ಬೆಂಗಳೂರು: ಜಾತಿ ಗಣತಿ ಮೂಲಕ ಸಮ ಸಮಾಜದ ನಿರ್ಮಾಣದ ಕನಸು ನರೇಂದ್ರ ಮೋದಿ ಅವರ ಸರ್ಕಾರಕ್ಕಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಾತಿಗಣತಿ ವಿಷಯದಲ್ಲಿ ಯಾವುದೇ ಸದುದ್ದೇಶ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ. ವೈ. ವಿಜಯೇಂದ್ರ ಅವರು ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ರಾಜ್ಯ ಹಿಂದುಳಿದ ವರ್ಗದ ನಾಯಕರ ಸಭೆಯಲ್ಲಿ ಅವರು ಮಾತನಾಡಿದರು. ಜಾತಿ ಜನಗಣತಿ ವಿಚಾರದಲ್ಲಿ ಕಾಂಗ್ರೆಸ್ಸಿಗರಿಗೆ ದುರುದ್ದೇಶ ಇದೆ. ಕಾಂಗ್ರೆಸ್ಸಿನವರು ಮತ್ತು …
Read More »ಕಾರಿನ ಟೈರ್ ಸ್ಫೋಟಗೊಂಡು ಭೀಕರ ರಸ್ತೆ ಅಪಘಾತ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ
ಹಾವೇರಿ: ಚಲಿಸುತ್ತಿದ್ದ ಇನ್ನೋವಾ ಕಾರಿನ ಟೈರ್ ಬ್ಲಾಸ್ಟ್ ಆದ ಪರಿಣಾಮ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಛತ್ರದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತನನ್ನು 46 ವರ್ಷದ ಕುರಿಯನ್ ಚಾಕೊ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಾಮಿಯಲ್ ಚಾಕೊ, ಜುನಾತನ್ ಫ್ರಾನ್ಸ್ ಎಂದು ಗುರುತಿಸಲಾಗಿದೆ. ಮೃತ ಕುರಿಯನ್ ಚಾಕೊ ಮತ್ತು ಗಾಯಾಳುಗಳು ಕೇರಳದ …
Read More »ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದ ಬಳಸಿದ ಕೇಂದ್ರ ಕಾರಾಗೃಹದ ವಾರ್ಡನ್ ಮಧುಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಮೈಸೂರು ನಗರ ಕೇಂದ್ರ ಕಾರಾಗೃಹದ ವಾರ್ಡನ್ ಮಧುಕುಮಾರ್ ಅವರನ್ನು ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸರು ಬಂಧಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಕುಡಿದ ಮತ್ತಿನಲ್ಲಿ ಮಧುಕುಮಾರ್ ಅವಾಚ್ಯ ಪದ ಬಳಸಿ ರೆಕಾರ್ಡ್ ಮಾಡಿದ್ದ 5.33 ನಿಮಿಷಗಳ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಗರಂ ಆದ ಘಟನೆ ಉಲ್ಲೇಖಿಸಿ ಏಪ್ರಿಲ್ 28ರಂದು ಮಧುಕುಮಾರ್ ವಿಡಿಯೋ …
Read More »ಯಾಕಪ್ಪ ನಮ್ಮಲ್ಲಿ ಹೆಣ್ಣು ಗಂಡು ಸಿಗಲ್ವಾ ಪಾಕಿಸ್ತಾನದವರನ್ನೇಕೆ ಮದುವೆಯಾಗ್ತೀರಿ??
ಯಾಕಪ್ಪ ನಮ್ಮಲ್ಲಿ ಹೆಣ್ಣು ಗಂಡು ಸಿಗಲ್ವಾ ಪಾಕಿಸ್ತಾನದವರನ್ನೇಕೆ ಮದುವೆಯಾಗ್ತೀರಿ?? ಪಾಕಿಸ್ತಾನದ ವಿರುದ್ಧ ಇನ್ನು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು; ಸಂಪೂರ್ಣ ಮೆಟ್ಟಿಗೆ ಹಚ್ಚಬೇಕು ಪಿಒಕೆ ಖಾಲಿ ಮಾಡಿಸಿ ; ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಪಾಕಿಸ್ತಾನದ ವಿರುದ್ಧ ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ಸಂಪೂರ್ಣ ಮೆಟ್ಟಿಗೆ ಹಚ್ಚಬೇಕು. ಪಿಒಕೆ ಖಾಲಿ ಮಾಡಿಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಬಾಗಲಕೋಟೆಯಲ್ಲಿ ಸೋಮವಾರ ಮಾಧ್ಯಮಗಾರರೊಂದಿಗೆ ಅವರು ಮಾತನಾಡಿದರು. ಪೆಹಲ್’ಗಾಮ್ …
Read More »ಸಿ.ಟಿ ರವಿ – ಹೆಬ್ಬಾಳ್ಕರ್ ಪ್ರಕರಣ: ನೀತಿ ನಿರೂಪಣಾ ಸಮಿತಿಯ ವರದಿ ಬಂದ ಮೇಲೆ ತೀರ್ಮಾನ-ಸಭಾಪತಿ ಬಸವರಾಜ್ ಹೊರಟ್ಟಿ
ಸಿ.ಟಿ ರವಿ – ಹೆಬ್ಬಾಳ್ಕರ್ ಪ್ರಕರಣ: ನೀತಿ ನಿರೂಪಣಾ ಸಮಿತಿಯ ವರದಿ ಬಂದ ಮೇಲೆ ತೀರ್ಮಾನ-ಸಭಾಪತಿ ಬಸವರಾಜ್ ಹೊರಟ್ಟಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಡುವಿನ ಅಶ್ಲೀಲ ಪದ ಬಳಕೆ ಪ್ರಕರಣವನ್ನು ನೀತಿ ನಿರೂಪಣಾ ಸಮಿತಿಗೆ ಒಪ್ಪಿಸಿದ್ದು ಅದರ ವರದಿ ಬಂದಮೇಲೆ ನಿರ್ಣಯ ಪ್ರಕಟಿಸಲಾಗುವುದೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. ಈ ಕುರಿತು ಸೋಮವಾರ ಬಾಗಲಕೋಟೆಯಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ …
Read More »ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ “ಉತ್ತಮ ವಿದ್ಯಾರ್ಥಿ ಗ್ರಾಮ ಪುರಸ್ಕಾರ”
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ “ಉತ್ತಮ ವಿದ್ಯಾರ್ಥಿ ಗ್ರಾಮ ಪುರಸ್ಕಾರ” ಚಿಕ್ಕೋಡಿ-“ಅಚಲವಾದ ಗುರಿ, ಯೋಜನಾ ಬದ್ಧ ಅಧ್ಯಯನದಿಂದ ಅಂದುಕೊಂಡ ಗುರಿ ಸಾಧಿಸಲು ಸಾಧ್ಯ ಎಂಬುವುದನ್ನು ನಾಗರಮುನ್ನೋಳಿಯ ಸರ್ಕಾರಿ ಪ್ರೌಢ ಶಾಲೆಯ 2024-25ನೇ ಸಾಲಿನಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ತೋರಿಸಿಕೊಟ್ಟಿದ್ದು ಹೆಮ್ಮೆಯ ಸಂಗತಿಯಾಗಿದೆ” ಎಂದು ಗ್ರಾಮದ ಮುಖಂಡ ಸಿದ್ದಪ್ಪ ಮರ್ಯಾಯಿ ಹೇಳಿದರು. ಚಿಕ್ಕೋಡಿ ತಾಲ್ಲೂಕಿನ ನಾಗರಮುನ್ನೋಳಿ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿಯ ಸಭಾಭವನದಲ್ಲಿ 2024-25ನೇ ಸಾಲಿನ …
Read More »ಈ ಬಾರಿ ಜಿ.ಪಂ.ನಿಂದ 110 ಕೋಟಿ ದಾಖಲೆಮಟ್ಟದ ತೆರಿಗೆ ಸಂಗ್ರಹ
ಈ ಬಾರಿ ಜಿ.ಪಂ.ನಿಂದ 110 ಕೋಟಿ ದಾಖಲೆಮಟ್ಟದ ತೆರಿಗೆ ಸಂಗ್ರಹ ಜಿ.ಪಂ. ಸಿಇಓ ರಾಹುಲ್ ಶಿಂಧೆ ಅವರೊಂದಿಗೆ ಪತ್ರಕರ್ತರ ಸಂಘದಿಂದ ಸಂವಾದ ಕಾರ್ಯಕ್ರಮ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಬಾಕಿ ತೆರಿಗೆಯನ್ನು ಸಂಗ್ರಹಿಸಿ ಪ್ರತಿ ವರ್ಷ 45 ಲಕ್ಷ ತೆರಿಗೆಯನ್ನು ವಿಧಿಸಲಾಗಿದೆ. ಈ ಬಾರಿ 110 ಕೋಟಿ ದಾಖಲೆಮಟ್ಟದ ತೆರಿಗೆಯನ್ನು ಜಿಲ್ಲಾ ಪಂಚಾಯಿತಿಯೂ ಸಂಗ್ರಹಿಸಿದೆ ಎಂದು ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ …
Read More »ಶಕ್ತಿ ಯೋಜನೆ ಬಂದ್ ಆಗಲಿ… ಆಪ್ ಆಧಾರಿತ ಪ್ರಯಾಣಿಕ ಸೇವೆಗೆ ಅವಕಾಶ ನೀಡದಿರಿ…
ಶಕ್ತಿ ಯೋಜನೆ ಬಂದ್ ಆಗಲಿ… ಆಪ್ ಆಧಾರಿತ ಪ್ರಯಾಣಿಕ ಸೇವೆಗೆ ಅವಕಾಶ ನೀಡದಿರಿ… ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದ ವತಿಯಿಂದ ಪ್ರತಿಭಟನೆ ಬೆಳಗಾವಿಯಲ್ಲಿ ಹೊಸ ಆ್ಯಪಗಳ ಮೂಲಕ ಮೋಟಾರ್ ಸೈಕಲ್ ಪ್ರಯಾಣಿಕ ಸೇವೆಗೆ ಅವಕಾಶ ನೀಡದಂತೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ, ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು ಬೆಳಗಾವಿ ನಗರದಲ್ಲಿ ಆಟೋ ಚಾಲಕರನ್ನು ಗುರಿಯಾಗಿಸಿ ಹೊಸ ಆ್ಯಪಗಳು …
Read More »ಉಗಾರ ಗ್ರಾಮದೇವತೆ ಶ್ರೀ ಲಕ್ಷ್ಮಿದೇವಿ ಜಾತ್ರೆ ನಿಮಿತ್ಯ ಪಲ್ಲಕ್ಕಿ ಮಹೋತ್ಸವ
ಉಗಾರ ಗ್ರಾಮದೇವತೆ ಶ್ರೀ ಲಕ್ಷ್ಮಿದೇವಿ ಜಾತ್ರೆ ನಿಮಿತ್ಯ ಪಲ್ಲಕ್ಕಿ ಮಹೋತ್ಸವ ಕಾಗವಾಡ ತಾಲೂಕಿನ ಉಗಾರ ಗ್ರಾಮ ದೇವತೆ ಶ್ರೀ ಲಕ್ಷ್ಮಿ ದೇವಿ ಜಾತ್ರೆಗೆ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ಹಮ್ಮಿಕೊಂಡು ಜಾತ್ರೆಗೆ ಚಾಲನೆ ನೀಡಲಾಯಿತು ಮಂಗಳವಾರ ರಂದು ಶ್ರೀ ಲಕ್ಷ್ಮಿ ದೇವಿ ಮಂದಿರದಲ್ಲಿ ಜಾತ್ರಾ ಕಮಿಟಿ ಅಧ್ಯಕ್ಷರು ಹಾಗೂ ಶಾಸಕರಾದ ರಾಜು ಕಾಗೆ, ಉಪಾಧ್ಯಕ್ಷ ದಾದೋಬಾ ಥೋರುಷೆ ಮತ್ತು ಎಲ್ಲ ಕಮಿಟಿ ಸದಸ್ಯರು ಭಕ್ತರು ಒಂದುಗೂಡಿ ದೇವಿಗೆ ಪೂಜೆ ಅಭಿಷೇಕ ಸಲ್ಲಿಸಿ …
Read More »ಬೆಳಗಾವಿ-ಮೈಸೂರು ವಿಶ್ವಮಾನವ ಎಕ್ಸಪ್ರೆಸ್ ಪುನಾರಂಭ ಸೇರಿ
ಬೆಂಗಳೂರು, ಮೇ 06: ವಿಶ್ವಮಾನವ ಎಕ್ಸ್ಪ್ರೆಸ್ (Vishwamanava Express) ಪುನರಾರಂಭ ಮತ್ತು ಇತರೆ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಗೆ ಬಗ್ಗೆ ನೈರುತ್ಯ ರೈಲ್ವೆ (SWR) ಮಾಹಿತಿ ನೀಡಿದೆ. ಹಾವೇರಿ ಮತ್ತು ಬ್ಯಾಡಗಿ ನಿಲ್ದಾಣಗಳ ನಡುವಿನ ರೈಲ್ವೆ ಹಳಿಯಲ್ಲಿ ಅಗತ್ಯ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳು ನಡೆಯುತ್ತಿರುವುದರಿಂದ, ಕೆಲ ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಹಾಗಾದರೆ ಯಾವೆಲ್ಲಾ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂಬ ಮಾಹಿತಿ ಇಲ್ಲಿದೆ. ಯಾವೆಲ್ಲಾ ರೈಲುಗಳ ವೇಳಾಪಟ್ಟಿ ಬದಲಾವಣೆ ಈ …
Read More »
Laxmi News 24×7