Breaking News

ರಾಷ್ಟ್ರೀಯ

ಗೋಧಿ ವ್ಯಾಪಾರಿಗಳಿಂದ ದಾಸ್ತಾನು ಮಾಹಿತಿ ಪಡೆಯುವಂತೆ ರಾಜ್ಯಗಳಿಗೆ ಕೇಂದ್ರದ ಸೂಚನೆ

ನವದೆಹಲಿ : ಸಗಟು ವ್ಯಾಪಾರಿಗಳು ಮತ್ತು ಇತರ ವ್ಯಾಪಾರಿಗಳು ಹೊಂದಿರುವ ಗೋಧಿ ದಾಸ್ತಾನು ಮಾಹಿತಿಯನ್ನು ಪಡೆದುಕೊಳ್ಳುವಂತೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಕಾರ್ಯದರ್ಶಿ ಸಂಜೀವ್ ಚೋಪ್ರಾ ಆಯಾ ರಾಜ್ಯಗಳಿಗೆ ಸೂಚಿಸಿದ್ದಾರೆ. ಗೋಧಿ ಬೆಲೆ ತಗ್ಗಿಸಲು ಮತ್ತು ಸಂಗ್ರಹಣೆಯನ್ನು ತಡೆಯಲು ಸರ್ಕಾರವು ಮಾರ್ಚ್ 31, 2024 ರವರೆಗೆ ಗೋಧಿ ಮೇಲೆ ದಾಸ್ತಾನು ಮಿತಿಯನ್ನು ವಿಧಿಸಿದ ಒಂದು ದಿನದ ನಂತರ ಕೇಂದ್ರದ ಈ ಸೂಚನೆ ಬಂದಿದೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆದ ಸಭೆಯಲ್ಲಿ ಎಲ್ಲ …

Read More »

ಉತ್ತರ ಕನ್ನಡದಲ್ಲಿ ಪ್ರತ್ಯೇಕ ಪ್ರಕರಣ: ಅಕ್ರಮ ನಾಟಾ ಸಾಗಣೆ ಪ್ರಕರಣದಲ್ಲಿ ಐವರು ಡಿಆರ್ ಎಫ್‌ಓಗಳು ಅಮಾನತು: ಸಂಬಂಧಿ ಕೊಂದವನಿಗೆ ಜೀವಾವಧಿ ಶಿಕ್ಷೆ

ಕಾರವಾರ (ಉತ್ತರ ಕನ್ನಡ): ಮುಂಡಗೋಡದಿಂದ ಶಿರಸಿಗೆ ಅಕ್ರಮ ನಾಟ ಸಾಗಣೆ ಪ್ರಕರಣದಲ್ಲಿ ಅರಣ್ಯಾಧಿಕಾರಿಗಳು ಭಾಗಿಯಾದ ಹಿನ್ನೆಲೆಯಲ್ಲಿ ಐದು ಮಂದಿ ಡಿಆರ್​ಎಫ್​ಒಗಳನ್ನು ಜಿಲ್ಲಾ ಅರಣ್ಯ ಮುಖ್ಯಾಧಿಕಾರಿ ವಸಂತ್‌ ರೆಡ್ಡಿ (CCF) ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಶಿರಸಿಯ ಸುರೇಶ್ ವಡ್ಡರ್, ಮಾರುತಿ ಸೋರಗಾವಿ, ಮಹೇಶ್ ಬೋರ್ಕರ್, ಹನುಮಂತ ಬಂಡಿವಡ್ಡರ್, ಗುರುಚಂದ್ರ ಎಮ್. ಬ್ಯಾಳಿ ಅಮಾನತುಗೊಂಡ ಡಿ.ಆರ್.ಎಫ್.ಒ ಗಳು. ವಲಯ ಅರಣ್ಯ ಅಧಿಕಾರಿ ಜಿ.ಟಿ ರೇವಣಕರ್ ವಿರುದ್ಧ ಕ್ರಮಕ್ಕೆ ರಾಜ್ಯ ಅರಣ್ಯ ಮುಖ್ಯಸ್ಥರಿಗೆ ಶಿಫಾರಸು …

Read More »

ರಸ್ತೆ ಅಪಘಾತದಲ್ಲಿ ನವವಿವಾಹಿತರ ಸಾವು

ವಿಧಿಯಾಟ ಬಲ್ಲವರಾರು… ಈ ವರದಿ ನೋಡಿದ್ರೆ ಹೇ ವಿಧಿಯೇ ನಿನೇಷ್ಟೂ ಕ್ರೂರಿ ಅನ್ನಿಸದಿರದು. ರಸ್ತೆ ಅಪಘಾತವೊಂದು ನವ ವಿವಾಹಿತರನ್ನು ಬಲಿ ತೆಗೆದು ಕೊಂಡಿದೆ. ಮದುವೆಯಾಗಿ ಒಂದು ತಿಂಗಳಾಗುವ ಮುನ್ನ ಇಬ್ಬರೂ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವಿಜಯಪುರ ನಗರದ ಹೊರವಲಯದ ಸೋಲಾಪುರ ಬೈಪಾಸ್ ಬಳಿ ತಡರಾತ್ರಿ ಬೈಕ್‌ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಹೊನಮಲ್ಲ ತೆರದಾಳ (31) ಹಾಗೂ ಪತ್ನಿ ಗಾಯತ್ರಿ (24) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಸೇವೆ …

Read More »

ಫ್ಲೈ ಓವರ್ ನಿರ್ಮಿಸುವ ಪ್ರಸ್ತಾವಿತ ಯೋಜನೆ ರಸ್ತೆಗೆ ಸಂಬಂಧಿಸಿದಂತೆ ಸಭೆ

ಬೆಳಗಾವಿ ಜನರ ಬಹುದಿನಗಳಿಂದ ಬೇಡಿಕೆಯಾಗಿದ್ದ ಸ್ಮಾರ್ಟ್ ಸಿಟಿ ಯೋಜನೆಯ ಫ್ಲೇಓವರ್ ನಿರ್ಮಾಣದ ಕನಸನ್ನು ನನಸು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಸ್ಮಾರ್ಟ್ ಸಿಟಿ ಯೋಜನೆ ಬೆಳಗಾವಿಗೆ ಕಳೆದ ಹಲವುವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು ಈಗ ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾದ ಮೇಲೆ ಮತ್ತೆ ಸ್ಮಾರ್ಟ್ ಸಿಟಿ ಯೋಜನೆಯನ್ನು ಕೈಗೆತ್ತಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿಯಿಂದ ಬೆಳಗಾವಿ ನಗರ ಪ್ರವೇಶಿಸುವ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಿಸುವ ಪ್ರಸ್ತಾವಿತ ಯೋಜನೆ ಹಾಗೂ ಸರ್ವಿಸ್ ರಸ್ತೆಗೆ ಸಂಬಂಧಿಸಿದಂತೆ ಮಂಗಳವಾರ …

Read More »

ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಅತ್ತೆಯನ್ನೇ ಹತ್ಯೆ ಮಾಡಿದ ಸೊಸೆ.!

ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಕ್ಷುಲ್ಲಕ ವಿಷಯಕ್ಕೆ ತವರು ಮನೆಯವರನ್ನು ಕರೆಯಿಸಿ ಅತ್ತೆ, ಗಂಡನ ಮೇಲೆ ಹಲ್ಲೆ ಮಾಡಿದ್ದು, ತೀವ್ರವಾಗಿ ಹಲ್ಲೆಗೊಳಗಾದ ಅತ್ತೆ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ. ಮಹಾಬೂಬಿ ಯಾಕೂಶಿ (53) ಎಂಬುವವರೆ ಸಾವನ್ನಪ್ಪಿದ್ದ ದುರ್ದೈವಿ ಅತ್ತೆ. ಕಳೆದ ಮೇ. 22ರಂದು ಸೊಸೆ ಮೇಹರೂಣಿ ಯಾಕೂಶಿ, ತನ್ನ ಇಬ್ಬರು ಸಹೋದರರ ಜೊತೆ ಸೇರಿ ಹಲ್ಲೆ ಮಾಡಿದ್ದಳು. ಈ ವೇಳೆ ರಾಡ್‌ನಿಂದ ಗಂಡ ಸುಬಾನ್ ಮತ್ತು ಅತ್ತೆ …

Read More »

ವಯಸ್ಸು 40 ದಾಟುತ್ತಿದ್ದಂತೆ ದುರ್ಬಲವಾಗಿ ಬಿಡುತ್ತವೆ ಮೂಳೆಗಳು

ಮಾನವನ ವಯಸ್ಸು 40 ದಾಟಿದ ನಂತರ ಮೂಳೆಗಳು ಸಹಜವಾಗಿಯೇ ದುರ್ಬಲವಾಗುತ್ತವೆ. ಅದರಲ್ಲೂ ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಮೂಳೆಗಳ ದೌರ್ಬಲ್ಯದಿಂದಾಗಿ, ನಮ್ಮ ದೈನಂದಿನ ಜೀವನದ ಅಗತ್ಯ ಕೆಲಸಗಳನ್ನು ಮಾಡಲು ಕೆಲವೊಮ್ಮೆ ಕಷ್ಟವಾಗುತ್ತದೆ. ಆದ್ದರಿಂದ ಮೂಳೆಗಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯವಾಗಿದೆ. ಅನೇಕ ಬಾರಿ ನಮ್ಮ ಕೆಲವೊಂದು ಕೆಟ್ಟ ಅಭ್ಯಾಸಗಳೇ ದುರ್ಬಲ ಮೂಳೆಗಳ ಸಮಸ್ಯೆಗೆ ಕಾರಣವಾಗುತ್ತವೆ. ಇದರಿಂದ ಸಕ್ಕರೆ ಕಾಯಿಲೆ ಕೂಡ ಬರಬಹುದು. 40 ವರ್ಷ ವಯಸ್ಸಿನ …

Read More »

ಹೆತ್ತ ತಾಯಿ ಕೊಂದು ಸೂಟ್​ ಕೇಸ್​ನಲ್ಲಿ ಶವ ತಂದು ಪೊಲೀಸರಿಗೆ ಶರಣಾದ ಮಗಳು

ಬೆಂಗಳೂರು: ತಾಯಿಯೇ ದೇವರು, ಮಕ್ಕಳಿಗೆ ತಾಯಿನೇ ಎಲ್ಲ. ಆ ತಾಯಿ ಪ್ರೀತಿಗಾಗಿ ಎಷ್ಟೋ ಜನ ಪರಿತಪಿಸುತ್ತಾರೆ. ಆದರೆ, ಇಲ್ಲೊಬ್ಬಳು ಮಾತ್ರ ತನ್ನ ಹೆತ್ತ ತಾಯಿಯನ್ನು ಕೊಂದು ಸೂಟ್ ಕೇಸ್​ನಲ್ಲಿ ಶವ ತುಂಬಿಕೊಂಡು ನಿನ್ನೆ(ಸೋಮವಾರ) ರಾತ್ರಿ 11:30 ರ ಸುಮಾರಿಗೆ ನೇರವಾಗಿ ಮೈಕೋ ಲೇಔಟ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾಳೆ. ಸೆನಾಲಿ ಸೇನ್ (39) ತನ್ನ 71 ವರ್ಷ ವಯಸ್ಸಿನ ತಾಯಿ ಬೀವಾ ಪಾಲ್​ನ ಕೊಲೆ ಮಾಡಿದ ಬಳಿಕ ಪೊಲೀಸ್ ಠಾಣೆಗೆ ಬಂದು …

Read More »

ಎಕ್ಸ್​ಪ್ರೆಸ್​ವೇಯಲ್ಲಿ ಭೀಕರ ರಸ್ತೆ ಅಪಘಾತ.. ಹೊತ್ತಿ ಉರಿಯುತ್ತಿರುವ ಆಯಿಲ್​ ಟ್ಯಾಂಕರ್, ಸಾವು-ನೋವು! ​

ಪುಣೆ (ಮಹಾರಾಷ್ಟ್ರ): ಲೋನಾವಾಲಾ ಬಳಿಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯ ಮೇಲ್ಸೇತುವೆಯಲ್ಲಿ ತೈಲ ಟ್ಯಾಂಕರ್ ಅಪಘಾತಕ್ಕೀಡಾಗಿ (Oil Tanker Fire) ಬೆಂಕಿ ಹೊತ್ತಿಕೊಂಡ ಘಟನೆ ಬೆಳಕಿಗೆ ಬಂದಿದೆ. ಇದರಿಂದಾಗಿ ಸೇತುವೆಯ ಕೆಳಗಿನ ಭಾಗದಲ್ಲೂ ಅಪಘಾತಗಳು ಸಂಭವಿಸಿವೆ ಎಂಬ ಮಾಹಿತಿ ಹೊರಬೀಳುತ್ತಿದೆ. ಈ ಅಪಘಾತದಲ್ಲಿ 12 ವರ್ಷದ ಬಾಲಕ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಅಗ್ನಿ ಅವಘಡದಿಂದಾಗಿ ರಕ್ಷಣಾ ಕಾರ್ಯಾಚರಣೆಯು ಯುದ್ಧೋಪಾದಿಯಲ್ಲಿ ನಡೆಯುತ್ತಿದ್ದು, ಸದ್ಯ ಲೋನಾವಾಲಾ ನಗರದಿಂದ ವಾಹನ ಸಂಚಾರವನ್ನು ಬದಲಿಸಲಾಗಿದೆ. ಎಕ್ಸ್‌ಪ್ರೆಸ್‌ವೇಯಲ್ಲಿ …

Read More »

ಕಲಬುರಗಿಯಲ್ಲಿ ಜಾತ್ರೆಗೆ ಆಗಮಿಸಿದ್ದ ದಂಪತಿ ವಿದ್ಯುತ್‌ ತಂತಿ ತಗುಲಿ ಸಾವು

ಕಲಬುರಗಿ: ಜಾತ್ರೆಗೆ ಆಗಮಿಸಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಮೃತಪಟ್ಟಿರುವ ಘಟನೆ ಚಿತ್ತಾಪುರ ಪಟ್ಟಣದಲ್ಲಿ ಇಂದು ನಡೆದಿದೆ. ಯಾದಗಿರಿ ಜಿಲ್ಲೆಯ ಏವೂರ ತಾಂಡಾದ ನಿವಾಸಿಗಳಾದ ಶಿವು ರಾಠೋಡ (30) ಮತ್ತು ತಾರಾಬಾಯಿ ರಾಠೋಡ (26) ಮೃತರು. ಚಿತ್ತಾಪುರ ಪಟ್ಟಣದಲ್ಲಿ ನಡೆದ ಹಜರತ್ ಚಿತಾಶಹಾವಲಿ ದರ್ಗಾ ಜಾತ್ರಾ ಕಾರ್ಯಕ್ರಮಕ್ಕೆ ಇವರು ಆಗಮಿಸಿದ್ದರು. ಘಟನೆ ಹೀಗೆ ನಡೆಯಿತು..: ವಿದ್ಯುತ್ ಕಂಬದ ಆಸರೆಗೆಂದು ನೆಲದಲ್ಲಿ ಹೂತಿದ್ದ ತಂತಿಗೆ ವಿದ್ಯುತ್ ಪ್ರವಹಿಸಿದೆ. ಅಲ್ಲೇ ನೀರು ನಿಂತಿದ್ದರಿಂದ ಅವಘಡ ಸಂಭವಿಸಿದೆ. …

Read More »

ಕಾಲಗರ್ಭ ಸೇರುತ್ತಿವೆ ಪುರಾತನ ಸ್ಮಾರಕಗಳು: ಕನಕಗಿರಿ ಪುಷ್ಕರಣಿಯ ಕಥೆಯಲ್ಲ, ಇದು ವ್ಯಥೆ

ಗಂಗಾವತಿ: ಐತಿಹಾಸಿಕ ಹಿನ್ನೆಲೆಯುಳ್ಳ ಕನಕಗಿರಿ ಪಟ್ಟಣವು ಧಾರ್ಮಿಕವಾಗಿ ಮಾತ್ರವಲ್ಲದೇ ಪುರಾತನ ಸ್ಮಾರಕಗಳಿಂದ ಸಾಂಸ್ಕೃತಿಕವಾಗಿ ತನ್ನದೇ ಆದ ವೈಶಿಷ್ಟತೆ ಹೊಂದಿವೆ. ಪುರಾತತ್ವ ಇಲಾಖೆ ಮತ್ತು ಧಾರ್ಮಿಕ ದತ್ತಿ ಇಲಾಖೆಯ ನಿರ್ಲಕ್ಷ್ಯದಿಂದ ಪುರಾತನ ಸ್ಮಾರಕಗಳು, ದೇವಾಲಯಗಳು ಕ್ರಮೇಣ ಕಾಲಗರ್ಭಕ್ಕೆ ಸೇರುತ್ತಿರುವುದು ಪ್ರಜ್ಞಾವಂತ ನಾಗರಿಕರಲ್ಲಿ ಅತೀವ ಬೇಸರ ಮೂಡಿಸಿದೆ. ಹಾಲಿ ಸಚಿವ ಶಿವರಾಜ ತಂಗಡಗಿ ಮೂರು ಬಾರಿ ಸಚಿವರಾಗಿ, ಬಸವರಾಜ ದಢೇಸ್ಗೂರು ಶಾಸಕರಾಗಿ ಇದೇ ಕ್ಷೇತ್ರದಿಂದ ಆಯ್ಕೆಯಾದರೂ ಈ ಪ್ರಾಚೀನ ಸ್ಮಾರಕಗಳ ಸಂರಕ್ಷಣೆಯ ಬಗ್ಗೆ ಯಾವುದೇ …

Read More »