Breaking News

ರಾಷ್ಟ್ರೀಯ

ಸ್ಮಾರ್ಟ್ ಸಿಟಿ ಕಾಮಗಾರಿಯ ನಿರ್ಲಕ್ಷ್ಯ ವಿದ್ಯುತ್ ತಗುಲಿ ಹಸು ಕರು ಸಾವು

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ವಿದ್ಯುತ್ ಫೀಡರ್ ಪಿಲ್ಲರ್ ತಗಲಿ ಹಸು-ಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಅಕ್ಕಿಹೊಂಡದ ಬಳಿ ನಡೆದಿದೆ. ಸ್ಮಾರ್ಟ್ ಸಿಟಿ ಯೋಜನೆಗಳಿಂದಾಗಿ ಒಂದಲ್ಲಾ ಒಂದು ಯಡವಟ್ಟುಗಳು ಆಗುತ್ತಿವೆ ಎಂದು ಅಲ್ಲಿನ ಸಾರ್ವಜನಿಕರು ಆರೋಪಿಸಿದ್ದಾರೆ. ಅದರಂತೆ ಅಕ್ಕಿಹೊಂಡದಲ್ಲಿ ಕೂಡಾ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಸುತ್ತಿರುವವರ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳಿಂದ ಇಲ್ಲಿ ಸ್ಮಾರ್ಟ್ …

Read More »

ಕನ್ನಡ ಭಾಷಾ ಪದ ಪ್ರಯೋಗದ ಬಗ್ಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಯತ್ನಾಳ್ ಹಾಸ್ಯ

ಬೆಂಗಳೂರು: ವಿಧಾನಸಭೆಯ ಅಧ್ಯಕ್ಷ ಯು ಟಿ ಖಾದರ್ ಅವರ ಕನ್ನಡ ಭಾಷಾ ಪದ ಪ್ರಯೋಗದ ಬಗ್ಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಯತ್ನಾಳ್ ಹಾಸ್ಯ ಮಾಡಿದ್ದು, ಅದನ್ನು ಸಭಾಧ್ಯಕ್ಷರು ಸ್ಪರ್ಧಾತ್ಮಕವಾಗಿ ಪರಿಗಣಿಸಿದ ಪ್ರಸಂಗ ಇಂದು ನಡೆಯಿತು. ವಿಧಾನಸಭೆಯ ಉಪಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾದ ಮೇಲೆ ಅವರನ್ನು ಅಭಿನಂದಿಸುವ ಸಂದರ್ಭದಲ್ಲಿ ಸಭಾಧ್ಯಕ್ಷರು ಹಳ್ಳಿ ಎಂಬ ಪದವನ್ನು ಹಲ್ಲಿ ಎಂದು ಉಚ್ಛಾರಣೆ ಮಾಡಿದರು. ಅದನ್ನು ಬಸನಗೌಡ ಯತ್ನಾಳ್ ಉಲ್ಲೇಖಿಸಿ ಹಳ್ಳಿ, ಹಳ್ಳಿ ಎಂದು …

Read More »

ಧರಣಿ ಹಿಂಪಡೆದ ಬಿಜೆಪಿ; ಪರಿಷತ್​ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಆರಂಭ

ಬೆಂಗಳೂರು : ಗೋಹತ್ಯೆ ನಿಷೇಧ ಕಾಯ್ದೆ ಸಾಧಕ- ಬಾಧಕಗಳ ಕುರಿತು ನಾವು ನಮ್ಮಲ್ಲಿ ಚರ್ಚೆ ನಡೆಸಿದ್ದೇವೆ. ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸಚಿವ ಕೆ. ಆರ್ ವೆಂಕಟೇಶ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ರವಿಕುಮಾರ್ ಚರ್ಚೆಗೆ ಉತ್ತರಿಸಿದ ಸಚಿವರು, ನಾವು ಕಾಯ್ದೆ ವಿಚಾರದಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಒಂದೊಮ್ಮೆ ಸದಸ್ಯರ ಬಳಿ ಈ ವಿಚಾರಕ್ಕೆ ಸಂಬಂಧಿಸಿ ಮಾಹಿತಿ ಇದ್ದರೆ ಅವರು ಮಾಹಿತಿ ನೀಡಲಿ. ಕ್ರಮ ಕೈಗೊಳ್ಳುತ್ತೇವೆ ಎಂದರು. ಮತ್ತಷ್ಟು ಚರ್ಚೆಗೆ ಮುಂದಾದ …

Read More »

ಗ್ರಾಮ ಪಂಚಾಯತಿಯ ಸದಸ್ಯರ ಗೌರವಧನವನ್ನು ನುಂಗಿದ P.D.O.

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರ ಗ್ರಾಮ ಪಂಚಾಯತಿಯ ಪಿಡಿಓ ಸದಸ್ಯರ ಗೌರವಧನವನ್ನು ನುಂಗಿ ಹಾಕಿದ ಘಟನೆ ತಡವಾಗಿ ಬೆಳಕಿಗೆ ನಡೆದಿದೆ. ರಾಯಬಾಗ ತಾಲೂಕಿನ ಆಲಕನೂರ ಪಂಚಾಯತಿಯಲ್ಲಿ 28 ಸದಸ್ಯರು ಇದ್ದು ಪ್ರತಿ ಸದಸ್ಯರಿಗೆ ಗೌರವ ಧನ ಎಂದು ತಿಂಗಳಿಗೆ 1000=00 ರೂ ಕೊಡುತ್ತಾರೆ ಈಗ ತಿಂಗಳಿಗೆ 2000=OO ಗಳಿಗೆ ಏರಿಸಿದೆ. ಆದರೆ, ಪಂಚಾತಿಯು 12 ತಿಂಗಳುಗಳಿಂದ ಗೌರವಧನನ್ನು ನೀಡಿಲ್ಲಾ. ಜಿಲ್ಲಾ ಪಂಚಾಯತಿಯು ಮಾರ್ಚ ತಿಂಗಳಲ್ಲಿ 16 ಲಕ್ಷ ರೂಗಳನ್ನು …

Read More »

ಮಂಡ್ಯದಲ್ಲಿ ‘ವರ್ಗಾವಣೆ’ಯಿಂದ ಬೇಸತ್ತು ‘KSRTC ಚಾಲಕ’ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಮಂಡ್ಯ: ಜಿಲ್ಲೆಯ ನಾಗಮಂಗಲದ ಕೆ ಎಸ್ ಆರ್ ಟಿ ಸಿ ಬಸ್ ಡಿಪೋದಲ್ಲಿಯೇ ವರ್ಗಾವಣೆಗೆ ಬೇಸತ್ತು ಚಾಲಕ ಕಂ ನಿರ್ವಾಹಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಪರವಾಗಿ ಕೆಲಸ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲದ ಕೆ ಎಸ್ ಆರ್ ಟಿ ಬಸ್ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದಂತ ಚಾಲಕ ಕಂ ನಿರ್ವಾಹಕ ಹೆಚ್ ಆರ್ ಜಗದೀಶ್ ಎಂಬಾತನನ್ನು ಸಚಿವ …

Read More »

ಫಸಲ್ ಬಿಮಾ ಯೋಜನೆಯಲ್ಲಿ ಗೋಲ್​ಮಾಲ್

ರಾಯಚೂರು : ರೈತರ ಅನುಕೂಲಕ್ಕೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಜಾರಿ ಮಾಡಿದೆ. ಈ ಯೋಜನೆಯಡಿ ಅರ್ಹ ಫಲಾನುಭವಿಗಳು ಮಾತ್ರ ಲಾಭ ಪಡೆದುಕೊಳ್ಳಬೇಕು. ಆದರೆ, ರೈತರಿಗೆ ಯಾವುದೇ ಮಾಹಿತಿ ನೀಡದೆ ಅವರ ಹೆಸರನ್ನು ಬಳಸಿಕೊಂಡು ಲಕ್ಷಾಂತರ ರೂಪಾಯಿ ಹಣ ಕಬಳಿಸಿರುವ ಆರೋಪ ಕೇಳಿ ಬಂದಿದ್ದು, ಜಿಲ್ಲೆಯ ಅನ್ನದಾತರು ಕಂಗಾಲಾಗುವಂತೆ ಮಾಡಿದೆ. ಜಿಲ್ಲೆಯ ಸಿರವಾರ ತಾಲೂಕಿನ ಸಣ್ಣಹೊಸೂರು, ಮಾಡಗಿರಿ, ಹರವಿ ಸೇರಿದಂತೆ ಇನ್ನಿತರೆ ಗ್ರಾಮಗಳಲ್ಲಿ ಮಾಹಿತಿ ನೀಡದೆ 40ಕ್ಕೂ ಹೆಚ್ಚು …

Read More »

ವಿದೇಶಿ ಮಹಿಳೆಗೆ ಕಿರುಕುಳ; ಮೀಸೆ ಬೋಳಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿ ಧರಿಸಿದ್ದ ಬಟ್ಟೆಯಿಂದ ಸಿಕ್ಕಿಬಿದ್ದ

ದೇಶಿ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ರಾಜಸ್ಥಾನದ ಬಿಕಾನೆರ್​ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಯುವತಿ ತನ್ನ ಹೋಟೆಲ್​ಗೆ ಹೋಗುವ ದಾರಿಯಲ್ಲಿ ಆಕೆಯನ್ನು ಅಸಭ್ಯವಾಗಿ ಸ್ಪರ್ಶಿಸುವ ಮೂಲಕ ದೌರ್ಜನ್ಯ ಎಸಗಲು ಆರೋಪಿ ಮುಂದಾಗಿದ್ದ ದೃಶ್ಯ ವೈರಲ್​ ಆಗಿತ್ತು. ಈ ವಿಡಿಯೋ ಬೆನ್ನಲ್ಲೇ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದರು. ಈ ವೇಳೆ ಆರೋಪಿ ಚಾಣಾಕ್ಷತನದಿಂದ ತನ್ನ ಗುರುತನ್ನು ಮರೆಮಾಚುವ ಉದ್ದೇಶದಿಂದ ಮೀಸೆಯನ್ನು ಬೋಳಿಸಿಕೊಂಡಿದ್ದ. ಆದರೆ, ವಿಡಿಯೋದಲ್ಲಿದ್ದ ಉಡುಪಿನಲ್ಲಿಯೇ ಆತ ಇದ್ದ …

Read More »

ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಮಹಿಳಾ ವೈದ್ಯಾಧಿಕಾರಿ ಅಮಾನತು

ಮೈಸೂರು: ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ನರ್ಸ್​ಗಳು ಹಾಗೂ ಸಿಬ್ಬಂದಿ ಮೂಲಕ ರೋಗಿಗಳಿಂದ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಮಹಿಳಾ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಮೈಸೂರಿನ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೋಮಲಾ ಅವರನ್ನು ಅಮಾನತು ಮಾಡಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ. ರಂದೀಪ್ ಆದೇಶ ಹೊರಡಿಸಿದ್ದಾರೆ. ಕರ್ತವ್ಯಲೋಪ, ದುರ್ನಡತೆ ಆರೋಪದ ಬಗ್ಗೆ ವಿಚಾರಣೆ ಬಾಕಿ ಇರಿಸಿ, ಈ ತಕ್ಷಣದಿಂದ ಅಮಾನತು ಜಾರಿಗೆ ಬರುವಂತೆ ಆದೇಶ …

Read More »

ಸರ್ಕಾರ ನೀಡಿದ ಗ್ಯಾರಂಟಿಗಳನ್ನ ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರುವ ತನಕ, ಸದನದ ಹೊರಗೆ ಹಾಗೂ ಒಳಗೆ ನಿರಂತರ ಹೋರಾಟ

ದಾವಣಗೆರೆ: ಸರ್ಕಾರ ನೀಡಿದ ಗ್ಯಾರಂಟಿಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರುವ ತನಕ, ಸದನದ ಹೊರಗೆ ಹಾಗೂ ಒಳಗೆ ನಿರಂತರ ಹೋರಾಟ ಮಾಡಲಾಗುವುದು ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಎರಡು ಗ್ಯಾರಂಟಿಗಳನ್ನು ಬಿಟ್ರೇ ಯಾವುದೇ ಗ್ಯಾರಂಟಿಗಳನ್ನು ಜಾರಿ ಮಾಡಿಲ್ಲ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು‌ ಕಾಂಗ್ರೆಸ್ ಹೇಳುತ್ತಿದೆ. …

Read More »

ಬುಡಕಟ್ಟು ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ

ಭೋಪಾಲ್ (ಮಧ್ಯಪ್ರದೇಶ): ನಾಗರಿಕ ಸಮಾಜ ತಲೆ ತಗ್ಗಿಸುವ ಹಾಗೂ ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಬುಡಕಟ್ಟು ಜನಾಂಗದ ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆಘಾತಕಾರಿ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ವಿಡಿಯೋ ಹಾಗೂ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಆಕ್ರೋಶ ಸಹ ವ್ಯಕ್ತವಾಗಿದೆ. ಆರೋಪಿಯು ಬಿಜೆಪಿ ನಾಯಕರ ಜೊತೆಗೆ ಗುರುತಿಸಿಕೊಂಡಿದ್ದಾನೆ ಎಂದು ಕಾಂಗ್ರೆಸ್ ಹಾಗೂ ಆಮ್​ ಆದ್ಮಿ ಪಕ್ಷಗಳು ಆರೋಪ ಮಾಡಿವೆ.     …

Read More »