Breaking News

ರಾಷ್ಟ್ರೀಯ

ಹಿಂದೂಗಳ ಭಾವನೆಗೆ ದಕ್ಕೆಮಾಡಿದವರನ್ನು ಕೂಡಲೆ ಪೋಲಿಸರು ಬಂಧಿಸುವಂತೆ ಮನವಿ

ಸಾಮಾಜಿಕ ಜಾಲತಾಣಗಳ ಮೂಲಕ ಹಿಂದೂಗಳ ಭಾವನೆಗೆ ದಕ್ಕೆಮಾಡಿದವರನ್ನು ಕೂಡಲೆ ಪೋಲಿಸರು ಬಂಧಿಸುವಂತೆ ವಿವಿಧ ಹಿಂದೂ ಸಂಘಟನೆಗಳು ಮನವಿ ಬೆಳಗಾವಿಯ ಕೊಲ್ಲಾಪುರ ನಿಪ್ಪಾಣಿಗಳಲ್ಲಿ ನಡೆದ ಘಟನೆಗೆ ಸಂಭದಿಸಿದಂತೆ ನಗರದಲ್ಲಿಯು ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವವರನ್ನು ಕೂಡಲೆ ಬಂಧಿಸುವಂತೆ ವಿವಿಧ ಹಿಂದೂಪರ ಸಂಘಟನೆಗಳು ಇಂದು ಎಸಿಪಿ ನಾರಾಯಣ ಭರಮನಿಗೆ ಅವರಿಗೆ ಮನವಿಯನ್ನು ಸಲ್ಲಿಸಿದರು. ಮಾಧ್ಯಮಗಳಿಗೆ ಪ್ರತಿಕ್ರೀಯಿಸಿದ ಶ್ರೀರಾಮ ಸೇನೆ ಹಿಂದೂ ರಾಷ್ಟ್ರದ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್ ಕೊಲ್ಲಾಪುರ ನಿಪ್ಪಾಣಿಗಳಲ್ಲಿನಡೆದ ಘಟನೆಗಳು ಹಿಂದೂಗಳ ಭಾವನೆ …

Read More »

ಫೈನಾನ್ಸ್ ಕಂಪನಿಗೆ 5.47 ಲಕ್ಷ ಪಂಗನಾಮ

ವಾಣಿಜ್ಯನಗರಿ ಹುಬ್ಬಳ್ಳಿಯ ಜೆಸಿ ನಗರದ ಶ್ರೀರಾಮ ಸಿಟಿ ಯೂನಿಯನ್‌ ಫೈನಾನ್ಸ್‌ ಕಂಪನಿಯಲ್ಲಿ ಶಾಖಾ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿವಾಕರ ಜಯರಾಜ ಅವರು, ಗ್ರಾಹಕರು ತುಂಬಿದ 5.47 ಲಕ್ಷವನ್ನು ಸ್ವಂತಕ್ಕೆ ಬಳಸಿಕೊಂಡು ಕಂಪನಿಗೆ ವಂಚನೆ ಮಾಡಿದ ಪ್ರಕರಣ ಶಹರ ಠಾಣೆಯಲ್ಲಿ ದಾಖಲಾಗಿದೆ. ಅರವಿಂದ ನಗರದ ದಿವಾಕರ ಅವರು ಫೈನಾನ್ಸ್‌ ಕಂಪನಿಯಲ್ಲಿ ಶಾಖಾ ವ್ಯವಸ್ಥಾಪಕ, ಶಾಖಾ ಹಿರಿಯ ವ್ಯವಸ್ಥಾಪಕ, ವಿಭಾಗೀಯ ವ್ಯವಸ್ಥಾಪಕ ಮತ್ತು ಪ್ರಾದೇಶಿಕ ವ್ಯವಹಾರಗಳ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆ ವೇಳೆ …

Read More »

ಶಕ್ತಿ ಯೋಜನೆಯಿಂದ ಹೊರಗುಳಿದ ಚಿಗರಿ: ಹು-ಧಾ ಮಹಿಳೆಯರಿಗೆ ಎಸಿ ಬಸ್ ಪ್ರಯಾಣ ಭಾಗ್ಯವಿಲ್ಲ

ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಹುಬ್ಬಳ್ಳಿ- ಧಾರವಾಡದ ಪ್ರತಿಷ್ಠಿತ ಬಿ.ಆರ್.ಟಿ.ಎಸ್ ಯೋಜನೆ ಈಗ ಸರ್ಕಾರಕ್ಕೆ ತಲೆನೋವಾಗಿದೆ. ಉಚಿತ ಬಸ್ ಪ್ರಯಾಣದ ಭರವಸೆ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರದಿಂದ ಈಗ ಚಿಗರಿ ಚಿಂತಿಸುವ ಕಾಲಘಟ್ಟಕ್ಕೆ ಬಂದು ತಲುಪಿದೆ. ಹುಬ್ಬಳ್ಳಿ- ಧಾರವಾಡ ವ್ಯಾಪ್ತಿಯ ಚಿಗರಿ ಬಸ್, ಸಾರಿಗೆ ವ್ಯಾಪ್ತಿಯ ಹವಾ ನಿಯಂತ್ರಿತ ಬಸ್ ಆಗಿದ್ದು, ಚಿಗರಿ ಬಸ್​ನಲ್ಲೂ ಫ್ರೀ ಬಿಡಬೇಕು ಎಂಬ ಮಾತು ಕೇಳಿಬಂದಿದೆ. ಆದರೆ ಹುಬ್ಬಳ್ಳಿ- ಧಾರವಾಡ ನಡುವೆ ಸಂಚರಿಸುವ ಹವಾನಿಯಂತ್ರಿತ …

Read More »

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅರ್ಜಿ ನಮೂನೆ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅರ್ಜಿ ನಮೂನೆ ಬಿಡುಗಡೆ ಮಾಡಿದೆ. ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಜೂನ್ 15ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅರ್ಜಿ ನಮೂನೆ ಬಿಡುಗಡೆ ಮಾಡಿದ್ದು, ಅರ್ಜಿ ಯಾವ ರೀತಿಯಾಗಿರಲಿದೆ? ಯಾವೆಲ್ಲ ದಾಖಲೆಗಳ ಅಗತ್ಯವಿದೆ ಎಂಬ ಬಗ್ಗೆ ಅರ್ಜಿಯಲ್ಲಿ ಸ್ಪಷ್ಟ ಚಿತ್ರಣವಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ …

Read More »

ಬಳ್ಳಾರಿ ವಿಮ್ಸ್​ನಲ್ಲಿದೆ ಉದ್ಯೋಗಾವಕಾಶ: ವಾಕ್​-ಇನ್​ನಲ್ಲಿ ನೀವೂ ಭಾಗಿಯಾಗಿ!

ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಲ್ಲಿ (ವಿಮ್ಸ್​​) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಆಹ್ವಾನಿಸಲಾಗಿದೆ. ವೈದ್ಯಕೀಯ ಸಂಸ್ಥೆಯಲ್ಲಿ ಖಾಲಿ ಇರುವ ಪ್ರೊಫೆಸರ್​, ಅಸೋಸಿಯೇಟ್​ ಪ್ರೊಫೆಸರ್​, ಮೆಡಿಕಲ್​ ಆಫೀಸರ್​ ಸೇರಿದಂತೆ 93 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ವಾಕ್​ ಇನ್​ ಇಂಟರ್​ವ್ಯೂ ಮೂಲಕ ಈ ಹುದ್ದೆಗೆ ಆಯ್ಕೆ ನಡೆಯಲಿದೆ ಆಸಕ್ತಿ ಮತ್ತು …

Read More »

ಕರುನಾಡಿನಲ್ಲೂ ವಿವಾದಾತ್ಮಕ ಸ್ಟೇಟಸ್ ಪೋಸ್ಟ್: ನಿಪ್ಪಾಣಿಯಲ್ಲಿ ಪ್ರಕರಣ ದಾಖಲು

ಚಿಕ್ಕೋಡಿ : ಕೋಮು ಗಲಭೆಗೆ ಕಾರಣವಾದ ಸ್ಟೇಟಸ್​ವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡಿದ ಹಿನ್ನೆಲೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಭಾರಿ ವಿವಾದ ಸೃಷ್ಟಿಯಾಗಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ನಗರ ಈಗ ಶಾಂತ ಸ್ಥಿತಿಗೆ ಬರುವಷ್ಟರಲ್ಲಿಯೇ ಆ ವಿವಾದ ಕರ್ನಾಟಕದ ನೆಲಕ್ಕೂ ಕಾಲಿಟ್ಟಿದೆ. ಸದ್ಯಕ್ಕೆ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ. ನಿಪ್ಪಾಣಿ ನಗರದ ಬಾಲಕನೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಸ್ಟೇಟಸ್ ಪೋಸ್ಟ್​ ಮಾಡಿದ ಹಿನ್ನೆಲೆಯಲ್ಲಿ ನಿಪ್ಪಾಣಿ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. …

Read More »

ಜಾಮೀನು ಕೋರಿ ಮುರುಘಾ ಶರಣರಿಂದ ಹೈಕೋರ್ಟ್​ಗೆ ಅರ್ಜಿ

ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಸ್ವರೂಪದ ಪ್ರಕರಣದಲ್ಲಿ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ನಿಯಮಿತ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮುರುಘಾ ಶರಣರ ಪರವಾಗಿ ವಕೀಲ ಸಂದೀಪ್‌ ಪಾಟೀಲ್‌ ಬುಧವಾರ ಅರ್ಜಿ ದಾಖಲಿಸಿದರು. ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ನಜರ್‌ಬಾದ್ …

Read More »

ಸಿಇಟಿ ಪರೀಕ್ಷೆ 2023: ಆರ್​ಡಿ ಸಂಖ್ಯೆ ತಿದ್ದುಪಡಿಗೆ ಮತ್ತೊಂದು ಅವಕಾಶ

ಬೆಂಗಳೂರು : ಸಿಇಟಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿಯಲ್ಲಿ ನಮೂದಿಸಿರುವ ಜಾತಿ/ಆದಾಯ/ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರಗಳ ಆರ್‌ಡಿ ಸಂಖ್ಯೆಯನ್ನು ಕಂದಾಯ ಇಲಾಖೆಯ ಆರ್​.ಡಿ ಸಂಖ್ಯೆ ಜೊತೆ ನಮೂದಿಸುವ ಪ್ರಕ್ರಿಯೆ ಈಗ ನಡೆಯುತ್ತಿದೆ. ಆದರೆ, ಸಾವಿರಾರು ಅಭ್ಯರ್ಥಿಗಳ ಈ ಸಂಖ್ಯೆಗಳು ನಾನಾ ಕಾರಣಗಳಿಗಾಗಿ ತಾಳೆಯಾಗದೆ ಇರುವ ಹಿನ್ನೆಲೆಯಲ್ಲಿ ಸೂಕ್ತ ತಿದ್ದುಪಡಿಗೆ ಜೂನ್‌ 7ರ ಸಂಜೆ 4 ಗಂಟೆಯಿಂದ ಜೂನ್‌ 12ರ ಬೆಳಿಗ್ಗೆ 11 ಗಂಟೆಯವರೆಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ.   ಈ …

Read More »

ಹಾವೇರಿಯಲ್ಲಿ ಪತ್ನಿ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪತಿ

ಹಾವೇರಿ: ಅವರಿಬ್ಬರದು ನಲವತ್ತು ವರ್ಷಗಳ ದಾಂಪತ್ಯ. ಆದರೆ, ಈ ದಾಂಪತ್ಯದಲ್ಲಿ ಅನುಮಾನ ಎಂಬ ಪಿಶಾಚಿ ಮನೆ ಮಾಡಿತ್ತು. ನಿರಂತರವಾಗಿ ಪತಿ ಮತ್ತು ಪತ್ನಿಯ ನಡುವೆ ಜಗಳವಾಗುತ್ತಿತ್ತು. ಅನೇಕ ಬಾರಿ ರಾಜಿ ಮಾಡಿಸುತ್ತಿದ್ದ ಗ್ರಾಮಸ್ಥರು, ಅವರಿಬ್ಬರ ಜಗಳ ಕಂಡು ಬೇಸತ್ತು ಹೋಗಿದ್ದರು. ಮಂಗಳವಾರ ಸಂಜೆ ಗಂಡ, ಹೆಂಡ್ತಿ ನಡುವೆ ಮತ್ತೆ ಜಗಳ ನಡೆದಿದೆ. ಪ್ರಕರಣ ಹಾವೇರಿ ಗ್ರಾಮಾಂತರ ಪೊಲೀಸ್​ ಠಾಣೆ ಮೆಟ್ಟಿಲೇರಿತ್ತು. ಇಬ್ಬರಿಗೂ ಬುದ್ಧಿ ಮಾತು ಹೇಳಿದ ಅಧಿಕಾರಿಗಳು ರಾಜಿ ಮಾಡಿಸಿ ಕಳುಹಿಸಿದ್ದರು. …

Read More »

ಅಕ್ರಮ ಡಿನೋಟಿಫಿಕೇಷನ್: ಬಿಎಸ್‌ವೈ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಬೆಂಗಳೂರಿನ ಹಳಗೇವಡೇರನಹಳ್ಳಿಯಲ್ಲಿ 2.5 ಎಕರೆ ಭೂಮಿ ಡಿನೋಟಿಫೈ ಮಾಡಿದ್ದ ಕುರಿತು ಮಹಾಲೇಖಪಾಲರು ಮತ್ತು ಲೆಕ್ಕಪರಿಶೋಧಕರ (ಸಿಎಜಿ) ವರದಿ ಆಧರಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವಜಾ ಮಾಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಪುರಸ್ಕರಿಸಿದೆ. ಸಿಎಜಿ …

Read More »