ಐಗಳಿ: ಐಗಳಿ ಕ್ರಾಸ್ನ ಮಣಿಕಪ್ರಭು ದೇವರ ಜಾತ್ರೆಯ ಪೂರ್ವದಲ್ಲಿ ಬೃಹತ್ ಪ್ರಮಾಣದ ಜಾನುವಾರ ಜಾತ್ರೆ ಸೋಮವಾರ ಆರಂಭವಾಯಿತು. ರಾಜ್ಯವೂ ಸೇರಿದಂತೆ ಮಹಾರಾಷ್ಟ್ರದ ಕೊಲ್ಹಾಪುರ, ಸೊಲ್ಲಾಪುರ, ಪಂಡರಪುರ, ಆಂಧ್ರ ಪ್ರದೇಶದಿಂದಲೂ ವ್ಯಾಪಾರಿಗಳು ಬಂದಿದ್ದಾರೆ. ಜಾತ್ರಾ ಕಮಿಟಿಯವರು ನೀರಿನ ಹಾಗೂ ಬೆಳಕಿನ ವ್ಯವಸ್ಥೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಿದ್ದಾರೆ. ರಾಚೋಟೇಶ್ವರ ಶಿವಯೋಗಿಗಳು ಕಂಡ ಕನಸು ನನಸಾಗಲೂ ಸಮೀಪಕ್ಕೆ ಬಂದಿದೆ ಎಂದು ಹಿರಿಯ ವ್ಯವಸ್ಥಾಪಕ ಶಿದರಾಯ ಬಿರಾದಾರ ಹೇಳಿದರು. ಟ್ರಸ್ಟ್ ಅಧ್ಯಕ್ಷ ಪ್ರಲ್ಹಾದ್ …
Read More »ಮಹಿಳಾ ದಿನಾಚರಣೆ; ನಾಳೆ BMTCಯಲ್ಲಿ ಉಚಿತ ಪ್ರಯಾಣ
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿಎಂಟಿಸಿ ಬಸ್ಗಳಲ್ಲಿ ನಾಳೆ (ಮಾ.8)ರಂದು ಒಂದು ದಿನ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಮಹಿಳಾ ದಿನಾಚರಣೆ ಅಂಗವಾಗಿ ಒಂದು ದಿನ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅನುಮತಿ ನೀಡಿ ಎಂದು ಸರ್ಕಾರಕ್ಕೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ (ಎಂ.ಡಿ) ಸತ್ಯವತಿ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಸೆಕ್ರೆಟರಿ ಎನ್. ವಿ ಪ್ರಸಾದ್ ಇಂದು ಅಧಿಕೃತ ಆದೇಶ ಹೊರಡಿಸಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚಣೆಯ ಅಂಗವಾಗಿ …
Read More »ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ನಿಂದ ನಿರೀಕ್ಷಣಾ ಜಾಮೀನು
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ಡಿಎಲ್) ನಿಯಮಿತದ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪಕ್ಕೆ ಗುರಿಯಾಗಿ ಬಂಧನದ ಭೀತಿ ಎದುರಿಸುತ್ತಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಸಂಬಂಧ ವಿರೂಪಾಕ್ಷಪ್ಪ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ಮನವಿಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ಮಂಗಳವಾರ ವಿಚಾರಣೆ ನಡೆಸಿದರು. ವಿಚಾರಣೆ …
Read More »ಗೋಕಾಕ: ಕರದಂಟು ನಾಡಲ್ಲಿ ರಮೇಶ್ ಜಾರಕಿಹೊಳಿ ಅವರಿಗೆ ಎದುರಾಳಿ ಯಾರು?
ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಗೋಕಾಕ ಎಲ್ಲರ ಗಮನ ಸೆಳೆಯುವ ಕ್ಷೇತ್ರ. ಕಾರಣ ಇಲ್ಲಿರುವ ಜಾರಕಿಹೊಳಿ ಕುಟುಂಬದ ಪ್ರಭಾವ ಮತ್ತು ಪ್ರಾಬಲ್ಯ. 1999ರಿಂದ ಈ ಕ್ಷೇತ್ರದಲ್ಲಿ ತಮ್ಮ ಸಾಮ್ರಾಜ್ಯ ಸ್ಥಾಪಿಸಿರುವ ರಮೇಶ ಜಾರಕಿ ಹೊಳಿ ಅಂದಿನಿಂದ ಇದುವರೆಗೆ ಒಮ್ಮೆಯೂ ಹಿಂತಿರುಗಿ ನೋಡಿಲ್ಲ. ಕಳೆದ ಚುನಾವಣೆ ಅನಂತರ ತಮ್ಮ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿದ್ದ ರಮೇಶ ಜಾರಕಿಹೊಳಿ ಒಮ್ಮೆಲೇ ರಾಷ್ಟ್ರ ರಾಜ ಕಾರಣಿಗಳು ತಮ್ಮ ಕಡೆ ತಿರುಗಿ ನೋಡುವಂತೆ ಮಾಡಿದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ …
Read More »ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಇಂದು, ನಾಳೆ ಕಾಂಗ್ರೆಸ್ ಸಭೆ
ಬೆಂಗಳೂರು: ಸುಮಾರು 70ರಿಂದ 80 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ 2ನೇ ಹಂತದ ಕಸರತ್ತು ಮಂಗಳವಾರ ಹಾಗೂ ಬುಧವಾರ ಎರಡು ದಿನಗಳ ಕಾಲ ನಡೆಯಲಿದೆ. ನಗರದ ಹೊರವಲಯದ ರೆಸಾರ್ಟ್ನಲ್ಲಿ ಪ್ರಮುಖರಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಸಮ್ಮುಖದಲ್ಲಿ ಈ ಸಭೆ ನಡೆಯಲಿದೆ. ಪ್ರಥಮ ಹಂತದಲ್ಲಿ ಈಗಾಗಲೇ 130ರಿಂದ 150 ಕ್ಷೇತ್ರಗಳಿಗೆ ಒಂದೊಂದೇ ಅಭ್ಯರ್ಥಿ ಆಯ್ಕೆ ಮಾಡಿ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲೂ ಸಮ್ಮತಿ ಪಡೆಯಲಿದೆ. ಉಳಿದಂತೆ ಒಂದಕ್ಕಿಂತ ಹೆಚ್ಚು ಟಿಕೆಟ್ …
Read More »ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಸಮಾವೇಶಕ್ಕೆ ಸಿದ್ದು ಗೈರು ಏಕೆ
ಬೆಂಗಳೂರು: ತುಮಕೂರಿನ ಕೊರಟಗೆರೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ತನ್ನ ಶಕ್ತಿ ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದೆ. ಇದಕ್ಕೆ ಕಾರಣ- ಸಿದ್ದರಾಮಯ್ಯ ಅವರ ಅನುಪಸ್ಥಿತಿ. ಪ್ರಮುಖವಾಗಿ ಅದು ರಾಜೀವ್ ಭವನ ಲೋಕಾರ್ಪಣೆ ಕಾರ್ಯಕ್ರಮವಾಗಿತ್ತು. ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅದರ ಕೇಂದ್ರಬಿಂದು ಆಗಿದ್ದರು. ಅಷ್ಟೇ ಅಲ್ಲ, ಕಾಂಗ್ರೆಸ್ನ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುಜೇìವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ.ಪರಮೇಶ್ವರ …
Read More »ಹಲವು ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ: B.S.Y.
ಕಲಬುರಗಿ: ರಾಜ್ಯಾದ್ಯಂತ ಈ ಬಾರಿ 140ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಹಾಲಿ ನಾಲ್ಕೈದು ಶಾಸಕರ ಟಿಕೆಟ್ ಸಿಗದಿರುವ ಸಾಧ್ಯತೆಯಿದೆ ಎಂದು ಇಂಗಿತ ವ್ಯಕ್ತಪಡಿಸಿದರು. ಇಲ್ಲಿನ ಐವಾನ್-ಎ-ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ. ಕಾಂಗ್ರೆಸ್ ಪಕ್ಷದ ಪ್ರಜಾದನಿ …
Read More »ವಿಜಯ ಸಂಕಲ್ಪ ಯಾತ್ರೆ ನಾಳೆ ನಿಪ್ಪಾಣಿಯಲ್ಲಿ
ನಿಪ್ಪಾಣಿ: “”ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾದ ವಿಜಯ ಸಂಕಲ್ಪ ಯಾತ್ರೆ ಬುಧವಾರ (ಮಾ.8) ಮಧ್ಯಾಹ್ನ 3 ಗಂಟೆಗೆ ನಗರಕ್ಕೆ ಆಗಮಿಸಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಭವ್ಯವಾದ ರೋಡ್ಶೋ ಆಯೋಜಿಸಲಾಗಿದೆ” ಎಂದು ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ನಗರದ ಜೊಲ್ಲೆ ಶಿಕ್ಷಣ ಸಂಕೀರ್ಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಸಹಸಂಘಟನೆ ಕಾರ್ಯದರ್ಶಿ ಸಿ.ಟಿ. ರವಿ, …
Read More »ಸೀರೆಗಳನ್ನು ಹಂಚಲು ಮುಂದಾದ ಮಾಜಿ I,A,S, ಅಧಿಕಾರಿ 20 ಸಾವಿರಕ್ಕೂ ಹೆಚ್ಚು ಮುಗಿಬಿದ್ದ ಮಹಿಳೆಯರು
ರಾಯಬಾಗ: ಚುನಾವಣೆ ಸಮೀಪಿಸುತ್ತಿದ್ದಂತೆ ಈಗ ಎಲ್ಲೆಡೆ ಗಿಫ್ಟ್ ಪಾಲಿಟಿಕ್ಸ್ ತಾರಕಕ್ಕೇರುತ್ತಿದೆ. ಒಂದೆಡೆ ಪ್ರಾಮಾಣಿಕತೆಯ ಮಂತ್ರ, ಇನ್ನೊಂದೆಡೆ ಆಮಿಷದ ತಂತ್ರ ಮುಂದುವರಿದಿದೆ. ಹೊಸಹೊಸ ಆಕಾಂಕ್ಷಿಗಳು ತಮ್ಮ ಜಾಗ ಭದ್ರಪಡಿಸಿಕೊಳ್ಳಲು ಹೈ ಕಮಾಂಡ್ ಪಾದಪೂಜೆಯ ಜೊತೆಜೊತೆಗೇ ಜನರ ನಿಯತ್ತನ್ನೇ ಹಾಳುಗೆಡವುತ್ತಿದ್ದಾರೆ. ಇದೀಗ ರಾಯಬಾಗ ಕ್ಷೇತ್ರದಲ್ಲಿ ನಡೆದ ವಿದ್ಯಮಾನವೊಂದು ಯಾರು ಪ್ರಾಮಾಣಿಕರು? ಅಧಿಕಾರ ಮುಖ್ಯವೋ, ಪ್ರಾಮಾಣಿಕತೆ ಮುಖ್ಯವೋ ಎಂಬೆಲ್ಲ ವಿಷಯಗಳ ಬಗ್ಗೆ ಚರ್ಚೆ ಹುಟ್ಟುಹಾಕಿದೆ. ರಾಯಬಾಗ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ತಮಿಳುನಾಡು ಸರಕಾರದ ಮಾಜಿ …
Read More »ರೈತರಿಗೆ ಪ್ರತಿ ವರ್ಷ 15 ಸಾವಿರ ರೂ. ಕೊಡುತ್ತೇನೆ: ಜನಾರ್ದನ ರೆಡ್ಡಿ
ಹಾವೇರಿ: ಬಡತನರೇಖೆಗಿಂತ ಕಡಿಮೆ ಇರುವ ರೈತರಿಗೆ ಪ್ರತಿ ವರ್ಷ 15 ಸಾವಿರ ಕೊಡುತ್ತೇನೆ. ಬಿತ್ತನೆ ಬೀಜ, ಗೊಬ್ಬರವನ್ನ ರೈತರ ಮನೆ ಬಾಗಿಲಿಗೆ ತಲುಪಿಸುತ್ತೇನೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಇದ್ದರೆ ಜನಾರ್ದನ ರೆಡ್ಡಿ ಇತಿಹಾಸ ಮಾಡುತ್ತಾನೆಂದು ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಹಾನಗಲ್ ಪಟ್ಟಣದಲ್ಲಿ ನಡೆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ಮೇಲೆ ನಿಮ್ಮ ಆಶೀರ್ವಾದ ಇರಲಿ. ಚಿಕ್ಕ ವಯಸ್ಸಿನಲ್ಲಿ ರಾಜಕೀಯ …
Read More »