ಕುಷ್ಟಗಿ:ಕಾಂಗ್ರೆಸ್ಸಿಗೆ ಹೇಳಿಕೊಳ್ಳುವ ನೇತೃತ್ವವೇ ಇಲ್ಲ, ಬಾಯಿ ಬಿಟ್ಟರೆ ಬಣ್ಣಗೇಡು ಎನ್ನುವಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು. ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಆಕ್ಸಫರ್ಡ್ ವಿಶ್ವವಿದ್ಯಾಲಯಕ್ಕೆ ಹೋಗಿ ಭಾರತದ ಪ್ರಜಾಪ್ರಭುತ್ವದ ಅವಹೇಳನವನ್ನು ರಾಹುಲ್ಗಾಂಧಿ ಮಾಡಿದರು. ಯಾರು ನಮ್ಮ ದೇಶವನ್ನುಇನ್ನೂರು ವರ್ಷಗಳ ಕಾಲ ಕೊಳ್ಳೆ ಹೊಡೆದರೋ ಅವರನ್ನು ಮಧ್ಯ ಪ್ರವೇಶ ಮಾಡಿ ಎಂದು ದೇಶದ ಸಾರ್ವಭೌಮಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪರಕೀಯರ …
Read More »ಸೋಮಣ್ಣ ನಮ್ಮ ಜೊತೆಯೇ ಇರುತ್ತಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ‘ಸಚಿವ ವಿ. ಸೋಮಣ್ಣ ನಮ್ಮ ಜೊತೆನೆ ಇದ್ದಾರೆ. ಮುಂದೆಯೂ ಜೊತೆಗೇ ಇರುತ್ತಾರೆ. ಯಾವುದೇ ಊಹಾಪೋಹ ಬೇಡ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ವಿ. ಸೋಮಣ್ಣ ಅವರ ಜೊತೆ ನಿನ್ನೆ ಹುಬ್ಬಳ್ಳಿಯಲ್ಲಿ ಯಾವುದೇ ಮಾತುಕತೆ ನಡೆದಿಲ್ಲ. ನಮ್ಮ ಭೇಟಿ ಕೇವಲ ಔಪಚಾರಿಕ’ ಎಂದರು. ‘ಒಂದಿಷ್ಟು ಯೋಜನೆಗಳ ಕ್ರೆಡಿಟ್ ಪಡೆಯಲು ಕೆಲವರು ಮುಂದಾಗಿದ್ದಾರೆ. ಕ್ರೆಡಿಟ್ ವಾರ್ ಸಹಜ. ಪಕ್ಕದ ಮನೆಯವರು ಗಂಡು ಹಡೆದರೆ, ಇವರು …
Read More »ಫೈಟರ್ ರವಿಗೆ ಕೈಮುಗಿದು ನಿಂತ ಮೋದಿ: ಪ್ರಧಾನಿ ಹುದ್ದೆಗೆ ಕಳಂಕ ಎಂದ ಕಾಂಗ್ರೆಸ್
ಬೆಂಗಳೂರು: ಮಲ್ಲಿಕಾರ್ಜುನ್ (ಫೈಟರ್ ರವಿ) ಎಂಬುವವರ ಎದುರು ಕೈಮುಗಿದು ನಿಂತ ನರೇಂದ್ರ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಫೈಟರ್ ರವಿ ಅವರನ್ನು ರೌಡಿ ಶೀಟರ್ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಮಾಡಿರುವ ಟ್ವೀಟ್ ಮಂಡ್ಯ ಮತ್ತು ಧಾರವಾಡದ ಕಾರ್ಯಕ್ರಮಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕರ್ನಾಟಕಕ್ಕೆ ಆಗಮಿಸಿದ್ದರು. ಮಂಡ್ಯದಲ್ಲಿ ಆಯೋಜಿಸಿದ್ದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆಗೆಂದು ಮೈಸೂರಿಗೆ ಬಂದಿಳಿದಿದ್ದ …
Read More »ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆಯ ಫಲಿತಾಂಶ ಪ್ರಕಟ, ಬಿಜೆಪಿಗೆ ಆಘಾತ
ಬೆಂಗಳೂರು, ಮಾರ್ಚ್ 11: ವಿಧಾನಸಭಾ ಚುನಾವಣೆಗೆ ಮಿಷನ್ 150 ಹೊತ್ತಿರುವ ಬಿಜೆಪಿ, ತನ್ನ ಟಾರ್ಗೆಟ್ ರೀಚ್ಗಾಗಿ ಸಮರಾಭ್ಯಾಸ ನಡೆಸುತ್ತಿದೆ. ಇತ್ತ ಕಾಂಗ್ರೆಸ್ ಹಾಗೂ ಜೆಡಿಎಸ್ ಹಲವು ಯಾತ್ರೆಗಳ ಮೂಲಕ ರಾಜ್ಯಾದ್ಯಂತ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ಈ ಬಾರಿಯ 2023ರ ವಿಧಾನಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದ್ದು, ಇನ್ನೊಂದು ಚುನಾವಣಾ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತವಾಗಿದ್ದು, ಇನ್ನೂ ಕೆಲ ರಾಜಕೀಯ ಪಕ್ಷಗಳು ಚುನಾವಣಾ ತಯಾರಿಯನ್ನು ಚುರುಕುಗೊಳಿಸಿದೆ. ಹೌದು, ಈಗಾಗಲೇ ಗೆಲ್ಲುವ …
Read More »ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇ ಉದ್ಘಾಟಿಸಿದ ಪ್ರಧಾನಿ ಮೋದಿ
ಮಂಡ್ಯ: ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇಯನ್ನು ಪ್ರಧಾನಿ ಮೋದಿ ಅಧಿಕೃತವಾಗಿ ಉದ್ಘಾಟನೆ ಮಾಡಿದ್ದಾರೆ. 8,479 ಕೋಟಿ ರೂ. ವೆಚ್ಚದಲ್ಲಿ ಎಕ್ಸ್ಪ್ರೆಸ್ ಹೈವೇ ನಿರ್ಮಾಣವಾಗಿದೆ. ಹೈವೇ ಉದ್ಘಾಟನೆ ವೇಳೆ ಪ್ರಧಾನಿ ಮೋದಿಗೆ ಕಲಾತಂಡಗಳಿಂದ ಸ್ವಾಗತ ಕೋರಲಾಯಿತು. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಧಾನಿ ಮೋದಿಯವನ್ನು ಸನ್ಮಾನಿಸಿದ್ದಾರೆ. ಇನ್ನು ಪ್ರಧಾನಮಂತ್ರಿಯವರು ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯನ್ನು ದೇಶಕ್ಕೆ ಸಮರ್ಪಿಸುವರು. ಈ ಯೋಜನೆಯು ರಾಷ್ಟ್ರೀಯ …
Read More »ಐಐಟಿ ಸುಂದರ ಕನಸು ನನಸು
ಧಾರವಾಡ: ರಾಜ್ಯದ ಶಿಕ್ಷಣ ಕಾಶಿ, ವಿದ್ಯಾನಗರಿ ಮತ್ತು ಸಾಹಿತ್ಯ-ಸಾಂಸ್ಕೃತಿಕ ರಾಜಧಾನಿ ಧಾರ ವಾಡಕ್ಕೆ ಕಿರೀಟಪ್ರಾಯವಾಗಿ ಐಐಟಿ ಎಂಬ ಮಣಿ ಮುಕುಟ ಸೇರ್ಪಡೆಯಾಗಿದೆ. ಧಾರಾನಗರಿಯಲ್ಲಿ ಐಐಟಿ ಸ್ಥಾಪನೆಯ 1990ರ ದಶಕದ ಕೂಗು 2016ರಲ್ಲಿ ಸಾಕಾರಗೊಂಡಿತ್ತು. ಈಗ ಇಲ್ಲಿಯ ಬೇಲೂರು ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಿರುವ 470 ಎಕರೆ ಜಮೀನಿನಲ್ಲಿ ನಿರ್ಮಾಣಗೊಂಡ ಭವ್ಯ ಮತ್ತು ದೈತ್ಯ ಕ್ಯಾಂಪಸ್ ಉದ್ಘಾಟನೆಗೆ ಸಜ್ಜಾಗಿದೆ. ಪ್ರಧಾನಿ ಮೋದಿ ರವಿ ವಾರ ದೇಶಕ್ಕೆ ಸಮರ್ಪಿಸಲಿದ್ದಾರೆ. ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ಐಐಟಿ ಸಂಪೂರ್ಣ …
Read More »ಮತ್ತೂಬ್ಬ ಸಚಿವರು, ಬಿಜೆಪಿ ಶಾಸಕರಿಬ್ಬರು ಕಾಂಗ್ರೆಸ್ಗೆ ಪಕ್ಕಾ
ಬೆಂಗಳೂರು: ರೇಷ್ಮೆ ಮತ್ತು ಯುವ ಜನ ಸೇವೆ ಸಚಿವ ನಾರಾಯಣ ಗೌಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾದಂತೆಯೇ ರಾಜಧಾನಿಯ ಪ್ರಭಾವಿ ಸಚಿವರೊಬ್ಬರು, ಚಿತ್ರದುರ್ಗ ಹಾಗೂ ವಿಜಯ ನಗರ ಜಿಲ್ಲೆಯ ಶಾಸಕರಿಬ್ಬರು ಬಿಜೆಪಿ ತೊರೆ ಯಲು ಮುಂದಾಗಿರುವುದು ಆಡಳಿತ ಪಕ್ಷಕ್ಕೆ ಮತ್ತೂಂದು ಆಘಾತವಾಗಿದೆ. ಎಐಸಿಸಿ ಪ್ರಧಾನ ಕಾರ್ಯ ದರ್ಶಿ ರಣದೀಪ್ ಸಿಂಗ್ ಸುಜೇìವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ …
Read More »ಪ್ರಧಾನಿ ನರೇಂದ್ರ ಮೋದಿ ಇಂದು ಧಾರವಾಡದಲ್ಲಿ ಜಲ ಜೀವನ್ ಮಿಷನ್ ಮತ್ತು ಜಯದೇವ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ
ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಇಂದು ಧಾರವಾಡದಲ್ಲಿ ಜಲ ಜೀವನ್ ಮಿಷನ್ ಮತ್ತು ಜಯದೇವ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. “ಪ್ರಧಾನಿ ಅವರು ರಾಜ್ಯಕ್ಕೆ ಭೇಟಿ ನೀಡಿದಾಗಲೆಲ್ಲ ಅವರು ಹೆಚ್ಚು ಅಗತ್ಯವಿರುವ ಮೂಲಭೂತ ಮೂಲಸೌಕರ್ಯ ಯೋಜನೆಗಳಿಗೆ ಅನುದಾನವನ್ನು ಬಿಡುಗಡೆ ಮಾಡುತ್ತಿದ್ದಾರೆ. ಇದರ ಫಲವಾಗಿ ಹಲವು ಯೋಜನೆಗಳು ಜನರಿಗೆ ಸಮರ್ಪಣೆಗೆ ಸಿದ್ಧವಾಗಿವೆ’ ಎಂದು ಬೊಮ್ಮಾಯಿ ಹೇಳಿದರು. “ಪ್ರಧಾನಿ ಮೋದಿ ಅವರು ರಾಜ್ಯ ಮತ್ತು ಅಂತರ-ರಾಜ್ಯ ಮೂಲಸೌಕರ್ಯ ಸೌಲಭ್ಯಗಳಿಗೆ ದೊಡ್ಡ …
Read More »ಬಿಜೆಪಿ ತೊರೆದು ಎಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದ ಎ. ಮಂಜು
ಬಿಡದಿ (ರಾಮನಗರ): ಮಾಜಿ ಸಚಿವ ಎ. ಮಂಜು ಶನಿವಾರ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಎಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು. ಬಿಡದಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಮಂಜು ಅವರಿಗೆ ಪಕ್ಷದ ಶಾಲು ಹಾಕಿ ಬರಮಾಡಿಕೊಂಡರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತಿತರರು ಈ ಸಂದರ್ಭ …
Read More »EVM ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ , ಅಕ್ರಮ ನಡೆಸಲು ಸಾಧ್ಯವಿಲ್ಲ :ಚುನಾವಣಾ ಆಯುಕ್ತ ರಾಜೀವ್ ಕುಮಾರ್
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ-EVM ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಅದರಿಂದ ಯಾವುದೇ ಅಕ್ರಮ ನಡೆಸಲು ಸಾಧ್ಯವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಗುಜರಾತ್ ನಲ್ಲಿ ಬಳಸಿದ ಇವಿಎಂ ಬಲಶಬಾರದು ಎಂಬ ಕಾಂಗ್ರೆಸ್ ಮನವಿಯನ್ನು ತಿರಸ್ಕರಿಸಿದ ಅವರು, ಇವಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾಲ್ಕು ರಾಜ್ಯಗಳಲ್ಲಿ ಇವಿಯಂ ನಿಂದ ಯಾವುದೇ ಸಮಸ್ಯೆಯಾಗಿಲ್ಲ. …
Read More »