ಬೆಂಗಳೂರು: ರಾಜ್ಯದಲ್ಲಿ ಚಿಕೂನ್ಗುನ್ಯಾ ಹಾಗೂ, ಡೆಂಗ್ಯೂ ಸೋಂಕಿನ ಪ್ರಕರಣಗಳು ಏರಿಕೆ ಕಂಡಿದ್ದು ಇದು ಸೋಂಕಿನ ನಿಯಂತ್ರಣ ವೈಫಲ್ಯವೂ ಸಾರ್ವಜನಿಕರಿಗೆ ಆರೋಗ್ಯ ಸವಾಲಿನ ಬೆದರಿಕೆ ಒಡ್ಡುತ್ತಿದೆ. ರಾಜ್ಯದಲ್ಲಿ ಚಿಕೂನ್ಗುನ್ಯಾ ಹೆಚ್ಚಳವಾಗಿರುವ ಕುರಿತು ಎನ್ವಿಬಿಡಿಎಸ್ಪಿ ಅಂಕಿ ಅಂಶ ಬಿಡುಗಡೆ ಮಾಡಿದ್ದು, ಮಾಹಿತಿ ಇಲ್ಲಿದೆ. 2018ರಿಂದ 2025ರ ವರೆಗೆ ರಾಜ್ಯದಲ್ಲಿನ ಚಿಕೂನ್ಗುನ್ಯಾ ಪ್ರಕರಣಗಳು ವರ್ಷ ಶಂಕಿತ ಚಿಕೂನ್ಗುನ್ಯಾ ಪ್ರಕರಣ ದೃಢ ಚಿಕೂನ್ಗುನ್ಯಾ ಪ್ರಕರಣ 2018 20411 2546 2019 43698 3664 2020 16111 1326 …
Read More »ಸೂಟ್ಕೇಸ್ನಲ್ಲಿ ಯುವತಿ ಶವ
ಆನೇಕಲ್ (ಬೆಂಗಳೂರು): ತಾಲೂಕಿನ ಚಂದಾಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿಯೇ ರೈಲ್ವೆ ಬ್ರಿಡ್ಜ್ ಸಮೀಪ ನೀಲಿ ಬಣ್ಣದ ಸೂಟ್ ಕೇಸ್ ಕಂಡಿದ್ದು, ಪರಿಶೀಲನೆ ವೇಳೆ ಸಾರ್ವಜನಿಕರು ಶಾಕ್ ಆಗಿದ್ದಾರೆ. ಹೊಸೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 18 ವರ್ಷ ವಯಸ್ಸಿನ ಯುವತಿ ಶವ ಸೂಟ್ ಕೇಸ್ನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ದೊರೆತಿದೆ. ಯುವತಿ ಗುಲಾಬಿ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ …
Read More »ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆ ಅನಾಹುತ ಎದುರಾಗಿದೆ: ಡಿ.ಕೆ. ಶಿ
ಬೆಂಗಳೂರು: ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆ ಅನಾಹುತ ಸಮಸ್ಯೆ ಎದುರಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆರೋಪಿಸಿದರು. ಬುಧವಾರ ನಗರ ಪ್ರದಕ್ಷಿಣೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ. ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ. ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಇಂತಹ ಸಮಸ್ಯೆ ಎದುರಾಗಿದೆ ಎಂದರು. ಮಳೆಯಿಂದ …
Read More »ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ರೋಹಿತ್ ಶರ್ಮಾ
ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದ ರೋಹಿತ್ ಶರ್ಮಾ (Rohit Sharma) ಇನ್ನು ಮುಂದೆ ಏಕದಿನ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಪ್ರಸ್ತುತ ಐಪಿಎಲ್ನಲ್ಲಿ (IPL 2025) ಮುಂಬೈ ಇಂಡಿಯನ್ಸ್ ಪರ ಕಳೆದ ಕೆಲವು ಪಂದ್ಯಗಳಿಂದ ಸ್ಥಿರ ಪ್ರದರ್ಶನ ನೀಡುತ್ತಿರುವ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್ ಮುಗಿದ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ವರದಿಗಳ ಪ್ರಕಾರ, ರೋಹಿತ್ ಕಳೆದ ಐದು ವರ್ಷಗಳಿಂದ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಐಪಿಎಲ್ ನಂತರ …
Read More »ಸದ್ಯದಲ್ಲೇ ರಾಮ ಮಂದಿರ ನಿರ್ಮಾಣ ಪೂರ್ಣ; ಜೂನ್ 5ರಂದು ರಾಮ ದರ್ಬಾರ್ ಪ್ರಾಣ ಪ್ರತಿಷ್ಠೆ
ಅಯೋಧ್ಯೆ, ಮೇ 21: ಅಯೋಧ್ಯೆಯಲ್ಲಿನ ಐತಿಹಾಸಿಕ ರಾಮ ಮಂದಿರದ (Ram Temple) ನಿರ್ಮಾಣ ಕಾರ್ಯ ಜೂನ್ 5ರೊಳಗೆ ಪೂರ್ಣಗೊಳ್ಳಲಿದ್ದು, ಜೂನ್ 3ರಿಂದ ಪ್ರಾರಂಭವಾಗುವ ಸಮಾರಂಭದಲ್ಲಿ ‘ರಾಮ ದರ್ಬಾರ್’ನ ಪವಿತ್ರೀಕರಣ ನಡೆಯಲಿದೆ ಎಂದು ಶ್ರೀ ರಾಮ ಜನ್ಮಭೂಮಿ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ. ರಾಮ ದರ್ಬಾರ್ನ ‘ಪ್ರಾಣ ಪ್ರತಿಷ್ಠೆ’ ಜೂನ್ 3ರಿಂದ 5ರವರೆಗೆ ನಡೆಯಲಿದೆ. ಜೂನ್ 5ರಂದು ನಡೆಯಲಿರುವ ಪವಿತ್ರೀಕರಣ ಸಮಾರಂಭಕ್ಕೆ ವಿವಿಧ ಧರ್ಮಗಳ ಆಧ್ಯಾತ್ಮಿಕ ನಾಯಕರನ್ನು ಆಹ್ವಾನಿಸಲಾಗುವುದು ಎಂದು ಮಿಶ್ರಾ …
Read More »ಸಾಧನಾ ಸಮಾವೇಶ ನಂತರ ಸಿಎಂ ಕುರ್ಚಿ ಗಟ್ಟಿಯಾಗಿರಲ್ಲಾ : ಮಾಜಿ ಸಚಿವ ಶ್ರೀರಾಮುಲು
ಸಾಧನಾ ಸಮಾವೇಶ ನಂತರ ಸಿಎಂ ಕುರ್ಚಿ ಗಟ್ಟಿಯಾಗಿರಲ್ಲಾ : ಮಾಜಿ ಸಚಿವ ಶ್ರೀರಾಮುಲು ಕಾಂಗ್ರೆಸ್ 2 ವರ್ಷ ಸಾಧನಾ ಸಮಾವೇಶ ನಂತರ ಸಿಎಂ ಕುರ್ಚಿ ಗಟ್ಟಿಯಾಗಿರಲ್ಲಾ. ಕುರ್ಚಿ ಅಲ್ಲಾಡು ಸಂದರ್ಭದಲ್ಲಿ ಈ ರೀತಿ ಸಮಾವೇಶ ಮಾಡ್ತಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭಾಷಣ ಸುಳ್ಳುಗಳಿಂದ ಕೂಡಿತ್ತು. ಸಾಧನಾ ಸಮಾವೇಶ ಹಳೆ ರೇಡಿಯೋದಂತೆ ಅದೇ ಗಾನಾ ಬಜಾನಾ ಮಾಡಿದ್ದಾರೆ …
Read More »16ನೇ ರಾಷ್ಟ್ರೀಯ ಸಿನಿಯರ್ ದೇಹದಾರ್ಢ್ಯ ಸ್ಪರ್ಧೆ ಯಶಸ್ವಿಗೆ ಸಹಕಾರ….
16ನೇ ರಾಷ್ಟ್ರೀಯ ಸಿನಿಯರ್ ದೇಹದಾರ್ಢ್ಯ ಸ್ಪರ್ಧೆ ಯಶಸ್ವಿಗೆ ಸಹಕಾರ…. ಬೆಳಗಾವಿಯ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಅವರನ್ನು ಸತ್ಕರಿಸಿದ ದೇಹದಾರ್ಢ್ಯಪಟುಗಳ ಸಂಘಟನೆ ಮತ್ತು ರೋಟರಿ ಕ್ಲಬ್ ಬೆಳಗಾವಿ ಜಿಲ್ಹಾ ದೇಹದಾರ್ಢ್ಯಪಟುಗಳ ಸಂಘಟನೆ ಮತ್ತು ರೋಟರಿ ಕ್ಲಬ್ ಆಫ್ ಬೆಲಗಾಮ್’ನ ವತಿಯಿಂದ ಬೆಳಗಾವಿಯ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಅವರನ್ನು ಸನ್ಮಾನಿಸಲಾಯಿತು. ಬೆಳಗಾವಿಯಲ್ಲಿ ರೋಟರಿ ಅನ್ನೋತ್ಸವದ ವೇಳೆ ಇಂಡಿಯನ್ ಬಾಡಿ ಬಿಲ್ಡಿಂಗ್ ಫೆಡರೇಶನ್ , ಕರ್ನಾಟಕ ಸ್ಫೋರ್ಟ್ಸ್ ಅಥಾರಿಟಿಯಿಂದ ಮಾನ್ಯತೆ ಪಡೆದ ಕರ್ನಾಟಕ ಅಸೋಸಿಯೇಷನ್ …
Read More »ಜಗತ್ತಿನ ಮುಂದೆ ಪಾಕ್ನ ಬಂಡವಾಳ ಬಯಲು ಮಾಡಲು ಇಂದಿನಿಂದ ಸಂಸದರ ವಿದೇಶ ಯಾತ್ರೆ ಶುರು
ನವದೆಹಲಿ, ಮೇ 21: ಜಗತ್ತಿನ ಮುಂದೆ ಪಾಕಿಸ್ತಾನ(Pakistan)ದ ಬಂಡವಾಳ ಬಯಲು ಮಾಡಲು ಕೇಂದ್ರ ಸರ್ಕಾರವು 59 ಸದಸ್ಯರ ನಿಯೋಗವನ್ನು ಇಂದು ಪ್ರಪಂಚದಾದ್ಯಂತ ಕಳುಹಿಸಲಿದೆ. ಸರ್ವಪಕ್ಷ ಸಂಸದರ 7 ನಿಯೋಗಗಳನ್ನು ರಚಿಸಲಾಗಿದೆ. ಇದರಲ್ಲಿ 10 ಮುಸ್ಲಿಂ ನಾಯಕರನ್ನು ಸಹ ಇರಿಸಲಾಗದೆ. ನಿಯೋಗದಲ್ಲಿ 51 ನಾಯಕರು ಮತ್ತು 8 ರಾಯಭಾರಿಗಳು ಸೇರಿದ್ದಾರೆ. ಎನ್ಡಿಎ, ಕಾಂಗ್ರೆಸ್ ಮತ್ತು ಇತರ ಪಕ್ಷಗಳ ನಾಯಕರು ಅದರಲ್ಲಿ ಸ್ಥಾನ ಪಡೆದಿದ್ದಾರೆ. ಭಾರತೀಯ ನಿಯೋಗ ಬುಧವಾರ (ಮೇ 21) ಹೊರಡಲಿದೆ. …
Read More »ಭಾರಿ ಮಳೆಗೆ ಉಡುಪಿ ತತ್ತರ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಗೆ, ಅಲ್ಲಲ್ಲಿ ಕೃತಕ ನೆರೆ ಉಂಟಾಗಿದೆ. ಇದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಮಣಿಪಾಲ ಐನಾಕ್ಸ್ನಿಂದ ಸಿಂಡಿಕೇಟ್ ಸರ್ಕಲ್ ಮಧ್ಯೆ ಸಿಗುವ ರಸ್ತೆಯ ಬದಿ ತುಂಬಿಸಲಾದ ಮಣ್ಣು ಭಾರೀ ಮಳೆಯಿಂದ ಕಿತ್ತು ಬಂದಿದ್ದು, ಇದರಿಂದಾಗಿ ಕಲ್ಲು ಮಿಶ್ರಿತ ನೀರು ರಸ್ತೆಯಲ್ಲಿ ಪ್ರವಾಹದಂತೆ ಹರಿದಿದೆ. ಹಲವು ವಾಹನಗಳಿಗೆ ಹಾನಿಯಾಗಿದ್ದಲ್ಲದೇ ರಸ್ತೆ ಬದಿ ಬೃಹತ್ ಅಪಾಯಕಾರಿ ತೋಡು ಸೃಷ್ಠಿಯಾಗಿದೆ. …
Read More »SBI ಬ್ಯಾಂಕ್ನಲ್ಲಿ ‘ಕನ್ನಡ ಮಾತನಾಡುವುದಿಲ್ಲ’ವೆಂದ ಮ್ಯಾನೇಜರ್
ಆನೇಕಲ್(ಬೆಂಗಳೂರು): ತಾಲೂಕಿನ ಚಂದಾಪುರದ ಸೂರ್ಯನಗರದಲ್ಲಿನ ಎಸ್ಬಿಐ ಬ್ಯಾಂಕ್ ಮ್ಯಾನೇಜರ್ ಚಳವಳಿಗಾರರೊಬ್ಬರಿಗೆ ಕನ್ನಡ ಮಾತನಾಡುವುದೇ ಇಲ್ಲ ಎಂದು ಪಟ್ಟು ಹಿಡಿದ ವಿಡಿಯೋ ವೈರಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂದಿನಂತೆ ಕನ್ನಡ ಮಾತನಾಡದ ಮಹಿಳಾ ಮ್ಯಾನೇಜರ್ ಕೇವಲ ಇಂಗ್ಲಿಷ್ , ಹಿಂದಿಯಲ್ಲಿಯೇ ಪ್ರತಿಕ್ರಿಯಿಸುತ್ತಿರುವುದನ್ನು ಮೊಬೈಲ್ ಮೂಲಕ ದೃಶ್ಯ ಸೆರೆ ಮಾಡುತ್ತಲೇ, ತಮ್ಮ ಖಾತೆಯಲ್ಲಿ ಹರಿಬಿಟ್ಟ ಸ್ಥಳೀಯ ಮಹೇಶ್ ರೆಡ್ಡಿ ಎಂಬುವರು ‘ಕನ್ನಡ ಮಾತನಾಡಲೇ ಬೇಕು. ಅದು ಆರ್ಬಿಐ ನಿಯಮ’ ಎಂದು ಪಟ್ಟು …
Read More »
Laxmi News 24×7