ಬೆಂಗಳೂರು : ಈ ಹಿಂದೆ ನಾವು ಅಧಿಕಾರದಲ್ಲಿದ್ದಾಗ ಕಾರವಾರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಲಾಗಿದೆ. ಅಲ್ಲಿಯೇ 350 ಬೆಡ್ ವ್ಯವಸ್ಥೆ ಇದ್ದು, ಸದ್ಯಕ್ಕೆ ತುರ್ತಾಗಿ ಮಲ್ಟಿ ಸ್ಪೆಷಾಲಿಟಿ ಅಗತ್ಯ ಇರುವುದರಿಂದ ಅಲ್ಲಿಯೇ ಇನ್ನೂ 100 ಬೆಡ್ ಹೆಚ್ಚಿಸುವ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ಆಗಬೇಕಾದ ಅಗತ್ಯತೆ ಹಿನ್ನೆಲೆಯಲ್ಲಿ ಈಗಾಗಲೇ ಮೆಡಿಕಲ್ ಕಾಲೇಜಿನಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡಲು ಚಾಲನೆ ನೀಡಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ. …
Read More »NCP ನಾಯಕ ಶರದ್ ಪವಾರ್ಗೆ ಜೀವ ಬೆದರಿಕೆ: ಐಟಿ ಉದ್ಯೋಗಿಯ ಬಂಧನ
ಮುಂಬೈ (ಮಹಾರಾಷ್ಟ್ರ): ಎನ್ಸಿಪಿ ನಾಯಕ ಶರದ್ ಪವಾರ್ಗೆ ಸಾಮಾಜಿಕ ಮಾಧ್ಯಮದಲ್ಲಿ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮುಂಬೈ ಕ್ರೈಂ ಬ್ರಾಂಚ್ ಪುಣೆಯ ವ್ಯಕ್ತಿಯನ್ನು ಬಂಧಿಸಿದೆ. ಆರೋಪಿಯನ್ನು ಸಾಗರ್ ಬರ್ವೆ(34 ) ಎಂದು ಗುರುತಿಸಲಾಗಿದೆ. ಆತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಜೂ 13ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗಳು …
Read More »ಕೆಂಪು ಸಮುದ್ರದಲ್ಲಿ ಶಾರ್ಕ್ ದಾಳಿ ಬಳಿಕ ಮತ್ತೊಂದು ದುರಂತ.. ದೋಣಿಗೆ ಬೆಂಕಿ, ಬ್ರಿಟಿಷ್ ಪ್ರವಾಸಿಗರು ನಾಪತ್ತೆ!
ಕೈರೋ: ಭಾನುವಾರ ಈಜಿಪ್ಟ್ನ ಕೆಂಪು ಸಮುದ್ರದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಗೆ ಬೆಂಕಿ ಹೊತ್ತಿಕೊಂಡಿದೆ. ದೋಣಿಯಲ್ಲಿ ಹಲವಾರು ಬ್ರಿಟಿಷ್ ಪ್ರವಾಸಿಗರು ಪ್ರಯಾಣಿಸುತ್ತಿದ್ದು, ಅವರಲ್ಲಿ ಮೂವರು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಸಮುದ್ರದಲ್ಲಿ ಮೂವರು ನಾಪತ್ತೆ: ಈಜಿಪ್ಟಿನ ಕೆಂಪು ಸಮುದ್ರದಲ್ಲಿ ದುರಂತ ಘಟನೆಯೊಂದು ಸಂಭವಿಸಿದೆ. ಸಮುದ್ರದಲ್ಲಿ ಪ್ರಯಾಣಿಸುತ್ತಿದ್ದ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಬ್ರಿಟಿಷ್ ಪ್ರವಾಸಿಗರು ನಾಪತ್ತೆಯಾಗಿದ್ದಾರೆ (British tourists missing). ಸುದ್ದಿ ತಿಳಿದಾಕ್ಷಣ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಕಾಣೆಯಾದ ಮೂವರು ಪ್ರವಾಸಿಗರಿಗಾಗಿ ಶೋಧ ಕಾರ್ಯಾಚರಣೆ …
Read More »ವಿದೇಶಿ ಯೂಟ್ಯೂಬರ್ಗೆ ಬೆಂಗಳೂರಿನಲ್ಲಿ ಕಿರುಕುಳ ಆರೋಪ; ಆರೋಪಿ ಬಂಧನ
ಬೆಂಗಳೂರು: ಅತಿಥಿ ದೇವೋಭವ ಎಂಬ ಪರಿಕಲ್ಪನೆಯನ್ನ ಅತ್ಯಂತ ಗೌರವದಿಂದ ಆಚರಿಸುವ ದೇಶ ಭಾರತ. ಭಾರತದ ಯೂಟ್ಯೂಬರ್ಗಳು ಗಡಿ ದಾಟಿ ವಿಶ್ವದ ಮೂಲೆ ಮೂಲೆ ಪರಿಚಯಿಸುತ್ತಿರುವ ಈ ದಿನಗಳಲ್ಲಿ ಭಾರತೀಯರನ್ನ ಅಲ್ಲಿನ ಜನ ಬರಮಾಡಿಕೊಳ್ಳುವ ರೀತಿಯೂ ಸಹ ಅತಿಥಿ ದೇವೋಭವದ ಪರಿಕಲ್ಪನೆಯನ್ನ ಮತ್ತೊಮ್ಮೆ ನೆನಪಿಸುತ್ತಿದೆ. ಆದರೆ, ಅತಿಥಿ ಸತ್ಕಾರದಲ್ಲಿ ಸದಾ ಮುಂದು ಎನಿಸುವ ನಮ್ಮದೇ ರಾಜ್ಯದ, ರಾಜಧಾನಿ ಬೆಂಗಳೂರಿನಲ್ಲಿ ಇದಕ್ಕೆ ತದ್ವಿರುದ್ಧ ಎನಿಸುವ ಘಟನೆಯೊಂದು ನಡೆದಿದೆ ಎಂದು ಆರೋಪಿಸಲಾಗಿದೆ. ಬೆಂಗಳೂರನ್ನ ಸುತ್ತಾಡಲು ಬಂದಿದ್ದ …
Read More »ಗುಜರಾತ್: ಬಿಪೊರ್ಜಾಯ್ ತೀವ್ರಗೊಂಡಿ ಚಂಡಮಾರುತ
ಮಹಾರಾಷ್ಟ್ರ/ಗುಜರಾತ್: ಬಿಪೊರ್ಜಾಯ್ ಚಂಡಮಾರುತ ಇಂದು ತೀವ್ರಗೊಂಡಿದೆ. ಇದರಿಂದ ಮುಂಬೈ ಮತ್ತು ಗುಜರಾತ್ ಕರಾವಳಿಯಲ್ಲಿ ಅಲೆಗಳ ಉಬ್ಬರವಿಳಿತ ಹೆಚ್ಚಾಗಿದೆ. ಚಂಡಮಾರುತದ ಆರ್ಭಟಕ್ಕೆ ಕಡಲಿನ ಅಲೆಗಳು ದಡಕ್ಕೆ ಬಂದು ಅಪ್ಪಳಿಸುತ್ತಿವೆ. ಚಂಡಮಾರುತ ಮುಂದಿನ ದಿನಗಳಲ್ಲಿ ಗುಜರಾತ್ ಮತ್ತು ಪಾಕಿಸ್ತಾನದ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ಸೌರಾಷ್ಟ್ರ ಮತ್ತು ಗುಜರಾತ್ನ ಕಚ್ ಕರಾವಳಿಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ನೀಡಿದೆ. ಈ ವಾರಾಂತ್ಯದಲ್ಲಿ ಮತ್ತು ಸೋಮವಾರ ಬೆಳಗ್ಗೆ ಕರಾವಳಿ ನಗರಗಳಾದ ಮುಂಬೈ ಮತ್ತು …
Read More »ಕಲುಷಿತ ನೀರು ಸೇವಿಸಿ ಸಾವು: ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಹೊಣೆ ಮಾಡಿ ಅಮಾನತ್ತಿಗೆ ಸೂಚಿಸಿ: ಸಿಎಂ ಎಚ್ಚರಿಕೆ
ಬೆಂಗಳೂರು: ರಾಜ್ಯದ 8 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಲಜೀವನ್ ಮಿಷನ್ ಯೋಜನೆಯ ಪ್ರಗತಿಯ ಕುರಿತಂತೆ ಮತ್ತು ಇಂದಿರಾ ಕ್ಯಾಂಟೀನ್ ನಿರ್ವಹಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯ ಮುಖ್ಯಾಂಶ ಇಂತಿದ್ದು, ರಾಜ್ಯದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಯಿತು. ರಾಜ್ಯದಲ್ಲಿ ಮುಂಗಾರು ಜೂನ್ 10ರಂದು ಪ್ರಾರಂಭವಾಗಿದೆ. ಜೂನ್ 1ರಿಂದ 11ರವರೆಗಿನ ಮಾಹಿತಿ …
Read More »ಮಹಾರಾಷ್ಟ್ರದ ನಾಸಿಕ್ನಲ್ಲಿ ಭೀಕರ ರಸ್ತೆ ಅಪಘಾತ
ನಾಸಿಕ್: ಮಹಾರಾಷ್ಟ್ರದ ನಾಸಿಕ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಲ್ಲಿಯ ಶಿರಡಿ- ಭರವೀರ್ ಹೆದ್ದಾರಿಯಲ್ಲಿ ಭಾನುವಾರ ಮಧ್ಯರಾತ್ರಿ ಕಾರು ದುರಂತದಲ್ಲಿ ನಾಲ್ವರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ. ರಜಾಕ್ ಅಹ್ಮದ್ ಶೇಖ್, ಸತ್ತಾರ್ ಶೇಖ್ ಲಾಲ್ ಶೇಖ್, ಸುಲ್ತಾನ್ ಸತ್ತಾರ್ ಶೇಖ್, ಫಿಯಾಜ್ ದಗುಭಾಯಿ ಶೇಖ್ ಮೃತರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋವಾ ಕಾರಿನಲ್ಲಿದ್ದ ಪ್ರಯಾಣಿಕರು ಹಜ್ ಯಾತ್ರೆಗೆಂದು ಮುಂಬೈನಿಂದ ಹೊರಟು ಶಿರಡಿಗೆ ವಾಪಸಾಗುತ್ತಿದ್ದರು. ಭಾನುವಾರ ಮಧ್ಯರಾತ್ರಿ …
Read More »ರಾಜ್ಯಾದ್ಯಂತ ಮೊದಲ ದಿನವೇ 5.71 ಲಕ್ಷ ಮಹಿಳಾ ಪ್ರಯಾಣಿಕರ ಸಂಚಾರ
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆ ಶಕ್ತಿ ಯೋಜನೆಗೆ ಮೊದಲ ದಿನವೇ ಮಹಿಳೆಯರಿಂದ ಭರ್ಜರಿ ಸ್ಪಂದನೆ ಸಿಕ್ಕಿದೆ. ಭಾನುವಾರ ವಿಧಾನಸೌಧದಲ್ಲಿ ಚಾಲನೆ ಸಿಕ್ಕ ಶಕ್ತಿ ಗ್ಯಾರಂಟಿ ಯೋಜನೆಯನ್ನು ರಾಜ್ಯದ ಮಹಿಳೆಯರು ಖುಷಿ ಖುಷಿಯಾಗಿ ಸ್ವೀಕಾರ ಮಾಡಿದ್ದಾರೆ. ನಿನ್ನೆ ಮಧ್ಯಾಹ್ನ 1 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಶಕ್ತಿ ಯೋಜನೆಯಡಿ ಸುಮಾರು 5 ಲಕ್ಷದ 71 ಸಾವಿರಕ್ಕೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಯೋಜನೆ ಜಾರಿಗೊಂಡ ಬೆನ್ನಲ್ಲೇ ಸಾಕಷ್ಟು ಮಹಿಳೆಯರು ಉಚಿತ …
Read More »ಭೀಕರ ರಸ್ತೆ ಅಪಘಾತ : ಗ್ರಾ.ಪಂ.ಸದಸ್ಯ ಸಾವು, ಮೂವರು ಗಂಭೀರ.!
ಮೈಸೂರು : ಮೈಸೂರಿನ ಹುಣಸೂರು-ಮೈಸೂರು ಹೆದ್ದಾರಿಯ ಬನ್ನಿಕುಪ್ಪೆ ಸಮೀಪ ಸಾರಿಗೆ ಸಂಸ್ಥೆ ಬಸ್ ಮತ್ತು ಸ್ವಿಫ್ಟ್ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೃತಪಟ್ಟವರು ಹುಣಸೂರು ತಾಲೂಕಿನ ತಟ್ಟೆಕೆರೆ ಗ್ರಾ.ಪಂ.ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಗ್ರಾ.ಪಂ.ಸದಸ್ಯ ಭಾಸ್ಕರ್ (42) ಎಂದು ತಿಳಿದುಬಂದಿದೆ. ಪತ್ನಿ ರಮ್ಯಾ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಾಯಗೊಂಡಿದ್ದು, ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾಸ್ಕರ್ ಅವರು ತಮ್ಮ …
Read More »Electricity Bill : ಏಪ್ರಿಲ್ನಿಂದಲೇ ವಿದ್ಯುತ್ ದರ ಪ್ರತಿ ಯೂನಿಟ್ಗೆ 70 ಪೈಸೆ ಹೆಚ್ಚಳ.. ಜೂನ್ ಬಿಲ್ನಲ್ಲಿ ಹಿಂಬಾಕಿ ವಸೂಲಿ: ಕೆಇಆರ್ಸಿ ಸ್ಪಷ್ಟನೆ
ಬೆಂಗಳೂರು: ವಿದ್ಯುತ್ ದರವನ್ನು ಪ್ರತಿ ಯೂನಿಟ್ಗೆ 70 ಪೈಸೆ ಏರಿಕೆ ಮಾಡಿರುವ ಹಿನ್ನೆಲೆ ಬೆಸ್ಕಾಂ ಜೂನ್ ತಿಂಗಳಿನಲ್ಲಿ ವಿದ್ಯುತ್ ಬಳಕೆಯ ಬಿಲ್ನಲ್ಲಿ ಪರಿಷ್ಕತ ಶುಲ್ಕವನ್ನು ನಮೂದಿಸಲಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(ಕೆ.ಇ.ಆರ್.ಸಿ) ಸ್ಪಷ್ಟಪಡಿಸಿದೆ. ವಿದ್ಯುತ್ ದರ ಪರಿಷ್ಕರಣೆ ಆದೇಶ ಏಪ್ರಿಲ್ನಿಂದ ಪೂರ್ವನ್ವಯವಾಗುವುದರಿಂದ ಬಿಲ್ನಲ್ಲಿ ಆ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ. ಹಾಗೆಯೇ ಆದೇಶದ ಪ್ರಕಾರ 2 ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ. ಗ್ರಾಹಕರು ಬಳಸುವ ಮೊದಲ 100 ಯೂನಿಟ್ ವಿದ್ಯುತ್ಗೆ ಪ್ರತಿ …
Read More »