ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಾಂಗ್ರೆಸ್ ಸರ್ಕಾರದ ಹೊಸ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದಾರೆ. 2023-24 ಸಾಲಿನ ಹೊಸ ಬಜೆಟ್ಗೆ ಇಲಾಖಾವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಐದು ಗ್ಯಾರಂಟಿಗಳನ್ನು ಜಾರಿ ಮಾಡಿರುವ ಸಿದ್ದರಾಮಯ್ಯ ಈ ಬಾರಿ ಬಜೆಟ್ನಲ್ಲಿ ಹೆಚ್ಚಿನ ಗ್ಯಾರಂಟಿ ಆದಾಯ ಸಂಗ್ರಹಿಸುವತ್ತ ಚಿತ್ತ ನೆಟ್ಟಿದ್ದಾರೆ. ಅಷ್ಟಕ್ಕೂ ಕಳೆದ ಎರಡು ತಿಂಗಳಲ್ಲಿ ರಾಜ್ಯ ಬೊಕ್ಕಸ ಸೇರಿರುವ ಸ್ವಂತ ತೆರಿಗೆ ಏನಿದೆ ಎಂಬ ವರದಿ ಇಲ್ಲಿದೆ. ಬಿಜೆಪಿಯನ್ನು ಸೋಲಿಸಿ ಭರ್ಜರಿ ಜಯದೊಂದಿಗೆ ಕಾಂಗ್ರೆಸ್ ಸರ್ಕಾರ …
Read More »ನೇಣಿಗೆ ಶರಣಾದ ಸವಿತಾ ನಾಯ್ಕರ್
ನವನಗರದಲ್ಲಿ ಇರುವ ಪಂಚಾಕ್ಷರಿ ನಗರದ ನಿವಾಸಿ ಆದ ಸವಿತಾ ನಾಯ್ಕರ್ ಅನ್ನೋ ಗೃಹಿಣಿ ನೇಣಿಗೆ ಶರಣಾದ ಘಟನೆ ನಡೆದಿದೆ. ಮಧ್ಯಾನ 2.30 ರ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಘಟನೆಗೆ ಕೌಟುಂಬಿಕ ಕಲಹ ಎಂದು ತಿಳಿದುಬಂದಿದೆ. ಸಾವಿಗೀಡಾದ ಮಹಿಳೆಯ ಗಂಡ ಕೆ ಎಸ್ ಆರ್ ಪಿ ಪೊಲೀಸ ಸಿಬ್ಬಂದಿಯು ದಿನನಿತ್ಯ ಕುಡಿದು ಬಂದು ಹೆಂಡತಿಯ ಜೊತೆ ಜಗಳವಾಡುತ್ತಿದ್ದ ಎಂದು ಸವಿತಾಳ ತಾಯಿ …
Read More »ಬಿಜೆಪಿಯ ಸುಳ್ಳಿನ ಫ್ಯಾಕ್ಟರಿ ಬಂದ್ ಮಾಡುತ್ತೇವೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು : ಕಾಂಗ್ರೆಸ್ ನಾಯಕರುಗಳ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸುತ್ತಿರುವ ಆರೋಪದಡಿ ಬಿಜೆಪಿಯ ಮಾಹಿತಿ ತಂತ್ರಜ್ಞಾನ ವಿಭಾಗದ (ಐಟಿ ಸೆಲ್) ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವಿಯಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ದ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆಯನಿಮೇಟೆಡ್ ವೀಡಿಯೋ ಮೂಲಕ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದೆ ಎಂದು ಉಲ್ಲೇಖಿಸಿ, ರಾಹುಲ್ ಗಾಂಧಿಯವರ ವಿರುದ್ದ ವಿಡಿಯೋ ಹರಿಬಿಟ್ಟ ಬಗ್ಗೆ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ …
Read More »ನೀರು ಬಿಡುವ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಜತೆ ಮಾತನಾಡುತ್ತೇನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ನೀರು ಬಿಡುವುದಕ್ಕೆ ರೈತರಿಂದ ವ್ಯಕ್ತವಾಗಿರುವ ವಿರೋಧ ವಿಚಾರವಾಗಿ ಅಲ್ಲಿನ ಸರ್ಕಾರದ ಜತೆ ಮಾತನಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ನೀರು ಬಿಡಲು ಮಹಾರಾಷ್ಟ್ರ ರೈತರ ವಿರೋಧ ವಿಚಾರ ಕೇಳಿದ ಪ್ರಶ್ನೆಗೆ ಉತ್ತರಿಸಿ, ಈ ವಿಚಾರವಾಗಿ ಮಹಾರಾಷ್ಟ್ರದ ರೈತರ ಜೊತೆ ಮಾತನಾಡೋಕೆ ಆಗುತ್ತಾ? ಮಹಾರಾಷ್ಟ್ರ ಸಿಎಂ ಜೊತೆ ಮಾತನಾಡುತ್ತೇನೆ ಎಂದರು. ಇದೇ ವೇಳೆ, ಮಹದಾಯಿ ವಿಷಯದಲ್ಲಿ ಗೋವಾ …
Read More »ಅನ್ನಭಾಗ್ಯ ಯೋಜನೆಗೆ ಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ- ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕಾಂಗ್ರೆಸ್ ನಾಯಕರು ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಉಚಿತ ಎಂದು ಹೇಳಿದ್ದರು. ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದ್ದು ಅಕ್ಕಿ ವಿತರಣೆಯಲ್ಲಿ ಬಹಳ ಗೊಂದಲಗಳು ಸೃಷ್ಟಿಯಾಗಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್ಸಿಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರ, ಈ …
Read More »ತಂದೆ ತಾಯಿಯ ಪ್ರೋತ್ಸಾಹ ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂಬುದಕ್ಕೆ ಬೆಳಗಾವಿಯ ಈ ಪುಟಾಣಿಯೇ ಸಾಕ್ಷಿ.
ಬೆಳಗಾವಿ : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಮಾತಿನಂತೆ ತಂದೆ ತಾಯಿಯ ಪ್ರೋತ್ಸಾಹ ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂಬುದಕ್ಕೆ ಬೆಳಗಾವಿಯ ಈ ಪುಟಾಣಿಯೇ ಸಾಕ್ಷಿ. ಇಂಗ್ಲಿಷ್ ರೈಮ್ಸ್ ಹೇಳುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲೆ ಬರೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ಹೌದು, ಬೆಳಗಾವಿಯ ಫುಲಬಾಗ ಗಲ್ಲಿಯ 2 ವರ್ಷ 11 ತಿಂಗಳ ಮಾನ್ವಿ ಭರತ್ ನಿಲಜಕರ್ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಸಾಧನೆ ಮೆರೆದ ಪುಟ್ಟ …
Read More »400 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತಿದ್ದ ಹತ್ತಿ ಬೆಳೆ ನಾಶ: ಕೃಷಿ ತಜ್ಞರ ಭೇಟಿ, ಪರಿಶೀಲನೆ…
ಗಂಗಾವತಿ :ಕನಕಗಿರಿ ತಾಲೂಕಿನಲ್ಲಿ ಒಣ ಬೇಸಾಯದ ಮಂಗಾರು ಮಳೆಯ ಪೂರ್ವದಲ್ಲಿ ರೈತರು ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆ ನಾಟಿ ಮಾಡಿದ್ದು, ಆದರೆ ಕಳಪೆ ಗುಣಮಟ್ಟದ ಬೀಜದಿಂದಾಗಿ ಹತ್ತಿ ಬೆಳೆ ನಾಶವಾಗುವ ಆತಂಕ ಎದುರಾಗಿದೆ. ಕಳಪೆ ಬಿತ್ತನೆ ಬೀಜ ತಂದ ಆಪತ್ತು: ತಾಲೂಕಿನ ಚಿಕ್ಕಖೇಡಾ, ಹಿರೇಖ್ಯಾಡಾ, ಗುಡದೂರು, ಬಸರಿಹಾಳ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ರೈತರು ದೊಡ್ಡ ಪ್ರಮಾಣದಲ್ಲಿ ಹತ್ತಿ ಬೀಜ ಬಿತ್ತಿದ್ದಾರೆ. ಒಂದು ಕಡೆ ಕಳಪೆ ಬಿತ್ತನೆ ಬೀಜ ಮತ್ತೊಂದು …
Read More »ಮೊದಲ ವಾರ 3 ಕೋಟಿಗೂ ಹೆಚ್ಚು ಮಹಿಳೆಯರಿಂದ ಉಚಿತ ಪ್ರಯಾಣ: ಟಿಕೆಟ್ ಮೌಲ್ಯವೆಷ್ಟು ಗೊತ್ತಾ?
ಬೆಂಗಳೂರು: ಶಕ್ತಿ ಯೋಜನೆಗೆ ಮಹಿಳೆಯರಿಂದ ಭರ್ಜರಿ ಸ್ಪಂದನೆ ಸಿಗುತ್ತಿದೆ. ವೀಕೆಂಡ್ನಲ್ಲಂತೂ ಸಾರಿಗೆ ಬಸ್ಗಳು ಮಹಿಳಾ ಪ್ರಯಾಣಿಕರಿಂದ ಕಿಕ್ಕಿರಿದು ತುಂಬುತ್ತಿದ್ದು, ಶನಿವಾರ 54,30,150 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಪ್ರಯಾಣ ಬೆಳೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಮಹಿಳೆಯರಿಗಾಗಿ ಬಸ್ ಪ್ರಯಾಣ ಉಚಿತವಾಗಿಸಿರುವ Shakti Schemeಗೆ ಉತ್ತಮ ಸ್ಪಂದನೆ ಸಿಗುತ್ತಿದೆ. ಮಹಿಳಾ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳಗೊಳ್ಳುತ್ತಿದೆ. ವೀಕೆಂಡ್ನಲ್ಲಂತೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪ್ರಯಾಣಿಕರು ಸರ್ಕಾರಿ ಬಸ್ಗಳಲ್ಲಿ ಪುಣ್ಯ ಕ್ಷೇತ್ರಗಳತ್ತ ಪಯಣ ಬೆಳೆಸಿದ್ದಾರೆ. …
Read More »ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ RSS ಮನವಿ:
ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಖಂಡಿಸಿದೆ. ತಕ್ಷಣವೇ ಶಾಂತಿಯನ್ನು ಪುನಃಸ್ಥಾಪಿಸಲು ಸ್ಥಳೀಯ ಆಡಳಿತ, ಪೊಲೀಸ್, ಭದ್ರತಾ ಪಡೆಗಳು ಮತ್ತು ಕೇಂದ್ರದ ಏಜೆನ್ಸಿಗಳು ಸೇರಿದಂತೆ ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದೂ ಸಂಘ ಒತ್ತಾಯಿಸಿದೆ. ಈ ಬಗ್ಗೆ ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಈಶಾನ್ಯ ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಅಗತ್ಯ ಕ್ರಮಗಳ ಜೊತೆಗೆ ಹಿಂಸಾಚಾರದಿಂದಾಗಿ ನಿರಾಶ್ರಿತರಾದವರಿಗೆ ಪರಿಹಾರ …
Read More »ಗೃಹ ಜ್ಯೋತಿ ಯೋಜನೆಗೆ ಮೊದಲ ದಿನ 55 ಸಾವಿರ ಗ್ರಾಹಕರ ನೋಂದಣಿ
ಬೆಂಗಳೂರು : ಗೃಹ ಜ್ಯೋತಿ ಯೋಜನೆಗಾಗಿ ಮೊದಲ ದಿನ 55,000 ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ಭಾನುವಾರ ಸೇವಾ ಸಿಂಧು ಪೋರ್ಟಲ್ನಲ್ಲಿ ಗೃಹ ಜ್ಯೋತಿ ಯೋಜನೆಯ ನೋಂದಣಿ ಆರಂಭಗೊಂಡಿದೆ. 200 ಯುನಿಟ್ ಉಚಿತ ವಿದ್ಯುತ್ ಪಡೆಯಲು ಮೊದಲ ದಿನವಾದ ಭಾನುವಾರ 55 ಸಾವಿರ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ ಎಂದು ಇಂಧನ ಇಲಾಖೆ ತಿಳಿಸಿದೆ. ಭಾನುವಾರ ಬೆಳಗ್ಗೆ 11 ಗಂಟೆಗೆ ಆರಂಭವಾದ ಅರ್ಜಿ ಸಲ್ಲಿಕೆ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 55,000 …
Read More »
Laxmi News 24×7