Breaking News

ರಾಷ್ಟ್ರೀಯ

ಬಿಜೆಪಿ ತಳಪಾಯವೇ ಕುಸಿದು ಹೋಗುತ್ತಿದೆ ಅದನ್ನು ಗಟ್ಟಿ ಮಾಡೋ ಕೆಲಸ ಆಗ್ತಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ ಹೇಳಿದರು.

ಬಿಜೆಪಿ ತಳಪಾಯವೇ ಕುಸಿದು ಹೋಗುತ್ತಿದೆ  ಅದನ್ನು ಗಟ್ಟಿ ಮಾಡೋ ಕೆಲಸ ಆಗ್ತಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ ಹೇಳಿದರು. ನಗರದಲ್ಲಿ ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯ ಅಡಿಪಾಯವೇ ಡಿಸ್ಟರ್ಬ್ ಆಗಿ ಕುಸಿದು ಹೋಗುತ್ತಿದೆ. ಇದು ಲೋಕಸಭೆ ಚುನಾವಣೆಯಲ್ಲಿ ಪರಿಣಾಮ ಬೀರತ್ತೆ . ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸತ್ತೆ ಎಂದರು. ನಾನು ಹಿಂದೆ ಹೇಳಿರೋದು ಎಲ್ಲವೂ ನಿಜ ಆಗ್ತಿದೆ ಎಂದ ಕಟೀಲು. ಬಿಜೆಪಿ ಸೋಲಿಗೆ ಕಾರಣ ಯಾರೂ …

Read More »

ಗೃಹಲಕ್ಷ್ಮಿ ಯೋಜನೆಗೆ ಜೂನ್ 27ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮೈಸೂರು: ಜೂನ್ 27ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಆ ಸಭೆಯಲ್ಲಿ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಲು ಸಿದ್ಧಪಡಿಸಲಾಗಿರುವ ಆಯಪ್​ಅನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ತೋರಿಸಿ ನಂತರ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದು ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಆಗಸ್ಟ್ 17ರ ನಂತರದಿಂದ ಫಲನಾಭವಿಗಳ ಹಣ …

Read More »

ಡಿಸೆಂಬರ್​ ವೇಳೆಗೆ ಬಿಬಿಎಂಪಿ ಚುನಾವಣೆ.. ವಾರ್ಡ್ ವಿಂಗಡಣೆ ಅಧಿಕಾರಿಗಳದ್ದೇ ಅಂತಿಮ ನಿರ್ಧಾರ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ನಡೆಯಲಿದೆ. 243 ವಾರ್ಡಗಳಿಗೂ ಚುನಾವಣೆ ಮಾಡುತ್ತೇವೆ. ನಾವು ರಾಜಕಾರಣ ಮಾಡುವುದಿಲ್ಲ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬಸವನಗುಡಿ, ಬುಲ್ ಟೆಂಪಲ್ ರಸ್ತೆಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮುನ್ನ ಬಿಬಿಎಂಪಿ ಚುನಾವಣೆ ಆಗಲಿದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮೇಯರ್ ಇಟ್ಟುಕೊಂಡೇ ಲೋಕಸಭೆ ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದರು. ಚುನಾವಣೆ ಬೇಗ …

Read More »

ಲಿಂಗಾಯತ ಒಳಪಂಗಡಗಳು ಒಟ್ಟಾಗಿ ಹೋದ್ರೆ ಮಾತ್ರ ಭವಿಷ್ಯ: ಶಾಸಕ ಲಕ್ಷ್ಮಣ ಸವದಿ

ಬೆಳಗಾವಿ: ಲಿಂಗಾಯತ ಒಳಪಂಗಡಗಳನ್ನು ಇಟ್ಟುಕೊಂಡು ನಾವು ಮುಂದುವರಿದರೆ ಮುಂದಿನ ದಿನಗಳಲ್ಲಿ ನಮಗೆಲ್ಲಾ ಒಳ್ಳೆಯ ದಿನಗಳಿವೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು. ನಗರದ ವೀರಶೈವ ಲಿಂಗಾಯತ ವಿದ್ಯಾರ್ಥಿ ವಸತಿ ನಿಲಯ ಆವರಣದಲ್ಲಿ ಶನಿವಾರ ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕ ಆಯೋಜಿಸಿದ್ದ ವಿಧಾನಸಭೆಗೆ ಆಯ್ಕೆಯಾದ ಶಾಸಕ, ಸಚಿವರಿಗೆ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು. ವೇದಿಕೆ‌ ಮೇಲೆ ಇದ್ದಾಗ ಮಾತ್ರ ನಾವೆಲ್ಲಾ ಒಂದು ಎನ್ನುವ ಚಿಂತನೆ …

Read More »

KSRTC’, ‘BMTC’ ಬಸ್ ಗಳಿಗೆ ಮುಗಿಬಿದ್ದ ಮಹಿಳೆಯರು : ವೋಲ್ವೋ ಬಸ್ ಗಳಿಗೆ ‘ಶಕ್ತಿ’ ತುಂಬಿದ ಪುರುಷರು

ಬೆಂಗಳೂರು : ಉಚಿತ ಬಸ್ ಪ್ರಯಾಣದ ಹಿನ್ನೆಲೆ ‘KSRTC’, ‘BMTC’ ಬಸ್ ಹತ್ತಲು ಮಹಿಳೆಯರು ಮುಗಿಬಿದ್ದಿದ್ದಾರೆ. ಈ ಹಿನ್ನೆಲೆ ಸರ್ಕಾರಿ ಬಸ್ ಗಳು ಮಹಿಳೆಯರಿಂದ ತುಂಬಿ ತುಳುಕುತ್ತಿದೆ. ಇದರಿಂದ ಬೇಸತ್ತ ಪುರುಷುರು ಬೆಂಗಳೂರಿನಲ್ಲಿ ವೋಲ್ವೋ ಬಸ್ ಗಳಿಗೆ ‘ಶಕ್ತಿ’ ತುಂಬಿದ್ದಾರೆ. ಹೌದು, ‘KSRTC’, ‘BMTC’ ಬಸ್ ಗಳು ರಶ್ ಇರುವ ಕಾರಣ ಪುರುಷರು ವೋಲ್ವೋ ಬಸ್ ಗೆ ಮುಗಿಬಿದ್ದಿದ್ದಾರೆ. ಕಳೆದ ಒಂದು ವಾರದಲ್ಲಿ ವೋಲ್ವೋ ಮತ್ತು ವಜ್ರ ಬಸ್ಗಳಲ್ಲಿ ಪ್ರಯಾಣಿಕರ …

Read More »

ಕಾಂಗ್ರೆಸ್ ಸುಳ್ಳು ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ ಬಂದಿದೆ: ಬಿ ಎಸ್ ಯಡಿಯೂರಪ್ಪ ಆರೋಪ

ತುಮಕೂರು: ಕಾಂಗ್ರೆಸ್ ಸುಳ್ಳು ಗ್ಯಾರಂಟಿ ಕೊಟ್ಟು, ಜನರಿಗೆ ಟೋಪಿ ಹಾಕಿ, ದ್ರೋಹ ಮಾಡಿ ಅಧಿಕಾರಕ್ಕೆ ಬಂದಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿ ಈಗ ಹಲವು ಷರತ್ತು ಹಾಕಿ ಮೋಸ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ. ಶುಕ್ರವಾರ ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ ದ್ರೋಹ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದೆ. ಸರ್ಕಾರದ ಮೋಸದ ವಿರುದ್ಧ ಸದನದ ಹೊರಗೆ ಒಳಗೆ ನಾವು ಹೋರಾಟ ಮಾಡುತ್ತೇವೆ ಎಂದರು. …

Read More »

ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯದಂತೆ ರಾಜ್ಯಪಾಲರಿಗೆ ಮನವಿ: ಪ್ರಮೋದ್ ಮುತಾಲಿಕ್

ಹಾಸನ: ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯದಂತೆ ರಾಜ್ಯಪಾಲರಿಗೆ ಒತ್ತಾಯ ಮಾಡುವ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.   ಶ್ರೀರಾಮಸೇನೆಯ ರಾಜ್ಯಕಾರಣಿ ಸಭೆಯ ನಂತರ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ಪಠ್ಯ ಪುಸ್ತಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಕೆಲ ವಿಷಯಗಳನ್ನು ವಾಪಸ್ ಪಡೆಯುತ್ತೇವೆ ಅಂದಿದ್ದಾರೆ. ಭಗತ್ ಸಿಂಗ್, ಸಾವರ್ಕರ್ ಸೇರಿದಂತೆ ಮೂರು ಪಾಠ ವಾಪಾಸ್ ತೆಗೆದುಕೊಳ್ಳುತ್ತೇವೆ ಅಂದ್ದಿದ್ದಾರೆ. ಸಾವರ್ಕರ್, ಭಗತ್ …

Read More »

ಗಗನಕ್ಕೇರಿದ ಕೋಳಿ ಮಾಂಸ ಬೆಲೆ, ಕೊಳ್ಳಲು ಹಿಂದೇಟು ಹಾಕ್ತಿದ್ದಾರೆ ಗ್ರಾಹಕರು, ಕಾರಣ..?

ದಾವಣಗೆರೆ: ದಾವಣಗೆರೆಯಲ್ಲಿ ಮಾಂಸ ಪ್ರಿಯರೇ ಹೆಚ್ಚು, ಅದರಲ್ಲೂ ಕೋಳಿ ಮಾಂಸವನ್ನು ಸೇವಿಸುವವರ ಸಂಖ್ಯೆ ಗಣನೀಯಾವಾಗಿದೆ. ಆದರೆ ಕೋಳಿ ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ದಾವಣಗೆರೆಯ 180ಕ್ಕೂ ಹೆಚ್ಚು ಚಿಕನ್ ಅಂಗಡಿಗಳಲ್ಲಿ ಬೆಲೆ ಏರಿಕೆ ಮಾಡಲಾಗಿದ್ದು, ಗ್ರಾಹಕರು ಕೋಳಿ ಮಾಂಸ ಕೊಳ್ಳಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣ ಆಗಿದೆ. ಬಿಸಿಲಿನ ತಾಪ ಹೆಚ್ಚಿದ್ದರಿಂದ ಕೋಳಿ ಸಾಕಣೆಗೆ ರೈತರಿಗೆ ಸವಾಲು ಎದುರಾಗಿದ್ದರಿಂದ ಕೋಳಿ ಸಾಕಣೆ ಕೇಂದ್ರಗಳಲ್ಲಿ ಕೋಳಿಗಳ ಸಂಖ್ಯೆ ಇಳಿಮುಖವಾಗಿದೆ. ಇದರಿಂದ …

Read More »

ಗಾಂಜಾ, ಮದ್ಯಸೇವನೆ ಚಟ.. 8 ಜನರನ್ನು ಹತ್ಯೆ ಮಾಡಿದ್ದ ಸೈಕೋ ಕಿಲ್ಲರ್​ ಬಂಧನ : ನಿಟ್ಟುಸಿರು ಬಿಟ್ಟ ಜನ

ಹೈದರಾಬಾದ್​ (ತೆಲಂಗಾಣ): ಹಣಕ್ಕಾಗಿ ಒಂದೇ ವಾರದಲ್ಲಿ ಮೂವರನ್ನು ಕೊಲೆ ಮಾಡಿದ್ದ ಸೈಕೋ ಕಿಲ್ಲರ್​ನನ್ನು ಹೈದರಾಬಾದ್ ಉಪನಗರ ಮೈಲಾರ್‌ದೇವಪಲ್ಲಿ ಪೊಲೀಸರು ಬಂಧಿಸಿದ್ದಾರೆ. ರಂಗಾರೆಡ್ಡಿ ಜಿಲ್ಲೆಯ ರಾಜೇಂದ್ರನಗರದ ಮಾಣಿಕ್ಯಮ್ಮ ಕಾಲೋನಿಯ ಬಗರಿ ಪ್ರವೀಣ್ ಬಂಧಿತ ಆರೋಪಿ. ಗಾಂಜಾ ಮತ್ತು ಮದ್ಯದ ಚಟಕ್ಕೆ ದಾಸನಾಗಿದ್ದ ಈತ ಅವುಗಳನ್ನು ಕೊಳ್ಳಲು ಹಣಕ್ಕಾಗಿ ಜನರನ್ನು ಹತ್ಯೆ ಮಾಡುತ್ತಿದ್ದ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಡಿಸಿಪಿ ಜಗದೀಶ್ವರ್ ಮಾಹಿತಿ ನೀಡಿದ್ದು, ಈತ ಇತರ ಪ್ರಕರಣಗಳಲ್ಲಿ ಶಾಮೀಲಾಗಿರುವ ​ಹಳೆಯ …

Read More »

ಈಗಿನ ಸಚಿವ, ಶಾಸಕರು ಕಮಿಷನ್ ಕೇಳಿದರೆ ಅದನ್ನೂ ಬಹಿರಂಗ ಪಡಿಸುತ್ತೇವೆ: ಕೆಂಪಣ್ಣ

ಬೆಂಗಳೂರು: ನಮ್ಮ ಸರ್ಕಾರದ ಅವಧಿಯಲ್ಲಿ ಕಮಿಷನ್ ದಂಧೆಗೆ ಸಂಪೂರ್ಣ ಕಡಿವಾಣ ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ …

Read More »