Breaking News

ರಾಷ್ಟ್ರೀಯ

50 ದಿನಗಳ ಬಳಿಕ ಹೈದರಾಬಾದ್‌ಗೆ ಮರಳಿದ ಪ್ರಭಾಸ್

ಹೈದರಾಬಾದ್: ಆದಿಪುರುಷ್ ಬಿಡುಗಡೆ ಬಳಿಕ ವಿದೇಶಕ್ಕೆ ಹಾರಿದ್ದ ಡಾರ್ಲಿಂಗ್ ಪ್ರಭಾಸ್, ಇದೀಗ ಮತ್ತೆ ವಾಪಸ್ ಭಾರತಕ್ಕೆ ಬಂದಿದ್ದಾರೆ. ಅಮೆರಿಕದಲ್ಲಿ ಪ್ರತಿಷ್ಠಿತ ಸ್ಯಾನ್ ಡಿಯಾಗೋ ಕಾಮಿಕ್-ಕಾನ್ (SDCC) ಈವೆಂಟ್​​ನಲ್ಲಿ ಭಾಗವಹಿಸಿದ್ದ ಅವರು, ಇಂದು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಅಂತಾರಾಷ್ಟ್ರೀಯ ಮಟ್ಟದ ಸ್ಯಾನ್ ಡಿಯಾಗೋ ಕಾಮಿಕ್-ಕಾನ್ ಸಮಾರಂಭದಲ್ಲಿ ಪ್ರಭಾಸ್ ಜೊತೆಗೆ ‘ಕಲ್ಕಿ 2898 AD’ ಚಿತ್ರ ತಂಡದ ಎಲ್ಲ ನಟ-ನಟಿಯರು ಕೂಡ ಭಾಗಿಯಾಗಿದ್ದರು. ಚಿತ್ರೀಕರಣ ವೇಳೆ ಪೆಟ್ಟು ಬಿದ್ದು ಸುರಿಸುಮಾರು 50 ದಿನಗಳನ್ನು …

Read More »

100 ರೂಪಾಯಿಗಾಗಿ ಮಗನನ್ನೇ ಕೊಂದ ಕುಡುಕ ತಂದೆ!

ಬಿಹಾರದ ಸಮಸ್ತಿಪುರ ಜಿಲ್ಲೆಯಿಂದ ಆಘಾತಕಾರಿ ಸುದ್ದಿಯೊಂದು ಹೊರಬಂದಿದೆ. ಕುಡಿದ ಅಮಲಿನಲ್ಲಿ ತಂದೆಯೊಬ್ಬ ತನ್ನ ಅಮಾಯಕ ಮಗನನ್ನೇ ಕತ್ತು ಸೀಳಿ ಕೊಂದಿದ್ದಾನೆ. ಕೃತ್ಯ ಎಸಗಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮೊಹಿಯುದ್ದೀನ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಭಾದಯ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಗನನ್ನು ಕೊಂದ ತಂದೆ : ಘಟನೆಗೆ ಸಂಬಂಧಿಸಿದಂತೆ ಭದಯ್ಯ ಗ್ರಾಮದಲ್ಲಿ ತಂದೆ ತನ್ನ ಮೂರು ವರ್ಷದ ಅಮಾಯಕ ಮಗನ ಕುತ್ತಿಗೆಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಇದರಿಂದ ಮಗು ಗಂಭೀರವಾಗಿ …

Read More »

ಬಿಎಸ್​ಇ ಸೆನ್ಸೆಕ್ಸ್​ ಮತ್ತು ನಿಫ್ಟಿ ಇಂದು ಏರಿಕೆಯಲ್ಲಿ ಕೊನೆಗೊಂಡಿವೆ.

ಮುಂಬೈ : ಮೂರು ದಿನಗಳಿಂದ ನಡೆದಿದ್ದ ದೇಶೀಯ ಷೇರುಪೇಟೆಯಲ್ಲಿನ ಕುಸಿತದ ಪ್ರಕ್ರಿಯೆ ಬುಧವಾರ ಅಂತ್ಯಗೊಂಡಿದೆ. ಸೆನ್ಸೆಕ್ಸ್, ನಿಫ್ಟಿ ಇಂದು ಏರಿಕೆಯೊಂದಿಗೆ ಮುಕ್ತಾಯಗೊಂಡವು. ಬಿಎಸ್‌ಇಯ 30-ಷೇರುಗಳ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 351.49 ಪಾಯಿಂಟ್‌ಗಳು ಅಥವಾ ಶೇಕಡಾ 0.53 ರಷ್ಟು ಏರಿಕೆಯೊಂದಿಗೆ 66,707.20 ಪಾಯಿಂಟ್‌ಗಳಿಗೆ ಕೊನೆಗೊಂಡಿತು. ಎನ್‌ಎಸ್‌ಇ ನಿಫ್ಟಿ 97.70 ಪಾಯಿಂಟ್‌ಗಳು ಅಥವಾ ಶೇಕಡಾ 0.5 ರಷ್ಟು ಏರಿಕೆಯೊಂದಿಗೆ 19,778.30 ಪಾಯಿಂಟ್‌ಗಳ ಮಟ್ಟದಲ್ಲಿ ಕೊನೆಗೊಂಡಿತು. ಟೆಲಿಕಾಂ ಕಂಪನಿ ವೊಡಾಫೋನ್ ಐಡಿಯಾ ಶೇರುಗಳು ಗರಿಷ್ಠ ಶೇ …

Read More »

ರಸ್ತೆ ಬದಿಯಲ್ಲಿ ಸಿಕ್ಕ 2 ಸಾವಿರ ಮುಖ ಬೆಲೆಯ ಗರಿ ಗರಿ ನೋಟುಗಳು?

ಬೆಂಗಳೂರು: ನಗರದ ಹೊರವಲಯದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ 2 ಸಾವಿರ ಮುಖಬೆಲೆಯ ಜೆರಾಕ್ಸ್ ನೋಟುಗಳು ಪತ್ತೆಯಾಗಿವೆ. ಕನಕಪುರ ರಸ್ತೆಯ ಪಕ್ಕದಲ್ಲಿ ಬಿದ್ದಿದ್ದ ಎರಡು ಬಾಕ್ಸ್​​ಗಳಲ್ಲಿ ಎರಡು ಸಾವಿರ ಮುಖಬೆಲೆಯ ನಕಲಿ ನೋಟುಗಳು ಸಿಕ್ಕಿವೆ.   ಕನಕಪುರ ರಸ್ತೆಯೊಂದರ ಪಕ್ಕದಲ್ಲಿ ಖಾಲಿ ಜಾಗದಲ್ಲಿ ಪ್ಯಾಕಿಂಗ್ ಮಾಡಿದ ಸ್ಥಿತಿಯಲ್ಲಿ ಎರಡು ಬಾಕ್ಸ್ ಗಳನ್ನ ಕಂಡ ಸ್ಥಳೀಯರು ಅನುಮಾನಗೊಂಡ ಸಮೀಪದಲ್ಲೇ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕೂಡಲೇ ತಲಘಟ್ಟಪುರ ಕಾನೂನು ಸುವ್ಯವಸ್ಥೆ ವಿಭಾಗದ …

Read More »

ಮಳೆ ತಗ್ಗಿದರೂ ಮುಂದುವರಿದ ಪ್ರವಾಹ: ಹೆದ್ದಾರಿಗಳಲ್ಲಿ ಗುಡ್ಡ ಕುಸಿತ,

ಕಾರವಾರ (ಉತ್ತರ ಕನ್ನಡ): ಉತ್ತರ ಕನ್ನಡದಲ್ಲಿ ಅಬ್ಬರಿಸುತ್ತಿದ್ದ ಮಳೆ ಕೊಂಚ ಕಡಿಮೆಯಾಗಿದ್ದು, ನದಿ ತೀರದ ಪ್ರದೇಶದಲ್ಲಿ ಸೃಷ್ಟಿಯಾಗಿದ್ದ ಪ್ರವಾಹ ಕೊಂಚ ಇಳಿಕೆಯಾಗಿದೆ. ಆದರೆ, ಪ್ರವಾಹ ಹಾಗೂ ಗಾಳಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಗುಡ್ಡ ಕುಸಿತದಿಂದಾಗಿ ಹಲವು ಹೆದ್ದಾರಿಗಳು ಬಂದ್​ ಆಗಿವೆ. ಜನ ಸಂಚಾರಕ್ಕೆ ಪರದಾಡಬೇಕಾದ ಸ್ಥಿತಿ ಮುಂದುವರಿದಿದೆ. ಉತ್ತರ ಕನ್ನಡದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಆರ್ಭಟಿಸುತ್ತಿದ್ದ ಮಳೆ ಅಬ್ಬರ ಸ್ವಲ್ಪ ಕಡಿಮೆಯಾಗಿದೆ. ಪರಿಣಾಮ ಗಂಗಾವಳಿ, ಅಘನಾಶಿನಿ, ವರದಾ ಹಾಗೂ …

Read More »

B.S.F. ಯೋಧನೊಬ್ಬ ಪಿಡಿಎಸ್ ಡೀಲರ್, ಆತನ ಪತ್ನಿ ಹಾಗೂ ಇಬ್ಬರು ಗ್ರಾಮಸ್ಥರು ಸೇರಿದಂತೆ ಒಟ್ಟು ನಾಲ್ವರ ಮೇಲೆ ಕತ್ತಿಯಿಂದ ಹಲ್ಲೆ

ಪಲಾಮು (ಜಾರ್ಖಂಡ್): ಬಿಎಸ್‌ಎಫ್ ಯೋಧನೊಬ್ಬ ಪಿಡಿಎಸ್ ಡೀಲರ್, ಆತನ ಪತ್ನಿ ಹಾಗೂ ಇಬ್ಬರು ಗ್ರಾಮಸ್ಥರು ಸೇರಿದಂತೆ ಒಟ್ಟು ನಾಲ್ವರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಪಿಡಿಎಸ್ ಡೀಲರ್ (ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಂಗಡಿಯವ) ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮೇದಿನಿ ರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಮೀನು ವಿವಾದದ ಹಿನ್ನೆಲೆ ಕತ್ತಿಯಿಂದ ಹಲ್ಲೆ: ಇಡೀ ಘಟನೆಯು ಪಲಮುವಿನ ಪಾಡ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಲ್ಹಾನಾದಲ್ಲಿ ನಡೆದಿದೆ. …

Read More »

ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವು

ಬೆಂಗಳೂರು : ನಗರದ ನಾಗವಾರದ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್​​ ಬಿದ್ದು ತಾಯಿ ಹಾಗೂ ಮಗು ಮೃತಪಟ್ಟ ಪ್ರಕರಣಕ್ಕೆ 10 ಕೋಟಿ ರೂ. ನಷ್ಟ ಪರಿಹಾರ ನೀಡಲು ಆದೇಶಿಸುವಂತೆ ಕೋರಿ ಮೃತ ಮಹಿಳೆಯ ಪತಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಲೋಹಿತ್ ಕುಮಾರ್ ವಿ. ಸುಲಾಖೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ವಿಚಾರಣೆ ನಡೆಸಿತು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬೆಂಗಳೂರು ಮೆಟ್ರೋ ರೈಲು …

Read More »

ಬೆಂಗಳೂರು ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಖದೀಮನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ತಮಿಳುನಾಡಿನ ಧರ್ಮಪುರಿಯಿಂದ ಬೆಂಗಳೂರು ನಗರಕ್ಕೆ ಬಸ್​ನಲ್ಲಿ ಬಂದು ಮನೆಗಳ್ಳತನ ಮಾಡುತ್ತಿದ್ದ ಖದೀಮನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ರಾಮಸ್ವಾಮಿ ಬಂಧಿತ ಆರೋಪಿ. ಈತನಿಂದ 30 ಲಕ್ಷ ರೂ ಮೌಲ್ಯದ 602 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಕಳೆದ 25 ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ಬನಶಂಕರಿ, ಸಿ.ಕೆ.ಅಚ್ಚುಕಟ್ಟು, ಮಡಿವಾಳ, ರಾಮಮೂರ್ತಿನಗರ ಹಾಗು ಕುಮಾರಸ್ವಾಮಿ ಲೇಔಟ್ ಸೇರಿದಂತೆ ನಗರದ ವಿವಿಧ ಪೊಲೀಸ್ …

Read More »

ಸರ್ವರ್ ಸ್ಲೋ ಆಗಿದ್ದರಿಂದ ಗೃಹ ಲಕ್ಷ್ಮಿ ಯೋಜನೆ ನೋಂದಣಿ ವಿಳಂಬ.

ಬೆಳಗಾವಿ: ಗೃಹ ಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಸುರಿಯುವ ಮಳೆಯಲ್ಲೇ ಮಹಿಳೆಯರು ಗಂಟೆಗಟ್ಟಲೇ ನಿಂತಿರುವುದು ನಗರದ ರಿಸಾಲ್ದಾರ್ ಗಲ್ಲಿಯ ಬೆಳಗಾವಿ ಒನ್ ಕೇಂದ್ರದಲ್ಲಿ ಕಂಡು ಬಂತು. ಗೃಹ ಲಕ್ಷ್ಮಿ ಯೋಜನೆ ನೋಂದಣಿಗೆ ಚಾಲನೆ ಸಿಕ್ಕ ದಿನದಿಂದಲೂ ಇಲ್ಲಿನ ಬೆಳಗಾವಿ ಒನ್ ಕೇಂದ್ರದಲ್ಲಿ ಮಹಿಳೆಯರ ದಟ್ಟಣೆ ನಿತ್ಯವೂ ಇದ್ದು, ಮಂಗಳವಾರ ಸಹ ಸುರಿವ ಮಳೆ ಲೆಕ್ಕಿಸದೇ ಛತ್ರಿ ಹಿಡಿದುಕೊಂಡು ಸಾಲಿನಲ್ಲಿ ನಿಂತ ಮಹಿಳೆಯರು ತಮ್ಮ ಸರದಿ ಯಾವಾಗ ಬರುತ್ತೊ ಎಂದು ಕಾಯುತ್ತಾ ನಿಂತಿದ್ದರು. …

Read More »

ಗಂಡನ ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸುವ ಯತ್ನ

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಪತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಕಥೆ ಸೃಷ್ಟಿಸಿ ಕಣ್ಣೀರು ಹಾಕಿದ್ದ ಹಂತಕಿ ಪತ್ನಿ ಜೈಲು ಪಾಲಾಗಿರುವ ಘಟನೆ ನಡೆದಿದೆ. ಕಳೆದ ಜೂ. 15 ರಂದು ಕಾಶೆಪ್ಪ ಎಂಬ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಕೊಂಕಲ್ ಗ್ರಾಮದ ಜಮೀನಿನ ಮರವೊಂದಕ್ಕೆ ನೇಣು ಬೀಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಘಟನೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಕಾಶೆಪ್ಪ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ಅಲ್ಲ. ಹೀಗಾಗಿ, ಸಾವಿನ ಬಗ್ಗೆ …

Read More »