Breaking News

ರಾಷ್ಟ್ರೀಯ

ಶಕ್ತಿ ಬಂದ ನಂತರ ಸಾರಿಗೆ ಸಂಸ್ಥೆ ಆದಾಯ ವೃದ್ಧಿಸಿದೆ: ಕೃಷ್ಣ ಬೈರೇಗೌಡ

ಬೆಂಗಳೂರು : ಶಕ್ತಿ ಯೋಜನೆಯಿಂದ ಸರ್ಕಾರಿ ಸಾರಿಗೆ ಸಂಸ್ಥೆಯಲ್ಲಿ ಮೌನಕ್ರಾಂತಿ ಹೆಚ್ಚಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್​ನಲ್ಲಿ ಮಾತನಾಡಿದ ಅವರು, ಜನ ಬಸ್​​ಗಳಲ್ಲಿ ಹೆಚ್ಚಾಗಿ ಓಡಾಡುತ್ತಿದ್ದಾರೆ. ಪ್ರವಾಸೋದ್ಯಮ ಹೆಚ್ಚಾಗುತ್ತಿದೆ. ಮಹಿಳೆಯರು ಮಾತ್ರವಲ್ಲ, ಪುರುಷ ಪ್ರಯಾಣಿಕರು ಹೆಚ್ಚಾಗಿದ್ದಾರೆ . ಶೇ. 20 ರಿಂದ 30 ರಷ್ಟು ಪ್ರಯಾಣಿಕರು ಹೆಚ್ಚಾಗಿದ್ದಾರೆ. ಇದರಿಂದ ಸಾರಿಗೆ ಸಂಸ್ಥೆಗೆ ಆದಾಯ ಬಂದಿದೆ ಎಂದು ಹೇಳಿದ್ದಾರೆ. ಪ್ರಯಾಣಿಕರ ಹೆಚ್ಚಳದಿಂದ ಸಾರಿಗೆ ನಿಗಮ ಸ್ವಾವಲಂಬಿ ಆಗುತ್ತದೆ. ಇಂದು …

Read More »

ಬಿಜೆಪಿಯವರು ಪ್ರತಿಪಕ್ಷದ ನಾಯಕರಾಗಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಮಾಡುತ್ತಾರೆ ಎಂದು ಲಕ್ಷ್ಮಣ್ ಸವದಿ ಲೇವಡಿ ಮಾಡಿದರು.

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದೂವರೆ ತಿಂಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡಲು ಬಿಜೆಪಿ ಹೈಕಮಾಂಡ್​ಗೆ ಸಾಧ್ಯವಾಗಿಲ್ಲ. ಮತ್ತೊಂದೆಡೆ ವಿಧಾನಸಭೆ ಅಧಿವೇಶನ ಪ್ರಾರಂಭವಾಗಿವಾರ ಕಳೆದರೂ ಇನ್ನೂ ಕೂಡ ಬಿಜೆಪಿ ಪ್ರತಿಪಕ್ಷ ನಾಯಕನ ಹೆಸರನ್ನು ಕೇಂದ್ರ ನಾಯಕರು ಬಹಿರಂಗಪಡಿಸಿಲ್ಲ. ಈ ವಿಷಯವಾಗಿಯೇ ಇಂದು ವಿಧಾನಸಭೆಯಲ್ಲಿ ಸ್ವಲ್ಪ ದಿನ ತಟಸ್ಥವಾಗಿರಿ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರೇ ಆರಂಭದಲ್ಲಿ ಪ್ರತಿಪಕ್ಷದ ನಾಯಕರಾಗಿ ಸಮರ್ಥವಾಗಿ ಕೆಲಸ ಮಾಡುತ್ತಾರೆ. …

Read More »

ಗ್ರಾಹಕರಿಗೆ ಚಿಲ್ಲರೆ ಮಳಿಗೆಗಳ ಮೂಲಕ ರಿಯಾಯಿತಿ ದರದಲ್ಲಿ ಟೊಮೆಟೊ ವಿತರಿಸಲಾಗುವುದು ಎಂದು ಗ್ರಾಹಕ

ನವದೆಹಲಿ: ದೇಶದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಪ್ರಮುಖ ಗ್ರಾಹಕ ಕೇಂದ್ರಗಳಲ್ಲಿ ಟೊಮೆಟೊ ಕಡಿಮೆ ಬೆಲೆಗೆ ಲಭ್ಯವಾಗುವಂತೆ ಮಾಡಲು, ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಟೊಮೆಟೊ ಖರೀದಿಸುವಂತೆ ಕೇಂದ್ರ ಸರ್ಕಾರ ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (ನಾಫೆಡ್) ಮತ್ತು ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (ಎನ್‌ಸಿಸಿಎಫ್)ಗೆ ಬುಧವಾರ ನಿರ್ದೇಶನ ನೀಡಿದೆ.   ‘ಕ್ವೀನ್ ಆಫ್ ಕಿಚನ್’ ಎಂದು ಕರೆಯಲ್ಪಡುವ ಟೊಮೆಟೊದ ಚಿಲ್ಲರೆ ಬೆಲೆಯೂ ಭಾರೀ ಮಳೆಯಿಂದಾಗಿ ಉಂಟಾದ …

Read More »

ಅನುದಾನಿತ ಶಾಲೆಗಳ ಫಲಿತಾಂಶ ಇಳಿಕೆ ಗಂಭೀರವಾಗಿ ಪರಿಗಣನೆ: ಮಧು ಬಂಗಾರಪ್ಪ

ಬೆಂಗಳೂರು: ಅನುದಾನಿತ ಶಾಲೆಗಳಲ್ಲಿ ಫಲಿತಾಂಶ ಗಣನೀಯವಾಗಿ ಇಳಿಯುತ್ತಿರುವುದು ದೊಡ್ಡ ಸಮಸ್ಯೆ. ಇದರ ಸುಧಾರಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್​ನಲ್ಲಿ ಬಿಜೆಪಿ ಸದಸ್ಯ ಡಾ. ವೈ.ಎ.ನಾರಾಯಣ ಸ್ವಾಮಿ ನಿಯಮ 72ರ ಅಡಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಯನ್ನು ಕಾಲಕಾಲಕ್ಕೆ ಭರ್ತಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಫಲಿತಾಂಶ ಹೆಚ್ಚಳಕ್ಕೆ 2020ರ ನಂತರದ ಖಾಲಿ …

Read More »

ಪಾಲಿಕೆ ‌ಮುಖ್ಯ ಆಯುಕ್ತರಿಂದ ಇಂದಿರಾ ಕ್ಯಾಂಟೀನ್​ಗಳ ಪರಿಶೀಲನೆ

ಬೆಂಗಳೂರು : ನಗರದ ಪೂರ್ವ ವಲಯದ ಹೆಬ್ಬಾಳ ಹಾಗೂ ವಿಶ್ವನಾಥ ನಾಗೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಎರಡು ಇಂದಿರಾ ಕ್ಯಾಂಟೀನ್ ಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಈ ವೇಳೆ ಅವರು, ಬಾಕಿ ಇರುವ ದುರಸ್ತಿ ಕಾರ್ಯಗಳನ್ನು ಕೂಡಲೇ ಕೈಗೆತ್ತಿಕೊಂಡು ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೊದಲು ಪೂರ್ವ ವಲಯ ವ್ಯಾಪ್ತಿಯಲ್ಲಿ ಹೆಬ್ಬಾಳ ವಾರ್ಡ್ ಬಳ್ಳಾರಿ ಮುಖ್ಯ ರಸ್ತೆಯಲ್ಲಿ ಇರುವ ಇಂದಿರಾ ಕ್ಯಾಂಟೀನ್​ಗೆ ಭೇಟಿ …

Read More »

ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಟಿ.ನರಸೀಪುರ ಪೊಲೀಸರು ಬಂಧಿಸಿದ್ದಾರೆ.

ಮೈಸೂರು: ಟಿ.ನರಸೀಪುರದಲ್ಲಿ ನಡೆದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಟಿ.ನರಸೀಪುರ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಸಂಜೆ ಟಿ.ನರಸೀಪುರ ಹೊರವಲಯದಲ್ಲಿ ಯುವ ಬ್ರಿಗೇಡ್​ನ ಸಕ್ರಿಯ ಸದಸ್ಯ ವೇಣುಗೋಪಾಲ್ ನಾಯಕ್ ಎಂಬುವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಟಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಆರೋಪಿಗಳ ಬಂಧನಕ್ಕೆ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಈ ತಂಡ ಸೋಮವಾರ ಬೆಳಗ್ಗೆ ಪ್ರಮುಖ ಆರೋಪಿಗಳಾದ ಮಣಿಕಂಠ ಹಾಗೂ ಸಂದೇಶ್ …

Read More »

ಗೋ ಹತ್ಯೆ ನಿಷೇಧ ಕಾಯ್ದೆ ತರಬೇಕಾ ಬೇಡವಾ ಎಂಬ ವಿಷಯವನ್ನ ರೈತರಿಗೆ ಬಿಟ್ಟುಬಿಡಿ ಎಂದು ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್

ಹಾವೇರಿ: ಗೋ ಹತ್ಯೆ ನಿಷೇಧ ಕಾಯ್ದೆ ತರಬೇಕಾ ಬೇಡವಾ ಎಂಬ ವಿಷಯವನ್ನ ರೈತರಿಗೆ ಬಿಟ್ಟುಬಿಡಿ ಎಂದು ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರೈತರನ್ನ ಮನೆಹಾಳರನ್ನಾಗಿ ಮಾಡುವ ಕಾನೂನು ಇದ್ದರೇನು? ಬಿಟ್ಟರೇನು? ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ರೀತಿಯ ಗೋ ಹತ್ಯೆ ನಿಷೇಧ ಕಾನೂನು ಮಾಡುವ ಸರ್ಕಾರಗಳಿಗೆ, ವ್ಯಕ್ತಿಗಳಿಗೆ ಸಾಮಾನ್ಯ ಜ್ಞಾನ ಇರಬೇಕು. ಯಾವ ಹಸು ಗೋಶಾಲೆಗೆ ಹೋಗಬೇಕು, ಯಾವ ಹಸು ಕಸಾಯಿಖಾನೆಗೆ ಹೋಗಬೇಕು ಎನ್ನುವ …

Read More »

ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆ, ಗೂಂಡಾಗಿರಿ, ದರೋಡೆ :ನಳಿನ್​ ಕುಮಾರ್ ಕಟೀಲ್

  ಬೆಳಗಾವಿ: ಸಿದ್ದರಾಮಯ್ಯ ಸರ್ಕಾರ ಇದ್ದಾಗ ನಿರಂತರ ಹತ್ಯೆಗಳು, ಗೂಂಡಾಗಿರಿ ರಾಜಕಾರಣ, ದರೋಡೆ ನಡೆಯುತ್ತಿತ್ತು. ಹಿಂದಿನ ಅವರ ಸರ್ಕಾರದ ಅವಧಿಯಲ್ಲಿ 24 ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು. ಯಾವಾಗ ಕಾಂಗ್ರೆಸ್ ಸರ್ಕಾರ ಬರುತ್ತೊ ಆಗ ಇಂತಹ ಪ್ರಕರಣ ವೈಭವಿಕರೀಸುತ್ತವೆ ಮತ್ತು ರಾರಾಜಿಸುತ್ತವೆ.‌ ಇಂತಹ ಕೊಲೆಗಡುಕರು, ದಂಗೆಕೋರರನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Read More »

ಕೇಂದ್ರ ಸರ್ಕಾರ ಅಂಗನವಾಡಿ ಶಿಕ್ಷಕಿಯರಿಗೆ ನೀಡಿದ್ದ ಮೊಬೈಲ್ ಫೋನ್ಗಳನ್ನು ಶಿಕ್ಷಕಿಯರು ವಾಪಸ್ ನೀಡುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಕೇಂದ್ರ ಸರ್ಕಾರ ಅಂಗನವಾಡಿ ಶಿಕ್ಷಕಿಯರಿಗೆ ನೀಡಿದ್ದ ಮೊಬೈಲ್ ಫೋನ್ಗಳನ್ನು ಶಿಕ್ಷಕಿಯರು ವಾಪಸ್ ನೀಡುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಕೇಂದ್ರ ಸರ್ಕಾರ ಅಂಗನವಾಡಿ ಶಿಕ್ಷಕಿಯರಿಗೆ ಕಳಪೆ ಗುಣಮಟ್ಟದ ಮೊಬೈಲ್ಗಳನ್ನು ನೀಡಿದೆ. ಮೊಬೈಲ್ಗಳು ಪದೇ ಪದೇ ರಿಪೇರಿ ಬರುತ್ತಿದ್ದು, ಸ್ವಂತ ಖರ್ಚಿನಲ್ಲಿ ಮೊಬೈಲ್ ರಿಪೇರಿ ಮಾಡಿಸಿಕೊಳ್ಳಲಾಗುತ್ತಿದೆ. ಕೇವಲ ನಮ್ಮ ಇಲಾಖೆಗೆ ನೀಡಿದ ಕೆಲಸವನ್ನು ಮೊಬೈಲ್ನಲ್ಲಿ ಮಾಡಲು ಕೊಟ್ಟಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ. ಆದರೆ, ಬೇರೆ ಬೇರೆ ಇಲಾಖೆಗಳ ಕೆಲಸವನ್ನೂ ಇದೇ ಮೊಬೈಲ್ನಲ್ಲಿ ಮಾಡಲು …

Read More »

ಪುಡಿ ರೌಡಿಗಳ ಗುಂಪೊಂದು ವ್ಯಕ್ತಿ ಓರ್ವನಿಗೆ ಚಾಕುವಿನಿಂದ ಮನಬಂದಂತೆ ಹಲ್ಲೆ

ಪುಡಿ ರೌಡಿಗಳ ಗುಂಪೊಂದು ವ್ಯಕ್ತಿ ಓರ್ವನಿಗೆ ಚಾಕುವಿನಿಂದ ಮನಬಂದಂತೆ ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಗರದ ಇಸ್ಲಾಂಪೂರ ರಸ್ತೆಯ ಮಸೀದಿ ಹತ್ತಿರದ ಸಿದೀಕ್ ಕಿನಾಲ್ ಬಳಿ ನಡೆದಿದೆ. ಚಾಕು ಇರಿತಕೊಳಗಾದ ವ್ಯಕ್ತಿ ಖಾದರ ಭಾಷಾ ಔದರಿ (೨೬) ಎಂಬಾತನೇ ಸಾವನ್ನಪ್ಪಿದ್ದಾನೆ.‌ ಹಳೇ ದ್ವೇಷದ ಹಿನ್ನಲೆಯಲ್ಲಿ ಉಮರೆಜ್ ಹಾಗೂ ಅವೇಜುಲ್ಲಾ ಎಂಬ ಆರೋಪಿಗಳ ಗುಂಪೊಂದು ಬರ್ಬರವಾಗಿ ಚಾಕು ಇರಿತ ಮಾಡಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡ ಖಾದರಸಾಬ ಔದರಿಯನ್ನು …

Read More »