Breaking News

ರಾಷ್ಟ್ರೀಯ

ಕಾಂಗ್ರೆಸ್‌ 40 ಕ್ಷೇತ್ರಗಳಲ್ಲಿ ಟಿಕೆಟ್‌ ಕಗ್ಗಂಟು; ಇಲ್ಲಿದೆ ನೋಡಿ ಕೈ ಎರಡನೇ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು,ಏಪ್ರಿಲ್3:‌ ವಿಧಾನಸಭೆ ಚುನಾವಣೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್‌ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಇನ್ನೂ ಎರಡನೇ ಪಟ್ಟಿ ತಯಾರಿಕೆಯಲ್ಲಿ 40 ಕ್ಷೇತ್ರಗಳ ಅಭ್ಯರ್ಥಿಯೇ ದೊಡ್ಡ ಸವಾಲವಾಗಿದೆ. 124 ಕ್ಷೇತ್ರದಲ್ಲಿ ಸ್ಪರ್ಧಾಳುಗಳನ್ನು ಘೋಷಿಸಿದ್ದ ಸ್ಕ್ರೀನಿಂಗ್ ಕಮಿಟಿ ಉಳಿದ ನೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಎಐಸಿಸಿ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿದೆ. ಇದರಲ್ಲಿ 40 ಕ್ಷೇತ್ರಗಳಿಗೆ ಎರಡರಿಂದ ಮೂರು ಅಭ್ಯರ್ಥಿಗಳನ್ನ ಎಐಸಿಸಿ ಕೇಂದ್ರ ಚುನಾವಣಾ ಸಮಿತಿಗೆ …

Read More »

ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಅಂಬರೀಶ್ ಎಂಟ್ರಿ?

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಇದೀಗ ಚುನಾವಣೆಯ ಚುಕ್ಕಾಣಿ ಹಿಡಿಯಲು ಬಿಗ್ ಪ್ಲಾನ್ ಮಾಡಿದೆ. ಹೌದು, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ಉದ್ದೇಶದಿಂದ ಸಂಸದೆ ಸುಮಲತಾ ಅಂಬರೀಶ್ ಅವರನ್ನು ರಾಜ್ಯ ರಾಜಕಾರಣಕ್ಕೆ ಕರೆತರಲು ಸಿದ್ಧತೆ ನಡೆಸಿದೆ. ಪ್ರಮುಖವಾಗಿ ಜೆಡಿಎಸ್ ಭದ್ರಕೋಟೆ ಎಂದು ಪರಿಗಣಿಸಲಾದ ಮಂಡ್ಯ ಜಿಲ್ಲೆಯನ್ನು ವಶಪಡಿಸಿಕೊಳ್ಳಲು ಬಿಜೆಪಿ ಶತಾಯುಗತಾಯ ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಮಂಡ್ಯ ವಿಧಾನಸಭೆ ಕ್ಷೇತ್ರದಿಂದ ನಟಿ …

Read More »

ಔತಣಕೂಟದಲ್ಲಿ ಟಿಶ್ಯೂ ಬದಲು 500 ರೂ. ನೋಟುಗಳನ್ನಿಟ್ಟಿದ್ರಾ ಮುಖೇಶ್ ಅಂಬಾನಿ ? ಇಲ್ಲಿದೆ ವೈರಲ್ ಫೋಟೋ ಹಿಂದಿನ ಅಸಲಿ ಸತ್ಯ

ಉದ್ಯಮಿ ಮುಖೇಶ್ ಅಂಬಾನಿ ಆಯೋಜಿಸಿದ್ದ ಔತಣ ಕೂಟದಲ್ಲಿ 500 ರೂಪಾಯಿಯ ನೋಟುಗಳೊಂದಿಗೆ ಆಹಾರ ಪದಾರ್ಥವನ್ನು ಬಡಿಸಿದಂತೆ ತೋರಿಸುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫೋಟೋವನ್ನು ಶೇರ್ ಮಾಡಿದ ಟ್ವಿಟರ್ ಬಳಕೆದಾರರು ಅಂಬಾನಿಯ ಶ್ರೀಮಂತಿಕೆಯ ಬಗ್ಗೆ ಮಾಹಿತಿ ನೀಡಿ ಅಂಬಾನಿ ಪಾರ್ಟಿಯಲ್ಲಿ ಟಿಶ್ಯೂ ಪೇಪರ್‌ಗಳ ಜಾಗದಲ್ಲಿ 500 ರೂಪಾಯಿ ನೋಟು ಇರಿಸಲಾಗಿತ್ತು ಎಂದು ಹೇಳಿದ್ದಾರೆ.   ರುಚಿಕರವಾದ ಪಾಕಪದ್ಧತಿಯೊಂದಿಗೆ ನಿಜವಾಗಿಯೂ ಸ್ವಲ್ಪ ಹಣವನ್ನು ನೀಡಲಾಗುತ್ತಿದೆಯೇ ? ಎಂಬ ಸಂದೇಹವನ್ನು ನಿವಾರಿಸಲು …

Read More »

ಮಲಗಿದ್ದ ವ್ಯಕ್ತಿಯ ಮೇಲೆ ಆರ್.ಪಿ.ಎಫ್ ಪೊಲೀಸರ ದರ್ಪ

ಇಬ್ಬರು ಪೊಲೀಸರು ರೈಲ್ವೆ ಆವರಣದಲ್ಲಿ ಮಲಗಿದ್ದ ಕೂಲಿಯೊಬ್ಬನ ಮೇಲೆ ದರ್ಪ ತೋರಿದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.     ಕರ್ತವ್ಯದಲ್ಲಿದ್ದ ಪೊಲೀಸರು ಮಲಗಿದ್ದ ವ್ಯಕ್ತಿಯ ಮೇಲೆ ದರ್ಪ ತೋರಿರುವ ಘಟನೆ ಮಥುರಾ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಿದ್ರಿಸುತ್ತಿದ್ದ ವ್ಯಕ್ತಿಯ ಮುಖದ ಮೇಲೆ ಒಬ್ಬ ಪೊಲೀಸ್​ ಟಾರ್ಚ್‌ಲೈಟ್ ಬಿಟ್ಟರೆ ಮತ್ತೊಬ್ಬ ಪೊಲೀಸ್​ ದುರಹಂಕಾರದಿಂದ ಆ ವ್ಯಕ್ತಿಯ ಕಾಲಿಗೆ ತನ್ನ ಶೂ ಉಜ್ಜಿದ್ದನ್ನು ವಿಡಿಯೋದಲ್ಲಿ ನೋಡಬಹುದು.   …

Read More »

ಕಾಂಗ್ರೆಸ್&ಬಿಜೆಪಿ ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ ಟಿಕೆಟ್ ಹಂಚಿಕೆಯಲ್ಲೂ ತೀವ್ರ ಗೊಂದಲ

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುವ ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ ಟಿಕೆಟ್ ಹಂಚಿಕೆಯಲ್ಲೂ ತೀವ್ರ ಗೊಂದಲ ಕಾಣಿಸಿದೆ. ಬೆಳಗಾವಿ ಉತ್ತರ, ರಾಯಬಾಗ ಮತ್ತು ಗೋಕಾಕ ಕ್ಷೇತ್ರ ಕಾಂಗ್ರೆಸ್ ಗೆ ಕಗ್ಗಂಟಾಗಿದ್ದರೆ, ಅಥಣಿ, ಬೆಳಗಾವಿ ಉತ್ತರ, ಖಾನಾಪುರ, ಬೈಲಹೊಂಗಲ ಕ್ಷೇತ್ರಗಳು ಬಿಜೆಪಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬೆಳಗಾವಿ ಉತ್ತರದ ಕಾಂಗ್ರೆಸ್ ಟಿಕೆಟ್ ಗೆ ಆಸೀಫ್ (ರಾಜು) ಸೇಠ್ ಮತ್ತು ಅಜೀಂ ಪಟವೇಗಾರ ಮಧ್ಯೆ ಪೈಪೋಟಿ ನಡೆದಿದೆ. ರಾಯಬಾಗದಲ್ಲಿ ಶಂಬು ಕಲ್ಲೋಳ್ಕರ್ …

Read More »

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ; ಸಿಎಂ ಬಸವರಾಜ ಬೊಮ್ಮಾಯಿ‌

ಬೆಂಗಳೂರು: ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯಿಲ್ಲ. ನರೇಂದ್ರ ಮೋದಿಯವರು ದೇಶದ ಆಡಳಿತದ ಚುಕ್ಕಾಣಿ ಹಿಡಿದ ಬಳಿಕ ಈ ಧೋರಣೆ ಬದಲಾಗಿದೆ. ಆದರೆ, ಆಡಳಿತ ವಿರೋಧಿ ಅಲೆಯಿದೆ ಮನಸ್ಥಿತಿಯಿಂದ ಮತಪೂರ್ವ ಸಮೀಕ್ಷೆ ನಡೆಸುವ ಸಂಸ್ಥೆಗಳು ಹೊರಬಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಪ್ರತಿಪಾದಿಸಿದರು.   ಬಿಜೆಪಿ ಮಾಧ್ಯಮ ಕೇಂದ್ರಕ್ಕೆ ಸೋಮವಾರ ಚಾಲನೆ ನೀಡಿದ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಕಾರಾತ್ಮಕ ನೆಲೆಯಲ್ಲಿ ಈ ಚುನಾವಣೆಯನ್ನು ಪಕ್ಷ ಎದುರಿಸಲಿದೆ. ಪ್ರಗತಿ ವರದಿ ಮುಂದಿಟ್ಟು ಜನರ …

Read More »

ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ : ಎಚ್. ವಿಶ್ವನಾಥ್

ಮೈಸೂರು: ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ. ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಕ್ಕೆ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಪಶ್ಚಾತಾಪವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.   ಮೈಸೂರಿನ ನ್ಯಾಯಾಲಯದ ಮುಂಭಾಗದಲ್ಲಿ ಮಾತನಾಡಿದ, ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ. ಪಾಪದ ಹೊರೆ ಇಳಿಸಿ ಕೊಳ್ಳಲು ಪಶ್ಚಾತಾಪ ಸತ್ಯಾಗ್ರಹ ಮಾಡುತ್ತಿದ್ದೇನೆ. ನಾನು ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯನಾಗಿಲ್ಲ. ಸಾಹಿತ್ಯ ಕೋಟಾದಲ್ಲಿ ಎಂಎಲ್​ಸಿ ಆಗಿದ್ದೇನೆ. ಈ ಚುನಾವಣೆಯಲ್ಲಿ ನಾನು …

Read More »

ಕಾಂಚಾಣದ ಮೇಲೆ ಕೇಂದ್ರ ತಂಡಗಳ ನಿಗಾ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಚುನಾವಣಾ ಅಕ್ರಮ ಹಾಗೂ ಹಣ ಬಲದ ಪ್ರಭಾವವನ್ನು ಸವಾಲಾಗಿ ತೆಗೆದುಕೊಂಡಿರುವ ಕೇಂದ್ರ ಚುನಾವಣಾ ಆಯೋಗ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ಹದ್ದಿನ ಕಣ್ಣಿಡಲು ವಿಶೇಷ ತಂಡಗಳನ್ನು ರವಾನಿಸಲಿದೆ.   ಅದರಂತೆ, ಉತ್ತರ ಭಾರತದ ರಾಜ್ಯಗಳಾದ ಉತ್ತರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಸೇರಿದಂತೆ ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳಿಂದ “ಭಾರತೀಯ ಕಂದಾಯ ಸೇವೆ’ (ಐಆರ್‌ಎಸ್‌) ಅಧಿಕಾರಿಗಳ …

Read More »

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಫೂಲ್ ಮಾಡಿದೆ: ಡಿಕೆಶಿ

ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲರನ್ನೂ ಮೂರ್ಖರನ್ನಾಗಿಸುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಮೀಸಲಾತಿ ಜನಸಂಖ್ಯೆಗೆ ಅನುಗುಣವಾಗಿ ಎಲ್ಲರಿಗೂ ಸಮಾನವಾಗಿ ಸಿಗಬೇಕು. ಅದು ಬಿಟ್ಟು ಒಬ್ಬರದು ಕಿತ್ತು ಮತ್ತೊಬ್ಬರಿಗೆ ಕೊಡುವುದಲ್ಲ ಎಂದು ಟೀಕಿಸಿದರು. ಕೋಲಿ ಸಮಾಜವನ್ನು ಎಸ್‌ಟಿಗೆ ಸೇರಿಸುತ್ತೇವೆಂದು ಆಸೆ ತೋರಿಸಿದ್ದರು. ಏನಾಯಿತು? ಬಂಜಾರ ಸಮುದಾಯದ ಆಕ್ರೋಶ ನೋಡಿದ್ದೇವಲ್ಲ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಬಿಜೆಪಿಯವರು ಮಾಡಿರುವ ಎಲ್ಲ ತಪ್ಪು ಸರಿ ಮಾಡುತ್ತದೆ. ಎಲ್ಲರಿಗೂ ನ್ಯಾಯ …

Read More »

ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ದ್ರೋಹ: ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹಣ ಬಿಡುಗಡೆ ಮಾಡದೆ ಮೋದಿ ಸರಕಾರ ಕರ್ನಾಟಕಕ್ಕೆ ದ್ರೋಹ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಬೊಮ್ಮಾಯಿ ನೇತೃತ್ವದ ರಾಜ್ಯ ಮತ್ತು ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರಗಳು ಕಳೆದ 6 ತಿಂಗಳಲ್ಲಿ ನೂರಾರು ಕೋಟಿ ರೂ. ಜಾಹೀರಾತು ಬಿಡುಗಡೆ ಮಾಡಿವೆ. ಡಬಲ್‌ ಎಂಜಿನ್‌ ಸರ್ಕಾರ ಬಂದರೆ ಕರ್ನಾಟಕ ಸ್ವರ್ಗ ಆಗುತ್ತದೆ ಎಂದು ನಂಬಿಸಲು ಭಾಷಣಗಳು ಮತ್ತು …

Read More »