ಬೆಳಗಾವಿ: ಇಲ್ಲಿನ ಹಿಂಡಲಗಾ ಜೈಲಿನಿಂದ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕೈದಿ ಜಯೇಶ್ ಪೂಜಾರಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಬೆದರಿಕೆಗೆ ಪ್ರಚೋದನೆ ನೀಡಿದ ಆರೋಪದಡಿ ಲಷ್ಕರ್ ಇ ತೋಯ್ಬಾ ಸಂಘಟನೆ ಜೊತೆ ನಂಟು ಹೊಂದಿದ್ದ ಶಂಕಿತ ಉಗ್ರ ಅಫ್ಸರ್ ಪಾಷಾನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ಹಿಂಡಲಗಾ ಜೈಲಿಗೆ ಆಗಮಿಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಅಫ್ಸರ್ ಪಾಷಾನನ್ನು …
Read More »ಸಂತೋಷ್ ಆತ್ಮಹತ್ಯೆ ಪ್ರಕರಣ: ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಕ್ಲೀನ್ ಚಿಟ್
ಶಿವಮೊಗ್ಗ: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ಕೆಎಸ್ ಈಶ್ವರಪ್ಪರಿಗೆ ಕ್ಲೀನ್ ಚಿಟ್ ನೀಡಿದೆ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ದೇಶದ ಕೆಲಸ ಮಾಡಲು ಇಂದಿನ ನ್ಯಾಯಾಲಯದ ತೀರ್ಪು ಪ್ರೇರಣೆ ಕೊಟ್ಟಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಚೌಡೇಶ್ವರಿ ನನ್ನನ್ನು ಇವತ್ತು ನಿರ್ದೋಷಿ ಅಂತ ಹೇಳಿ ನ್ಯಾಯ ಕೊಟ್ಟಿದ್ದಾಳೆ. ನನ್ನಲ್ಲಿ ಮತ್ತಷ್ಟು ಆ ದೈವ ಭಕ್ತಿ ನನಗೆ ಹೆಚ್ಚಿಗೆ ಆಗಲು ಅವಕಾಶ ಆಯಿತು. ಆ ತಾಯಿಯ …
Read More »ಭೀಕರ ಪ್ರವಾಹ.. ಉತ್ತರ ಭಾರತಕ್ಕೆ ಬೈಕ್ ರೈಡ್ ಹೋಗಿದ್ದ ಕಾರವಾರದ ಯುವಕರು ಬದುಕಿ ಬಂದದ್ದೇ ಪವಾಡ!
ಕಾರವಾರ(ಉತ್ತರ ಕನ್ನಡ): ಬೈಕ್ ಏರಿ ಉತ್ತರಭಾರತ ಸುತ್ತುವ ಕನಸಿನೊಂದಿಗೆ ಕಾರವಾರದಿಂದ ತೆರಳಿದ್ದ ಸಾಹಸಿ ಯುವಕರ ತಂಡವೊಂದು ಹಿಮಾಚಲ ಪ್ರದೇಶದ ಬಳಿ ಸಂಭವಿಸಿದ ಪ್ರವಾಹದಿಂದ ಕೂದಲೆಳೆ ಅಂತರದಿಂದ ಪಾರಾಗಿದೆ. ಪ್ರಯಾಣದುದ್ದಕ್ಕೂ ಹಲವು ಅಡೆತಡೆಗಳನ್ನು ಎದುರಿಸಿ ಇದೀಗ ಸುರಕ್ಷಿತವಾಗಿ ಮರಳಿರುವ ಯುವಕರ ತಂಡ ತಮಗಾದ ಭಯಾನಕ ಅನುಭವ ಬಿಚ್ಚಿಟ್ಟಿದ್ದಾರೆ. ಈ ಕುರಿತು ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ. ಬೈಕ್ ಕ್ರೇಜ್ ಇರುವ ಬಹುತೇಕರಿಗೆ ದೂರದ ಊರುಗಳಿಗೆ ಪ್ರವಾಸ ಕೈಗೊಳ್ಳುವ ಹಂಬಲ ಕೂಡ ಇರುತ್ತದೆ. …
Read More »”ಜನರು ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು” : ಎಸ್.ಆರ್. ಹೀರೇಮಠ
ಮೈಸೂರು: ”ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಾಠ ಕಲಿಸಿದಂತೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಕೂಡಾ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು” ಎಂದು ಜನಾಂದೋಲನ ಮಹಾಮೈತ್ರಿ ಅಧ್ಯಕ್ಷ ಎಸ್. ಆರ್. ಹಿರೇಮಠ ಕೇಂದ್ರ ಸರ್ಕಾರದ ವಿರುದ್ಧ ಗರಂ ಆದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಹಾಗೂ ಸಂಘ ಪರಿವಾರದ ಶಕ್ತಿಗಳ ಡಬಲ್ ಎಂಜಿನ್ ಸರಕಾರವನ್ನು ಸೋಲಿಸುವ ಮೂಲಕ ಐತಿಹಾಸಿಕ ನಿರ್ಣಯ …
Read More »ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಿನಿಂದಲೇ ಸಿದ್ಧತೆ ಆರಂಭ
ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. ರಾಜ್ಯದಲ್ಲಿ ಈ ಬಾರಿ ಸುಮಾರು 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಪಕ್ಷ ಹೊಂದಿದೆ. ಹೆಚ್ಚಿನ ಕ್ಷೇತ್ರ ಗೆಲ್ಲುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರ ಮೇಲೆ ಹೆಚ್ಚಿನ ಒತ್ತಡ ಹಾಕಲು ಹೈಕಮಾಂಡ್ ಮುಂದಾಗಿದೆ. ಮುಖ್ಯಮಮತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಲೋಕಸಭೆ ಚುನಾವಣೆಯಲ್ಲಿ ತಮ್ಮ ಜಿಲ್ಲೆಯ ವ್ಯಾಪ್ತಿಯಲ್ಲಿನ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು …
Read More »ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ನೂತನ ಕಾನೂನು ತರುತ್ತೇವೆ: ಸಚಿವ ಹೆಚ್ ಕೆ ಪಾಟೀಲ್
ದಾವಣಗೆರೆ: ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ನೂತನ ಕಾನೂನು ತರುತ್ತೇವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು. ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠಕ್ಕೆ ಭೇಟಿ ನೀಡಿ ಪ್ರಸನ್ನಾನಂದ ಪುರಿ ಶ್ರೀಯವರನ್ನು ಭೇಟಿಯಾದ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ಕಾನೂನು ತರುತ್ತಿದ್ದೇವೆ. ಬಡವರ ಪ್ರಕರಣಗಳು ಕೋರ್ಟ್ನಲ್ಲಿ ವಿಳಂಭವಾಗುತ್ತಿವೆ. ಈ ಕೇಸ್ಗಳು ಅದಷ್ಟು ಬೇಗ ಇತ್ಯರ್ಥವಾಗಬೇಕು. ಹೀಗಾಗಿ ಅದರ ಬಗ್ಗೆ ಕಾನೂನು ತರಲು ಮುಂದಾಗಿದ್ದೇವೆ …
Read More »ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭ
ವಿಜಯಪುರ: ಖಾಲಿ ಖಾಲಿಯಾಗಿ ಕಾಣುತ್ತಿದ್ದ ಜಿಲ್ಲೆಯ ಜೀವಜಲ ಆಲಮಟ್ಟಿ ಜಲಾಶಯಕ್ಕೆ ಕೊನೆಗೂ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಪ್ರಸಕ್ತ ಸಾಲಿನಲ್ಲಿ ಇದೇ ಮೊದಲ ಬಾರಿ ಪ್ರಮಾಣದ ಒಳಹರಿವು ಆರಂಭವಾಗಿದೆ. ಡ್ಯಾಂನಲ್ಲಿ ನೀರಿಲ್ಲದಿರುವುದಕ್ಕೆ ಜನರು ಆತಂಕಗೊಂಡಿದ್ದರು. ಅದರಲ್ಲೂ ಮುಂಗಾರು ಆರಂಭವಾಗಿ ತಿಂಗಳು ಕಳೆದರೂ ಮಳೆಯಾಗದ ಹಿನ್ನೆಲೆಯಲ್ಲಿ ನದಿತೀರದ ಜನರು ಬರದ ಭೀತಿಯಲ್ಲಿದ್ದರು. ಆದ್ರೆ ಇದೀಗ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಾದ್ದರಿಂದ ಕೃಷ್ಣಾ ನದಿಗೆ ನೀರು ಹರಿದುಬರುತ್ತಿದೆ. ನದಿತೀರದ ಜನರ ಮುಖದಲ್ಲಿಯೂ ಮಂದಹಾಸ …
Read More »ಅಭಯ ಪಾಟೀಲ ಅವರ ಪ್ರಯತ್ನದಿಂದ ಸ್ಥಳೀಯ ಜನಪ್ರತಿನಿಧಿಗಳ ಅಭಿವೃದ್ಧಿ ನಿಧಿಯಿಂದ 90 ಲಕ್ಷ ರೂ.ವೆಚ್ಚದಲ್ಲಿ ಖರೀದಿಸಿದ ವಿವಿಧ ವಾಹನಗಳ ಉದ್ಘಾಟನಾ ಸಮಾರಂಭ
ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರ ಪ್ರಯತ್ನದಿಂದ ಸ್ಥಳೀಯ ಜನಪ್ರತಿನಿಧಿಗಳ ಅಭಿವೃದ್ಧಿ ನಿಧಿಯಿಂದ 90 ಲಕ್ಷ ರೂ.ವೆಚ್ಚದಲ್ಲಿ ಖರೀದಿಸಿದ ವಿವಿಧ ವಾಹನಗಳ ಉದ್ಘಾಟನಾ ಸಮಾರಂಭ ನಡೆಯಿತು. ಈ ವಾಹನಗಳನ್ನು ಮಚ್ಚೆ ನಗರ ಪಂಚಾಯಿತಿಗೆ ನೀಡಲಾಯಿತು 15ನೇ ಹಣಕಾಸು ಆಯೋಗ, ಸ್ವಚ್ಛ ಭಾರತ್ ಮಿಷನ್ ಮತ್ತು ರಾಜ್ಯ ಹಣಕಾಸು ಆಯೋಗದ ನಿಧಿಯಲ್ಲಿ ಶಾಸಕ ಅಭಯ ಪಾಟೀಲ ಅವರ ವಿಶೇಷ ಪ್ರಯತ್ನದಿಂದ ಮಚ್ಚೆ ನಗರ ಪಂಚಾಯಿತಿಗೆ ವಿವಿಧ ವಾಹನಗಳನ್ನು ಖರೀದಿಸಲಾಗಿದೆ. ಈ …
Read More »ಮೈಸೂರು – ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ಎಸೆತ..
ಚೆನ್ನೈ: ಮೈಸೂರು- ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕಲ್ಲು ಎಸೆದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಶುಕ್ರವಾರ ಮುಂಜಾನೆ 4.30ಕ್ಕೆ ಮೈಸೂರಿನಿಂದ ಚೆನ್ನೈಗೆ ಆಗಮಿಸಿದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪುರಚಿ ತಲೈವರ್ ಡಾ.ಎಂ.ಜಿ. ರಾಮಚಂದ್ರನ್ ಸೆಂಟ್ರಲ್ ರೈಲು ನಿಲ್ದಾಣ ತಲುಪಿದೆ. ಬೇಸಿನ್ ಬ್ರಿಡ್ಜ್ ರೈಲ್ವೇ ಯಾರ್ಡ್ ಅನ್ನು ದಾಟಿ ಸೆಂಟ್ರಲ್ ರೈಲು ನಿಲ್ದಾಣ ತಲುಪುವ ಮಾರ್ಗದಲ್ಲಿ ಅಪರಿಚಿತ ವ್ಯಕ್ತಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಕಲ್ಲು …
Read More »ಉಗ್ರ ಬಸಿತ್ ಅಹ್ಮದ್ ದಾರ್ ಬಗ್ಗೆ ಸುಳಿವು ನೀಡಿದವರೆಗೆ 10 ಲಕ್ಷ ರೂಪಾಯಿ ಬಹುಮಾನ:N.I.A
ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ನಿವಾಸಿ, ಉಗ್ರ ಬಸಿತ್ ಅಹ್ಮದ್ ದಾರ್ ಎಂಬಾತನ ಬಂಧನಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಬಸಿತ್ ದಾರ್ ಉಗ್ರ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (The Resistance Front – TRF)ನೊಂದಿಗೆ ನಂಟು ಹೊಂದಿದ್ದಾನೆ. ಈತನ ಬಂಧನಕ್ಕಾಗಿ ತನಿಖಾ ಸಂಸ್ಥೆ ಶೋಧ ಕಾರ್ಯ ನಡೆಸುತ್ತಿದೆ. ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ …
Read More »
Laxmi News 24×7