Breaking News

ರಾಷ್ಟ್ರೀಯ

2 ಲಕ್ಷಕ್ಕೂ ಅಧಿಕ ಗಿಡ ನೆಟ್ಟ ಶಿವಾಜಿ ಕಾಗಣಿಕರ್

ಬೆಳಗಾವಿ: ಇಂದು ವಿಶ್ವ ಪರಿಸರ ದಿನ. ಉಸಿರಾಡಲು ಶುದ್ಧ ಗಾಳಿಯನ್ನು ನೀಡುವ ಮರಗಳನ್ನು ವರ್ಷಕ್ಕೊಮ್ಮೆ ಪರಿಸರ ದಿನದಂದು ಮಾತ್ರ ನೆನಪು ಮಾಡಿಕೊಳ್ಳುವ ಪರಿಸ್ಥಿತಿ ಇದೆ. ಆದರೆ, ಮರಗಳನ್ನು ಕೇವಲ ನೆನಪು ಮಾಡಿಕೊಂಡರೆ ಸಾಲದು. ಅವುಗಳನ್ನು ಉಳಿಸಿ, ಬೆಳೆಸುವತ್ತ ಗಮನಹರಿಸಬೇಕಿದೆ. ಆಧುನೀಕರಣ ಹಾಗೂ ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮದಿಂದ ಅರಣ್ಯ ನಾಶವಾಗುತ್ತಿದೆ. ಇದರಿಂದ ಹಲವು ದುಷ್ಪರಿಣಾಮಗಳು ಎದುರಾಗುತ್ತಿದೆ. ಈ ನಡುವೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ವ್ಯಕ್ತಿಯೊಬ್ಬರು ನೆಲವನ್ನು ಹಚ್ಚ ಹಸಿರಾಗಿಸುವ ಧ್ಯೇಯವೊಂದರಲ್ಲಿ ತೊಡಗಿಸಿಕೊಂಡಿದ್ದು, …

Read More »

ಅಪರೂಪದ ಕಾಯಿಲೆಗೆ ತುತ್ತಾಗಿರುವ ಶೌರ್ಯ ಹುಲಿಗೆ ಸೂಕ್ತ ಚಿಕಿತ್ಸೆ

ಬೆಳಗಾವಿ : ಜಿಲ್ಲೆಯ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯದಲ್ಲಿರುವ ಶೌರ್ಯ ಎಂಬ ಹುಲಿಯು ಅಪರೂಪದ ಕಾಯಿಲೆಯಿಂದ ಬಳಲುತ್ತಿರುವುದನ್ನು ವನ್ಯಜೀವಿ ವೈದ್ಯ ಡಾ. ಮದನ್ ಪತ್ತೆ ಹಚ್ಚಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹುಲಿಗೆ ಸದ್ಯ ಅರಣ್ಯಾಧಿಕಾರಿಗಳು ಹಾಗೂ ವನ್ಯಜೀವಿ ವೈದ್ಯರು ಹುಲಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ. ವನ್ಯಜೀವಿ ವೈದ್ಯರಿಗೆ ಸುಲಭವಾಗಿ ಗುರುತಿಸಲಾಗದ cytauxzoon felis ಮತ್ತು mycoplasma ಎಂಬ ಅಪರೂಪದ …

Read More »

ಒಡಿಶಾ ರೈಲು ದುರಂತ.. ಸಂತ್ರಸ್ತ ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತ ಗೌತಮ್ ಅದಾನಿ

ಅಹಮದಾಬಾದ್ (ಗುಜರಾತ್): ಒಡಿಶಾದ ಭೀಕರ ರೈಲು ದುರಂತದಲ್ಲಿ ಪೋಷಕರನ್ನು ಕಳೆದುಕೊಂಡು ಸಂತ್ರಸ್ತರಾಗಿರುವ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಅದಾನಿ ಗ್ರೂಪ್ ಮುಂದಾಗಿದೆ. ಈ ಬಗ್ಗೆ ಖ್ಯಾತಿ ಉದ್ಯಮಿ, ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಪ್ರಕಟಿಸಿದ್ದಾರೆ. ಒಡಿಶಾ ರೈಲು ಅಪಘಾತದ ಸುದ್ದಿಯಿಂದ ತಾನು ತೀವ್ರ ದುಃಖಿತನಾಗಿದ್ದೇನೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಶಕ್ತಿಯನ್ನು ನೀಡುವುದು ಮತ್ತು ಮಕ್ಕಳಿಗೆ ಉತ್ತಮ ನಾಳೆಗಳನ್ನು ಒದಗಿಸುವುದು ನಮ್ಮೆಲ್ಲರ ಜಂಟಿ ಜವಾಬ್ದಾರಿಯಾಗಿದೆ ಎಂದು ಗೌತಮ್ ಅದಾನಿ …

Read More »

ಭೂಮಿ ಮತ್ತು ಮನುಕುಲವನ್ನು ರಕ್ಷಿಸಲು ಪರಿಸರವನ್ನು ರಕ್ಷಿಸುವುದು ಅತ್ಯಂತ ಅವಶ್ಯಕ.

ಮಾನವರ ಜೀವನ ಮತ್ತು ಪರಿಸರದ ಮಧ್ಯೆ ಆಳವಾದ ಸಂಬಂಧವಿದೆ. ಪ್ರಕೃತಿಯಿಲ್ಲದೇ ಜೀವನವು ಅಸ್ತಿತ್ವದಲ್ಲಿರಲು ಸಾಧ್ಯವೇ ಇಲ್ಲ. ಪ್ರಕೃತಿಯೊಂದಿಗೆ ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಎಲ್ಲ ಮಾನವರಿಗೆ ಅವಶ್ಯಕವಾಗಿದೆ. ಆದರೆ, ತಂತ್ರಜ್ಞಾನದ ಆಮೂಲಾಗ್ರ ಬೆಳವಣಿಗೆ ಮತ್ತು ಆಧುನಿಕ ಜೀವನಶೈಲಿಯ ಹೆಚ್ಚಳದಿಂದ ಪರಿಸರಕ್ಕೆ ಸರಿಪಡಿಸಲಾಗದ ಅಪಾಯವಾಗುತ್ತಿದೆ ಎನ್ನುವುದು ಕೂಡ ಸತ್ಯ. ಇದಕ್ಕಾಗಿಯೇ ಪರಿಸರ ರಕ್ಷಣೆಯ ಬಗ್ಗೆ ಮತ್ತು ಪರಿಸರದ ಸ್ವಚ್ಛತೆಗಾಗಿ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ …

Read More »

ಬಳ್ಳಾರಿ ಮೂಲದ ಮೆಡಿಕಲ್ ವಿದ್ಯಾರ್ಥಿನಿ ಕ್ವಾರೆಯಲ್ಲಿನ ನೀರಲ್ಲಿ ಜಿಗಿದು ಆತ್ಮಹತ್ಯೆ

ಕೋಲಾರ ತಾಲೂಕಿನ ಅರಾಬಿಕೊತ್ತನೂರು ಗ್ರಾಮದಲ್ಲಿ ಕ್ವಾರೆಯಲ್ಲಿನ ನೀರಲ್ಲಿ ಜಿಗಿದು ಎಂಬಿಬಿಎಸ್​ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ‌. ಬಳ್ಳಾರಿ ಮೂಲದ ಮೆಡಿಕಲ್ ವಿದ್ಯಾರ್ಥಿನಿ ದರ್ಶಿನಿ(24) ಮೃತದೇಹ ಪತ್ತೆಯಾಗಿದೆ. ದರ್ಶಿನಿ ಹೊಸಕೋಟೆ ತಾಲೂಕಿನ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯಾಗಿದ್ದು, ಸ್ನೇಹಿತರಿಗೆ ಫೋನ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಳು ಎನ್ನಲಾಗಿದೆ. ದರ್ಶಿನಿಯ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರ ತೆಗೆದಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಸ್ಥಳಕ್ಕಾಗಮಿಸಿದ ಪೊಲೀಸರು ಭೇಟಿ …

Read More »

ಸುಲಿಬೆಲೆಗೆ ಸಚಿವ ಎಂ ಬಿ ಪಾಟೀಲ್ ವಾರ್ನಿಂಗ್

ರಾಜ್ಯದಲ್ಲಿ ಹಿಟ್ಲರ್ ಸರ್ಕಾರ ಆಡಳಿತಕ್ಕೆ ಬಂದಿದೆ ಎಂಬ ಚಕ್ರವರ್ತಿ ಸುಲಿಬೆಲೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಲಿಬೆಲೆಗೆ ಸಚಿವ ಎಂ ಬಿ ಪಾಟೀಲ್ ವಾರ್ನಿಂಗ್ ನೀಡಿದ್ದಾರೆ‌. ಕಾಂಗ್ರೆಸ್ ಸರ್ಕಾರವನ್ನ ಹಿಟ್ಲರ್ ಸರ್ಕಾರಕ್ಕೆ ಹೋಲಿಸಿದ ಸುಲಿಬೆಲೆಗೆ ಕ್ಲಾಸ್ ತೆಗೆದುಕೊಂಡ ಎಂ ಬಿ ಪಾಟೀಲ್ ಹಿಂದೆ ನಾಲ್ಕು ವರ್ಷ ಸುಲಿಬೆಲೆ ಏನ್ ಮಾಡಿದ್ದಾರೆ ಕೇಳಿ, ನಾಲ್ಕು ವರ್ಷ ಸುಲಿಬೆಲೆ ಅನಾಹುತ ಮಾಡಿದ್ದಾರೆ‌. ಸುಲಿಬೆಲೆ ಮಾಡಿದ ಅನಾಹುತಗಳನ್ನ ನಾವು ಸರಿಪಡೆಸುತ್ತಿದ್ದೇವೆ ಎಂದರು. ಪಠ್ಯಪುಸ್ತಕ, ಹಿಜಾಬ್, ಹಲಾಲ್, …

Read More »

ಸಮಾಜಕ್ಕೆ ಕೈಗನ್ನಡಿಯಾಗಿರುವ ದಲಿತರು ಬಾಬಾಸಾಹೇಬರ ಅಭಿಯಾನವನ್ನು ಮುಂದುವರಿಸಬೇಕು:ರಾಜ ರತ್ನ ಅಂಬೇಡ್ಕರ್

ಶತಮಾನಗಳಿಂದ ಶೋಷಣೆಯಿಂದ ನರಳುತ್ತಿರುವ ದಲಿತ ಮತ್ತು ಹಿಂದುಳಿದ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಲು ಭಾರತರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ನಿರಂತರ ಹೋರಾಟ ಮಾಡಿದರು. ಇಂದು ಸಮಾಜಕ್ಕೆ ಕೈಗನ್ನಡಿಯಾಗಿರುವ ದಲಿತರು ಈ ಅಭಿಯಾನವನ್ನು ಮುಂದುವರಿಸಬೇಕು ಎಂದು ಬಾಬಾಸಾಹೇಬರ ಮರಿಮೊಮ್ಮಗ ರಾಜ ರತ್ನ ಅಂಬೇಡ್ಕರ್ ಅವರು ಮನವಿ ಮಾಡಿದರು. ಇಂದು ಬೆಳಗಾವಿಯ ಸದಾಶಿವನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಬೌದ್ಧ ಸಮಾಜದ ವತಿಯಿಂದ “ಆರ್ಥಿಕ ಉನ್ನತಿಯತ್ತ ಒಂದು ಹೆಜ್ಜೆ” ಯುವ ಮಾರ್ಗದರ್ಶನ ಕಾರ್ಯಕ್ರಮವನ್ನು ನಡೆಸಲಾಯಿತು. ರಾಜರತ್ನ ಅಂಬೇಡ್ಕರ್ …

Read More »

ಅಪರೂಪದ ಕಾಯಿಲೆಗೆ ತುತ್ತಾಗಿರುವ ಶೌರ್ಯ ಹುಲಿಗೆ ಸೂಕ್ತ ಚಿಕಿತ್ಸೆ

ಬೆಳಗಾವಿ : ಜಿಲ್ಲೆಯ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯದಲ್ಲಿರುವ ಶೌರ್ಯ ಎಂಬ ಹುಲಿಯು ಅಪರೂಪದ ಕಾಯಿಲೆಯಿಂದ ಬಳಲುತ್ತಿರುವುದನ್ನು ವನ್ಯಜೀವಿ ವೈದ್ಯ ಡಾ. ಮದನ್ ಪತ್ತೆ ಹಚ್ಚಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹುಲಿಗೆ ಸದ್ಯ ಅರಣ್ಯಾಧಿಕಾರಿಗಳು ಹಾಗೂ ವನ್ಯಜೀವಿ ವೈದ್ಯರು ಹುಲಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ. ವನ್ಯಜೀವಿ ವೈದ್ಯರಿಗೆ ಸುಲಭವಾಗಿ ಗುರುತಿಸಲಾಗದ cytauxzoon felis ಮತ್ತು mycoplasma ಎಂಬ ಅಪರೂಪದ …

Read More »

ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಸಣ್ಣ ಲೋಪವನ್ನೂ ಸಹಿಸಲಾಗದು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅತ್ಯಂತ ಮಹತ್ವದ ಇಲಾಖೆ. ಇಲ್ಲಿ ಸಣ್ಣ ಲೋಪವನ್ನೂ ಸಹಿಸಲು ಸಾಧ್ಯವಿಲ್ಲ. ನಮ್ಮ ನಿರೀಕ್ಷೆ ಮತ್ತು ವೇಗಕ್ಕೆ ತಕ್ಕಂತೆ ಕೆಲಸ ನಿರ್ವಹಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚಿಸಿದರು. ಸಚಿವರಾದ ನಂತರ ಮೊದಲ ಬಾರಿಗೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ರಾಜ್ಯಕ್ಕೆ ಹಾಗೂ ಸರ್ಕಾರಕ್ಕೆ ಉತ್ತಮ ಹೆಸರು ತರುವ ದಿಸೆಯಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಜನರು ಬಹಳ ನಿರೀಕ್ಷೆ ಇಟ್ಟು …

Read More »

ಒಡಿಶಾ ರೈಲು ಅಪಘಾತ ಸಂತ್ರಸ್ತರಿಗೆ ನಿಯಮ ಸರಳೀಕರಿಸಿದ LIC

ಮುಂಬೈ: ಒಡಿಶಾದ ಬಾಲಸೋರ್ ರೈಲು ದುರಂತದ ಸಂತ್ರಸ್ತರಿಗೆ ಕ್ಲೈಮ್ ಪಾವತಿ ಪ್ರಕ್ರಿಯೆಗೆ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಶನಿವಾರ ಹಲವು ನಿಯಮಗಳ ಸಡಿಲಿಕೆಗಳನ್ನು ಪ್ರಕಟಿಸಿದೆ. ಎಲ್‌ಐಸಿ ಅಧ್ಯಕ್ಷ ಸಿದ್ಧಾರ್ಥ ಮೊಹಂತಿ, ಸಂತ್ರಸ್ತರ ಸಂಬಂಧಿಕರಿಗೆ ಕ್ಲೈಮ್ ಪಾವತಿ ಪ್ರಕ್ರಿಯೆಗೆ ಸಡಿಲಿಕೆಗಳನ್ನು ಘೋಷಿಸಿದರು. “ಶುಕ್ರವಾರ ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಎಲ್‌ಐಸಿ ಸಂತ್ರಸ್ತರಿಗೆ ಬೆಂಬಲ ನೀಡಲು ಬದ್ಧವಾಗಿದೆ ಮತ್ತು ಹಣಕಾಸಿನ ಪರಿಹಾರವನ್ನು ಒದಗಿಸಲು ಕ್ಲೈಮ್ ಪಾವತಿಯನ್ನು …

Read More »