Breaking News

ರಾಷ್ಟ್ರೀಯ

ಇಂದು ಸದನ‌ ಬಹಿಷ್ಕರಿಸಿರುವ ಬಿಜೆಪಿ ಶಾಸಕರು ಕಾಂಗ್ರೆಸ್​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರು: ಹತ್ತು ಮಂದಿ ಬಿಜೆಪಿ ಶಾಸಕರ ಅಮಾನತು ವಿರೋಧಿಸಿ ಸದನ‌ ಬಹಿಷ್ಕರಿಸಿ ಬಿಜೆಪಿ ಉಭಯ ಸದನ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಎರಡನೇ ದಿನವಾದ ಇಂದೂ ಪ್ರತಿಭಟನೆ ನಡೆಸಿದರು. ಹತ್ತು ಶಾಸಕರ ಅಮಾನತು ಖಂಡಿಸಿ, ಶಿಷ್ಟಾಚಾರ ಉಲ್ಲಂಘಿಸಿ ಐಎಎಸ್ ಅಧಿಕಾರಿಗಳನ್ನು ನಿಯೋಜನೆ ವಿರೋಧಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಹಾಗೂ ಸ್ಪೀಕರ್ ವಿರುದ್ಧ ಧಿಕ್ಕಾರ ಕೂಗಿ ಬಿಜೆಪಿ ಶಾಸಕರು ತಮ್ಮ ಆಕ್ರೋಶ ಹೊರಹಾಕಿದರು. ಸಿದ್ದರಾಮಯ್ಯ ಹಿಟ್ಲರ್ ಎಂಬ ಘೋಷಣೆಗಳನ್ನು …

Read More »

ಬೆಲೆ ಏರಿಕೆಗೆ ಮಿಸ್ಟರ್ ಮೋದಿ ಕಾರಣ,: ಸಿದ್ದರಾಮಯ್ಯ

ಬೆಂಗಳೂರು: ದೇಶದಲ್ಲಿನ ಬೆಲೆ ಏರಿಕೆಗೆ ಮಿಸ್ಟರ್ ನರೇಂದ್ರ ಮೋದಿ ಕಾರಣ. ದೇಶವನ್ನು ದಿವಾಳಿಯತ್ತ ತಂದಿದ್ದು ಮೋದಿ ಸಾಧನೆ. ಇಂತಹ ಮೋದಿಯನ್ನು ಬಿಜೆಪಿಯವರು ವಿಶ್ವಗುರು ಎನ್ನುತ್ತಾರೆ. ಇವರ ಯೋಗ್ಯತೆಗೆ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲೂ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನ ಪರಿಷತ್​ನಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ತಮ್ಮ ಇಡೀ ಭಾಷಣದುದ್ದಕ್ಕೂ ಪ್ರಧಾನಿ ಮೋದಿಯನ್ನು ಟೀಕಿಸಿದರು. ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ …

Read More »

ಅಜಿತ್​ ಪವಾರ್​ಗೆ ಮತ್ತಷ್ಟು ಬಲ; ನಾಗಾಲ್ಯಾಂಡ್‌​ನ ಎಲ್ಲ 7 ಎನ್​ಸಿಪಿ ಶಾಸಕರ ಬೆಂಬಲ

ನವದೆಹಲಿ: ರಾಜಕೀಯ ಚಾಣಕ್ಯ ಎಂದು ಕರೆಯಲ್ಪಡುವ ಮಹಾರಾಷ್ಟ್ರದ ನಾಯಕ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಮತ್ತೊಂದು ಹಿನ್ನಡೆ ಅನುಭವಿಸಿದ್ದಾರೆ. ನಾಗಾಲ್ಯಾಂಡ್‌ನ ಎಲ್ಲ ಏಳೂ ಎನ್‌ಸಿಪಿ ಶಾಸಕರು ಅಜಿತ್ ಪವಾರ್ ಬಣಕ್ಕೆ ಬೆಂಬಲ ಸೂಚಿಸಿ, ಶರದ್​ ಪವಾರ್​ಗೆ ಶಾಕ್​ ನೀಡಿದ್ದಾರೆ. ಈಶಾನ್ಯ ರಾಜ್ಯದ ಈ ಎನ್‌ಸಿಪಿ ಶಾಸಕರು ಗುರುವಾರ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್​ಗೆ ಬೆಂಬಲ ಸೂಚಿಸಿ ಪತ್ರ ಕಳುಹಿಸಿರುವುದಾಗಿ ನಾಗಾಲ್ಯಾಂಡ್​ನ ಎನ್‌ಸಿಪಿ ಅಧ್ಯಕ್ಷ ವಂತುಂಗೋ …

Read More »

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ ನಾಲ್ವರು ಅಪರಾಧಿಗಳಿಗೆ ಮರಣದಂಡನೆಯೇ ಸೂಕ್ತ ಎಂದ ಮಣಿಪುರ ಸಿಎಂ

ಇಂಫಾಲ: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೇ 4ರಂದು ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಗುಂಪಿನಲ್ಲಿ ಭಾಗಿಯಾಗಿ, ಅವರನ್ನು ಅಮಾನುಷವಾಗಿ ಎಳೆದುಕೊಂಡು ಹೋಗುತ್ತಿದ್ದ ಓರ್ವ ವ್ಯಕ್ತಿ ಸೇರಿದಂತೆ ಗುರುವಾರ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.   ಈ ಕುರಿತು ನಿನ್ನೆ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್, “ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇದು ಅಮಾನವೀಯ ಘಟನೆ. ಅಪರಾಧಿಗಳು ಮರಣದಂಡನೆಗೆ ಅರ್ಹರು” ಎಂದು ಹೇಳಿದರು. ಇದಾದ ಕೆಲವೇ …

Read More »

ಜೀವನ್ ಭೀಮಾನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಹೋಟೆಲ್‌ ಕ್ಯಾಶಿಯರ್​ನ ಕೊಲೆಯಾಗಿದೆ.

ಬೆಂಗಳೂರು : ನಗರದ ಪ್ರತಿಷ್ಠಿತ ಹೋಟೆಲ್​ ಕ್ಯಾಶಿಯರ್​ನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಇಲ್ಲಿನ ಜೀವನ್ ಭೀಮಾನಗರ ಮುರುಗೇಶ್​ ಪಾಳ್ಯದಲ್ಲಿ ನಡೆದಿದೆ. ಖಾಸಗಿ ಹೋಟೆಲ್ ಅಂಡ್​ ಸರ್ವಿಸ್ ಅಪಾರ್ಟ್‌ಮೆಂಟಿನ ಕ್ಯಾಶಿಯರ್ ಸುಭಾಷ್ ಕೊಲೆಯಾದವರು ಎಂದು ಗುರುತಿಸಲಾಗಿದೆ. ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಅಭಿಷೇಕ್ ಎಂಬಾತನಿಂದ ಕೃತ್ಯ ನಡೆದಿದ್ದು, ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸುಭಾಷ್ ವಾಸವಿದ್ದ ರೂಮಿನಲ್ಲಿ ಸೋಫಾ ಮೇಲೆ ಮಲಗಿದ್ದಾಗ ಆತನಿಗೆ ಚಾಕುವಿನಿಂದ ಇರಿದು ಹತ್ಯೆಗೈಯಲಾಗಿದೆ. ಬೆಳಗ್ಗೆ …

Read More »

ಮನೆಯ ಅಲ್ಮೇರಾದಲ್ಲಿ ಬಚ್ಚಿಟ್ಟಿದ್ದ ನಾಲ್ಕು ಹ್ಯಾಂಡ್ ಗ್ರೆನೇಡ್ ವಶಕ್ಕೆ: ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಮಾಹಿತಿ

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದಡಿ ಐವರು ಶಂಕಿತ ಭಯೋತ್ಪಾದಕರನ್ನ ಬಂಧಿಸಿರುವ ಸಿಸಿಬಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಪ್ರಕರಣದ‌ ಐದನೇ ಆರೋಪಿ ಜಾಯಿದ್ ತಬರೇಜ್ ನ ಕೊಡಿಗೆಹಳ್ಳಿಯಲ್ಲಿರುವ ಮನೆಯಲ್ಲಿದ್ದ ನಾಲ್ಕು ಜೀವಂತ ಗ್ರೆನೇಡ್ ಜಪ್ತಿ ಮಾಡಿದ್ದಾರೆ. ವಿಧ್ವಂಸಕ ಕೃತ್ಯಕ್ಕೆ ಪ್ಲಾನ್ ಮಾಡಿದ್ದ ಆರೋಪದಡಿ ಸುಹೇಲ್, ಜಾಹಿದ್, ಮುದಾಸಿರ್, ಫೈಜರ್ ಹಾಗೂ ಉಮರ್ ಎಂಬುವರನ್ನು ನಿನ್ನೆ ಸಿಸಿಬಿ ಪೊಲೀಸರು ಬಂಧಿಸಿ 7 ಕಂಟ್ರಿ ಮೇಡ್ ಪಿಸ್ತೂಲ್, 42 …

Read More »

ಒಂದು ದಿನ ಕೂಲಿ ಕೆಲಸ.. ಇನ್ನೊಂದು ದಿನ ಕಾಲೇಜು.. ಕೆಮಿಸ್ಟ್ರಿಯಲ್ಲಿ ಪಿಎಚ್​ಡಿ.. ಬಡತನದಲ್ಲಿ ಅರಳಿದ ಭಾರತಿ ಈಗ ​ಡಾಕ್ಟರ್!

ಅನಂತಪುರ (ಆಂಧ್ರಪ್ರದೇಶ): ವಿವಾಹಿತ ಮಹಿಳೆಯೊಬ್ಬರು ದಿನಗೂಲಿ ಕೆಲಸ ಮಾಡುತ್ತಲೇ ಪಿಎಚ್‌ಡಿ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಬಡತನ, ಮದುವೆ, ಮಕ್ಕಳು, ಕೌಟುಂಬಿಕ ಜವಾಬ್ದಾರಿಗಳು ಓದಲು ಅಡ್ಡಿಯಾಗುವುದಿಲ್ಲ ಎಂಬುದನ್ನು ಈ ಸಾಧಕಿ ನಿರೂಪಿಸಿದ್ದಾರೆ. ಪಿಎಚ್​ಡಿ ಪದವಿ ಮುಗಿಸಿರುವ ಈಕೆ ಪ್ರೊಫೆಸರ್ ಆಗಬೇಕೆಂಬ ಮಹಾದಾಸೆಯನ್ನೂ ಹೊಂದಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಸಾಕೆ ಭಾರತಿ ಎಂಬುವವರೇ ಈ ವಿಶಿಷ್ಟ ಸಾಧಕಿ. ಇವರದ್ದು ತೀರಾ ಬಡ ಕುಟುಂಬ. ದಿನವೂ ದುಡಿಯಲು ಹೋಗದಿದ್ದರೆ ಜೀವನ ನಿರ್ವಹಣೆಯೇ ಕಷ್ಟ ಸಾಧ್ಯ. ದಿನಗೂಲಿ …

Read More »

ಮಧ್ಯರಾತ್ರಿ 2 ಗಂಟೆಗೆ ನಿದ್ರೆ ಮಂಪರಿನಲ್ಲಿ ಎದ್ದು ರಸ್ತೆ ಬದಿಯಲ್ಲಿ ನಿಂತಿದ್ದ 6 ವರ್ಷದ ಹೆಣ್ಣು ಮಗುವನ್ನು ರಕ್ಷಿಸಿದ ಕುಂದಾಪುರ ಅರ್ಚನಾ ಬಾರ್ ನ ಸಿಬ್ಬಂದಿ

ಮಧ್ಯರಾತ್ರಿ 2 ಗಂಟೆಗೆ ನಿದ್ರೆ ಮಂಪರಿನಲ್ಲಿ ಎದ್ದು ರಸ್ತೆ ಬದಿಯಲ್ಲಿ ನಿಂತಿದ್ದ 6 ವರ್ಷದ ಹೆಣ್ಣು ಮಗುವನ್ನು ರಕ್ಷಿಸಿದ ಕುಂದಾಪುರ ಅರ್ಚನಾ ಬಾರ್ ನ ಸಿಬ್ಬಂದಿಗಳು ನಿನ್ನೆ ದಿನ ಚಾರ್ ಕೊಟ್ಟಿಗೆ ಬಾರಿನ ವಿಶ್ವನಾಥ ಪೂಜಾರಿ ರಾತ್ರಿ ಸರಿ ಸುಮಾರು 2 ಗಂಟೆ ಹೊತ್ತಿಗೆ ಬಾರಿನ ತನ್ನೆಲ್ಲ ಲೆಕ್ಕಾಚಾರವನ್ನು ಪೂರೈಸಿಕೊಂಡು ಸಿಬ್ಬಂದಿಗಳೊಂದಿಗೆ ಮನೆಗೆ ತೆರಳುತ್ತಿರುವಾಗ ದಬ್ಬೆಕಟ್ಟೆ ತೆಕ್ಕಟ್ಟೆ ರೋಡಿನಲ್ಲಿ ಆರು ವರ್ಷದ ಹೆಣ್ಣು ಮಗು ಒಂದು ಬಟ್ಟೆ ಇಲ್ಲದೆ ಸ್ವಾಮಿ …

Read More »

B.J.P.&J.D.S. ಸದಸ್ಯರ ಗೈರಿನ ನಡುವೆಯೇ ವಿಧಾನ ಪರಿಷತ್​ನಲ್ಲಿ 5 ವಿಧೇಯಕಗಳಿಗೆ ಅಂಗೀಕಾರ

ಬೆಂಗಳೂರು : ಕಾಂಗ್ರೆಸ್​ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಹೊರ ರಾಜ್ಯದ ರಾಜಕಾರಣಿಗಳ ಸ್ವಾಗತಕ್ಕೆ ರಾಜ್ಯದ ಐಎಎಸ್ ಅಧಿಕಾರಿಗಳ ನಿಯುಕ್ತಿ ಮಾಡಿದ್ದು ಹಾಗು ಬಿಜೆಪಿಯ 10 ಶಾಸಕರನ್ನು ಪ್ರಸಕ್ತ ಅಧಿವೇಶನದಿಂದ ಅಮಾನತು ಮಾಡಿದ ಸ್ಪೀಕರ್ ಕ್ರಮ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್​ ಸದಸ್ಯರ ಗೈರಿನ ನಡುವೆ ವಿಧಾನ ಪರಿಷತ್ ಕಲಾಪವನ್ನು ನಡೆಸಲಾಯಿತು. ಈ ವೇಳೆ 5 ಪ್ರಮುಖ ವಿಧೇಯಕಗಳನ್ನು ಪ್ರತಿಪಕ್ಷ ಸದಸ್ಯರ ಗೈರಿನಲ್ಲಿ ಅಂಗೀಕರಿಸಲಾಯಿತು. ಕಲಾಪ ಆರಂಭವಾಗುತ್ತಿದ್ದಂತೆ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, …

Read More »

ಬೆಳಗಾವಿ ತಾಲೂಕಿನಲ್ಲಿ ಮಳೆಯ ಅಬ್ಬರ ಹೆಚ್ಚಳ

ಚಿಕ್ಕೋಡಿ : ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿದ ಧಾರಾಕಾರ ಮಳೆಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಹಲವು ಕೆಳ ಹಂತದ ಸೇತುವೆಗಳು ಜಲಾವೃತವಾಗಿವೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್​ನಿಂದ ಕೃಷ್ಣಾನದಿಗೆ 49,500 ಕ್ಯೂಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ, ಮೈದುಂಬಿ ಹರಿಯುತ್ತಿದೆ. ಮತ್ತೊಂದು ಕಡೆ ವೇದಗಂಗಾ ನದಿಯಲ್ಲಿ ಒಳಹರಿವು ನೀರಿನ ಮಟ್ಟ ಹೆಚ್ಚಳವಾದ ಪರಿಣಾಮವಾಗಿ ನಿಪ್ಪಾಣಿ ತಾಲೂಕಿನ ಜತ್ರಾಟ- ಭೀವಶಿ ಸೇತುವೆ ಮುಳುಗಡೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಿಪ್ಪಾಣಿ ಪೊಲೀಸರು …

Read More »