Breaking News

ರಾಷ್ಟ್ರೀಯ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ ಬಿ ಗ್ರಾಮದಲ್ಲಿ ನಿರಂತರವಾಗಿ ಸುರಿದ ಮಹಾಮಳೆಗೆ ಮನೆ ಮಾಳಿಗೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಕಲಬುರಗಿ : ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆ ಸೇರಿದಂತೆ ಜೇವರ್ಗಿ ತಾಲೂಕಿನ ಹಲವೆಡೆ ಸಾಕಷ್ಟು ಅವಾಂತರ ಸೃಷ್ಟಿಯಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜೇವರ್ಗಿ ತಾಲೂಕಿನಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಮನೆ ಮಾಳಿಗೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿರಾಳ ಬಿ ಗ್ರಾಮದಲ್ಲಿ ನಡೆದಿದೆ. ಬಸಮ್ಮ ಗಂಡ ಬಸವರಾಜ ಬಳಗಾರ (35) ಮೃತಪಟ್ಟ ಮಹಿಳೆ. ನಿರಂತರವಾಗಿ ಮಳೆ ಸುರಿದ ಪರಿಣಾಮ ಮನೆಯ ಛಾವಣಿ ಕುಸಿದು ಬಿದ್ದಿದೆ ಎಂದು ತಿಳಿದು …

Read More »

ವೀಸಾ ಅರ್ಜಿದಾರರೇ ಗಮನಿಸಿ..ಅಮೆರಿಕ ರಾಯಭಾರಿ ಕಚೇರಿ ಗ್ರಾಹಕ ಕೇಂದ್ರ ನವೀಕರಣ, ಜುಲೈ 25 ರಿಂದ 4 ದಿನ ಸೇವೆ ಇರಲ್ಲ

ನವದೆಹಲಿ: ವೀಸಾ ಅರ್ಜಿದಾರರೇ ಎಚ್ಚರ!, ಭಾರತದಲ್ಲಿನ ಅಮೆರಿಕದ ರಾಯಭಾರ ಕಚೇರಿ ತನ್ನ ಗ್ರಾಹಕ ಸೇವಾ ಕೇಂದ್ರವನ್ನು ಬೇರೊಂದು ಪ್ಲಾಟ್​ಫಾರ್ಮ್​ಗೆ ವರ್ಗ ಮಾಡುತ್ತಿದ್ದು, ಜುಲೈ 25 ರಿಂದ 28 ರವರೆಗೆ ವೀಸಾ ಅರ್ಜಿಗಳ ಸ್ವೀಕಾರ, ಹಣ ಪಾವತಿ ಸೇವೆ ಇರುವುದಿಲ್ಲ.   ಹೀಗಂತ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಮತ್ತು ಅಮೆರಿಕ ಧೂತಾವಾಸ ಟ್ವೀಟ್​ ಮೂಲಕ ತಿಳಿಸಿದೆ. ಅಂದರೆ, ಅಮೆರಿಕಕ್ಕೆ ಹೋಗಬಯಸುವ ಪ್ರಯಾಣಿಕರು ವೀಸಾ ಬಯಸಿ ಅಮೆರಿಕ ಧೂತಾವಾಸಕ್ಕೆ ಕರೆ, ಅರ್ಜಿ ಸಲ್ಲಿಕೆ, …

Read More »

ಬಾಯಿಗೆ ಹಲ್ಲಿ ನುಗ್ಗಿ ಮಗು ಸಾವು,

ಕೊರ್ಬಾ (ಛತ್ತೀಸ್​ಗಢ) : ಹಲ್ಲಿಯೊಂದು ಬಾಯಿಯೊಳಗೆ ನುಗ್ಗಿದ ಪರಿಣಾಮ ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಛತ್ತೀಸ್​ಗಢದ ಕೊರ್ಬಾದಲ್ಲಿ ನಡೆದಿದೆ. ಆದರೆ, ಹಲ್ಲಿಗೆ ಮನುಷ್ಯನನ್ನು ಸಾಯಿಸುವಷ್ಟು ವಿಷ ಇರುವುದಿಲ್ಲ. ಇದಕ್ಕೆ ಬೇರೆಯದೇ ಕಾರಣ ಇರಬೇಕು ಎಂಬುದು ವೈದ್ಯರ ಅನುಮಾನ. ಹಲ್ಲಿ ಕೂಡ ಮಗುವಿನ ಬಾಯಿಯಲ್ಲೇ ಸಾವನ್ನಪ್ಪಿದ್ದು, ಅಚ್ಚರಿ ಉಂಟು ಮಾಡಿದೆ. ಕೊರ್ಬಾ ಜಿಲ್ಲೆಯ ಸುಮೇಧಾ ನಾಗಿನ್‌ಭಂಥ ಗ್ರಾಮದಲ್ಲಿ ಈ ಅಚ್ಚರಿ ಘಟಿಸಿದೆ. ಮಲಗಿದ್ದ ವೇಳೆ ಮಗುವಿನ ಬಾಯಿಯಲ್ಲಿ ಹಲ್ಲಿ ಇರುವುದನ್ನು ತಾಯಿ …

Read More »

2022-23 ಹಣಕಾಸು ವರ್ಷಕ್ಕೆ EPF ನ ಬಡ್ಡಿ ದರವನ್ನು 8.15 ಪ್ರತಿಶತಕ್ಕೆ ನಿಗದಿಪಡಿಸಲಾಗಿದೆ. ಇದು ಕಳೆದ ವರ್ಷಕ್ಕಿಂತ ಶೇ.0.05ರಷ್ಟು ಹೆಚ್ಚಾಗಿದೆ.

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಖಾತೆಗಳಲ್ಲಿನ ಹಣದ ಮೇಲಿನ ಬಡ್ಡಿ ದರವನ್ನು (EPFO Interest rate) ಅಂತಿಮಗೊಳಿಸಲಾಗಿದೆ. 2022-23ನೇ ಹಣಕಾಸು ವರ್ಷಕ್ಕೆ ಶೇ 8.15 ಬಡ್ಡಿ ನೀಡಲು ಕೇಂದ್ರೀಯ ಟ್ರಸ್ಟಿಗಳ ಮಂಡಳಿ (ಸಿಬಿಟಿ) ತೆಗೆದುಕೊಂಡ ನಿರ್ಧಾರವನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಈ ಸಂಬಂಧ ಇಪಿಎಫ್‌ಒ ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ. ಈ ವರ್ಷದ ಮಾರ್ಚ್‌ನಲ್ಲಿ ಇಪಿಎಫ್ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟಿಗಳು (ಸಿಬಿಟಿ) 2022-23ರ ಹಣಕಾಸು ವರ್ಷಕ್ಕೆ ಶೇ 8.15 …

Read More »

ತುಂಗಭದ್ರಾ ಜಲಾಶಯಕ್ಕೆ ಹರಿದು ಬಂದ 18 ಟಿಎಂಸಿ ನೀರು, ರೈತರಿಗೆ ಸಂತಸ

ಬಳ್ಳಾರಿ, ರಾಯಚೂರು ರೈತರಲ್ಲಿ ಕೊಂಚ ಆಶಾಭಾವನೆ ಮೂಡಿದೆ. 10 ದಿನದಲ್ಲಿ 18 ಟಿಎಂಸಿ ನೀರು ಜಲಾಶಯಕ್ಕೆ ಬಂದಿದ್ದು, ರೈತರು ಮೊದಲ ಬೆಳೆ ಭತ್ತದ ನಾಟಿ ಶುರು ಮಾಡಿದ್ದಾರೆ.     ತುಂಗಭದ್ರಾ ಜಲಾಶಯ ವಿಜಯನಗರ: ತ್ರಿವಳಿ ರಾಜ್ಯಗಳಿಗೆ ಜೀವನಾಡಿ ಆಗಿರುವ ತುಂಗಭದ್ರಾ ಜಲಾಶಯದ ಒಳಹರಿವಿನ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಭರವಸೆ ಮೂಡಿದೆ. ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರುತ್ತಿದ್ದಂತೆ ಇತ್ತ ರೈತರು ಮೊದಲನೆ ಬೆಳೆ …

Read More »

ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ 22 ಎಂಎಂ‌ ಮಳೆಯಾಗಿದೆ.

ಶಿವಮೊಗ್ಗ: ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆ ಸೇರಿದಂತೆ, ಅಕ್ಕಪಕ್ಕದ ಜಿಲ್ಲೆಗಳಲ್ಲಿ ನಿರಂತರ ವರ್ಷಧಾರೆಯಾಗುತ್ತಿದೆ. ಮಳೆ ಎಡಬಿಡದೇ ಸುರಿದ ಪರಿಣಾಮ, ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿವೆ. ಅದರಂತೆ, ತುಂಗಾ ಜಲಾನಯದ ಪ್ರದೇಶಗಳಾದ ಶೃಂಗೇರಿ, ಕೊಪ್ಪ, ಆಗುಂಬೆ ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ತುಂಗಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ತುಂಗಾ ಡ್ಯಾಂ ಸಂಪೂರ್ಣವಾಗಿ ತುಂಬಿದ್ದು, ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಕೋರ್ಪಳಯ್ಯನ ಛತ್ರದ ಬಳಿಯ ಮಂಟಪ ಮುಳುಗುವ ಹಂತ …

Read More »

ಬೆಳಗಾವಿ ಜಿಲ್ಲೆಯ ನದಿಗಳಲ್ಲಿ ನೀರು ಹರಿಯುವ ಪ್ರಮಾಣ ಹೆಚ್ಚಳ 16 ಸೇತುವೆಗಳು ಜಲಾವೃತ

ಚಿಕ್ಕೋಡಿ: ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಹರಿಯುತ್ತಿರುವ ನದಿಗಳಲ್ಲಿ ನೀರಿನ ಒಳಹರಿವು ಪ್ರಮಾಣ ಹೆಚ್ಚಾಗಿದ್ದು, ಬಂಗಾಲಿ ಬಾಬಾ ದರ್ಗಾ ಜಲದಿಗ್ಭಂಧನಕ್ಕೆ ಒಳಗಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕು ಕಾರದಗಾ ಗ್ರಾಮದ ಆರಾಧ್ಯ ದೈವ ಬಂಗಾಲಿ ಬಾಬಾ ದರ್ಗಾ ಜಲದಿಗ್ಭಂಧನಕ್ಕೆ ಒಳಗಾಗಿದ್ದು, ಸದ್ಯ ಬಾಬಾನ ದರ್ಶನಕ್ಕೆ ದೂದಗಂಗಾ ನದಿ ನೀರು ತಡೆಯನ್ನು ಒಡ್ಡಿದೆ. ದೂಧಗಂಗಾ ನದಿಯ ಒಳಹರಿವು ಹೆಚ್ಚಳಗೊಂಡ ಹಿನ್ನೆಲೆ ದರ್ಗಾದ ಮುಂದೆ ಎರಡು ಅಡಿಯಷ್ಟು …

Read More »

ನಾಗರಹೊಳೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಜಿಂಕೆ ಬೇಟೆ: ಮಾಂಸ ಜೋಳದ ಹೊಲದಲ್ಲಿ ಪತ್ತೆ.. ಇಬ್ಬರ ಬಂಧನ

ಮೈಸೂರು: ನಾಗರಹೊಳೆ ಉದ್ಯಾನದಲ್ಲಿ ಜಿಂಕೆ ಬೇಟೆಯಾಡಿ, ಆರೋಪಿಗಳು ಜೋಳದ ಹೊಲದಲ್ಲಿ ಮಾಂಸವನ್ನು ಬಚ್ಚಿಟ್ಟಿದ್ದರು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಪರಿಕರವನ್ನು ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ತಪ್ಪಿಸಿಕೊಂಡ ನಾಲ್ವರ ಬಂಧನಕ್ಕೆ ಬಲೆ ಬೀಸಿದ್ದಾರೆ.   ಘಟನೆ ವಿವರ: ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ, ಹಾಗು ಹುಣಸೂರು ವನ್ಯಜೀವಿ ವಲಯ ವ್ಯಾಪ್ತಿಯ ನೇಗತ್ತೂರಿನ ಜೋಳದ ಹೊಲದಲ್ಲಿ, ಅಕ್ರಮವಾಗಿ ಕಾಡು ಪ್ರಾಣಿ ಮಾಂಸ ಸಂಗ್ರಹಿಸಿಟ್ಟಿದ್ದಾರೆಂದು ಖಚಿತ ಮಾಹಿತಿ ಬಂದಿತ್ತು. ಈ ಮೇರೆಗೆ ಅರಣ್ಯ …

Read More »

ಆಗಸ್ಟ್ 1ರಿಂದ ಪ್ರತಿ ಲೀಟರ್ ನಂದಿನಿ ಹಾಲಿನ ದರ 3 ರೂ. ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಿದರು. ಪ್ರತಿ ಲೀಟರ್ ಹಾಲಿಗೆ ಕನಿಷ್ಠ ಮೂರು ರೂ. ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. ಆಗಸ್ಟ್ ಒಂದರಿಂದ ಜಾರಿಯಾಗುವಂತೆ ಹಾಲಿನ ದರ ಹೆಚ್ಚಳ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಜೊತೆ ಸಿಎಂ ಸಭೆಕಳೆದ ತಿಂಗಳು ಕೆಎಂಎಫ್ ಅಧ್ಯಕ್ಷರಾಗಿ ಶಾಸಕ ಭೀಮಾ ನಾಯಕ್ ಆಯ್ಕೆಯಾಗಿದ್ದು, ಅಂದೇ …

Read More »

ಪ್ರಯಾಣಿಕರ ಅನುಕೂಲಕ್ಕಾಗಿ ಹುಬ್ಬಳ್ಳಿ – ಗದಗ ನಡುವೆ ವೋಲ್ವೊ ಬಸ್

ಹುಬ್ಬಳ್ಳಿ: ಹುಬ್ಬಳ್ಳಿ ಹಾಗೂ ಗದಗ ನಡುವೆ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಮತ್ತಷ್ಟು ಆರಾಮದಾಯಕ ಸಾರಿಗೆ ಸೌಲಭ್ಯ ಕಲ್ಪಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮುಂದಾಗಿದೆ. ಹುಬ್ಬಳ್ಳಿ ಮತ್ತು ಗದಗ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲಕ್ಕಾಗಿ ಕಲ್ಪಿಸುವ ನಿಟ್ಟಿನಲ್ಲಿ ವೋಲ್ವೊ ಎಸಿ ಬಸ್​ಗಳನ್ನು ಆರಂಭಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆ ತಿಳಿಸಿದೆ. ಹುಬ್ಬಳ್ಳಿ ಹಾಗೂ ಗದಗ ಭಾಗದ ಸಾರ್ವಜನಿಕರ ಬೇಡಿಕೆಯ ಮೇರೆಗೆ ಹುಬ್ಬಳ್ಳಿ- ಗದಗ ನಡುವೆ ತಡೆ …

Read More »