ಪಿರಿಯಾಪಟ್ಟಣ: ಪ್ರಧಾನಿ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಕಂಡರೆ ಭಯ. ಹಾಗಾಗಿ ಮೇಲಿಂದ ಮೇಲೆ ಕರ್ನಾಟಕಕ್ಕೆ ಬರುತ್ತಿದ್ದು, ಇನ್ನೂ ಇಪ್ಪತ್ತು ಬಾರಿ ಬಂದರೂ ಬಿಜೆಪಿಗೆ ಸೋಲು ಕಟ್ಟಿಟ್ಟಬುತ್ತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು. ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕರನ್ನು ಖರೀದಿಸಿ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬಂದು ಸರಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ ಮಾಡಿ ಭ್ರಷ್ಟಾಚಾರದಲ್ಲಿ ಮುಳುಗಿಸಿಟ್ಟಿದ್ದಾರೆ. ರಾಜ್ಯಕ್ಕೆ ಮೋದಿ ಕೊಡುಗೆ …
Read More »ನಾಲ್ವರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇ.83.89ರಷ್ಟು ಫಲಿತಾಂಶ ಬಂದಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಯಿತು. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಭೂಮಿಕಾ ಪೈ – ನ್ಯೂ ಮೆಕಾಲೆ ಶಾಲೆ ಹೊಸೂರು ರಸ್ತೆ ಯಶಸ್ ಗೌಡ – ಬಿಜಿಎಸ್ …
Read More »ಕನಕಪುರದಲ್ಲಿ ಆರ್ ಅಶೋಕ್ ಪರ ಸಿಎಂ ಬೊಮ್ಮಾಯಿ ಪ್ರಚಾರ
ರಾಮನಗರ : ಈ ಬಾರಿ ಕನಕಪುರದಲ್ಲಿ ಬಿಜೆಪಿಯ ಕಮಲ ಅರಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕನಕಪುರದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ ಪರ ಪ್ರಚಾರ ನಡೆಸಿ ಬಳಿಕ ಮಾತನಾಡಿದ ಅವರು, ಇದು ಕನ್ನಡ ನಾಡಿನ ಭವಿಷ್ಯ ನಿರ್ಧರಿಸುವ ಚುನಾವಣೆ. ಬಿಜೆಪಿ ಕಾರ್ಯಕರ್ತರ ಪಕ್ಷ. ಅಶ್ವತ್ಥ್ ನಾರಾಯಣ್ ಅವರು ಈ ಭಾಗದಲ್ಲಿ ಸಾಕಷ್ಟು ಸಂಘಟನೆ ಮಾಡಿದ್ದಾರೆ. ಇಲ್ಲಿ ಶಕ್ತಿ ಬರಬೇಕಾದರೆ ಸಾಮ್ರಾಟ್ ಅಶೋಕ್ ಅವರೇ ಗೆದ್ದು ಬರಬೇಕು ಎಂದು …
Read More »ಇಂದು ಬೆಳಗ್ಗೆ 10 ಗಂಟೆಗೆ SSLC ಫಲಿತಾಂಶ ಪ್ರಕಟ
ಬೆಂಗಳೂರು: ಇಂದು(ಸೋಮವಾರ) ಬೆಳಗ್ಗೆ 10 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. 11 ಗಂಟೆಯ ನಂತರ ವಿದ್ಯಾರ್ಥಿಗಳು ವೆಬ್ಸೈಟ್ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆ ನಡೆದಿತ್ತು. ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಅಧಿಕಾರಿಗಳು ಮಾಧ್ಯಮಗೋಷ್ಟಿ ನಡೆಸಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಿದ್ದಾರೆ. 11 ಗಂಟೆಯಿಂದ …
Read More »ಕಾಂಗ್ರೆಸ್ ಪ್ರಚಾರ ವಾಹನ ಚಾಲಕನಿಗೆ ಹಲ್ಲೆ, ಎಸ್ಡಿಪಿಐ ಕಾರ್ಯಕರ್ತ ಅರೆಸ್ಟ್
ದಕ್ಷಿಣ ಕನ್ನಡ: ಬೈಕ್ ಮತ್ತು ಆಟೋ ರ್ಯಾಲಿ ನಡೆಯುತ್ತಿದ್ದಾಗ ಎಸ್ಡಿಪಿಐ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಉಳ್ಳಾಲದ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆಯವರೆಗೆ ಎಸ್ಡಿಪಿಐ ಹಮ್ಮಿಕೊಂಡಿದ್ದ ಆಟೋ ರಿಕ್ಷಾ ಹಾಗೂ ಬೈಕ್ ರ್ಯಾಲಿಯ ಸಂದರ್ಭದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಲಾಗಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ಘಟನೆ ನಡೆದಿದೆ. ನಡೆದಿದ್ದೇನು?: ಕಾಂಗ್ರೆಸ್ ಕಾರ್ಯಕರ್ತ ನೌಫಾಲ್ (35) ಹಲ್ಲೆಗೊಳಗಾಗಿದ್ದಾರೆ. ನಾಟೆಕಲ್ ಸಮೀಪ ಅಸೈಗೋಳಿಯಿಂದ ಚೆಂಬುಗುಡ್ಡೆ ಸಾರ್ವಜನಿಕ …
Read More »ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ
ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೊತ್ಸವದ ಆನೆ ಬಲರಾಮ (67) ಅನಾರೋಗ್ಯದಿಂದ ಮೃತಪಟ್ಟಿದೆ. ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಶಿಬಿರದಲ್ಲಿ ಬಲರಾಮ ಮೃತಪಟ್ಟಿರುವುದಾಗಿ ಆನೆ ಶಿಬಿರ ಸಿಬ್ಬಂದಿಗಳು ತಿಳಿಸಿದ್ದಾರೆ. ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಇತ್ತೀಚೆಗೆ ಅನಾರೊಗ್ಯದಿಂದ ಬಳಲುತ್ತಿತ್ತು. ಬಾಯಿಯಲ್ಲಿ ಹುಣ್ಣಾಗಿದ್ದರಿಂದ ಆಹಾರ ಸೇವನೆ ನಿಲ್ಲಿಸಿತ್ತು. ಬಲರಾಮನಿಗೆ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
Read More »ಬಿಜೆಪಿಗೆ ಮೋಸ ಮಾಡಿದ ಲಕ್ಷ್ಮಣ ಸವದಿಯನ್ನು ಈ ಬಾರಿಯೂ ಸೋಲಿಸಿ’: ಅಮಿತ್ ಶಾ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ಕಾಂಗ್ರೆಸ್ನ ಗ್ಯಾರಂಟಿಗಳ ಮೊತ್ತವು ರಾಜ್ಯ ಬಜೆಟ್ಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜನ ಎಲ್ಲ ಲೆಕ್ಕ ಹಾಕಿದ್ದಾರೆ. ಆದರೆ, ಇದು ರಾಹುಲ್ ಗಾಂಧಿಗೆ ಅರ್ಥವಾಗಿಲ್ಲ’ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಟೀಕಿಸಿದರು. ಪಟ್ಟಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ರಮೇಶ ಕತ್ತಿ ಪರ ಚುನಾವಣಾ ಪ್ರಚಾರ ಮಾಡಿ ಮಾತನಾಡಿದ ಅವರು, ‘ಗುಜರಾತ್, ಉತ್ತರಪ್ರದೇಶ, ಉತ್ತರಾಖಂಡ, ಅಸ್ಸಾಂ, ತ್ರಿಪುರಾ, ಮಣಿಪುರ, ನಾಗಾಲ್ಯಾಂಡ್ ರಾಜ್ಯಗಳಲ್ಲಿ ಕೂಡ ಕಾಂಗ್ರೆಸ್ ಇವೇ ಐದು ಗ್ಯಾರಂಟಿಗಳನ್ನು …
Read More »ಕೇಂದ್ರದ ಎಂಜಿನ್ಗೆ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಬೋಗಿಯನ್ನೇ ಜೋಡಿಸಬೇಕು’: ಫಡಣವೀಸ್
ಬೆಳಗಾವಿ: ‘ಕೇಂದ್ರದಲ್ಲಿ ಬಿಜೆಪಿಯ ಎಂಜಿನ್ ಇದೆ. ಅದಕ್ಕೆ ಬೇರೆ ಪಕ್ಷದ ಬೋಗಿ ಅಳವಡಿಸಿದರೆ, ಹೈದರಾಬಾದ್ನಲ್ಲಿರುವ ಎಂಜಿನ್ ಕಡೆ ಹೋಗುತ್ತದೆ. ಹಾಗಾಗಿ ಆ ಎಂಜಿನ್ಗೆ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಬೋಗಿಯನ್ನೇ ಜೋಡಿಸಬೇಕು’ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಕೋರಿದರು. ಇಲ್ಲಿನ ಟಿಳಕ್ ಚೌಕ್ನಲ್ಲಿ ಗುರುವಾರ ನಡೆದ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಡಬಲ್ ಎಂಜಿನ್ ಸರ್ಕಾರ ಅಧಿಕಾರದಲ್ಲಿದ್ದರೆ ಅಭಿವೃದ್ಧಿ …
Read More »ಸರ್ವ ಸಮುದಾಯಗಳ ಏಳಿಗೆಗೆ ಬಾಲಚಂದ್ರ ಬದ್ಧ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದೇನೆ | ಮತ್ತೊಮ್ಮೆ ಅವಕಾಶ ಕಲ್ಪಿಸುವಂತೆ ಬಾಲಚಂದ್ರ ಮನವಿ
ಮೂಡಲಗಿ: ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಕ್ಷೇತ್ರಕ್ಕೆ ಸಾಕಷ್ಟು ಮೂಲಸೌಕರ್ಯಗಳನ್ನು ನನ್ನ ಅವಧಿಯಲ್ಲಿ ಒದಗಿಸಿರುವೆ. ಈಗಾಗಲೇ ಹಲವು ಶಾಶ್ವತ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಿ, ಜಿಲ್ಲೆಯಲ್ಲಿ ಮಾತ್ರವಲ್ಲ, ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿಸುವ ಪಣ ತೊಡಲಾಗಿದೆ. ಹೀಗಾಗಿ ಈ ಅವಧಿಗೂ ತಮಗೆ ಮತ್ತೊಂದು ಅವಕಾಶ ಕಲ್ಪಿಸಬೇಕು ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಮೂಡಲಗಿ-ಗುರ್ಲಾಪುರ ಪುರಸಭೆ, ನಾಗನೂರ, ಕಲ್ಲೊಳಿ, ಅರಬಾವಿ …
Read More »ರಾಜಕೀಯ ಪಕ್ಷಗಳಿಂದ ಉಚಿತ ಗ್ಯಾರಂಟಿಗಳ ಮಹಾಪೂರ:ರಾಜ್ಯದ ಆರ್ಥಿಕತೆಯ ಗತಿ ಏನು..?
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಅಖಾಡದಲ್ಲಿನ ಮಹಾಸಮರ ಅಂತಿಮ ಹಂತಕ್ಕೆ ಬಂದಿದೆ. ಪ್ರಮುಖ ರಾಜಕೀಯ ಪಕ್ಷಗಳು ಮತದಾರರ ಮತ ಸೆಳೆಯಲು ತಮ್ಮ ಪ್ರಣಾಳಿಕೆಯಲ್ಲಿ ಉಚಿತಗಳ ಭರಪೂರ ಭರವಸೆಗಳನ್ನು ನೀಡುತ್ತಿವೆ. ಆದರೆ, ಅಧಿಕಾರಕ್ಕೆ ಬರಲು ಪಕ್ಷಗಳ ವಿವಿಧ ಉಚಿತ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸದ ಮೇಲೆ ಹೊರೆ ಏನಾಗಲಿದೆ ಎಂಬ ವರದಿ ಇಲ್ಲಿದೆ ಓದಿ. ಮತಬೇಟೆಗೆ ಇಳಿದ ಮೂರು ಪಕ್ಷಗಳು: ರಾಜ್ಯ ಚುನಾವಣೆಯ ಅಖಾಡದಲ್ಲಿ ಬಿರುಸಿನ ಪ್ರಚಾರ ನಡೆಯುತ್ತಿದೆ. ಇನ್ನೇನು ನಾಲ್ಕು ದಿನಗಳಲ್ಲಿ ಮತದಾನ ನಡೆಯಲಿದೆ. …
Read More »
Laxmi News 24×7