Breaking News

ರಾಷ್ಟ್ರೀಯ

ಕಲ್ಯಾಣ ಕರ್ನಾಟಕದ ರೈತರಿಗೆ ಯುಗಾದಿ ಕೊಡುಗೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಏಪ್ರಿಲ್ 1 ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ. ಮಾರ್ಚ್ 30ರ ವರೆಗೆ ಭದ್ರಾ ಜಲಾಶಯದಲ್ಲಿ 28 …

Read More »

ಮಹಾನಾಯಕನನ್ನು ನಾವೆಲ್ಲಿ ಹುಡುಕೋದು. ಪೊಲೀಸರೇ ಹುಡುಕಬೇಕು:ಸತೀಶ್ ಜಾರಕಿಹೊಳಿ

ಬೆಂಗಳೂರು : ಮಹಾನಾಯಕನನ್ನು ನಾವೆಲ್ಲಿ ಹುಡುಕೋದು. ಪೊಲೀಸರೇ ಹುಡುಕಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಸೂಚ್ಯವಾಗಿ ತಿಳಿಸಿದ್ದಾರೆ. ಆಗಾಗ ಮಹಾನಾಯಕನ ಹೆಸರು ಕೇಳಿಬರುತ್ತಿದ್ದು, ಆ ಮಹಾನಾಯಕ ಯಾರು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಮಹಾನಾಯಕರು ದೇಶದಲ್ಲಿ ಸುಮಾರು ಇದ್ದಾರೆ. ಹುಡುಕುವುದಕ್ಕೆ ಸಮಯ ಬೇಕಾಗುತ್ತದೆ. ಪೊಲೀಸರು ಹುಡುಕಲಿ.‌ ಬೇರೆ ರಾಜ್ಯಗಳಲ್ಲಿ ಅಂತ ಘಟನೆಗಳು ಆಗಿದೆ. ನಮ್ಮ ರಾಜ್ಯದಲ್ಲಿ ಆದ ಉದಾಹರಣೆ ಇದೆ. ಇವರೇ, ಅವರೇ ಅಂತ ಹೇಳೋಕೆ ಆಗಲ್ಲ. ಪೊಲೀಸರು ಏನು ತನಿಖೆ ಮಡ್ತಾರೆ …

Read More »

ಬೆಳಗಾವಿ ಪಾಟೀಲ ಗಲ್ಲಿ ಶನಿಮಂದಿರದಲ್ಲಿ ಅಮಾವಾಸ್ಯೆ ನಿಮಿತ್ಯ ವಿವಿಧ ಕಾರ್ಯಕ್ರಮಗಳು

ಬೆಳಗಾವಿ ಪಾಟೀಲ ಗಲ್ಲಿ ಶನಿಮಂದಿರದಲ್ಲಿ ಅಮಾವಾಸ್ಯೆ ನಿಮಿತ್ಯ ವಿವಿಧ ಕಾರ್ಯಕ್ರಮಗಳು ಶನಿವಾರ ಅಮವಾಸೆ ನಿಮಿತ್ಯ ಬೆಳಗಾವಿ ಪಾಟೀಲ್ ಗಲ್ಲಿಯಲ್ಲಿರುವ ಶನಿಮಂದಿರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಯುಗಾದಿಯ ಶನಿವಾರ ಅಮಾವಾಸ್ಯೆ ಮತ್ತು ಗ್ರಹಣ ವಿರುವುದರಿಂದ ವಿಶೇಷವಾಗಿದ್ದು ಪಾಟೀಲ ಗಲ್ಲಿಯಲ್ಲಿರುವ ಶನಿಮಂದಿರದಲ್ಲಿ ವಿಶೇಷ ಧಾರ್ಮಿಕ ಆಚರಣೆಗಳನ್ನು ಹಮ್ಮಿಕೊಳ್ಳಲಾಗಿದೆ ಈ ಕುರಿತು ಮಂದಿರದ ಪೂಜಾರಿ ಆನಂದ ಅಧ್ಯಾಪಕ ಹೆಚ್ಚಿನ ಮಾಹಿತಿ ನೀಡಿದರು

Read More »

ಬೆಳಗಾವಿ ಬಾರ್ ಅಸೋಸಿಯೇಷನ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕಾನೂನು ಪಾಲನೆ ಎಲ್ಲರ ಕರ್ತವ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ ಬಾರ್ ಅಸೋಸಿಯೇಷನ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಬೆಳಗಾವಿ: ಭಾರತದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಕಾನೂನು ಪಾಲನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ಬಾರ್ ಅಸೋಸಿಯೇಷನ್ ವತಿಯಿಂದ ಕೋರ್ಟ್ ಸಭಾಂಗಣದಲ್ಲಿ ಶನಿವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, …

Read More »

ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಉಗಾರದ ಬ್ರಾಹ್ಮಣ ಸಮಾಜದ ಮಹಿಳಾ ಮಂಡಲದ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ.

ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಉಗಾರದ ಬ್ರಾಹ್ಮಣ ಸಮಾಜದ ಮಹಿಳಾ ಮಂಡಲದ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ. ಮಹಿಳೆಯರು ಅಂತರಾಳ ವೀರರಾಗಿ, ದೇಶದ ರಾಷ್ಟ್ರಪತಿ, ಕೇಂದ್ರದ ಸಚಿವರು ಸೇರಿ ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಪುರುಷರಕ್ಕಿಂತ ಒಂದು ಹೆಜ್ಜೆ ಮಹಿಳೆಯರು ಮುಂದಾಗಿದ್ದಾರೆ. ಈಗ ಮಹಿಳೆಯರು ಅಬಲೇಯರಾಗಿ ಉಳಿದಿಲ್ಲ ಎಂದು ನೆರೆಯ ಮಹಾರಾಷ್ಟ್ರದ ಜೈಸಿಂಗಪೂರ ಪಟ್ಟಣದ ಸಾಮಾಜಿಕ ಕಾರ್ಯಕರ್ತರು ಹಾಗೂ ಮಹಾರಾಷ್ಟ್ರದ ಅಹಿಲಾಬಾಯಿ ಹೂಳಕರ ಪ್ರಶಸ್ತಿ ವಿಜೇತರಾದ ಶ್ರೀಮತಿ ಡಾಕ್ಟರ ಸ್ನೇಹಲ …

Read More »

ಓವರ್ ಲೋಡೆಡ್ ಇದ್ರೂ ಕಾಂಗ್ರೆಸ್ ಪಕ್ಷದಲ್ಲೇ ಕಾಯುತ್ತೇನೆ. ಇಲ್ಲಿಯೇ ಅಧ್ಯಕ್ಷ ಆಗಬೇಕು, ಇಲ್ಲಿಯೇ ಸಿಎಂ ಆಗಬೇಕು. ನಾನು ವೇಯ್ಟಿಂಗ್ ಲಿಸ್ಟ್​ನಲ್ಲಿದ್ದೇನೆ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ನಮ್ಮದೇ ಗಾಡಿ (ಕಾಂಗ್ರೆಸ್ ಪಕ್ಷ ) ಫುಲ್ ಇದೆ. ಇನ್ನು ಜೆಡಿಎಸ್ 14 ಶಾಸರನ್ನು ತೆಗೆದುಕೊಂಡು ನಾವೇನು ಮಾಡೋಣ. ಓವರ್ ಲೋಡೆಡ್ ಇದ್ರೂ ಕಾಂಗ್ರೆಸ್ ಪಕ್ಷದಲ್ಲೇ ಕಾಯುತ್ತೇನೆ. ಇಲ್ಲಿಯೇ ಅಧ್ಯಕ್ಷ ಆಗಬೇಕು, ಇಲ್ಲಿಯೇ ಸಿಎಂ ಆಗಬೇಕು. ನಾನು ವೇಯ್ಟಿಂಗ್ ಲಿಸ್ಟ್​ನಲ್ಲಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ಸದ್ಯಕ್ಕೆ ತಾವು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ. ಈಗಾಗಲೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ತಮ್ಮ ಸರದಿ ಏನಿದ್ದರೂ …

Read More »

ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*

ನವದೆಹಲಿ : “ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆ ವೇಳೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆಸಿದ್ದಾರೆ. …

Read More »

ಬಂಡೀಪುರ ರಾತ್ರಿ ಸಂಚಾರ: ಸರ್ವಸಮ್ಮತ ನಿರ್ಧಾರ- ಈಶ್ವರ ಖಂಡ್ರೆ

ಬಂಡೀಪುರ ರಾತ್ರಿ ಸಂಚಾರ: ಸರ್ವಸಮ್ಮತ ನಿರ್ಧಾರ- ಈಶ್ವರ ಖಂಡ್ರೆ ನವದೆಹಲಿ : ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಈ ಪ್ರಕರಣ ಸರ್ವೋನ್ನತ ನ್ಯಾಯಾಲಯದಲ್ಲಿದ್ದು, ಪ್ರಸ್ತುತ ರಾತ್ರಿ 9ರಿಂದ ಬೆಳಗ್ಗೆ 6ಗಂಟೆಯವರೆಗೆ ನಿರ್ಬಂಧ …

Read More »

ಸರ್ವರಲ್ಲೂ ಒಳ್ಳೆಯ ವಿಚಾರಗಳನ್ನು ಕಲಿತು ಜ್ಞಾನಿಗಳಾಗಬೇಕು…

ಸರ್ವರಲ್ಲೂ ಒಳ್ಳೆಯ ವಿಚಾರಗಳನ್ನು ಕಲಿತು ಜ್ಞಾನಿಗಳಾಗಬೇಕು… ಮರಾಠಿಯ ಮಾತು ಎಂಬ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಆರ್.ಸಿ.ಯು ಕುಲಗುರು ಸಿ.ಎಂ. ತ್ಯಾಗರಾಜ್ ಎಲ್ಲ ಕ್ಷೇತ್ರಗಳಲ್ಲೂ ಉತ್ಸಾಹದಿಂದ ಭಾಗವಹಿಸಿ ಎಲ್ಲವನ್ನು ಕಲಿತುಕೊಂಡು ಜ್ಞಾನಿಗಳಾಗಬೇಕು ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಗುರುಗಳಾದ ಪ್ರಾಧ್ಯಾಪಕ ಸಿ.ಎಂ. ತ್ಯಾಗರಾಜ್ ಅವರು ಹೇಳಿದರು. ಬೆಳಗಾವಿ ಶಹಾಪೂರದ ಶ್ರೀ ಸರಸ್ವತಿ ವಾಚನಾಲಯದ ವತಿಯಿಂದ ರಾಜ್ಯ ಮರಾಠಿ ವಿಕಾಸ್ ಸಂಸ್ಥೆ ಅನುವಾದ ಯೋಜನೆಯಡಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ …

Read More »

ಉ.ಕ ಭಾಗಕ್ಕೂ ವಿಮಾನಯಾನ ಸೌಲಭ್ಯ ಹೆಚ್ಚಿಸಲು ಸಚಿವ ಸತೀಶ್‌ ಜಾರಕಿಹೊಳಿ ಮನವಿ

ಉ.ಕ ಭಾಗಕ್ಕೂ ವಿಮಾನಯಾನ ಸೌಲಭ್ಯ ಹೆಚ್ಚಿಸಲು ಸಚಿವ ಸತೀಶ್‌ ಜಾರಕಿಹೊಳಿ ಮನವಿ ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಭೇಟಿಯಾಗಿ ಬಹು ದಶಕಗಳಿಂದಲೂ ಅಭಿವೃದ್ಧಿಯಲ್ಲಿ ಹಿಂದಿರುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಿಮಾನಯಾನಕ್ಕೆ ಸಂಬಂಧಿಸಿದ ಸೌಲಭ್ಯಗಳನ್ನು ಒದಗಿಸಬೇಕೆಂದು ಮನವಿ ಮಾಡಿದ್ದಾರೆ. ಬೆಂಗಳೂರಿನ …

Read More »