Breaking News

ರಾಷ್ಟ್ರೀಯ

ಪರಿಚಯ – ಪ್ರಣಯ, ದೋಖಾ ಆರೋಪ: ಕನ್ನಡದ ಸಹ ನಟಿಯ ಬಂಧನ

ಶಿವಮೊಗ್ಗ: ಕನ್ನಡ ಚಿತ್ರರಂಗದ ಸಹ ನಟಿ ಉಷಾ ಅಲಿಯಾಸ್ ಉಷಾ ರವಿಶಂಕರ್​ ಅವರನ್ನು ವಂಚನೆ ಪ್ರಕರಣದಲ್ಲಿ ಶಿವಮೊಗ್ಗದ ವಿನೋಬನಗರ ಪೊಲೀಸರು ಬಂಧಿಸಿದ್ದಾರೆ.‌ ನಟಿ ಉಷಾ ಅವರು ಸುಮಾರು 6.50 ಲಕ್ಷ ರೂನಷ್ಟು ಹಣ ಪಡೆದು ವಾಪಸ್ ಮಾಡದೇ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗದ ಶರವಣನ್​ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಖಾಸಗಿ ದೂರಿನ‌ ಮೇರೆಗೆ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸರು ಉಷಾ ಅವರನ್ನು ಬಂಧಿಸಿದ್ದಾರೆ. ಶರವಣನ್​ ಎಂಬವವರು ಧಾರಾವಾಹಿ …

Read More »

140 ಕೋಟಿ ಬಾಚಿದ ‘ಆದಿಪುರುಷ್​’: ಮೊದಲ ದಿನವೇ 100 ಕೋಟಿ ಗಡಿ ದಾಟಿದ ಪ್ರಭಾಸ್​​ರ ಸಿನಿಮಾ

ಬಾಹುಬಲಿ 2, ಸಾಹೋ ಸಿನಿಮಾ ನಂತರ ‘ಆದಿಪುರುಷ್’ ಮೊದಲ ದಿನವೇ 100 ಕೋಟಿ ರೂ. ಗಡಿ ದಾಟಿದ ಪ್ರಭಾಸ್​​ ಅಭಿನಯದ ಮೂರನೇ ಸಿನಿಮಾವಾಗಿದೆ. ದಕ್ಷಿಣ ಸಿನಿ ರಂಗದ ಪ್ರಭಾಸ್ ಮತ್ತು ಬಾಲಿವುಡ್​ ಬಹುಬೇಡಿಕೆ ನಟಿ ಕೃತಿ ಸನೋನ್ ಅಭಿನಯದ ಪೌರಾಣಿಕ ಚಲನಚಿತ್ರ ಆದಿಪುರುಷ್ ಜೂನ್ 16ರಂದು (ನಿನ್ನೆ, ಶುಕ್ರವಾರ) ಅದ್ಧೂರಿಯಾಗಿ ತೆರೆ ಕಂಡಿದೆ. ಮಿಶ್ರ ಪ್ರತಿಕ್ರಿಯೆ ಪಡೆದಿರುವ ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿದೆ. ವಿಶ್ವಾದ್ಯಂತ ಪ್ಯಾನ್​ ಇಂಡಿಯಾ ಮಟ್ಟದಲ್ಲಿ …

Read More »

ಅಕ್ಕಳಿಗೆ ಕಿರುಕುಳ ನೀಡುತ್ತಿರುವುದನ್ನು ಪ್ರಶ್ನಿಸಿದ ಸಹೋದರನನ್ನು ಸುಟ್ಟು ಹಾಕಿದ ಹಂತಕರು!

ಬಾಪಟ್ಲಾ, ಆಂಧ್ರಪ್ರದೇಶ: 10ನೇ ತರಗತಿ ಓದುತ್ತಿದ್ದ ಬಾಲಕನೊಬ್ಬನ ಮೇಲೆ ಯುವಕನೊಬ್ಬ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿರುವ ಘಟನೆ ಬಾಪಟ್ಲಾ ಜಿಲ್ಲೆಯ ಚೆರುಕುಪಲ್ಲಿ ತಾಲೂಕಿನ ರಾಜೋಲು ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿತ್ತು. ಈ ಘಟನೆ ಕುರಿತು ಕೆಲವೊಂದು ವಿಷಯಗಳನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಚೆರುಕುಪಲ್ಲಿ ತಾಲೂಕಿನ ಉಪ್ಪಳ ಅಮರನಾಥ್ (14) ಅವರ ತಂದೆ ಬಾಲ್ಯದಲ್ಲಿಯೇ ತೀರಿಕೊಂಡಿದ್ದು, ತಾಯಿ, ಸಹೋದರಿ, ತಾತನೊಂದಿಗೆ ವಾಸವಾಗಿದ್ದಾರೆ. ರಾಜೋಲು ಪಂಚಾಯಿತಿ ರೆಡ್ಲಪಾಲೇನಿ ನಿವಾಸಿ ಪಾಮು ವೆಂಕಟೇಶ್ವರ ರೆಡ್ಡಿ ಅಮರನಾಥ್​ …

Read More »

ಮಕ್ಕಳ ಅನುಕೂಲಕ್ಕೆ ಪಠ್ಯ ಬದಲಾಯಿಸಿದರೆ ತಪ್ಪೇನು? ಗೀತಾ ಶಿವರಾಜ್​ಕುಮಾರ್

ಮೈಸೂರು: ರಾಜ್ಯ ಸರ್ಕಾರವು ಪಠ್ಯ ಪರಿಷ್ಕರಣೆಗೆ ಮುಂದಾಗಿದ್ದು, ಮಕ್ಕಳ ಅನುಕೂಲಕ್ಕೆ ತಕ್ಕಂತೆ ಪಠ್ಯ ಬದಲಾಯಿಸಿದರೆ ಅದರಲ್ಲಿ ತಪ್ಪೇನು? ಎಂದು ಕಾಂಗ್ರೆಸ್​ ನಾಯಕಿ ಗೀತಾ ಶಿವರಾಜ್​ಕುಮಾರ್​​ ಹೇಳಿದರು. ಈ ಮೂಲಕ ಸರ್ಕಾರದ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಒಳ್ಳೆಯ ವಿಚಾರಗಳು ಮಾತ್ರ ಇರಬೇಕು. ಈ ಕಾರಣಕ್ಕಾಗಿ ಪಠ್ಯಪುಸ್ತಕ ಬದಲಾವಣೆ ಆದರೆ ಒಳ್ಳೆಯದು ಎಂದರು. ಒಂದೊಂದು ಸರ್ಕಾರ ಒಂದೊಂದು ರೀತಿಯಲ್ಲಿ ಪಠ್ಯ ಬದಲಾವಣೆ ಮಾಡುವ ಕ್ರಮದಿಂದ ಮಕ್ಕಳಲ್ಲಿ ಗೊಂದಲ …

Read More »

ಮಹಾರಾಷ್ಟ್ರದ ಶಾಲೆಯ ದಾಖಲೆ ಮರಾಠಿಯಲ್ಲಿದ್ದರೂ ಕನ್ನಡದಲ್ಲಿಯೇ ವಿವರಗಳನ್ನು ತುಂಬಿದ್ದಲ್ಲದೇ ” ಕರ್ನಾಟಕ ರಾಜ್ಯ”ಎಂದೂ ಬರೆದ ಮನದಾಳದ ಇಚ್ಛೆಯನ್ನು ಪ್ರಕಟಿಸಿದ ಗುಗವಾಡ ಶಾಲಾ ಮುಖ್ಯಾಧ್ಯಾಪಕರು!

ಮಹಾರಾಷ್ಟ್ರದ ಶಾಲೆಯ ದಾಖಲೆ ಮರಾಠಿಯಲ್ಲಿದ್ದರೂ ಕನ್ನಡದಲ್ಲಿಯೇ ವಿವರಗಳನ್ನು ತುಂಬಿದ್ದಲ್ಲದೇ ” ಕರ್ನಾಟಕ ರಾಜ್ಯ”ಎಂದೂ ಬರೆದ ಮನದಾಳದ ಇಚ್ಛೆಯನ್ನು ಪ್ರಕಟಿಸಿದ ಗುಗವಾಡ ಶಾಲಾ ಮುಖ್ಯಾಧ್ಯಾಪಕರು! ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಗವಾಡ ಗ್ರಾಮದ ಈ ಶಾಲೆಯ ಮುಖ್ಯಾಧ್ಯಾಪಕರು ನೀಡಿದ ಟಿಸಿ( ವರ್ಗಾವಣೆ ಪ್ರಮಾಣಪತ್ರ)ಈಗ ವೈರಲ್ ಆಗಿದೆ. ಅಚ್ಚ ಕನ್ನಡ ಪ್ರದೇಶಗಳಾದ ಜತ್ತ ತಾಲೂಕಿನ 44 ಹಳ್ಳಿಗಳ ಪೈಕಿ ಗುಗವಾಡ ಗ್ರಾಮವೂ ಒಂದಾಗಿದೆ.ಇಲ್ಲಿಯ ಶಾಲೆಯ ಮುಖ್ಯಾಧ್ಯಾಪಕರು ರಾಹುಲ್ ಚೌಗುಲೆ ಎಂಬವರಿಗೆ ನೀಡಿದ …

Read More »

ರೈಲು ದುರಂತ ಸಂತ್ರಸ್ತರಿಗೆ ₹10 ಕೋಟಿ ಕೊಡುವೆ, ಸ್ವೀಕರಿಸಿ; ಜೈಲಿನಿಂದಲೇ ಸರ್ಕಾರಕ್ಕೆ ಪತ್ರ ಬರೆದ ಸುಕೇಶ್ ಚಂದ್ರಶೇಖರ್‌!

ನವದೆಹಲಿ: ಭಾರತೀಯ ರೈಲ್ವೆ ಇತಿಹಾಸದಲ್ಲೇ ಅತಿದೊಡ್ಡ ಅಪಘಾತಗಳಲ್ಲಿ ಒಂದಾದ ಒಡಿಶಾ ರೈಲು ದುರಂತದ ಸಂತ್ರಸ್ತರಿಗೆ ನೆರವಾಗಲು ಬಹುಕೋಟಿ ರೂಪಾಯಿ ವಂಚಿಸಿದ ಗಂಭೀರ ಆರೋಪ ಎದುರಿಸುತ್ತಿರುವ ಸುಕೇಶ್ ಚಂದ್ರಶೇಖರ್ ಮುಂದೆ ಬಂದಿದ್ದಾನೆ. ದುರಂತದಲ್ಲಿ ಮೃತಪಟ್ಟವರ ಮಕ್ಕಳು ಭವಿಷ್ಯಕ್ಕಾಗಿ ದೇಣಿಗೆಯಾಗಿ 10 ಕೋಟಿ ರೂಪಾಯಿ ನೀಡಲು ಬಯಸಿದ್ದು, ಸ್ವೀಕರಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಜೈಲಿನಿಂದಲೇ ಶುಕ್ರವಾರ ಪತ್ರ ಬರೆದಿದ್ದಾನೆ. ಜೂನ್​ 2ರಂದು ಒಡಿಶಾದ ಬಾಲಸೋರ್​ ಜಿಲ್ಲೆಯಲ್ಲಿ ಮೂರು ರೈಲುಗಳ ಅಪಘಾತದಲ್ಲಿ …

Read More »

ಮಗುವಿನ ಮೃತದೇಹ ಕೈಚೀಲದಲ್ಲಿ ಇಟ್ಟುಕೊಂಡು ಬಸ್​ನಲ್ಲಿ ಪ್ರಯಾಣಿಸಿದ ತಂದೆ…!

ಮಧ್ಯ ಪ್ರದೇಶದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಆರೋಗ್ಯ ಮೂಲ ಸೌಕರ್ಯವಿಲ್ಲದ ಕಠೋರ ಸ್ಥಿತಿ ಬಿಂಬಿಸುವ ಘಟನೆ ಬಹಿರಂಗವಾಗಿದೆ. ಹೌದು, ಮಧ್ಯಪ್ರದೇಶದ ಜಬಲ್‌ಪುರದ ದಿಂಡೋರಿಯ ಬಡ ವ್ಯಕ್ತಿಯೊಬ್ಬರು, ಜಬಲ್‌ಪುರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಂಬ್ಯುಲೆನ್ಸ್‌ಗೆ ಪಾವತಿಸಲು ಸಾಧ್ಯವಾಗದ ಕಾರಣ, ತನ್ನ ನವಜಾತ ಶಿಶುವಿನ ಮೃತದೇಹವನ್ನು ಚೀಲದಲ್ಲಿ ಇಟ್ಟುಕೊಂಡು ಬಸ್‌ನಲ್ಲಿ ಪ್ರಯಾಣಿಸಿದ್ದಾರೆ. ದಿಂಡೋರಿಯ ಗ್ರಾಮದ ನಿವಾಸಿಯಾಗಿರುವ ವ್ಯಕ್ತಿಯ ಪತ್ನಿ ಜಮಾನಿ ಬಾಯಿ ಹೆರಿಗೆ ನೋವಿನ ಹಿನ್ನೆಲೆಯಲ್ಲಿ ದಿಂಡೋರಿ ಜಿಲ್ಲಾ ಆಸ್ಪತ್ರೆಗೆ …

Read More »

ನಿಜಲಿಂಗಪ್ಪ ‌ಸಕ್ಕರೆ ಸಂಸ್ಥೆಗೆ ಬೀಗ ಜಡಿದ ರೈತ ಹೋರಾಟಗಾರರು

ರೈತರಿಗೆ ವಿಚಾರಣೆಗೆ ಬನ್ನಿ ಎಂದು ನೋಟಿಸ್ ನೀಡಿ ತಾವೇ ಬರದ ಸಕ್ಕರೆ ಆಯುಕ್ತರ ನಡೆ ಖಂಡಿಸಿ ಸಕ್ಕರೆ ಸಂಸ್ಥೆಯ ಕಚೇರಿಗೆ ಬೀಗ ಜಡಿದು ಶುಕ್ರವಾರ ಪ್ರತಿಭಟನೆ ನಡೆಸಿದರು. ಬೆಳಗಾವಿಯ ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೈತರು, ಸಿಬ್ಬಂದಿ ಹೊರದಬ್ಬಿ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಗೆ ಬೀಗ ಜಡಿದ ರೈತ ಹೋರಾಟಗಾರರು. ಬೆಳಗಾವಿಯ ಗಣೇಶಪುರ ರಸ್ತೆಯಲ್ಲಿರುವ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಗೆ ಬೀಗ ಜಡಿದು ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬ್ಬಿನ …

Read More »

ಸಾರಿಗೆ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ ಎರಡೂ ಲಕ್ಷ

ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ ಬರೋಬರಿ ಎರಡೂ ಲಕ್ಷ ಜನ ಮಹಿಳೆಯರು ಲಾಭ ಪಡೆದುಕೊಂಡಿದ್ದಾರೆ‌. ಶಕ್ತಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿಂತೆ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಗುರುತಿನ ಚೀಟಿಯನ್ನು (ನಕಲು/ ಮೂಲ/ಡಿಜಿಲಾಕರ್) ತೋರಿಸಿ ಪ್ರಯಾಣಿಸಲು ಅವಕಾಶ ನೀಡುವಂತೆ ಸಂಸ್ಥೆಯ ನಿರ್ವಾಹಕರಿಗೆ ಶಕ್ತಿ ಯೋಜನೆಯ ಅನುಷ್ಠಾನಕ್ಕಿಂತ ಮುಂಚಿತವಾಗಿಯೇ ತಿಳುವಳಿಕೆ ನೀಡುತ್ತಾ ಬರಲಾಗಿದೆ. ಅದರಂತೆ, ವಾಯವ್ಯ ಕರ್ನಾಟಕ …

Read More »

ಕೆ – ಸಿಇಟಿ ಇಂಜಿನಿಯರಿಂಗ್ ‌ನಲ್ಲಿ ರಾಜ್ಯಕ್ಕೆ 3 ನೇ ರ್ಯಾಂಕ್ , 1 ಲಕ್ಷ ರೂ. ಚೆಕ್ ನೀಡಿಸನ್ಮಾನ .

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸತತ 14ನೇ ಬಾರಿಗೆ ಧಾರವಾಡ ಜಿಲ್ಲೆಗೆ ನಂಬರ್ ಒನ್ ಸ್ಥಾನವನ್ನು ಪಡೆದಿರುವ ಹುಬ್ಬಳ್ಳಿ ಭೈರಿದೇವರಕೊಪ್ಪದ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿ ಸಮೃದ್ಧ ಶೆಟ್ಟಿ 2023ರ ಸಿಇಟಿಯಲ್ಲೂ ಕಮಾಲ್ ಮಾಡಿದ್ದಾನೆ. ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಇಂಜಿನಿಯರಿಂಗ್ ವಿಭಾಗದಲ್ಲಿ ಸಮೃದ್ಧ ಶೆಟ್ಟಿ ರಾಜ್ಯಕ್ಕೆ ಮೂರನೇ ರ್‍ಯಾಂಕ್ ಪಡೆದು ಹಿರಿಮೆ ನೆರೆದಿದ್ದಾನೆ. ಐಐಟಿ ಮೇನ್ಸ್‌ನಲ್ಲೂ ದೇಶಕ್ಕೆ ಈತ 31ನೇ ರ್‍ಯಾಂಕ್ ಪಡೆದು ಸಾಧನೆ …

Read More »