Breaking News

ರಾಷ್ಟ್ರೀಯ

ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಕೊನೆಗೂ ಬಹುನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಬುಧವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ಕೊಟ್ಟರು. ಈ ಯೋಜನೆಯಿಂದ ರಾಜ್ಯದ ಪ್ರತಿ ಕುಟುಂಬದಲ್ಲಿನ ಯಜಮಾನಿ ಮಹಿಳೆಯು ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ ವರ್ಷಕ್ಕೆ 24 ಸಾವಿರ ರೂ. ಗಳನ್ನು ಪಡೆಯಲಿದ್ದಾರೆ. 1.28 ಕೋಟಿ ಮಹಿಳೆಯರ ಕುಟುಂಬಕ್ಕೆ ಇದರ ಪ್ರಯೋಜನ ದೊರೆಯಲಿದೆ. ಆ.16ರಿಂದ ಯಜಮಾನಿಯ ಖಾತೆಗೆ 2,000 ರೂ.‌ ಜಮೆಯಾಗಲಿದೆ. ‘₹30 ಸಾವಿರ ಕೋಟಿಯ …

Read More »

ರಾಜ್ಯ ಸರ್ಕಾರ ಸರ್ವಾಧಿಕಾರಿ, ಹಿಟ್ಲರ್ ರೀತಿ ವರ್ತಿಸುತ್ತಿದ್ದುಆಕ್ರೋಶ ವ್ಯಕ್ತಪಡಿಸಿದ ಬೊಮ್ಮಾಯಿ

ಬೆಂಗಳೂರು : ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಡಾ. ಅಶ್ವತ್ಥ ನಾರಾಯಣ, ಆರ್. ಅಶೋಕ್, ಹಿರಿಯ ಶಾಸಕರಾದ ಸುರೇಶ್ ಕುಮಾರ್, ವಿ. ಸುನೀಲ್ ಕುಮಾರ್, ಮುನಿರತ್ನ, ಆರ್. ಅಶೋಕ್, ಅರವಿಂದ್ ಬೆಲ್ಲದ್, ಮಹೇಶ್ ಟೆಂಕಿನಕಾಯಿ, ಧೀರಜ್ ಮುನಿರಾಜು, ಚನ್ನಬಸಪ್ಪ, ಜ್ಯೋತಿ ಗಣೇಶ್, ಸಿ. ಕೆ ರಾಮಮೂರ್ತಿ ಸೇರಿದಂತೆ ಹಲವರು ಬಿಜೆಪಿ ಶಾಸಕರನ್ನು ವಶಕ್ಕೆ ಪಡೆದ …

Read More »

ಕುಸಿದು ಬಿದ್ದ ಯತ್ನಾಳ್

ಬೆಂಗಳೂರು: ಪೀಠಕ್ಕೆ ಅಗೌರವ ತೋರಿಸಿದ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರನ್ನು ಸ್ಪೀಕರ್ ಯು.ಟಿ.ಖಾದರ್ ಅಮಾನತು ಮಾಡಿ ಆದೇಶಿಸಿದ್ದಾರೆ. ಇನ್ನು ಈ ವೇಳೆ ಪ್ರತಿಭಟನಾ ನಿರತ ಬಿಜೆಪಿ ಸದಸ್ಯರನ್ನು ಮಾರ್ಷಲ್​ಗಳು ಹೊತ್ತೊಯ್ದಿದ್ದಾರೆ. ಮತ್ತೊಂದು ಕಡೆ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅಸ್ವಸ್ಥಗೊಂಡು ಕುಸಿದು ಬಿದ್ದ ಪ್ರಕರಣವೂ ನಡೆಯಿತು. ಅಸ್ವಸ್ಥಗೊಂಡ ಅವರನ್ನು ತಕ್ಷಣ ಸ್ಟ್ರೆಚರ್​ನಲ್ಲಿ ಮಾರ್ಷಲ್​ಗಳು ಹೊತ್ತು ಕೊಂಡು ಹೋಗಿ, ಆಸ್ಪತ್ರೆಗೆ ರವಾನಿಸಿದರು. ಸುದ್ದಿ ತಿಳಿದಾಕ್ಷಣ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ …

Read More »

ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎನ್ನುವಂತೆ ಕಾಂಗ್ರೆಸ್ ವರ್ತಿಸಿದೆ : H.D.K.

ಬೆಂಗಳೂರು: ವಿಧಾನಸಭೆಯಲ್ಲಿ ಪ್ರತಿಪಕ್ಷ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಶಾಸಕರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ನಂತರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸ್ಪೀಕರ್ ಅವರು ಉದ್ದೇಶಪೂರ್ವಕವಾಗಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಮುಖ್ಯಮಂತ್ರಿಯ ಸನ್ನೆ ಮೇರೆಗೆ ಸ್ಪೀಕರ್ ಹುಡುಗಾಟಿಕೆ ಮಾಡಿದ್ದಾರೆ ಎಂದು ಹರಿಹಾಯ್ದರು. ಪ್ರತಿಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ ಎಂದು ಹೆಸರಿಟ್ಟು, ಇವತ್ತು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಹೊರಟಿದ್ದಾರೆ. …

Read More »

ಜೈನಮುನಿ ಹತ್ಯೆ ಪ್ರಕರಣ.. ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿಕ್ಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ಬಿಜೆಪಿ, ಜೆಡಿಎಸ್ ಸದಸ್ಯರ ಧರಣಿ, ಗದ್ದಲದ ನಡುವೆ ಸ್ವಯಂಪ್ರೇರಿತವಾಗಿ ಹೇಳಿಕೆ ನೀಡಿದ ಸಿಎಂ, ಜೈನಮುನಿ ಅವರು ಕಾಣೆಯಾಗಿರುವ ಬಗ್ಗೆ ಜುಲೈ 7 ರಂದು ದೂರು ಬಂದಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದರು. ನಾರಾಯಣಪ್ಪ ಬಸಪ್ಪ ಮಾಳಗಿ ಅವರ ಜಮೀನಿನ ಕೊಳವೆ ಬಾವಿಯಲ್ಲಿ …

Read More »

ಸ್ಪೀಕರ್ ಪೀಠದತ್ತ ಪೇಪರ್ ಎಸೆದು ಬಿಜೆಪಿ ಶಾಸಕರ ತೀವ್ರ ಪ್ರತಿಭಟನೆ

ಬೆಂಗಳೂರು: ಪ್ರತಿಪಕ್ಷ ಬಿಜೆಪಿ ಶಾಸಕರ ಪ್ರತಿಭಟನೆ ತೀವ್ರಗೊಂಡು ವಿಧೇಯಕಗಳ ಪ್ರತಿಗಳನ್ನು ಹರಿದು ಸ್ಪೀಕರ್ ಪೀಠದತ್ತ ಎಸೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ವಿಧಾನಸಭೆಯಲ್ಲಿ ಇಂದು ನಡೆಯಿತು. ರಾಜಕೀಯ ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಗಣ್ಯರ ಆತಿಥ್ಯಕ್ಕೆ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಧರಣಿ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದರು. ಇದರ ಮಧ್ಯೆ ಸ್ಪೀಕರ್ ಯು ಟಿ ಖಾದರ್, ಪ್ರತಿಪಕ್ಷದ ಶಾಸಕರಿಗೆ ಕಲಾಪದಲ್ಲಿ ಭಾಗವಹಿಸುವಂತೆ ಮನವಿ …

Read More »

6 ವರ್ಷಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ 13 ಕನ್ನಡ ಶಾಲೆಗಳಿಗೆ ಬೀಗ.

ಕಾರವಾರ (ಉತ್ತರ ಕನ್ನಡ) : ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಸರ್ಕಾರ ನಾನಾ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಆದರೂ ಸರ್ಕಾರಿ ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಲೇ ಇದೆ. ಇದಕ್ಕೆ ಉದಾಹರಣೆ ಎಂಬಂತೆ ಗಡಿ ಜಿಲ್ಲೆ ಉತ್ತರ ಕನ್ನಡದಲ್ಲಿ ಸರ್ಕಾರಿ ಶಾಲೆಗಳು ಅವನತಿಯತ್ತ ಸಾಗಿದ್ದು, ಕಳೆದ 6 ವರ್ಷಗಳಲ್ಲಿ ಬರೋಬ್ಬರಿ 13 ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳೇ ಇಲ್ಲದೇ ಬಾಗಿಲು ಮುಚ್ಚಿವೆ. ಹೌದು, ಕಾರವಾರ ಕರ್ನಾಟಕದ ಗಡಿ ಪ್ರದೇಶವಾಗಿದ್ದು, ಗೋವಾ ಗಡಿಯಲ್ಲಿ …

Read More »

ಯಲಗೂರು ಆಂಜನೇಯ ದೇವಸ್ಥಾನದ ಹುಂಡಿ ಎಣಿಕೆ ಆರಂಭ: ನೇಪಾಳದ ಕರೆನ್ಸಿ ನೋಟು, ಭಕ್ತರಿಂದ ತರಹೇವಾರಿ ಬೇಡಿಕೆ ಪತ್ರಗಳು ಪತ್ತೆ

ವಿಜಯಪುರ: ಜಿಲ್ಲೆಯ ಸುಕ್ಷೇತ್ರ ಯಲಗೂರಿನ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಭಾನುವಾರ ಆರಂಭವಾಗಿದೆ. ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರ ಜಾಗೃತ ದೇವರೆಂದೇ ಖ್ಯಾತಿಯಾಗಿರುವ ಶ್ರೀ ಯಲಗೂರು ಆಂಜನೇಯ ದೇವಸ್ಥಾನದಲ್ಲಿ ನಿಡಗುಂದಿ ತಹಶೀಲ್ದಾರ್ ಕಿರಣಕುಮಾರ ಅವರ ನೇತೃತ್ವದಲ್ಲಿ ಆಂಜನೇಯ ದೇವಸ್ಥಾನದ ಆಡಳಿತ ಮಂಡಳಿ ಹುಂಡಿ ಎಣಿಕೆ ಮಾಡುತ್ತಿದ್ದಾರೆ. ನೇಪಾಳದ ಕರೆನ್ಸಿ ನೋಟುನೇಪಾಳದ ಕರೆನ್ಸಿ ನೋಟು, ಬೇಡಿಕೆ ಪತ್ರ ಪತ್ತೆ: ಹುಂಡಿಯಲ್ಲಿ ನೇಪಾಳ ದೇಶದ ಕರೆನ್ಸಿಗಳು ಪತ್ತೆಯಾಗಿವೆ. ಜತೆಗೆ ದೇವರಿಗೆ ಬರೆದ …

Read More »

ವಿಸ್ಮಯಕಾರಿ ಘಟನೆ..ನಿಬ್ಬೆರಗಾದ ಜನ..ಆಂಜನೇಯನಿಗೆ ಕೈಮುಗಿದು ಪ್ರಾಣಬಿಟ್ಟ ಕೋತಿ.!

ಬೆಂಗಳೂರು: ಕೋತಿಯೊಂದು ವೀರಾಂಜನೇಯ ಸ್ವಾಮಿಗೆ ನಮಸ್ಕರಿಸಿ ಅಲ್ಲಿಯೇ ಪ್ರಾಣಬಿಟ್ಟಿರುವ ಅಪರೂಪದ ಘಟನೆಯೊಂದು ಬೆಂಗಳೂರಿನ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ. ಇಲ್ಲಿನ ರಾಮನಾಯಕನಹಳ್ಳಿಯ ವಿರಾಂಜನೇಯಸ್ವಾಮಿ ದೇವಾಲಯದ ಮುಖ್ಯದ್ವಾರದ ಬಳಿ ತಲೆಯಿಟ್ಟು ಕೋತಿಯೊಂದು ಕೈಮುಗಿದ ರೀತಿಯಲ್ಲಿ ಸಾವನ್ನಪ್ಪಿದೆ. ಇದನ್ನು ಕಂಡ ಗ್ರಾಮಸ್ಥರು ಇದೆಂತಹ ವಿಸ್ಮಯವೆಂದು ಉದ್ಘರಿಸಿದ್ದಾರೆ. ವೀರಾಂಜನೇಯನ ದೇವಸ್ಥಾನದ ಬಳಿ ಕೋತಿಯೊಂದು ಯಾವಾಗಲೂ ಓಡಾಡಿಕೊಂಡು ಇತ್ತು. ಜುಲೈ 17ರಂದು ಭೀಮನ ಅಮವಾಸ್ಯೆ ದಿನ ದೇವಾಲಯದ ಅರ್ಚಕ ರಾಮಕೃಷ್ಣಯ್ಯ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ದೇವಸ್ಥಾನದ …

Read More »

ಮೋದಿ ಅವರಿಗೆ ನಾವು ಬೀಳ್ಕೊಡುಗೆ ನೀಡುತ್ತೇವೆ : ಲಾಲು ಪ್ರಸಾದ್ ಯಾದವ್

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ನಾವು ಬೀಳ್ಕೊಡುಗೆ ನೀಡುತ್ತೇವೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ. ಅನಾರೋಗ್ಯದ ನಡುವೆಯೂ ಬೆಂಗಳೂರಿನಲ್ಲಿ ನಡೆಯುತ್ತಿರುವ ಖಾಸಗಿ ಹೋಟೆಲ್‍ನ ಸಭೆಯಲ್ಲಿ ತಮ್ಮ ಪುತ್ರರೂ ಆದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರೊಂದಿಗೆ ಭಾಗವಹಿಸಿದ್ದ ಅವರು, ಪ್ರಧಾನಮಂತ್ರಿಯವರಿಗೆ ನಾವು ಬೀಳ್ಕೊಡುಗೆ ನೀಡುತ್ತೇವೆ ಎಂದಿದ್ದಾರೆ.   ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಈ ಸಭೆ ಅಗತ್ಯವಿದೆ. ಪ್ರಧಾನಮಂತ್ರಿಯವರ ಶಾಸನಗಳು ಜನರಿಗೆ ಮಾರಕವಾಗಿದೆ. …

Read More »