ಭೋಪಾಲ್ (ಮಧ್ಯಪ್ರದೇಶ): ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿದ್ದ ವಿಮಾನವು ಮಂಗಳವಾರ ಸಂಜೆ ಮಧ್ಯಪ್ರದೇಶದ ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಆದರೆ, ವಿಮಾನದ ತುರ್ತು ಭೂಸ್ಪರ್ಶಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನವನ್ನು ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಭೋಪಾಲ್ ಪೊಲೀಸ್ ಕಮಿಷನರ್ ಹರಿನಾರಾಯಣ ಚಾರಿ ಮಿಶ್ರಾ …
Read More »ಮೂರು ಪ್ರಮುಖ ವಿಧೇಯಕಗಳಿಗೆ ವಿಧಾನ ಪರಿಷತ್ ಅಂಗೀಕಾರ ನೀಡಿದೆ.
ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ)ವಿಧೇಯಕ 2023, ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ 2023 ಮತ್ತು ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ)(ತಿದ್ದುಪಡಿ) ವಿಧೇಯಕ 2023 ಕ್ಕೆ ವಿಧಾನ ಪರಿಷತ್ ಅಂಗೀಕಾರ ನೀಡಿತು. ವಿಧಾನ ಪರಿಷತ್ ವಿತ್ತೀಯ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್, ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ …
Read More »ಬೆಂಗಳೂರಿನ ಸಭೆ ಇದು ಭ್ರಷ್ಟರ ಸಭೆ: ಮೋದಿ
ನವದೆಹಲಿ : ಬೆಂಗಳೂರಿನಲ್ಲಿ ಸಭೆ ನಡೆಸುತ್ತಿರುವ ವಿರೋಧ ಪಕ್ಷಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಇದು ಭ್ರಷ್ಟರ ಸಭೆ ಎಂಬುದು ಜನರಿಗೆ ಗೊತ್ತಾಗುತ್ತಿದೆ ಮತ್ತು ತಮ್ಮ ಭ್ರಷ್ಟಾಚಾರ ಬಯಲಿಗೆ ಬಂದಾಗ ಈ ಪಕ್ಷಗಳು ಪರಸ್ಪರ ರಕ್ಷಣೆಗೆ ಮುಂದಾಗುತ್ತವೆ ಎಂದಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ನಲ್ಲಿರುವ ವೀರ್ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದ ನಂತರ ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿಸಿ ಮಾತನಾಡಿದರು. …
Read More »ವಿಪಕ್ಷಗಳ ಸಭೆಯಲ್ಲಿ ಮಹಾಮೈತ್ರಿ ನಾಮಕರಣಕ್ಕೆ ನಾಲ್ಕು ಹೆಸರುಗಳ ಪ್ರಸ್ತಾವನೆ
ಬೆಂಗಳೂರು : ಕಾಂಗ್ರೆಸ್ ಸಮ್ಮುಖದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ರಾಷ್ಟ್ರೀಯ ವಿಪಕ್ಷಗಳ ಎರಡನೇ ಮಹಾಘಟಬಂಧನ ಸಭೆ ನಡೆಯುತ್ತಿದೆ. 25 ಪಕ್ಷಗಳ 46ಕ್ಕೂ ಅಧಿಕ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಎಐಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಮಹಾಮೈತ್ರಿ ಸಭೆ ಆರಂಭವಾಗಿದೆ. ಆರು ಪ್ರಮುಖ ಅಂಶಗಳ ಮೇಲೆ ಸಭೆಯಲ್ಲಿ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆ ಸಂಬಂಧ ಕಾರ್ಯತಂತ್ರ ರೂಪಿಸಲು ಸಭೆ ಮಹತ್ವದ್ದಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, …
Read More »ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ
ದೇವನಹಳ್ಳಿ(ಬೆಂಗಳೂರು): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶದ ಇಂದೋರ್ನಿಂದ ಇಂಡಿಗೋ 6E6744 ವಿಮಾನದಲ್ಲಿ ಬಂದಿದ್ದ ಚೆನ್ನೈ ಮೂಲದ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ ಬರೋಬ್ಬರಿ 4 ಕೋಟಿ ರೂ. ಮೌಲ್ಯದ 6.5 ಕೆಜಿ ತೂಕದ 7 ಚಿನ್ನದ ಬಿಸ್ಕೆಟ್ಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನು, ಸ್ಮಗ್ಲರ್ಸ್ ಮೊದಲೇ …
Read More »”ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭ: C.M.
ಬೆಂಗಳೂರು: ”ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಸ್ಪಷ್ಟವಾದ ಬಹುಮತ ದೊರೆಯಲು ಸಾಧ್ಯವಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ವಿಧಾನಸೌಧದಲ್ಲಿ ಇಂದು ಸೋಮವಾರ ಸಂಜೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ”ಕರ್ನಾಟಕದಲ್ಲಿ ಮೋದಿಯವರನ್ನು ಸಮರ್ಥವಾಗಿ ಎದುರಿಸಲಾಗಿದೆ. ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಮೋದಿಯವರು 28 ಕಡೆ ಪ್ರವಾಸ ಕೈಗೊಂಡಿದ್ದು, ಅವರು ಬಂದ ಕಡೆಗಳೆಲ್ಲಾ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಕರ್ನಾಟಕದಲ್ಲಿ ಸಮರ್ಥವಾಗಿ ಎದುರಿಸಲೇ ಇಲ್ಲ. …
Read More »ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇದಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇದಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿರುವುದರಿಂದ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ …
Read More »ಜಿಲ್ಲೆಯಲ್ಲಿ ಡ್ರಗ್ಸ್ ಮಾರಾಟಗಾರರು ಹೆಚ್ಚಾಗಿದ್ದು, ಮಾರಾಟಕ್ಕೆ ಬ್ರೇಕ್ ಹಾಕಲು ಪೋಲಿಸ್ ಇಲಾಖೆ ಸಜ್ಜಾ
ಕೊಡಗು: ಜಿಲ್ಲೆಯಲ್ಲಿ ಡ್ರಗ್ಸ್ ಮಾರಾಟಗಾರರು ಹೆಚ್ಚಾಗಿದ್ದು, ಮಾರಾಟಕ್ಕೆ ಬ್ರೇಕ್ ಹಾಕಲು ಪೋಲಿಸ್ ಇಲಾಖೆ ಸಜ್ಜಾಗಿದೆ. ಈ ಒಂದು ಕ್ರಮದಲ್ಲಿ ಪೊಲೀಸರು, ಮಾರಾಟಗಾರರು ಮತ್ತು ಸೇವನೆ ಮಾಡುತ್ತಿದ್ದ ವ್ಯಕ್ತಿಗಳನ್ನು ಸೇರಿ ಜಿಲ್ಲೆಯಲ್ಲಿ 25 ಮಂದಿಯನ್ನು ಬಂಧಿಸಿದ್ದಾರೆ. ದಾಳಿ ವೇಳೆ ಆರೋಪಿಗಳ ಬಳಿ ಇದ್ದ ಗಾಂಜಾ , ಎಲ್ಎಸ್ಡಿ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಬಂಧಿತರಲ್ಲಿ 14 ಜನ ಪ್ರವಾಸಿಗರಿದ್ದು, ಇವರು ಹೋಂ ಸ್ಟೇಯೊಂದರಲ್ಲಿ ಮಾದಕವಸ್ತು ಸೇವಿಸುತ್ತಿದ್ದರು. ಅಲೀಂ ಅಹ್ಮದ್, ಮೋಸಿನ್, ಸಾಗರ್, ರೆಹಮಾನ್, ಚೇತನ್, …
Read More »ದೇಶವನ್ನು ಲೂಟಿ ಮಾಡಿದ ದರೋಡೆಕೋರರು ಒಟ್ಟಾಗಿದ್ದಾರೆ.: ಯತ್ನಾಳ್
ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ದೇಶವನ್ನು ಲೂಟಿ ಮಾಡಿದ ದರೋಡೆಕೋರರು ಒಟ್ಟಾಗಿದ್ದಾರೆ. ಇದು ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ದರೋಡೆಕೋರರ ಒಕ್ಕೂಟವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ತಿಂಗಳಾಗಿದೆ. ಬರಗಾಲದ ಛಾಯೆ ಎದುರಾಗಿದೆ. ರೈತರ ಆತ್ಮಹತ್ಯೆ ಹೆಚ್ಚಿದೆ. ಆತಂಕದ ಛಾಯೆ ಹೆಚ್ಚಾಗಿದೆ ಎಂದು ಕಿಡಿ ಕಾರಿದರು. ಹಿಂದೂ ಕಾರ್ಯಕರ್ತರ ಹಾಗೂ ಜೋಡಿ …
Read More »ಜೈನ ಮುನಿ ಆರೋಪಿಗಳನ್ನು ಮತ್ತೆ ಚಿಕ್ಕೋಡಿ ನ್ಯಾಯಾಲಯ ಐದು ದಿನಗಳವರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಚಿಕ್ಕೋಡಿ(ಬೆಳಗಾವಿ): ಹಿರೇಕೋಡಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯ ಪ್ರಮುಖ ಆರೋಪಿಗಳನ್ನು ಮತ್ತೆ ಚಿಕ್ಕೋಡಿ ನ್ಯಾಯಾಲಯ ಐದು ದಿನಗಳವರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕಳೆದ ವಾರದ ಹಿಂದೆ ಚಿಕ್ಕೋಡಿ ಪೊಲೀಸರು ಹೆಚ್ಚಿನ ತನಿಖೆಗಾಗಿ ಏಳು ದಿನಗಳವರಿಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ಆ ಕಾಲಾವಕಾಶ ಮುಗಿಯುತ್ತಿದ್ದಂತೆ ಇಂದು ಚಿಕ್ಕೋಡಿ ಪ್ರಧಾನ ದಿವಾಣಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಧೀಶ ಚಿದಾನಂದ ಬಡಿಗೇರ ಅವರು ವಿಚಾರಣೆ ನಡೆಸಿ ಮತ್ತೆ 5 ದಿನಗಳವರೆಗೆ …
Read More »