Breaking News

ರಾಷ್ಟ್ರೀಯ

ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಟಿ.ನರಸೀಪುರ ಪೊಲೀಸರು ಬಂಧಿಸಿದ್ದಾರೆ.

ಮೈಸೂರು: ಟಿ.ನರಸೀಪುರದಲ್ಲಿ ನಡೆದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಟಿ.ನರಸೀಪುರ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಸಂಜೆ ಟಿ.ನರಸೀಪುರ ಹೊರವಲಯದಲ್ಲಿ ಯುವ ಬ್ರಿಗೇಡ್​ನ ಸಕ್ರಿಯ ಸದಸ್ಯ ವೇಣುಗೋಪಾಲ್ ನಾಯಕ್ ಎಂಬುವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಟಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಆರೋಪಿಗಳ ಬಂಧನಕ್ಕೆ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಈ ತಂಡ ಸೋಮವಾರ ಬೆಳಗ್ಗೆ ಪ್ರಮುಖ ಆರೋಪಿಗಳಾದ ಮಣಿಕಂಠ ಹಾಗೂ ಸಂದೇಶ್ …

Read More »

ಗೋ ಹತ್ಯೆ ನಿಷೇಧ ಕಾಯ್ದೆ ತರಬೇಕಾ ಬೇಡವಾ ಎಂಬ ವಿಷಯವನ್ನ ರೈತರಿಗೆ ಬಿಟ್ಟುಬಿಡಿ ಎಂದು ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್

ಹಾವೇರಿ: ಗೋ ಹತ್ಯೆ ನಿಷೇಧ ಕಾಯ್ದೆ ತರಬೇಕಾ ಬೇಡವಾ ಎಂಬ ವಿಷಯವನ್ನ ರೈತರಿಗೆ ಬಿಟ್ಟುಬಿಡಿ ಎಂದು ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರೈತರನ್ನ ಮನೆಹಾಳರನ್ನಾಗಿ ಮಾಡುವ ಕಾನೂನು ಇದ್ದರೇನು? ಬಿಟ್ಟರೇನು? ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ರೀತಿಯ ಗೋ ಹತ್ಯೆ ನಿಷೇಧ ಕಾನೂನು ಮಾಡುವ ಸರ್ಕಾರಗಳಿಗೆ, ವ್ಯಕ್ತಿಗಳಿಗೆ ಸಾಮಾನ್ಯ ಜ್ಞಾನ ಇರಬೇಕು. ಯಾವ ಹಸು ಗೋಶಾಲೆಗೆ ಹೋಗಬೇಕು, ಯಾವ ಹಸು ಕಸಾಯಿಖಾನೆಗೆ ಹೋಗಬೇಕು ಎನ್ನುವ …

Read More »

ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆ, ಗೂಂಡಾಗಿರಿ, ದರೋಡೆ :ನಳಿನ್​ ಕುಮಾರ್ ಕಟೀಲ್

  ಬೆಳಗಾವಿ: ಸಿದ್ದರಾಮಯ್ಯ ಸರ್ಕಾರ ಇದ್ದಾಗ ನಿರಂತರ ಹತ್ಯೆಗಳು, ಗೂಂಡಾಗಿರಿ ರಾಜಕಾರಣ, ದರೋಡೆ ನಡೆಯುತ್ತಿತ್ತು. ಹಿಂದಿನ ಅವರ ಸರ್ಕಾರದ ಅವಧಿಯಲ್ಲಿ 24 ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು. ಯಾವಾಗ ಕಾಂಗ್ರೆಸ್ ಸರ್ಕಾರ ಬರುತ್ತೊ ಆಗ ಇಂತಹ ಪ್ರಕರಣ ವೈಭವಿಕರೀಸುತ್ತವೆ ಮತ್ತು ರಾರಾಜಿಸುತ್ತವೆ.‌ ಇಂತಹ ಕೊಲೆಗಡುಕರು, ದಂಗೆಕೋರರನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Read More »

ಕೇಂದ್ರ ಸರ್ಕಾರ ಅಂಗನವಾಡಿ ಶಿಕ್ಷಕಿಯರಿಗೆ ನೀಡಿದ್ದ ಮೊಬೈಲ್ ಫೋನ್ಗಳನ್ನು ಶಿಕ್ಷಕಿಯರು ವಾಪಸ್ ನೀಡುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಕೇಂದ್ರ ಸರ್ಕಾರ ಅಂಗನವಾಡಿ ಶಿಕ್ಷಕಿಯರಿಗೆ ನೀಡಿದ್ದ ಮೊಬೈಲ್ ಫೋನ್ಗಳನ್ನು ಶಿಕ್ಷಕಿಯರು ವಾಪಸ್ ನೀಡುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಕೇಂದ್ರ ಸರ್ಕಾರ ಅಂಗನವಾಡಿ ಶಿಕ್ಷಕಿಯರಿಗೆ ಕಳಪೆ ಗುಣಮಟ್ಟದ ಮೊಬೈಲ್ಗಳನ್ನು ನೀಡಿದೆ. ಮೊಬೈಲ್ಗಳು ಪದೇ ಪದೇ ರಿಪೇರಿ ಬರುತ್ತಿದ್ದು, ಸ್ವಂತ ಖರ್ಚಿನಲ್ಲಿ ಮೊಬೈಲ್ ರಿಪೇರಿ ಮಾಡಿಸಿಕೊಳ್ಳಲಾಗುತ್ತಿದೆ. ಕೇವಲ ನಮ್ಮ ಇಲಾಖೆಗೆ ನೀಡಿದ ಕೆಲಸವನ್ನು ಮೊಬೈಲ್ನಲ್ಲಿ ಮಾಡಲು ಕೊಟ್ಟಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ. ಆದರೆ, ಬೇರೆ ಬೇರೆ ಇಲಾಖೆಗಳ ಕೆಲಸವನ್ನೂ ಇದೇ ಮೊಬೈಲ್ನಲ್ಲಿ ಮಾಡಲು …

Read More »

ಪುಡಿ ರೌಡಿಗಳ ಗುಂಪೊಂದು ವ್ಯಕ್ತಿ ಓರ್ವನಿಗೆ ಚಾಕುವಿನಿಂದ ಮನಬಂದಂತೆ ಹಲ್ಲೆ

ಪುಡಿ ರೌಡಿಗಳ ಗುಂಪೊಂದು ವ್ಯಕ್ತಿ ಓರ್ವನಿಗೆ ಚಾಕುವಿನಿಂದ ಮನಬಂದಂತೆ ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಗರದ ಇಸ್ಲಾಂಪೂರ ರಸ್ತೆಯ ಮಸೀದಿ ಹತ್ತಿರದ ಸಿದೀಕ್ ಕಿನಾಲ್ ಬಳಿ ನಡೆದಿದೆ. ಚಾಕು ಇರಿತಕೊಳಗಾದ ವ್ಯಕ್ತಿ ಖಾದರ ಭಾಷಾ ಔದರಿ (೨೬) ಎಂಬಾತನೇ ಸಾವನ್ನಪ್ಪಿದ್ದಾನೆ.‌ ಹಳೇ ದ್ವೇಷದ ಹಿನ್ನಲೆಯಲ್ಲಿ ಉಮರೆಜ್ ಹಾಗೂ ಅವೇಜುಲ್ಲಾ ಎಂಬ ಆರೋಪಿಗಳ ಗುಂಪೊಂದು ಬರ್ಬರವಾಗಿ ಚಾಕು ಇರಿತ ಮಾಡಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡ ಖಾದರಸಾಬ ಔದರಿಯನ್ನು …

Read More »

ವಿಧಾನಸಭೆ ಕಲಾಪದಲ್ಲಿ ನೀರಾವರಿ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು: ತೀರ್ಥಹಳ್ಳಿಯಲ್ಲಿ 70 ಕಾಮಗಾರಿ ಆಗಿದ್ದು, ಹೆಚ್ಚಿನವು ಪ್ರಗತಿಯಲ್ಲಿವೆ. ಆದಷ್ಟು ಬೇಗ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತೇವೆ ಎಂದು ಸಣ್ಣ ನೀರಾವರಿ ಸಚಿವ ಎನ್‌.ಎಸ್‌. ಭೋಸರಾಜ್‌ ತಿಳಿಸಿದರು. ಆರಗ ಜ್ಞಾನೇಂದ್ರ ಸಣ್ಣ ನೀರಾವರಿ ಸಚಿವರಿಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಸದ್ಯ 26 ಕಾಮಗಾರಿಗಳು ನಡೆಯುತ್ತಿವೆ. ಅದನ್ನು ಆದಷ್ಟು ಬೇಗ ಪೂರ್ಣಗೊಳಿಸುತ್ತೇವೆ. ಗುತ್ತಿಗೆದಾರರಿಗೆ ಸಮರ್ಪಕವಾಗಿ ಆದ್ಯತೆ ಮೇರೆಗೆ ಹಣ ಸಂದಾಯ ಮಾಡುತ್ತಿದ್ದೇವೆ. ಹಣಕಾಸು ವ್ಯವಸ್ಥೆ ಆಗುತ್ತಿದ್ದಂತೆ ಸಂದಾಯ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಕೆಲಸ ವಿಳಂಬ ಆಗುವುದಿಲ್ಲ. …

Read More »

ನಗರದಲ್ಲಿ ಇಂದು ಬೆಳಗ್ಗೆ ಗುಂಡಿನ ಸದ್ದು

ಬೆಂಗಳೂರು: ನಗರದಲ್ಲಿ ಇಂದು ಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಸದಾಶಿವನಗರದ ಅರಮನೆ ಬಳಿಯ ನಿರ್ಜನ ಪ್ರದೇಶದಲ್ಲಿ ದರೋಡೆಕೋರ ಯಾಸರ್ (26) ಎಂಬಾತನ ಕಾಲಿಗೆ ಶೇಷಾದ್ರಿಪುರಂ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಸುಲ್ತಾನ್ ಪಾಳ್ಯದ ಭುವನೇಶ್ವರಿ ನಗರದ ನಿವಾಸಿಯಾಗಿರುವ ಈತನ ವಿರುದ್ಧ ಸುಲಿಗೆ, ರಾಬರಿಗಳಂತಹ 7ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇಂದು ಬೆಳಗ್ಗೆ ಕಾರ್ಯಾಚರಣೆಯಲ್ಲಿ ಪೊಲೀಸರ ಮೇಲೆ ದಾಳಿಗೆ ಮುಂದಾದಾಗ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಶೇಷಾದ್ರಿಪುರಂ …

Read More »

ಇಂದು ಜುಲೈ 11. ವಿಶ್ವ ಜನಸಂಖ್ಯಾ ದಿನ

ಇಂದು ಜುಲೈ 11. ವಿಶ್ವ ಜನಸಂಖ್ಯಾ ದಿನ. ಹೆಚ್ಚುತ್ತಿರುವ ಜನಸಂಖ್ಯೆಯ ಕುರಿತು ಅರಿವು ಮೂಡಿಸುವುದು ಈ ದಿನದ ಗುರಿ. ಅಭಿವೃದ್ಧಿಯ ಪಥದಲ್ಲಿ ವೇಗವಾಗಿ ಸಾಗುತ್ತಿರುವ ಭಾರತ ಜನಸಂಖ್ಯೆಯಲ್ಲಿ ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ. ಪ್ರಸ್ತುತ ದೇಶದಜನಸಂಖ್ಯೆ ವಿಶ್ವಸಂಸ್ಥೆಯ ದತ್ತಾಂಶದ ವರ್ಲ್ಡ್‌ಮೀಟರ್ ಪ್ರಕಾರ 1.4 ಶತಕೋಟಿ. ಕೇವಲ ಒಂದು ರಾಷ್ಟ್ರ ಇಷ್ಟರಮಟ್ಟಿಗೆ ಜನಸಂಖ್ಯೆ ಹೊಂದಿದೆ ಎಂದಾದರೆ ವಿಶ್ವದ ಜನಸಂಖ್ಯೆ ಎಷ್ಟು ಗೊತ್ತೇ? ಪ್ರಪಂಚದಲ್ಲಿ ಒಟ್ಟು 195 ದೇಶಗಳು ವಿಶ್ವಸಂಸ್ಥೆಯ ಮಾನ್ಯತೆ ಪಡೆದಿವೆ. 1985ರಲ್ಲಿ …

Read More »

ಲೋಕ ಅದಾಲತ್‌ನಲ್ಲಿ ದಾಖಲೆಯ 34.76 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿ ಆದೇಶಿ

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಜ್ಯಾದ್ಯಂತ ನಡೆಸಲಾದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ದಾಖಲೆಯ 34.76 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿ ಆದೇಶಿಸಲಾಗಿದೆ. ಈ ಸಂಬಂಧ ನಡೆದ ಮಾಧ್ಯಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹೈಕೋರ್ಟ್ ನ್ಯಾಯಮೂರ್ತಿ ಜಿ.ನರೇಂದರ್ ಮಾಹಿತಿ ನೀಡಿದರು. ಹೈಕೋರ್ಟ್‌ನ ಬೆಂಗಳೂರು ಪ್ರಧಾನಪೀಠ, ಧಾರವಾಡ ಮತ್ತು …

Read More »

ಸಾಂಸ್ಕೃತಿಕ ಪರಂಪರೆ ಭೂತಕಾಲದ ಆಧಾರ ಸ್ತಂಭ:ಪ್ರಹ್ಲಾದ್​ ಜೋಶಿ

ವಿಜಯನಗರ: ಸಂಸ್ಕೃತಿ ಎಂಬುದು ಕೇವಲ ಗುರುತಾಗದೇ ಜಾಗತಿಕ ಸಾಂಗತ್ಯವಾಗಿ ಮಾರ್ಪಡಿಸಿಕೊಳ್ಳಲು ಜಿ-20 ಸಭೆ ಮಾರ್ಗವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು. ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಆರಂಭಗೊಂಡ 3ನೇ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ತಂಡದ(ಸಿಡಬ್ಲ್ಯೂಜಿ) ಸಭೆಯನ್ನು ಇಂದು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಸಭೆಯನ್ನು ಉದ್ಘಾಟಿಸಿದ ಪ್ರಹ್ಲಾದ್​ ಜೋಶಿನಾಲ್ಕು ಪ್ರಮುಖ ಆದ್ಯತೆಗಳಾದ ಆಯಾ ದೇಶಗಳ ಕಲಾಕೃತಿಗಳನ್ನು ಮೂಲ ಸ್ಥಾನಕ್ಕೆ …

Read More »