ಬೆಂಗಳೂರು : ರಾಜ್ಯ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ರಾಜ್ಯದ ನೂತನ ಕಾಂಗ್ರೆಸ್ ಸರಕಾರಿ ಆದೇಶ ಹೊರಡಿಸಿದೆ. ಶೇ.31ರಿಂದ 35ಕ್ಕೆ ಡಿಎ ಹೆಚ್ಚಳ ಮಾಡಲಾಗಿದೆ. ಇದು ಜನೆವರಿ 1ರಿಂದ ಪೂರ್ವಾನ್ವಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ಕಾರದ ಆದೇಶ ಸಂಖ್ಯೆ: ಆಇ ೧ ಎಸ್ಆರ್ಪಿ 2023 ಬೆಂಗಳೂರು, ದಿನಾಂಕ: 30ನೇ ಮೇ 2023 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2023 …
Read More »ಭಾರತೀಯ ಅರಣ್ಯ ಸೇವೆ ಅಧಿಕಾರಿ ರಾಜ್ ಕಿಶೋರ್ ಸಿಂಗ್ ರವರು ಮೇ 31 ರಂದು ವಯೋ ನಿವೃತ್ತಿ ಹೊಂದಲಿದ್ದಾರೆ.
ಬೆಂಗಳೂರು: ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥರಾಗಿರುವ ಭಾರತೀಯ ಅರಣ್ಯ ಸೇವೆ ಅಧಿಕಾರಿ ರಾಜ್ ಕಿಶೋರ್ ಸಿಂಗ್ ರವರು ಮೇ 31 ರಂದು ವಯೋ ನಿವೃತ್ತಿ ಹೊಂದಲಿದ್ದಾರೆ. ಅವರ ಜಾಗಕ್ಕೆ 1987ನೇ ಬ್ಯಾಚಿನ ಭಾರತೀಯ ಅರಣ್ಯ ಸೇವೆ ಅಧಿಕಾರಿ ಹಾಗೂ ಪ್ರಸ್ತುತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರಾಗಿ ಸೇವೆ ಸಲ್ಲಿಸುತ್ತಿರುವ ರಾಜೀವ್ ರಂಜನ್ ಅವರನ್ನು ಜೂನ್ 1 ರಿಂದ ಅನ್ವಯ …
Read More »ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು,ಬೆಳಗಾವಿ 16,765, B.P.L. ರೇಷನ್ ಕಾರ್ಡ್ ರದ್ದು.!
ಬೆಂಗಳೂರು : ಆಹಾರ ಇಲಾಖೆ ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿ ಪಡೆದವರಿಗೆ ಬಿಗ್ ಶಾಕ್ ನೀಡಿದೆ. ನಿಯಮ ಉಲ್ಲಂಘಿಸಿ ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ, 3,30,000 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಸರ್ಕಾರಿ ಮತ್ತು ಅರೆ ಸರ್ಕಾರಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ 22 ಸಾವಿರ ನೌಕರರು ಬಿಪಿಎಲ್ ಪಡಿತರ ಚೀಟಿ ಪಡೆದಿದ್ದಾರೆ ಎಂಬ ಮಾಹಿತಿ ಆಹಾರ ಇಲಾಖೆಗೆ ಸಿಕ್ಕಿದ್ದು, ಈವರೆಗೆ 17,338 ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ …
Read More »ಮದುವೆಗೆ ನಿರಾಕರಿಸಿದ ಪ್ರಿಯಕರನ ಮೇಲೆ ಮಹಿಳೆ ಬಿಸಿ ನೀರು ಎರಚಿ ಹಲ್ಲೆ
ಬೆಂಗಳೂರು : ಬೆಂಗಳೂರು ಜಿಲ್ಲೆಯ ಚಾಮರಾಜಪೇಟೆಯಲ್ಲಿ ಮದುವೆಗೆ ನಿರಾಕರಿಸಿದ ಪ್ರಿಯಕರನ ಮೇಲೆ ಮಹಿಳೆ ಬಿಸಿ ನೀರು ಎರಚಿ ಹಲ್ಲೆ ಮಾಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ಮೂಲದ ಮಹಿಳೆ ಇಂತಹ ಕೃತ್ಯವೆಸಗಿದ್ದಾಳೆ ಎಂದು ತಿಳಿದುಬಂದಿದೆ. ಕೆಲವು ದಿನಗಳಿಂದ ಭೀಮಾಶಂಕರ ಮತ್ತು ಮಹಿಳೆ ಪ್ರೀತಿಸುತ್ತಿದ್ದರು. ಆಬಳಿಕ ಮಹಿಳೆಗೆ ಮೊದಲೇ ಮದುವೆಯಾಗಿದೆ ಎಂದು ಗೊತ್ತಾಗಿದೆ. ಈ ಕಾರಣದಿಂದಾಗಿ ಮಹಿಳೆಯಿಂದ ಅಂತರ ಕಾಯ್ದುಕೊಳ್ಳಲು ಭೀಮಾಶಂಕರ ಮುಂದಾಗಿದ್ದಾನೆ ಅಲ್ಲದೇ ತಾನು ವಾಸವಾಗಿದ್ದ …
Read More »ಆತಂಕದಲ್ಲಿ ಮಕ್ಕಳ ಶಿಕ್ಷಣ; ಸರ್ಕಾರಿ ಶಾಲೆಗಳ ಗೋಳು ಕೇಳೋರು ಯಾರು..?
ಬೆಳಗಾವಿ: ರಾಜ್ಯಾದ್ಯಂತ ಶಾಲೆಗಳ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಆದರೆ, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳೇ ವಿದ್ಯಾರ್ಥಿಗಳನ್ನು ಸ್ವಾಗತಿಸುವ ದುಃಸ್ಥಿತಿ ಬೆಳಗಾವಿ ಜಿಲ್ಲೆಯಲ್ಲಿದೆ. ಹೌದು, ರಾಜ್ಯ ಸರ್ಕಾರದ ಸುತ್ತೋಲೆಯಂತೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳು ಸೋಮವಾರ ಆರಂಭವಾಗಿವೆ. ಬೆಳಗಾವಿಯಲ್ಲಿ ಮೊದಲ ದಿನ ಕೆಲವೇ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ್ದು, ಶಿಕ್ಷಕರು ಶಾಲೆ ಆರಂಭದ ಹಿನ್ನೆಲೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. 31ರಿಂದ ಎಲ್ಲ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಶಾಲೆಯತ್ತ ಮುಖ ಮಾಡಲಿದ್ದಾರೆ. ಮಕ್ಕಳು ಉತ್ಸಾಹದಿಂದ …
Read More »ಲೈಂಗಿಕ ದೌರ್ಜನ್ಯ, ಕೊಲೆ ಅಪರಾಧಿಗೆ 15 ದಿನಗಳಲ್ಲೇ ಮರಣದಂಡನೆ ವಿಧಿಸಿದ ಮಥುರಾ ಕೋರ್ಟ್…!
ಮಥುರಾ (ಉತ್ತರ ಪ್ರದೇಶ): ಜಿಲ್ಲೆಯ ವಿಶೇಷ ಪೋಕ್ಸೊ ಕಾಯಿದೆ ನ್ಯಾಯಾಲಯವು ಕೇವಲ 15 ದಿನಗಳಲ್ಲಿ ಲೈಂಗಿಕ ದೌರ್ಜನ್ಯ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆ ವಿಧಿಸುವ ಮೂಲಕ ಸೋಮವಾರ ಇತಿಹಾಸ ಸೃಷ್ಟಿಸಿದೆ. ಪೊಲೀಸರ ಚುರುಕುತನ ಮತ್ತು ಎಲ್ಲ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಅಪರಾಧಿಗೆ 15 ದಿನಗಳಲ್ಲಿಯೇ ಶಿಕ್ಷೆಯನ್ನು ಪ್ರಕಟಿಸಲಾಗಿದೆ. ಹೌದು, ನ್ಯಾಯಾಲಯವು ಅಪರಾಧಿಗೆ ಮರಣದಂಡನೆ ವಿಧಿಸಿದೆ. ಏಪ್ರಿಲ್ 8ಕ್ಕೆ ಕಾಣೆಯಾಗಿದ್ದ ಬಾಲಕ: ಸದರ್ ಬಜಾರ್ ಪೊಲೀಸ್ ಠಾಣೆಯ ಔರಂಗಾಬಾದ್ ಪ್ರದೇಶದ 9 ವರ್ಷದ ಬಾಲಕ …
Read More »2 ಸಾವಿರದ ನೋಟು ಚಲಾವಣೆಗೆ ತಂದು ಬ್ಯಾನ್ ಮಾಡಿದ್ದು ಅಸಂಬದ್ಧ: ಚಿದಂಬರಂ ಟೀಕೆ
ಮುಂಬೈ: ಎರಡು ಸಾವಿರದ ನೋಟು ಚಲಾವಣೆ ಮತ್ತು ಅದರ ಹಿಂಪಡೆಯುವಿಕೆ ಭಾರತೀಯ ಕರೆನ್ಸಿಯ ಸಮಗ್ರತೆ ಮತ್ತು ಸ್ಥಿರತೆಯ ಮೇಲೆ ಅನುಮಾನ ಮೂಡಿಸಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಸೋಮವಾರ ಹೇಳಿದ್ದಾರೆ. ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರದ ಮಾಜಿ ಹಣಕಾಸು ಸಚಿವರು, ಆರ್ಥಿಕ ಸೂಚ್ಯಂಕಗಳು ಕೆಳಮುಖವಾಗುತ್ತಿವೆ. ಇದು ಆರ್ಥಿಕತೆ ಬೆಳವಣಿಗೆ ಹೊಂದುತ್ತದೆ ಎಂಬ ವಿಶ್ವಾಸ ಕಡಿಮೆ ಮಾಡಿದೆ ಎಂದು ಹೇಳಿದರು. ಭಾರತೀಯ ರಿಸರ್ವ್ ಬ್ಯಾಂಕ್ ಚಲಾವಣೆಯಲ್ಲಿದ್ದ 2000 ರೂಪಾಯಿ ನೋಟುಗಳನ್ನು …
Read More »ಮುಂಬರುವ ಮಧ್ಯಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ: ರಾಹುಲ್ ಗಾಂಧಿ ಭವಿಷ್ಯ
ನವದೆಹಲಿ: ಕರ್ನಾಟಕ ಚುನಾವಣೆಯ ಗೆಲುವಿನ ಉತ್ಸಾಹದಲ್ಲಿರುವ ಕಾಂಗ್ರೆಸ್ ಮಧ್ಯಪ್ರದೇಶದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ತನ್ನದಾಗಿಸಿಕೊಳ್ಳಲಿದೆ ಎಂದು ನವದೆಹಲಿಯಲ್ಲಿ ಮಧ್ಯಪ್ರದೇಶ ನಾಯಕರೊಂದಿಗೆ ಚರ್ಚೆ ನಡೆಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭವಿಷ್ಯ ನುಡಿದರು. ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಾಧ್ಯಕ್ಷ ಕಮಲ್ ನಾಥ್, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು. ಮಧ್ಯಪ್ರದೇಶದ ರಾಜ್ಯ ನಾಯಕರಿಗೆ ಪಕ್ಷದಲ್ಲಿರುವ ಬೇರೆ ಯಾವುದೇ ನಾಯಕರು ಹೇಳಿಕೆ …
Read More »ಮೇ 31 ರಿಂದ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಶಾಲೆಗಳು ಆರಂಭ
ಬೆಂಗಳೂರು : ಇಂದಿನಿಂದ 2023-24ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷಾರಂಭಗೊಂಡಿದ್ದು, ಮೇ 31 ರಿಂದ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಶಾಲೆಗಳು ಆರಂಭಗೊಳ್ಳಲಿವೆ. ಶಾಲೆಗಳ ಆರಂಭಕ್ಕೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಲ್ಲ ಶಾಲೆಗಳಿಗೆ ಸೂಚನೆ ನೀಡಿದೆ. 2022-23ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಶಾಲೆಗಳಿಗೆ ನೀಡಲಾಗಿದ್ದ ಬೇಸಿಗೆ ರಜೆ ನಿನ್ನೆಗೆ ( ಭಾನುವಾರ) ಅಂತ್ಯಗೊಂಡಿದ್ದು, ಇಂದಿನಿಂದ ನೂತನ ಶೈಕ್ಷಣಿಕ ವರ್ಷಾರಂಭವಾಗಿದೆ. ಆದರೆ, ಶಾಲೆಗಳ ಆರಂಭಕ್ಕೆ ಇನ್ನು …
Read More »ಜಿಪಂ, ತಾಪಂ ಚುನಾವಣೆಗೆ ಪ್ರಕ್ರಿಯೆ ಪೂರ್ಣಗೊಳಿಸಲು ನಾಲ್ಕು ವಾರ ಕಾಲಾವಕಾಶ ನೀಡಿದ ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿ ಕಳೆದೆರಡು ವರ್ಷಗಳಿಂದ ಸ್ಥಗಿತಗೊಂಡಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದ ಪ್ರಕಿಯೆ ಪೂರ್ಣ ಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಅವಧಿ ಮುಗಿದ ಜಿಪಂ ಮತ್ತು ತಾಪಂಗಳಿಗೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಲು ಅನುವು ಮಾಡಿಕೊಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ರಾಜ್ಯದಲ್ಲಿ ತಾಪಂ, ಜಿಪಂ ಕ್ಷೇತ್ರ ಮರುವಿಂಗಡಣೆ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದು ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿರುವುದನ್ನು …
Read More »