Breaking News

ರಾಷ್ಟ್ರೀಯ

ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇದಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇದಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿರುವುದರಿಂದ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ.   ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ …

Read More »

ಜಿಲ್ಲೆಯಲ್ಲಿ ಡ್ರಗ್ಸ್​ ಮಾರಾಟಗಾರರು ಹೆಚ್ಚಾಗಿದ್ದು, ಮಾರಾಟಕ್ಕೆ ಬ್ರೇಕ್ ಹಾಕಲು ಪೋಲಿಸ್ ಇಲಾಖೆ ಸಜ್ಜಾ

ಕೊಡಗು: ಜಿಲ್ಲೆಯಲ್ಲಿ ಡ್ರಗ್ಸ್​ ಮಾರಾಟಗಾರರು ಹೆಚ್ಚಾಗಿದ್ದು, ಮಾರಾಟಕ್ಕೆ ಬ್ರೇಕ್ ಹಾಕಲು ಪೋಲಿಸ್ ಇಲಾಖೆ ಸಜ್ಜಾಗಿದೆ. ಈ ಒಂದು ಕ್ರಮದಲ್ಲಿ ಪೊಲೀಸರು, ಮಾರಾಟಗಾರರು ಮತ್ತು ಸೇವನೆ ಮಾಡುತ್ತಿದ್ದ ವ್ಯಕ್ತಿಗಳನ್ನು ಸೇರಿ ಜಿಲ್ಲೆಯಲ್ಲಿ 25 ಮಂದಿಯನ್ನು ಬಂಧಿಸಿದ್ದಾರೆ. ದಾಳಿ ವೇಳೆ ಆರೋಪಿಗಳ ಬಳಿ ಇದ್ದ ಗಾಂಜಾ , ಎಲ್​ಎಸ್​ಡಿ ಡ್ರಗ್ಸ್​ ಜಪ್ತಿ ಮಾಡಿದ್ದಾರೆ. ಬಂಧಿತರಲ್ಲಿ 14 ಜನ ಪ್ರವಾಸಿಗರಿದ್ದು, ಇವರು ಹೋಂ ಸ್ಟೇಯೊಂದರಲ್ಲಿ ಮಾದಕವಸ್ತು ಸೇವಿಸುತ್ತಿದ್ದರು. ಅಲೀಂ ಅಹ್ಮದ್, ಮೋಸಿನ್, ಸಾಗರ್, ರೆಹಮಾನ್, ಚೇತನ್, …

Read More »

ದೇಶವನ್ನು ಲೂಟಿ ಮಾಡಿದ ದರೋಡೆಕೋರರು ಒಟ್ಟಾಗಿದ್ದಾರೆ.: ಯತ್ನಾಳ್

ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ದೇಶವನ್ನು ಲೂಟಿ ಮಾಡಿದ ದರೋಡೆಕೋರರು ಒಟ್ಟಾಗಿದ್ದಾರೆ. ಇದು ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ದರೋಡೆಕೋರರ ಒಕ್ಕೂಟವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ತಿಂಗಳಾಗಿದೆ. ಬರಗಾಲದ ಛಾಯೆ ಎದುರಾಗಿದೆ. ರೈತರ ಆತ್ಮಹತ್ಯೆ ಹೆಚ್ಚಿದೆ. ಆತಂಕದ ಛಾಯೆ ಹೆಚ್ಚಾಗಿದೆ ಎಂದು ಕಿಡಿ ಕಾರಿದರು. ಹಿಂದೂ ಕಾರ್ಯಕರ್ತರ ಹಾಗೂ ಜೋಡಿ …

Read More »

ಜೈನ ಮುನಿ ಆರೋಪಿಗಳನ್ನು ಮತ್ತೆ ಚಿಕ್ಕೋಡಿ ನ್ಯಾಯಾಲಯ ಐದು ದಿನಗಳವರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಚಿಕ್ಕೋಡಿ(ಬೆಳಗಾವಿ): ಹಿರೇಕೋಡಿ ಜೈನ ಮುನಿ  ಕಾಮಕುಮಾರ ನಂದಿ ಮಹಾರಾಜರ ಹತ್ಯೆಯ ಪ್ರಮುಖ ಆರೋಪಿಗಳನ್ನು ಮತ್ತೆ ಚಿಕ್ಕೋಡಿ ನ್ಯಾಯಾಲಯ ಐದು ದಿನಗಳವರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.   ಕಳೆದ ವಾರದ ಹಿಂದೆ ಚಿಕ್ಕೋಡಿ ಪೊಲೀಸರು ಹೆಚ್ಚಿನ ತನಿಖೆಗಾಗಿ ಏಳು ದಿನಗಳವರಿಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ಆ ಕಾಲಾವಕಾಶ ಮುಗಿಯುತ್ತಿದ್ದಂತೆ ಇಂದು ಚಿಕ್ಕೋಡಿ ಪ್ರಧಾನ ದಿವಾಣಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಧೀಶ ಚಿದಾನಂದ ಬಡಿಗೇರ ಅವರು ವಿಚಾರಣೆ ನಡೆಸಿ ಮತ್ತೆ 5 ದಿನಗಳವರೆಗೆ …

Read More »

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್, ಕೆ.ಗೋವಿಂದರಾಜ್, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಸುನೀಲ್ ಕನಗೋಲು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಿ ಸಂಪುಟ ದರ್ಜೆಯ ಸ್ಥಾನಮಾನ ನೀಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.   ವಕೀಲ ಎಸ್.ಉಮಾಪತಿ ಸಲ್ಲಿಸಿರುವ ಅರ್ಜಿಯಲ್ಲಿ ನಜೀರ್ ಅಹ್ಮದ್, ಕೆ.ಗೋವಿಂದರಾಜ್, ಸುನೀಲ್ ಕನಗೋಲು ಹಾಗೂ ಕೆ.ವಿ.ಪ್ರಭಾಕರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. …

Read More »

ದೂದ್ ಸಾಗರ್​ನಲ್ಲಿ ಅಡ್ಡಾದಿಡ್ಡಿ ಓಡಾಡಿದ್ರೆ ಎಚ್ಚರಿಕೆ : ರೈಲ್ವೆ ಇಲಾಖೆ

ಕಾರವಾರ: ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ಪ್ರಸಿದ್ಧ ದೂದ್ ಸಾಗರ್ ಜಲಪಾತ ವೀಕ್ಷಣೆಗೆ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಅದರಲ್ಲಿಯೂ ಈಗ ಮಳೆ ಬರುತ್ತಿರುವುದರಿಂದ ಅದರ ಸೊಬಗು ಮತ್ತಷ್ಟು ಹೆಚ್ಚಾಗಿದೆ. ಆದರೆ ಪ್ರವಾಸಕ್ಕೆಂದು ಬರುವ ಜನರು ಅಲ್ಲಿ ಮೋಜು ಮಸ್ತಿ ಮಾಡಿ ಪ್ರಕೃತಿಯನ್ನು ಹಾಳು ಮಾಡುವುದರಲ್ಲಿ ಹಿಂಜರಿಯುವುದಿಲ್ಲ. ಹೀಗಾಗಿ ಈ ಸಂಭ್ರಮಕ್ಕೆ ಕಡಿವಾಣ ಬೀಳಲಿದೆ. ಇನ್ಮುಂದೆ ಪ್ರವಾಸಿಗರು ದೂದ್ ಸಾಗರ್​ನಲ್ಲಿ ಅಡ್ಡಾದಿಡ್ಡಿ ಓಡಾಡುವಂತಿಲ್ಲ. ಈ ಬಗ್ಗೆ ರೈಲ್ವೆ ಇಲಾಖೆ ಎಚ್ಚರಿಕೆ ನೀಡಿದೆ. ನೈಋತ್ಯ ರೈಲ್ವೆಯು, …

Read More »

ಹಾಸನದಲ್ಲಿ ಹಫ್ತಾ ವಸೂಲಿ ದಂಧೆ ಅಂಗಡಿ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ: ಹೆಚ್ಚಿನ ಹಫ್ತಾ ಹಣ ಕೊಡಲಿಲ್ಲ ಅಂತ ಪುಡಿರೌಡಿಯೊಬ್ಬ ಅಂಗಡಿ ಮಾಲೀಕನಿಗೆ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಹಾಸನದ ಸಿದ್ದಯ್ಯ ನಗರದಲ್ಲಿ ನಡೆದಿದೆ. ಸೂರ್ಯಪ್ರಭ (54) ಹಲ್ಲೆಗೊಳಗಾದ ಪ್ರಭಾ ಆಟೋಮೋಟಿವ್​ ಶಾಪ್ ಮಾಲೀಕ. ಸಿದ್ದಯ್ಯ ನಗರದ ವಿಕ್ಕಿ ಎಂಬಾತನಿಂದ ಕೃತ್ಯ ನಡೆದಿದೆ ಎಂದು ಹಲ್ಲೆಗೊಳಗಾದ ಸೂರ್ಯಪ್ರಭ ಆರೋಪಿಸಿದ್ದಾರೆ. ಭಾನುವಾರ ಸಂಜೆ ಅಂಗಡಿಗೆ ಬಂದ ಆರೋಪಿ ವಿಕ್ಕಿ ಹಫ್ತಾ ಕೊಡುವಂತೆ ಬೆದರಿಕೆ ಹಾಕಿದ್ದಾನೆ. ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿದ್ದರಿಂದ ಮಾಲೀಕ ಸ್ವಲ್ಪ …

Read More »

ರಾಜ್ಯದಲ್ಲಿ ಕಳೆದ ಎರಡು ತಿಂಗಳಲ್ಲಿ 42 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ತಿಂಗಳಲ್ಲಿ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರವಾಗಿ ಗಮನಹರಿಸುವುದು ಬಿಟ್ಟು ಕಾಂಗ್ರೆಸ್ ಮಹಾಘಟಬಂಧನ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಜೆ.ಪಿ.ನಗರದ ತಮ್ಮ ನಿವಾಸದ ಬಳಿ ಇಂದು ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅವರು ನಮ್ಮ ಪಕ್ಷವನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಇವತ್ತಿನ ಮಹಾಘಟಬಂಧನ್​ನ ವ್ಯವಸ್ಥಾಪಕರು ಜೆಡಿಎಸ್ ಸಂತತಿ ಮುಗಿದಿದೆ ಎಂಬ ಭ್ರಮೆಯಲ್ಲಿದ್ದಾರೆ ಎಂದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ವಿಚಾರಕ್ಕೆ …

Read More »

ಚಪ್ಪಲಿ ಕಳೆದು ಹೋಗಿದೆ ಎಂದು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿ

ಬೆಂಗಳೂರು : ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡಿರುವುದು ಅನ್ನಬೇಕೋ, ಅಥವಾ ಪೊಲೀಸ್ ಸಿಬ್ಬಂದಿಯ ಅಸಹಾಯಕತೆ ಅನ್ನಬೇಕೋ ಗೊತ್ತಿಲ್ಲ. ಸಂಕಷ್ಟದಲ್ಲಿರುವವರಿಗೆ ತಕ್ಷಣ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಲು ಅನುಕೂಲವಾಗಲಿ‌ ಎಂದು ಚಾಲ್ತಿಯಲ್ಲಿರುವ 112 ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಚಪ್ಪಲಿ ಕಳೆದು ಹೋಗಿದೆ. ಹುಡುಕಿಕೊಡಿ ಎಂದು ದೂರು ನೀಡಿರುವ ವಿಚಿತ್ರ ಘಟನೆ ತಡರಾತ್ರಿ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ಪೊಲೀಸ್ ನಿಯಂತ್ರಣ ಕೋಣೆಯ ಸಹಾಯವಾಣಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ ತಾನು ‘ಕಾರ್ …

Read More »

ಈ ಬಾರಿ ಜನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದ ಎಸ್.ಆರ್. ಹಿರೇಮಠ

ಧಾರವಾಡ: ಜೆಡಿಎಸ್ ​ಅನ್ನು ಮಾತಿನಿಂದ ಪರಿಗಣಿಸಬಾರದು. ನಡತೆಯಿಂದ ಪರಿಗಣಿಸಬೇಕಿದೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ​ ಹೇಳಿದ್ದಾರೆ. ಧಾರವಾಡದಲ್ಲಿಂದು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತು ಮಾತನಾಡಿ ಅವರು, “2006ರಲ್ಲಿ ಇದೇ ಹೆಚ್‌ಡಿ ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರು. ಅದರ ಪರಿಣಾಮಗಿ 2008ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂತು. ನನ್ನ ಅಭಿಪ್ರಾಯದಲ್ಲಿ ಅವರ ಜಾತ್ಯತೀತತೆ ಎನ್ನುವುದು ನಾಮಕೇವಾಸ್ತೆ ಮಾತ್ರ” ಎಂದು ಹೇಳಿದ್ದಾರೆ. “ಜೆಡಿಎಸ್​ ಆಚರಣೆಯಲ್ಲಿ ಜಾತ್ಯತೀತತೆ ಇಲ್ಲ, …

Read More »