Breaking News

ರಾಷ್ಟ್ರೀಯ

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ.

ವಿಶಾಖಪಟ್ಟಣಂ( ಆಂಧ್ರಪ್ರದೇಶ) : ಆತ ಬಾಲಕಿ ಓದುತ್ತಿದ್ದ ಶಾಲೆಯಲ್ಲಿ ಅಟೆಂಡರ್​. ಒಂದೇ ಅಪಾರ್ಟ್​ಮೆಂಟ್​ನ ನಿವಾಸಿ. ವಿದ್ಯಾರ್ಥಿನಿ ನೀಡಿದ ಸಲುಗೆಯನ್ನು ದುರುಪಯೋಗಪಡಿಸಿಕೊಂಡು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವಿಡಿಯೋ ಮಾಡಿ ತನ್ನೊಂದಿಗೆ ಸಹಕರಿಸದಿದ್ದರೆ, ಹರಿಬಿಡುವ ಬೆದರಿಕೆ ಹಾಕಿ ತನ್ನ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ. ಕೃತ್ಯ ಇದೀಗ ಬೆಳಕಿಗೆ ಬಂದಿದ್ದು, ಕೀಚಕ ಸತ್ಯರಾವ್​ ಮತ್ತು ಆತನ ನಾಲ್ವರು ಸ್ನೇಹಿತರನ್ನ ಬಂಧಿಸಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಆರೋಪಿ …

Read More »

ಧಾರವಾಡದ ಐವರು ತಮ್ಮದೇ ಸ್ವಂತ ಹಣದಲ್ಲಿಹೆಲಿಕ್ಯಾಪ್ಟರ್​ ಮೂಲಕ ಶ್ರೀನಗರ ತಲುಪಿದ ಧಾರವಾಡದ ಯಾತ್ರಿಗಳು!

ಧಾರವಾಡ : ನಿರಂತರ ಮಳೆಯಾಗುತ್ತಿರುವ ಪರಿಣಾಮ ಜಮ್ಮು ಕಾಶ್ಮೀರದ ಅಮರನಾಥ ಮಾರ್ಗ ಮಧ್ಯೆ ಗುಡ್ಡಕುಸಿತ ಉಂಟಾಗಿ ಅಮರನಾಥದಲ್ಲಿ ಧಾರವಾಡದ ಐವರು ತಮ್ಮದೇ ಸ್ವಂತ ಹಣದಲ್ಲಿ ಶ್ರೀನಗರ ತಲುಪಿದ್ದಾರೆ. ಪಂಚತಾರಣಿ ಬಳಿ ಸಿಲುಕಿದ್ದ ಐವರು ಧಾರವಾಡ ಯಾತ್ರಿಗಳು ಸುರಕ್ಷಿತವಾಗಿ ಶ್ರೀನಗರ ತಲುಪಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಟೆಂಟ್‌ನಲ್ಲಿ ವಾಸವಾಗಿದ್ದ ಯಾತ್ರಿಗಳು ಸರ್ಕಾರದಿಂದ ಯಾವುದೇ ಸಹಾಯ ಸಿಗದ ಹಿನ್ನೆಲೆ ಹೆಲಿಕ್ಯಾಪ್ಟರ್ ಮೂಲಕ ಶ್ರೀನಗರಕ್ಕೆ ಪ್ರಯಾಣಿಸಿದ್ದಾರೆ. ಪ್ರತಿಯೊಬ್ಬರಿಗೆ 4200ರೂ. ನೀಡಿ ಹೆಲಿಕ್ಯಾಪ್ಟರ್​ನಲ್ಲಿ ಪ್ರಯಾಣಿಸಿ ಸದ್ಯ ಐವರು …

Read More »

ಜೈನ ಮುನಿಗಳ ಹತ್ಯೆ ಸಿಬಿಐ ತನಿಖೆಗೆ ವಹಿಸುವಂತೆ ಬಿಜೆಪಿ ಪಟ್ಟು

ಬೆಂಗಳೂರು: ಜೈನ ಮುನಿಗಳ ಹತ್ಯೆ ಕೃತ್ಯವನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಉತ್ತಮ ಅಧಿಕಾರಿಗಳ ತಂಡವನ್ನು ತನಿಖೆಗೆ ಒದಗಿಸಲಿದ್ದೇವೆ. ಘಟನೆಯಲ್ಲಿ ಭಾಗಿಯಾದ ಯಾರೂ ನಮ್ಮ ಸರ್ಕಾರದಿಂದ ರಕ್ಷಣೆ ಪಡೆಯಲು ಸಾಧ್ಯವಿಲ್ಲ. ನಮ್ಮ ಮೇಲೆ ವಿಶ್ವಾಸ ಇಟ್ಟು ಸಹಕಾರ ನೀಡಿ, ನಿಮ್ಮ ಅವಧಿಯ ಪೊಲೀಸರೇ ಈಗಲೂ ಇದ್ದಾರೆ. ನಂಬಿಕೆ ಇಡಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಜೈನ ಮುನಿಗಳ ಹತ್ಯೆ ವಿಷಯದ ಚರ್ಚೆಗೆ …

Read More »

ವಿಧಾನಸೌಧದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್​ನಲ್ಲಿ ಚಾಕು ಪತ್ತೆ

ಬೆಂಗಳೂರು: ಇತ್ತೀಚೆಗೆ ವ್ಯಕ್ತಿಯೊಬ್ಬರು ಅಕ್ರಮವಾಗಿ ಸದನ ಪ್ರವೇಶಿಸಿದ ಘಟನೆ ನಡೆದಿತ್ತು. ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಆತಂಕಕಾರಿ ಘಟನೆ ವಿಧಾನಸೌಧದ ಆವರಣದಲ್ಲಿ ನಡೆದಿದೆ. ವಿಧಾನಸೌಧದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್​ನಲ್ಲಿ ಚಾಕು ಪತ್ತೆಯಾಗಿದೆ. ತಿಪ್ಪೇರುದ್ರಪ್ಪ ಎಂಬುವರು ಸದನದೊಳಗೆ ಅಕ್ರಮವಾಗಿ ಪ್ರವೇಶಿಸಿ ಭದ್ರತಾ ಲೋಪವಾದ ಹಿನ್ನೆಲೆಯಲ್ಲಿ ಇದೀಗ ವಿಧಾನಸೌಧದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ವಿಧಾನಸೌಧಕ್ಕೆ ಬರುವ ಎಲ್ಲರನ್ನೂ ತೀವ್ರವಾಗಿ ತಪಾಸಣೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್​ನಲ್ಲಿ ಚಾಕು ಪತ್ತೆಯಾಗಿದೆ. …

Read More »

ಎಂಪಿ ಎಲೆಕ್ಷನ್​​​​ವರೆಗೂ ಕಾದು ನೋಡೋಣ.. ವಿಪಕ್ಷದವರ ಟೀಕೆಗೆ ಮಹತ್ವ ಕೊಡಬೇಕಿಲ್ಲ: ಸತೀಶ್​ ಜಾರಕಿಹೊಳಿ

ಬೆಳಗಾವಿ: ಈ ಬಜೆಟ್ ಪ್ರಣಾಳಿಕೆ ಬಜೆಟ್ ಎಂದು ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿರುವ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್​ ಜಾರಕಿಹೊಳಿ, ಅವರದ್ದು ಹಿಂದಿನ ಬಜೆಟ್ ಹಾಗೇ ಆಗಿದ್ದರೆ,‌ ನಮ್ಮದು ಹಾಗೇ ಅಂದುಕೊಳ್ಳಲಿ ಎಂದಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ವಿಕ್ಷಪದವರಿಂದ ಟೀಕೆ ಸ್ವಾಭಾವಿಕ. ಆದರೆ, ಬಜೆಟ್ ಬಗ್ಗೆ ಜನ ಸಾಮಾನ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ ಎಂದರು. ರಾಜಕೀಯ ಮಾಡುವುದಕ್ಕಾಗಿ ವಿಪಕ್ಷದವರು …

Read More »

ಜುಲೈ ಅಂತ್ಯದೊಳಗೆ ಮಳೆಯಾಗುವ ಮುನ್ಸೂಚನೆ: ಕೃಷ್ಣ ಬೈರೇಗೌಡ

ಕಾರವಾರ: ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದೆ. ಜುಲೈ ಅಂತ್ಯದೊಳಗೆ ಬಹುತೇಕ ಕಡೆ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸದ್ಯಕ್ಕೆ ಮೋಡ ಬಿತ್ತನೆ ಮಾಡುವ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಉತ್ತರಕನ್ನಡದ ಕುಮಟಾದಲ್ಲಿ ನೆರೆಪೀಡಿತ ಪ್ರದೇಶಗಳ ಪರಿಶೀಲನೆ ಹಾಗೂ ಬೆಟ್ಕುಳಿ ಗ್ರಾಮದಲ್ಲಿ ನೆರೆಗೆ ಮೃತಪಟ್ಟ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಮಾತನಾಡಿದ ಅವರು, ಕಾರವಾರ, ಬೆಳಗಾವಿ ಭಾಗದಲ್ಲಿ ಮಳೆಯಾಗಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಇನ್ನೂ ಮಳೆಯಾಗಿಲ್ಲ. …

Read More »

ಆನ್​​​ಲೈನ್ ಬೆಟ್ಟಿಂಗ್ ಗೀಳು: ಅಣ್ಣನ ಮನೆಗೆ ಕನ್ನ ಹಾಕಿದ ತಮ್ಮನ ಬಂಧನ

ಬೆಂಗಳೂರು: ಆನ್ ಲೈನ್ ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದು ಅಣ್ಣನ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ತಮ್ಮನನ್ನ ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿರುವ ಬಗ್ಗೆ ಮೀಜಾನ್ ಎಂಬುವರು ಜುಲೈ 4ರಂದು ನೀಡಿದ ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ ತಮ್ಮನೇ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಮೊಹಮ್ಮದ್ ಪರ್ವೀನ್ (22) ಎಂಬುವನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಸೋಮೇಶ್ವರ ನಗರದಲ್ಲಿ ದೂರುದಾರ ಮಿಜಾನ್ ವಾಸವಾಗಿದ್ದ. ಈತನೊಂದಿಗೆ ತಾಯಿ – ತಮ್ಮ …

Read More »

ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ ವಿಧಿವಶರಾಗಿದ್ದಾರೆ.

ಹುಬ್ಬಳ್ಳಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ (76) ಅನಾರೋಗ್ಯದಿಂದ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು. ಪುತ್ರಿಯ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು ಎನ್ನಲಾಗಿದೆ. ಮೃತದೇಹವನ್ನು ಸಂಜೆ ಅಥವಾ ನಾಳೆ ಬೆಳಿಗ್ಗೆ ಕಲಘಟಗಿಗೆ ತರುವ ಸಾಧ್ಯತೆ ಇದೆ. ಸಿ.ಎಂ.ನಿಂಬಣ್ಣವರ್​ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ದಾಖಲಿಸಿದ್ದರು. ಮಾಜಿ ಶಾಸಕರ ಅಗಲಿಕೆಗೆ ರಾಜಕೀಯ ಮುಖಂಡರು, ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ‌.

Read More »

ರಾಜ್ಯದ ಅಮರನಾಥ ಯಾತ್ರಿಕರು ಸುರಕ್ಷಿತವಾಗಿದ್ದಾರೆ: H.K. ಪಾಟೀಲ್

ಗದಗ: ಹವಾಮಾನ ವೈಪರೀತ್ಯ ಕಾರಣ ಅಮರನಾಥ ಯಾತ್ರೆಗೆ ತೆರಳಿದ್ದ 300 ಜನ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ನಿನ್ನೆ ರಾತ್ರಿ ಹವಾಮಾನ ವೈಪರೀತ್ಯ ಹಾಗೂ ಅತಿಯಾದ ಚಳಿಯಿಂದಾಗಿ ಸಮಸ್ಯೆಯಾಗಿತ್ತು. ಅಮರನಾಥ ದೇವಸ್ಥಾನದ ಆಡಳಿತ ಮಂಡಳಿ, ಮಿಲಿಟರಿ ಅಧಿಕಾರಿಗಳು ಎಲ್ಲರಿಗೂ ಅಗತ್ಯ ನೆರವನ್ನು ನೀಡಿದ್ದು, ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಹೇಳಿದರು. ಈ ಬಗ್ಗೆ ನಗರದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಹವಾಮಾನ ವೈಪರೀತ್ಯ ಹಾಗೂ ಗುಡ್ಡ ಕುಸಿತದಿಂದಾಗಿ …

Read More »

ಹಾಲಿನ ದರ ಏರಿಕೆಯ ಸುಳಿವು ನೀಡಿದ ಸಚಿವ K.N ರಾಜಣ್ಣ

ಮೈಸೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಸಹಕಾರ ಸಚಿವ K. N ರಾಜಣ್ಣ ಹಾಲಿನ ದರ ಏರಿಕೆಯ ಸುಳಿವು ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸಲು ಚಿಂತನೆ ನಡೆಸಲಾಗುತ್ತಿದೆ. ಹಾಲಿನ ದರ ಎಂದ ಕೂಡಲೇ ಎಲ್ಲರೂ ಗಾಬರಿಯಾಗುತ್ತಾರೆ ಎಂದರು. ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸುವ ಅನಿವಾರ್ಯತೆ ಇದೆ. ಈ ಬಗ್ಗೆ ಸದ್ಯದಲ್ಲೇ ಅಧಿಕೃತವಾಗಿ ಮಾಹಿತಿ ನೀಡಲಿದ್ದೇವೆ ಎಂದರು. ಇನ್ನೂ,. ನಂದಿನಿ ಹಾಲಿನ ದರವನ್ನು …

Read More »