತು ಚಿಟ್ ರಿಜಿಸ್ಟ್ರಾರ್ ಹೊರಡಿಸಿದ್ದ ಸಾರ್ವಜನಿಕ ನೊಟೀಸ್ಗೆ ಆಂಧ್ರ ಪ್ರದೇಶ ಹೈಕೋರ್ಟ್ ತಡೆಯಾಜ್ಞೆ
ಅಮರಾವತಿ (ಆಂಧ್ರ ಪ್ರದೇಶ): ಮಾರ್ಗದರ್ಶಿ ಚಿಟ್ ಗ್ರೂಪ್ಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವ ಕುರಿತು ಚಿಟ್ ರಿಜಿಸ್ಟ್ರಾರ್ ಹೊರಡಿಸಿದ್ದ ಸಾರ್ವಜನಿಕ ನೊಟೀಸ್ಗೆ ಆಂಧ್ರ ಪ್ರದೇಶ ಹೈಕೋರ್ಟ್ ಇಂದು ತಡೆ ನೀಡಿತು. ಸಾರ್ವಜನಿಕ ನೊಟೀಸ್ ಆಧಾರದ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವುದಕ್ಕೆ ಹೈಕೋರ್ಟ್ ತಡೆ ಕೊಟ್ಟಿದೆ. ಚಂದಾದಾರರು ಈಗಾಗಲೇ ಸಲ್ಲಿಸಿರುವ ಅರ್ಜಿಗಳ ಕುರಿತಂತೆ ಮಧ್ಯಂತರ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಅರ್ಜಿಗಳನ್ನು ಜೊತೆಯಾಗಿಯೇ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಾಲಯ ತಿಳಿಸಿತು. ಚಂದಾದಾರರು ತಮ್ಮ …
Read More »ರೈಲು ಟಿಕೆಟನ್ನು ಆನ್ಲೈನ್ನಲ್ಲಿ ರದ್ದು ಮಾಡಲು ಪ್ರಯತ್ನಿಸುವಾಗ 3.5 ಲಕ್ಷ ರೂಪಾಯಿ ಕಳೆದುಕೊಂಡ
ಸೈಬರ್ ಕಳ್ಳರು ಜನರ ಖಾತೆಗಳಿಂದ ಹಣ ದೋಚುವ ಪ್ರಕರಣಗಳು ಮುಂದುವರೆದಿವೆ. ಈ ಕುರಿತು ಮತ್ತೊಂದು ಘಟನೆ ವರದಿಯಾಗಿದ್ದು, ಕೋಝಿಕ್ಕೋಡ್ ಮೂಲದ ವ್ಯಕ್ತಿ ಸೈಬರ್ ವಂಚನೆಗೆ ಬಲಿಯಾಗಿದ್ದಾರೆ. ಕೋಝಿಕ್ಕೋಡ್ನ ವ್ಯಕ್ತಿ ತನ್ನ ರೈಲು ಟಿಕೆಟನ್ನು ಆನ್ಲೈನ್ನಲ್ಲಿ ರದ್ದು ಮಾಡಲು ಪ್ರಯತ್ನಿಸುವಾಗ 3.5 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಅವರ ಎಸ್ಬಿ ಮತ್ತು ಎಫ್ಡಿ ಖಾತೆಗಳಿಂದ ಹಣ ದೋಚಲಾಗಿದೆ. 3 ಸೀಕ್ರೆಟ್ ಕೋಡ್ ವೆರಿಫಿಕೇಶನ್ ಮತ್ತು 2 ಒಟಿಪಿ ವೆರಿಫಿಕೇಶನ್ಗಳ ನಂತರ ಖಾತೆಯಿಂದ ಹಣ …
Read More »ಗುತ್ತಿಗೆದಾರರಿಗೆ ಬಿಲ್ ಕೊಡುವುದು ಬೇಡ ಅನ್ನೋದಿಲ್ಲ. ತನಿಖೆಯಲ್ಲಿ ತಪ್ಪು ಮಾಡಿಲ್ಲ ಅನ್ನೋದು ಸಾಬೀತಾದರೆ ಬಿಲ್ ಖಂಡಿತ ಕೊಡುತ್ತೇವೆ ಎಂದ ಸಿಎಂ
ಬೆಳಗಾವಿ: ಈ ರಾಜ್ಯವನ್ನು ಬಿಜೆಪಿಗರು ಹಾಳು ಮಾಡಿದ್ದಾರೆ. ಆರ್ಥಿಕವಾಗಿ, ಭ್ರಷ್ಟಾಚಾರ, ಧರ್ಮ ರಾಜಕಾರಣ ಮಾಡಿದ್ದಾರೆ. ನಾವು 135 ಸ್ಥಾನ ಗೆದ್ದಿದ್ದರಿಂದ ಬಿಜೆಪಿಗರಿಗೆ ಭಯ ಆರಂಭವಾಗಿದೆ. ಎಷ್ಟೇ ದುಡ್ಡು ಖರ್ಚು ಮಾಡಿದರೂ, ಗೆಲ್ಲಲಿಲ್ಲ ಎಂದು ಹತಾಶರಾಗಿದ್ದಾರೆ. ಲೋಕಸಭೆಯಲ್ಲಿ ಅವರಿಗೆ ಸೋಲುವ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬಿನ್ ಲಾಡನ್ ಸರ್ಕಾರ ಎಂಬ ಆರ್.ಅಶೋಕ್ ಹೇಳಿಕೆ …
Read More »ಕ ಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನಾಗಿ ಅಜಯ್ ಸಿಂಗ್ ನೇಮಕ
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನಾಗಿ ಅಜಯ್ ಸಿಂಗ್ ಅವರನ್ನು ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿನಿಯಮ 2013ರ ನಿಯಮಿತ ಅನ್ವಯ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ 11 ಸದಸ್ಯರನ್ನೊಳಗೊಂಡಂತೆ ಮಂಡಳಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ತೀವ್ರ ಅಸಮಾಧಾನಗೊಂಡಿದ್ದರು. ಈ ಸಂಬಂಧ ಕೆಲ ದಿನಗಳಿಂದ ಪಕ್ಷದ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದರು. …
Read More »ರಾಜ್ಯಾದ್ಯಂತ ಆಗಸ್ಟ್ 27ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ
ಬೆಂಗಳೂರು: ರಾಜ್ಯ ಸರ್ಕಾರದ ‘ಬಹುನಿರೀಕ್ಷಿತ’ ಗೃಹ ಲಕ್ಷ್ಮೀ ಯೋಜನೆಗೆ ಆಗಸ್ಟ್ 27ರಂದು ಚಾಲನೆ ನೀಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಆಗಸ್ಟ್ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ …
Read More »ಬೆಂಗಳೂರಲ್ಲಿ ಮಹಿಳೆ ಮೇಲೆ ಹಲ್ಲೆ ಆರೋಪ: ಕ್ಯಾಬ್ ಚಾಲಕ ಪೊಲೀಸ್ ವಶಕ್ಕೆ
ಬೆಂಗಳೂರು: ಮಹಿಳೆಗೆ ನಿಂದಿಸಿ ಹಲ್ಲೆ ಮಾಡಿದ ಆರೋಪದ ಮೇಲೆ ಕ್ಯಾಬ್ ಚಾಲಕನನ್ನು ಬೆಳ್ಳಂದೂರು ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪತ್ನಿಯ ಮೇಲೆ ಹಲ್ಲೆ ಮಾಡಿರುವುದಾಗಿ ಮಹಿಳೆಯ ಪತಿ ನೀಡಿದ ದೂರಿನ ಆಧಾರದ ಮೇಲೆ ಕ್ಯಾಬ್ ಚಾಲಕ ಬಸವರಾಜ್ ಎಂಬಾತನನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೆಳ್ಳಂದೂರಿನ ಬೋಗನಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ಮಹಿಳೆಯ ಕುಟುಂಬ ವಾಸವಾಗಿದೆ. ಮಗನ ಚಿಕಿತ್ಸೆ ಸಲುವಾಗಿ ಬುಧವಾರ ಬೋಗನಹಳ್ಳಿಯಿಂದ ಮಣಿಪಾಲ್ ಆಸ್ಪತ್ರೆಗೆ ತೆರಳಲು ಮಹಿಳೆಯು ಕ್ಯಾಬ್ ಬುಕ್ …
Read More »ಮನೆ ಬಾಡಿಗೆ ಹಣ ಕೇಳಿದ್ದಕ್ಕೆ ಮಹಿಳೆಗೆ ಚಾಕುವಿನಿಂದ ಇರಿದ ಬಾಡಿಗೆದಾರ..
ಬೆಂಗಳೂರು: ಬಾಡಿಗೆ ಹಣ ಕೇಳಿದ್ದಕ್ಕೆ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮುನೇಶ್ವರ ನಗರದ ನಿವಾಸಿ ಶ್ರೀದೇವಿ ತೀವ್ರ ಹಲ್ಲೆಗೊಳಗಾಗಿದ್ದು, ಈಕೆ ನೀಡಿದ ದೂರಿನ ಮೇರೆಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಜೀರ್, ಈತನ ಪುತ್ರ ಸದ್ದಾಂ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ. ಮುನೇಶ್ವರ ನಗರದಲ್ಲಿ ಕಳೆದ 16 ವರ್ಷಗಳಿಂದ ಶ್ರೀದೇವಿ ವಾಸವಾಗಿದ್ದಳು. ಈಕೆ ಉಳಿದುಕೊಂಡಿದ್ದ ಕಟ್ಟಡದಲ್ಲಿ ನಜೀರ್ ವಾಸವಾಗಿದ್ದ. …
Read More »ಎಲ್ಲ ಗ್ರಾಮಗಳಿಗೆ ಸ್ಮಶಾನ ಭೂಮಿ ಮತ್ತು ಒತ್ತುವರಿಯಾದ ಸರ್ಕಾರ ಭೂಮಿಯನ್ನು ತೆರವುಗೊಳಿಸಿರುವ ಬಗ್ಗೆ ವಿವರಣೆ ನೀಡಲು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಬೆಂಗಳೂರು : ರಾಜ್ಯದಲ್ಲಿ ಜನವಸತಿ ಇರುವ ಎಲ್ಲ ಗ್ರಾಮಗಳಿಗೆ ಗೌರವಯುತ ಮತ್ತು ಸಾಂಪ್ರದಾಯಿಕವಾಗಿ ಶವ ಸಂಸ್ಕಾರ ಮಾಡಲು ಸ್ಮಶಾನ ಭೂಮಿ ಒದಗಿಸಲು ಹಾಗೂ ಒತ್ತುವರಿಯಾದ ಸರ್ಕಾರಿ ಜಮೀನುಗಳನ್ನು ತೆರವುಗೊಳಿಸಲು ಕೈಗೊಂಡಿರುವ ಕ್ರಮಗಳ ವಿರುದ್ಧ ಅರ್ಜಿದಾರರು ಎತ್ತಿರುವ ಆಕ್ಷೇಪಗಳಿಗೆ ಎರಡು ವಾರಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ರಾಜ್ಯದಲ್ಲಿ ಸ್ಮಶಾನವಿಲ್ಲದ ಗ್ರಾಮ ಮತ್ತು ಪಟ್ಟಣಗಳಿಗೆ ಅಗತ್ಯ ಜಮೀನು ಒದಗಿಸಲು ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಸರ್ಕಾರ ಪಾಲಿಸಿಲ್ಲ ಎಂದು …
Read More »ರಾಜ್ಯದಲ್ಲಿ ನಮ್ಮ ಕ್ಲಿನಿಕ್ಗಳನ್ನು ಇನ್ನಷ್ಟು ಜನಸ್ನೇಹಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ
ಬೆಂಗಳೂರು: ಜನಸಾಮಾನ್ಯರಿಗೆ ಉಚಿತ ಚಿಕಿತ್ಸೆ ನೀಡುವ ಉದ್ದೇಶದಿಂದ ಪ್ರಾರಂಭಿಸಲಾಗಿರುವ ನಮ್ಮ ಕ್ಲಿನಿಕ್ಗಳಿಗೆ ಆರೋಗ್ಯ ಸಚಿವರು ಜನಸ್ನೇಹಿ ಸ್ಪರ್ಶ ನೀಡಿದ್ದು, ಕ್ಲಿನಿಕ್ಗಳ ಸಮಯ ಬದಲಾವಣೆ ಮಾಡಿ ಸಂಜೆ ವೇಳೆಯೂ ಚಿಕಿತ್ಸೆ ಲಭಿಸುವಂತೆ ಮಾಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇರುವ ಕ್ಲಿನಿಕ್ಗಳ ಪೈಕಿ ಶೇಕಡಾ 25ರಷ್ಟು ನಮ್ಮ ಕ್ಲಿನಿಕ್ಗಳ ಸಮಯ ಬದಲಾವಣೆ ಮಾಡಲು ಆರೋಗ್ಯ ಸಚಿವರು ಆದೇಶಿಸಿದ್ದಾರೆ. ಸಂಜೆ 4.30ಕ್ಕೆ ಬಾಗಿಲು ಮುಚ್ಚುತ್ತಿದ್ದ ನಮ್ಮ ಕ್ಲಿನಿಕ್ಗಳು ಇನ್ನು ಮುಂದೆ ರಾತ್ರಿ 8 ಗಂಟೆಯ ತನಕ …
Read More »
Laxmi News 24×7