Breaking News

ರಾಷ್ಟ್ರೀಯ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿರುವ 47,001 ರೌಡಿಶೀಟರ್‌ಗಳ ಮೇಲೂ ಖಾಕಿ ಹದ್ದಿನ ಕಣ್ಣಿಟ್ಟಿದೆ.

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿರುವ 47,001 ರೌಡಿಶೀಟರ್‌ಗಳ ಮೇಲೂ ಖಾಕಿ ಹದ್ದಿನ ಕಣ್ಣಿಟ್ಟಿದೆ. ಹಳೇ ಚಾಳಿ ಮುಂದುವರಿಸುತ್ತಿರುವ ರೌಡಿಗಳ ಹೆಡೆಮುರಿ ಕಟ್ಟಲು ಕಾರ್ಯಾಚರಣೆ ಶುರು ಹಚ್ಚಿಕೊಂಡಿದೆ. ವಿಧಾನಸಭೆ ಚುನಾವಣೆ ರಂಗೇರಲು ಕೆಲ ತಿಂಗಳುಗಳಷ್ಟೇ ಬಾಕಿಯಿದ್ದು, ಅಲ್ಲಲ್ಲಿ ಸದ್ದಿಲ್ಲದೇ ರೌಡಿ ಚಟುವಟಿಕೆಗಳು ನಡೆಯುವ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಸರ್ಕಾರವು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದೆ. ಈ ನಿಟ್ಟಿನಲ್ಲಿ ಫ‌ುಲ್‌ ಅಲರ್ಟ್‌ ಆಗಿರುವ ರಾಜ್ಯ ಖಾಕಿ ಪಡೆ …

Read More »

ಉದ್ಧವ್ ಠಾಕ್ರೆ ಕುಟುಂಬದಿಂದ ಕೈಜಾರಿದ ಶಿವಸೇನೆ; ಸಿಎಂ ಶಿಂಧೆ ಬಣ ಮೇಲುಗೈ

ನವದೆಹಲಿ ಶೀವಸೇನೆಯ ಬಿಲ್ಲು ಮತ್ತು ಬಾಣ ಚಿಹ್ನೆಯ ನಿಜವಾದ ವಾರಸುದಾರ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಬಣ ಎಂದು ಕೇಂದ್ರ ಚುನಾವಣಾ ಆಯೋಗ ಆದೇಶಿಸುವ ಮೂಲಕ ಬಾಳಾ ಸಾಹೇಬ್ ಠಾಕ್ರೆ ಸ್ಥಾಪಿಸಿದ್ದ ಶಿವಸೇನೆ ಪಕ್ಷ ಠಾಕ್ರೆ ಕುಟುಂಬದಿಂದ ಅಧಿಕೃತವಾಗಿ ಕೈಜಾರಿದಂತಾಗಿದೆ.   ಬಾಳಾ ಸಾಹೇಬ್ ಠಾಕ್ರೆ ರಾಜಕೀಯ ಬಳುವಳಿ ಮುಂದುವರಿಸುವ ಜವಾಬ್ದಾರಿ ಹೊತ್ತರೂ ಬಿಜೆಪಿ ಜತೆ ಮುನಿಸಿಕೊಂಡು ಕಾಂಗ್ರೆಸ್-ಎನ್​ಸಿಪಿ ಜತೆ ಮೈತ್ರಿ ಮಾಡಿಕೊಂಡು ಸಿಎಂ ಕುರ್ಚಿಗೇರಿದ್ದ ಉದ್ಧವ್ ಠಾಕ್ರೆ, ಎರಡೇ …

Read More »

ಬೇರೆ ಜಿಲ್ಲೆ ಬಗ್ಗೆ ಅಷ್ಟೊಂದು ಕಾಳಜಿ ವಹಿಸದೇ ತವರು ಜಿಲ್ಲೆಗೆ ಬಂಪರ್ ಕೊಡುಗೆ ನೀಡಿದ ಬೊಮ್ಮಾಯಿ

ಹಾವೇರಿ: ಕಳೆದ ಬಾರಿಯ ರಾಜ್ಯ ಬಜೆಟ್‌ನಲ್ಲಿ ಕೊಟ್ಟಂತೆಯೇ, ಈ ಬಾರಿಯ ಬಜೆಟ್‌ನಲ್ಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ತವರು ಜಿಲ್ಲೆ ಹಾವೇರಿಗೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಹೊಸದಾಗಿ ಮೀನುಮರಿ ಉತ್ಪಾದನಾ ಮತ್ತು ಪಾಲನಾ ಕೇಂದ್ರ ಸ್ಥಾಪನೆ, ಸವಣೂರಿನಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸ್ಥಾಪನೆ, ಹಾವೇರಿಯಲ್ಲಿ ಆಧುನಿಕ ತಂತ್ರಜ್ಞಾನ ಆಧರಿತ ಹೂವಿನ ಚಿಲ್ಲರೆ ಮಾರುಕಟ್ಟೆ ನಿರ್ಮಾಣ, ಬಂಕಾಪುರದ ನಗರೇಶ್ವರ ದೇವಸ್ಥಾನವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವುದಾಗಿ ಘೋಷಿಸಲಾಗಿದೆ.   …

Read More »

ಬಜೆಟ್‌ ಗದಗ ಜಿಲ್ಲೆ ‘ಶೂನ್ಯ ಸಂಪಾದನೆ’: ಜನತೆ ಆಕ್ರೋಶ

ಗದಗ: ಮು‌ಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್‌ ಜಿಲ್ಲೆಯ ಜನತೆಗೆ ನಿರಾಸೆ ಮೂಡಿಸಿದೆ. ತವರು ಜಿಲ್ಲೆ ಹಾವೇರಿಗೆ ಭರಪೂರ ಯೋಜನೆಗಳನ್ನು ಪ್ರಕಟಿಸಿರುವ ಅವರು ಪಕ್ಕದ ಗದಗ ಜಿಲ್ಲೆಯ ಬಗ್ಗೆ ಮಲತಾಯಿ ಧೋರಣೆ ತೋರಿದ್ದಾರೆ. ಕೈಗಾರಿಕೆ, ಕೃಷಿ, ನೀರಾವರಿ, ಪ್ರವಾಸೋದ್ಯಮ ಸೇರಿದಂತೆ ಜಿಲ್ಲೆಯ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಸಾಕಷ್ಟು ಅನುದಾನ ಮತ್ತು ಹೊಸ ಯೋಜನೆಗಳು ಘೋಷಣೆ ಆಗಬಹುದು ಎಂಬ ಜಿಲ್ಲೆಯ ಜನರ ನಿರೀಕ್ಷೆಗಳು ಹುಸಿಯಾಗಿವೆ. ಕಳಸಾ ಮತ್ತು …

Read More »

ಭದ್ರಾವತಿ: ವಿಐಎಸ್‌ಎಲ್‌ ಕಾರ್ಖಾನೆಗೆ ಕೊನೆ ಮೊಳೆ

ಶಿವಮೊಗ್ಗ: ವಿಐಎಸ್‌ಎಲ್‌ ಮುಚ್ಚುವುದಿಲ್ಲ, ಉಳಿಸಿಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಇತ್ತ ಭರವಸೆ ನೀಡುತ್ತಿದ್ದರೆ; ಅತ್ತ ಕೇಂದ್ರ ಸರಕಾರ ಕಾರ್ಖಾನೆ ಮುಚ್ಚುವುದು ಶತಸ್ಸಿದ್ಧ ಎಂದು ರಾಜ್ಯಸಭೆಯಲ್ಲೇ ಸ್ಪಷ್ಟ ಪಡಿಸುವ ಮೂಲಕ ಶತ ಮಾ ನಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ರಾಜ್ಯದ ಏಕೈಕ ಸಾರ್ವಜನಿಕ ಉಕ್ಕಿನ ಕಾರ್ಖಾನೆ ವಿಐಎಸ್‌ಎಲ್‌ಗೆ ಚರಮ ಗೀತೆ ಬರೆದಿದೆ. ಇಲ್ಲಿಗೆ ಕೈಗಾರಿಕಾ ನಗರದ ಇತಿಹಾಸವೂ ಕೊನೆಯಾಗಲಿದೆ. ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹಾಗೂ ಸರ್‌ ಎಂ. ವಿಶ್ವೇಶ್ವರಯ್ಯ ದೂರದೃಷ್ಟಿ ಫಲವಾಗಿ …

Read More »

ಇಂದು ವಿಠಲಾಪೂರದಲ್ಲಿ ರಸಲಿಂಗಕ್ಕೆ ವಿಶೇಷ ಪೂಜೆ

ಮುಂಡರಗಿ: ತಾಲೂಕಿನ ವಿಠಲಾಪೂರ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಪರೂಪದ ಪಂಚಲೋಹದ ರಸಲಿಂಗ(ಶಿವಲಿಂಗ)ಇದ್ದು, ಮಹಾಶಿವರಾತ್ರಿಯಂದು ವಿಶೇಷವಾಗಿ ರಸಲಿಂಗ ಪೂಜೆ ನಡೆಯುತ್ತದೆ. ಶಿವರಾತ್ರಿ ದಿನ ರಸಲಿಂಗವನ್ನು ತೊಳೆದು ಸಕಲ ಹೂಗಳು, ಬಿಲ್ವಪತ್ರಿಗಳಿಂದ ಮಹಾಪುರುಷರ ಕುಟುಂಬದವರು ಪೂಜೆ ನೆರವೇರಿಸುತ್ತಾರೆ. ದಕ್ಷಿಣ ಭಾರತದಲ್ಲಿಯೇ ವಿಶೇಷವಾಗಿರುವ ರಸಲಿಂಗ ಹಲವು ಕುತೂಹಲಕರ ಸಂಗತಿಗಳಿಂದ ಒಡಗೂಡಿದೆ. ರಸಶಾಸ್ತ್ರ ಅಧ್ಯಯನ ಮಾಡಿದ್ದ ಯೋಗಗುರುಗಳು ರಸಲಿಂಗವನ್ನು ರಚನೆ ಮಾಡಿದ್ದರು ಎನ್ನುವ ಮಾತು ಜನಜನಿತವಾಗಿದೆ. ವಿಠಲಾಪೂರದ ಮಹಾಪುರುಷರ ಕುಟುಂಬದ ಮೂಲ ಪುರುಷರಾದ ಬಿಷ್ಟಪ್ಪಯ್ಯ …

Read More »

ಜಲ ಜೀವನ ಮಿಷನ್‌ ಕಾಮಗಾರಿಗೆ ₹88.05 ಕೋಟಿ ಬಿಡುಗಡೆ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ‘ಆರ್‌ಡಿಪಿಆರ್‌ ಇಲಾಖೆಯಿಂದ ಅರಭಾವಿ ಮತಕ್ಷೇತ್ರದ ಜಲ ಜೀವನ್ ಮಿಷನ್‌ (ಜೆಜೆಎಂ) ಕಾಮಗಾರಿಗೆ ₹88.05 ಕೋಟಿ ಅನುದಾನ ಬಿಡುಗಡೆಯಾಗಿದೆ’ ಎಂದು ಶಾಸಕ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಮುನ್ಯಾಳ ತೋಟದಲ್ಲಿ ಜಲ ಜೀವನ ಮಿಷನ್‌ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮದಲಮಟ್ಟಿ, ಶಿವಾಪೂರ, ರಂಗಾಪೂರ, ಖಾನಟ್ಟಿ, ಮುನ್ಯಾಳ, ಕಮಲದಿನ್ನಿ ತೋಟ, ಶಿವಾಪೂರ ತೋಟ, ಡೋಣಿ ತೋಟ, ಸ್ವಾಮಿ ತೋಟ ಮುನ್ಯಾಳ ಗ್ರಾಮದ ಸಾರ್ವಜನಿಕರಿಗೆ ಜೆಜೆಎಂ ಅಡಿಯಲ್ಲಿ …

Read More »

ಸಂಕೇಶ್ವರ: ಶಿವಾಜಿ ಪ್ರತಿಮೆ ಬೃಹತ್‌ ಮೆರವಣಿಗೆ

ಸಂಕೇಶ್ವರ: ಪಟ್ಟಣದಲ್ಲಿ ಫೆ.19ರಂದು ಅನಾವರಣಗೊಳ್ಳಲಿರುವ ಅಶ್ವಾರೂಢ ಶಿವಾಜಿ ಮಹಾರಾಜರ ಪ್ರತಿಮೆಯ ಬೃಹತ್‌ ಮೆರವಣಿಗೆ ಹಾಗೂ ಶೋಭಾ ಯಾತ್ರೆಯು ಗುರುವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಜರುಗಿತು. ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೋಡ ಪ್ರತಿಮೆಗೆ ಪಟ್ಟಣದ ಶಂಕರಾಚಾರ್ಯರ ಸಂಸ್ಥಾನ ಮಠದ ಸಚ್ಚಿದಾನಂದ ಅಭಿನವ ವಿದ್ಯಾನರಸಿಂಹ ಭಾರತಿಯ ಸ್ವಾಮೀಜಿ ಶಿವಾಜಿ ಮಹಾರಾಜರ ಪ್ರತಿಮೆಗೆ ಪೂಜೆ ಸಲ್ಲಿಸಿ ಶೋಭಾಯಾತ್ರೆಗೆ ಚಾಲನೆ ನೀಡಿದರು.   ಡೊಳ್ಳು ಕುಣಿತ, ಜಾಂಜ ಪದಕ, ಡೋಲ್ ತಾಶ ಸೇರಿದಂತೆ ಅನೇಕ …

Read More »

ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ಸ್ಪರ್ಧೆಗೆ A.A.P.ಸಿದ್ಧತೆ

ನವದೆಹಲಿ: ದೆಹಲಿ, ಪಂಜಾಬ್‌ನಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ಆಮ್‌ ಆದ್ಮಿ ಪಾರ್ಟಿಯು (ಎಎಪಿ), ಗುಜರಾತ್‌ ಹಾಗೂ ಗೋವಾದಲ್ಲಿಯೂ ಖಾತೆ ತೆರೆಯುವ ಮೂಲಕ ತನ್ನ ವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ. ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಶೇ 13ರಷ್ಟು ಮತಗಳನ್ನು ಪಡೆದ ಎಎಪಿ, 5 ಸ್ಥಾನಗಳಲ್ಲಿ ಗೆದ್ದಿದೆ. ಗೋವಾದಲ್ಲಿ ಎರಡು ಸ್ಥಾನಗಳನ್ನು ಗೆಲ್ಲುವ ಮೂಲಕ ಕಳೆದ ವರ್ಷ ನಡೆದ ಚುನಾವಣೆಗಳಲ್ಲಿ ತನ್ನ ಸಾಧನೆಯನ್ನು ಹೆಚ್ಚಿಸಿಕೊಂಡಿದೆ. ಈಗ, 2023ರಲ್ಲಿ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ …

Read More »

ನದಿಯಲ್ಲಿ ಶವ ಪತ್ತೆ- ಗುಂಡು ಹಾರಿಸಿ ಪರಾರಿಯಾಗಿದ್ದವ ಎಂಬ ಶಂಕೆ

ಹನೂರು: ತಾಲ್ಲೂಕಿನ ಗಡಿ ಭಾಗದ ಕಾವೇರಿ ನದಿಯಲ್ಲಿ ವ್ಯಕ್ತಿಯೊಬ್ಬರ ಶವ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ. ಈತ ಕಳ್ಳ ಬೇಟೆಗಾರ ಆಗಿರಬಹುದು ಎಂದು ಶಂಕಿಸಲಾಗಿದೆ. ಕಾವೇರಿ ವನ್ಯಧಾಮದ ಗೋಪಿನಾಥಂ ವಲಯದ ಅಡಿಪಾಲರ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ ತಮಿಳುನಾಡಿನ ನಾಲ್ವರು ಬೇಟೆಗಾರರು ಜಿಂಕೆ ಬೇಟೆಯಾಡುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ‌ ಗುಂಡು ಹಾರಿಸಿ ಪರಾರಿಯಾಗಿದ್ದರು. ಈ ಸಂದರ್ಭದಲ್ಲಿ ಅರಣ್ಯ‌ ಇಲಾಖೆ ಅಧಿಕಾರಿಗಳು ಕೂಡ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಒಂದು ನಾಡ ಬಂದೂಕು …

Read More »