Breaking News

ರಾಷ್ಟ್ರೀಯ

ತಾವು ಬೆಳೆದ ಬೆಳೆಯನ್ನು ಜಾನುವಾರುಗಳಿಗೆ ಉಚಿತವಾಗಿನೀಡಿದ ರೈತ

ಚಿಕ್ಕೋಡಿ: ಜಿಲ್ಲೆಯ ಕೆಲ ಭಾಗಗಳಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆ ಸುರಿದ ಪರಿಣಾಮವಾಗಿ ಅಥಣಿ, ಕಾಗವಾಡ, ರಾಯಭಾಗ, ಭಾಗದಲ್ಲಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ದನಕರುಗಳಿಗೆ ಮೇವು ಇಲ್ಲದೇ ಸೊರಗಿವೆ. ಇದನೆಲ್ಲ ನೋಡಿದ ರೈತರು ಸರ್ಕಾರಕ್ಕೆ ಈ ಭಾಗದಲ್ಲಿ ಗೋಶಾಲೆ ಪ್ರಾರಂಭಕ್ಕೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ರೈತರೊಬ್ಬರು ತಾವು ಬೆಳೆದ ಬೆಳೆಯನ್ನು ಕಟಾವು ಮಾಡಿ ಅಕ್ಕಪಕ್ಕದ ಗ್ರಾಮದ ದನಕರುಗಳಿಗೆ ಉಚಿತವಾಗಿ ಮೇವು ವಿತರಣೆ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ …

Read More »

ನಾಳೆ ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ; ಸಕಲ ಸಿದ್ಧತೆ

ಕಲಬುರಗಿ : 2023ರ ರಾಜ್ಯ ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್​ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಸರ್ಕಾರ ರಚನೆಯಾದ ಬೆನ್ನಲ್ಲೇ ಮೊದಲು ಶಕ್ತಿ ಯೋಜನೆ ಜಾರಿಯಾಗಿತ್ತು. ನಾಳೆ ಎರಡನೇ ಯೋಜನೆಯಾದ ಗೃಹಜ್ಯೋತಿಗೆ ಕಲುಬುರಗಿಯಲ್ಲಿ ಚಾಲನೆ ಸಿಗಲಿದೆ. ಪ್ರತಿ ಮನೆಗೆ 200 ಯೂನಿಟ್​ ಉಚಿತ ವಿದ್ಯುತ್​ ನೀಡುವ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ‌ ಖರ್ಗೆ ಚಾಲನೆ‌ ನೀಡುವರು. ಈ ಹಿನ್ನೆಲೆಯಲ್ಲಿ ಕಲಬುರಗಿ ನಗರದಲ್ಲಿನ ನೂತನ ವಿದ್ಯಾಲಯ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮಕ್ಕೆ …

Read More »

ಲೋಕಸಭೆಯಲ್ಲಿ ದೆಹಲಿ ಸೇವೆಗಳ ಮಸೂದೆ ಅಂಗೀಕಾರ: ಕೇಜ್ರಿವಾಲ್

ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದೆ. ದೆಹಲಿ ಸರ್ಕಾರದ ರಾಷ್ಟ್ರೀಯ ರಾಜಧಾನಿ ಪ್ರದೇಶದ (ತಿದ್ದುಪಡಿ) ಮಸೂದೆ 2023 ಅನ್ನು ಗುರುವಾರ ಭಾರೀ ಗದ್ದಲದ ನಡುವೆ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ದೆಹಲಿ ಸೇವೆಗಳ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಯನ್ನು ಧ್ವನಿ ಮತದಿಂದ ಅಂಗೀಕರಿಸಲಾಗಿದ್ದು ಗಮನಾರ್ಹ..     ವಿಧೇಯಕ ಅಂಗೀಕಾರವಾಗುತ್ತಿದ್ದಂತೆ ಪ್ರತಿಪಕ್ಷಗಳು ಸದನದಿಂದ ಹೊರ ನಡೆದರು. ಸದನವು ಮಸೂದೆಯನ್ನು ತೆರವುಗೊಳಿಸುವ ಸ್ವಲ್ಪ ಮೊದಲು, ದೆಹಲಿ ಮುಖ್ಯಮಂತ್ರಿ ಅರವಿಂದ್ …

Read More »

ಬಡ ವೃದ್ಧ ದಂಪತಿಗೆ ಒಂದೇ ಗಂಟೆಯೊಳಗೆ ವೃದ್ಧಾಪ್ಯ ವೇತನ ಮಂಜೂರು ಮಾಡುವ ಮೂಲಕ ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಮಾನವೀಯತೆ ಮೆರೆದಿದ್ದಾರೆ.

ವಿಜಯಪುರ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಮುಂದೆ ಅಳಲು ತೋಡಿಕೊಂಡು ಬಂದ ಬಡ ವೃದ್ಧ ದಂಪತಿಗೆ ಒಂದೇ ಗಂಟೆಯೊಳಗೆ ವೃದ್ಧಾಪ್ಯ ವೇತನ ಮಂಜೂರು ಮಾಡುವ ಮೂಲಕ ಡಿಸಿ ಮಾನವೀಯತೆ ಮೆರೆದಿದ್ದಾರೆ. ಬಡತನ ರೇಖೆಗಿಂತ (ಬಿಪಿಎಲ್) ಕೆಳಗಡೆ ಇರುವ ಮತ್ತು 60 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗೆ ಈ ಯೋಜನೆಯಡಿ ಮಾಸಾಶನ ನೀಡಲಾಗುತ್ತದೆ. ನಗರದ ಗ್ಯಾಂಗಬಾವಡಿಯ ನಿವಾಸಿಗಳಾದ ಸೂರ್ಯಕಾಂತ ರಾಮದುರ್ಗಕರ ಹಾಗೂ ಅವರ ಪತ್ನಿ ಸುರೇಖಾ ರಾಮದುರ್ಗಕರ ಗುರುವಾರ ನಗರದ ಜಿಲ್ಲಾಧಿಕಾರಿಗಳ …

Read More »

ಕೇರಳ ಪೊಲೀಸ್ ವಶದಲ್ಲಿರುವವರು ಕರ್ನಾಟಕ ಸೈಬರ್ ಪೊಲೀಸ್ ವಿಭಾಗದ ಸಿಬ್ಬಂದಿ

ಕೊಚ್ಚಿ: ಆನ್​ಲೈನ್​ ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಆರೋಪಿಗಳಿಂದ ಲಂಚ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಕರ್ನಾಟಕದ ಓರ್ವ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಕೊಚ್ಚಿಯಲ್ಲಿ ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಸ್​ನಲ್ಲಿ ಹೆಸರನ್ನು ಕೈಬಿಡಲು ಆರೋಪಿಗಳಿಂದ ಲಂಚ ಪಡೆದಿದ್ದರೆಂದು ಆರೋಪಿಸಲಾಗಿದೆ. ಹಣ ಪಡೆದು ಸಹ ಆರೋಪಿಯೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದಾಗ ಅವರ ಸಂಬಂಧಿಯೊಬ್ಬರು ಕೊಚ್ಚಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ತನಿಖೆಗಿಳಿದ ಕಲಮಶ್ಶೇರಿ ಪೊಲೀಸರು ವಾಹನ ತಡೆದು, …

Read More »

ಸ್ವಾತಂತ್ರ್ಯೋತ್ಸವದ ನಿಮಿತ್ತ ಇಂದಿನಿಂದ ಲಾಲ್ ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ನಿಮಿತ್ತ ಇಂದಿನಿಂದ ಲಾಲ್ ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ತೋಟಗಾರಿಕಾ ಇಲಾಖೆಯಿಂದ ಆಯೋಜನೆಯಾಗಿರುವ ಹನ್ನೆರಡು ದಿನಗಳ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಸುಮಾರು ಎಂಟರಿಂದ ಹತ್ತು ಲಕ್ಷ ಜನರ ಆಗಮನದ ನಿರೀಕ್ಷೆಯಿದ್ದು, ಸಂಚಾರ ದಟ್ಟಣೆಯಾಗದಂತೆ ಕೆಲ ಮಾರ್ಪಾಡುಗಳನ್ನು ಮಾಡಲಾಗಿದೆ. ವಾಹನಗಳ ನಿಲುಗಡೆಗೆ ಅವಕಾಶ, ಮತ್ತು ನಿಷೇಧದ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ವಾಹನ ನಿಲುಗಡೆಗೆ ಅವಕಾಶವಿರುವ ಸ್ಥಳಗಳು: ಡಾ.ಮರೀಗೌಡ ರಸ್ತೆಯ ಅಲ್ ಅಮೀನ್ ಕಾಲೇಜು ಅವರಣದಲ್ಲಿ ದ್ವಿಚಕ್ರ ವಾಹನಗಳಿಗೆ, …

Read More »

ಪಿಒಪಿ ಗಣೇಶ ಮೂರ್ತಿಗಳ ಮಾರಾಟಕ್ಕೆ ನಿಷೇಧವಿದ್ದರೂ, ಬೆಳಗಾವಿಯಲ್ಲಿ ಹೊರ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ತರಹೇವಾರಿ ಗಣೇಶನ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ

ಬೆಳಗಾವಿ: ಪರಿಸರಕ್ಕೆ ಮಾರಕವಾಗಿರುವ ಪಿಒಪಿ ಗಣೇಶ ಮೂರ್ತಿಗಳ ಮಾರಾಟಕ್ಕೆ ನಿಷೇಧವಿದ್ದರೂ, ಬೆಳಗಾವಿಯಲ್ಲಿ ಹೊರ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ತರಹೇವಾರಿ ಗಣೇಶನ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಹಲವಾರು ವರ್ಷಗಳಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳಿಗೆ ಮಾತ್ರ ಅನುಮತಿ ನೀಡಬೇಕೆಂದು ಜಿಲ್ಲೆಯ ಪರಿಸರ ಪ್ರೇಮಿಗಳು ಆಗ್ರಹಿಸುತ್ತಿದ್ದಾರೆ. ಹೌದು, ಗಣೇಶೋತ್ಸವಕ್ಕೆ ಇನ್ನೂ ಒಂದು ತಿಂಗಳು ಬಾಕಿ ಇರುವಾಗ ಬೆಳಗಾವಿಯಲ್ಲಿ ಗಣೇಶ ಮೂರ್ತಿಗಳ ತಯಾರಿಕೆ ಭರದಿಂದ ಸಾಗಿದೆ. ಪರಿಸರ ಸ್ನೇಹಿ ಮೂರ್ತಿ ತಯಾರಕರು, ಮಾರಾಟಗಾರರು …

Read More »

ಬೆಂಗಳೂರಿನ ಕಾಡುಗೋಡಿ ಠಾಣಾ ವ್ಯಾಪ್ತಿಯ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್ಮೆಂಟ್​ನಲ್ಲಿ ಹೆಂಡತಿ ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಒಂದೇ‌ ಕುಟುಂಬದ ನಾಲ್ವರು ದುರಂತ ಅಂತ್ಯ ಕಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೆಹಳ್ಳಿಯ ಸಾಯಿಗಾರ್ಡನ್ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದ ಆಂಧ್ರ ಮೂಲದ ವಿರಾರ್ಜುನ (31), ಪತ್ನಿ ಹೇಮಾವತಿ (29), ಒಂದೂವರೆ ವರ್ಷದ ಹಾಗೂ 8 ತಿಂಗಳ ಮಕ್ಕಳು …

Read More »

ಹೈಕಮಾಂಡ್​ ಮುಂದೆ ತಲೆಬಾಗುವ ಮೂಲಕ ಸಿಎಂ ಸಿದ್ದರಾಮಯ್ಯ ಬಹಳ ವೀಕ್​ ಆಗಿದ್ದಾರೆ: ಬೊಮ್ಮಾಯಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಆಡಳಿತ ಸಂಪೂರ್ಣವಾಗಿ ದೆಹಲಿಯಿಂದ ನಡೆಯುತ್ತಿದೆ. ಇಡೀ ಸಚಿವ ಸಂಪುಟವೇ ಎಐಸಿಸಿ ಕಚೇರಿ ಸಭೆಯಲ್ಲಿ ಭಾಗಿಯಾಗಿರುವುದೇ ಇದಕ್ಕೆ ನಿದರ್ಶನ. ರಾಜ್ಯದಲ್ಲಿ ಸಚಿವ ಸಂಪುಟವೇ ಸುಪ್ರೀಂ, ಅಂತಹ ಸಂಪುಟವನ್ನೇ ಎಐಸಿಸಿ ಅಡಿಯಾಳಾಗಿಸಿ ರಾಜ್ಯದ ಜನತೆಗೆ ಸಿದ್ದರಾಮಯ್ಯ ಸರ್ಕಾರ ಅಪಮಾನ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಆರ್.ಟಿ ನಗರ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಆಡಳಿತಾರೂಢ ಪಕ್ಷವೊಂದು ಇಡೀ …

Read More »

ನೇಣು ಬಿಗಿದುಕೊಂಡು ಕಲಾ ನಿರ್ದೇಶಕ ​ದೇಸಾಯಿ ಆತ್ಮಹತ್ಯೆ

ರಾಯಗಡ(ಮಹಾರಾಷ್ಟ್ರ) : ಸೂಪರ್​ಹಿಟ್​​ ಚಿತ್ರಗಳನ್ನು ನೀಡಿದ್ದ ಕಲಾ ನಿರ್ದೇಶಕ ನಿತಿನ್​ ಚಂದ್ರಕಾಂತ್​ ದೇಸಾಯಿ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲಿಸರು, ನೇಣು ಬಿಗಿದುಕೊಂಡಿದ್ದೇ ಕಾರಣ ಎಂದಿದ್ದಾರೆ. ಇತ್ತ ಅವರ ಕುಟುಂಬಸ್ಥರು ದೇಸಾಯಿ ಅವರು ಆತ್ಮಹತ್ಯೆ ಮಾಡಿಕೊಂಡ ಸ್ಟುಡಿಯೋದಲ್ಲೇ ಅಂತ್ಯಕ್ರಿಯೆ ನಡೆಸುವುದಾಗಿ ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಖ್ಯಾತ ಕಲಾ ನಿರ್ದೇಶಕ ದೇಸಾಯಿ ಅವರು ಆರ್ಥಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಅವರು ಆಗಸ್ಟ್​ 2 ರಂದು ಬುಧವಾರ ಬೆಳಗಿನ ಜಾವ …

Read More »