ಮೈಸೂರು: ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ, ದೇವರಾಜ ಅರಸು ಹಾಗೂ ನಾನು ಮೈಸೂರಿನವರೇ. ಇಬ್ಬರೂ ದೀರ್ಘಾವಧಿ ಮುಖ್ಯಮಂತ್ರಿಗಳಾಗಿದ್ದು, ಕಾಲಘಟ್ಟ ಬೇರೆ …
Read More »ಸಚಿವ ಈಶ್ವರ ಖಂಡ್ರೆ ಮುಂದೆಯೇ ಕೈಕೈ ಮಿಲಾಯಿಸಿದ ಬಿಜೆಪಿ- ಕಾಂಗ್ರೆಸ್ ಶಾಸಕರು!
ಬೀದರ್: ಜಿಲ್ಲಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ವೇಳೆ ಶಾಸಕ ಸಿದ್ದು ಪಾಟೀಲ್ ಮತ್ತು ಎಂಎಲ್ಸಿ ಭೀಮರಾವ್ ಪಾಟೀಲ್ ಪರಸ್ಪರ ಕೈಕೈ ಮಿಲಾಯಿಸಿದ ಘಟನೆ ನಡೆಯಿತು. ಈ ಇಬ್ಬರೂ ಜನಪ್ರತಿನಿಧಿಗಳನ್ನು ಸಮಾಧಾನ ಮಾಡಲು ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಉಪಸ್ಥಿತರಿದ್ದ ಗಣ್ಯರು ಹರಸಾಹಸಪಟ್ಟರು. ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯುತ್ತಿತ್ತು. ಈ ವೇಳೆ, ಸಭೆಯ ಆರಂಭದಲ್ಲೇ ಲೇಔಟ್ ವಿಚಾರವಾಗಿ …
Read More »ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಳೆ ಶಿಷ್ಟಾಚಾರ ಉಲ್ಲಂಘನೆ ಆರೋಪ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್ ತಂಗಡಗಿ ವಾಗ್ವಾದ
ಕೊಪ್ಪಳ: ಜಿಲ್ಲೆಯ ಹಿಟ್ನಾಳ ಗ್ರಾಮದಲ್ಲಿ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸದ ವೇಳೆ ರಾಜಕೀಯ ಹೈಡ್ರಾಮಾ ನಡೆದಿದೆ. ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಉದ್ಘಾಟನೆಗಾಗಿ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಸೋಮವಾರ ಹಿಟ್ನಾಳ ಗ್ರಾಮಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶಂಕು ಸ್ಥಾಪನೆ ಮುಗಿಸಿ ಹೊರಡುವಾಗ ರೈಲ್ವೆ ಮೇಲ್ಸೇತುವೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸ್ಥಳೀಯ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವ ಸೋಮಣ್ಣ ಅವರನ್ನು ಸುತ್ತುವರಿದು ಆಕ್ರೋಶ …
Read More »ನೋಯ್ಡಾದ ಎನ್ಐಎಎಲ್ ಕಂಪನಿಗೆ ರನ್ ವೇ ಕ್ಲೀನಿಂಗ್ ವೆಹಿಕಲ್ ಹಸ್ತಾಂತರಿಸಿದ ಸಚಿವ M B ಪಾಟೀಲ್
ದೊಡ್ಡಬಳ್ಳಾಪುರ (ಬೆಂಗಳೂರು): ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಸೋಮವಾರ ನೋಯ್ಡಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ಗೆ (ಎನ್ಐಎಎಲ್) ಹಸ್ತಾಂತರಿಸಿದರು. ಭಾರತದ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಉಪಕ್ರಮದಡಿ ಸ್ವಿಟ್ಜರ್ಲೆಂಡ್ನ ಮೆಸರ್ಸ್ ಬುಕರ್ ಮುನಿಸಿಪಲ್ ಸಹಯೋಗದಲ್ಲಿ ದೊಡ್ಡಬಳ್ಳಾಪುರದ ಆದಿನಾರಾಯಣ ಹೊಸಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಲ್ಲಿ ಜೋಡಣೆಗೊಂಡು ತಯಾರಾಗಿರುವ …
Read More »ರಾಮತೀರ್ಥ ನಗರದ ಸರ್ಕಾರಿ ಶಾಲೆಯಲ್ಲಿ ಹಿರಿಯ ನಾಗರಿಕರ ಮತ್ತು ವಿದ್ಯಾರ್ಥಿಗಳ ಜಾಗೃತಿ ಕಾರ್ಯಕ್ರಮ ಸಂಗಮ ಗೌರವದಿಂದ ವೃದ್ಧರಾಗಿ, ಮಾನ್ಯತೆಯಿಂದ ಜೀವನ ನಡೆಸಿ”
ರಾಮತೀರ್ಥ ನಗರದ ಸರ್ಕಾರಿ ಶಾಲೆಯಲ್ಲಿ ಹಿರಿಯ ನಾಗರಿಕರ ಮತ್ತು ವಿದ್ಯಾರ್ಥಿಗಳ ಜಾಗೃತಿ ಕಾರ್ಯಕ್ರಮ ಸಂಗಮ ಗೌರವದಿಂದ ವೃದ್ಧರಾಗಿ, ಮಾನ್ಯತೆಯಿಂದ ಜೀವನ ನಡೆಸಿ” ಹಿರಿಯ ನಾಗರಿಕರು, ಪಾಲಕರು ಹಾಗೂ ವಿದ್ಯಾರ್ಥಿಗಳಿಗಾಗಿ ವಿಶೇಷ ಕಾರ್ಯಕ್ರಮ ರಾಮತೀರ್ಥ ನಗರದ ಸರ್ಕಾರಿ ಶಾಲೆಯಲ್ಲಿ ಕಾರ್ಯಕ್ರಮ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಕಾರ್ಯಕ್ಕೆ ಪ್ರಶಂಸೆ ಬೆಳಗಾವಿಯ ರಾಮತೀರ್ಥ ನಗರದ ಸರ್ಕಾರಿ ಶಾಲೆಯಲ್ಲಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸೋಶಿಯಲ್ ವಿಂಗ್ ವತಿಯಿಂದ “ಸಂಗಮ ಗೌರವದಿಂದ ವೃದ್ಧರಾಗಿ, ಮಾನ್ಯತೆಯಿಂದ ಜೀವನ ನಡೆಸಿ” …
Read More »ಬಳ್ಳಾರಿ ಘಟನೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗಬೇಕು: ವಿಜಯೇಂದ್ರ ಆಗ್ರಹ
ಬಳ್ಳಾರಿ: ಶಾಸಕ ಭರತ ರೆಡ್ಡಿ ನೇತೃತ್ವದಲ್ಲಿ ನಿನ್ನೆ ಇಲ್ಲಿ ಗುಂಡಾಗರ್ದಿ ನಡೆದಿದೆ. ಸಾವಿರಾರು ಗೂಂಡಾಗಳನ್ನು ಕರೆತಂದು ಗೂಂಡಾಗಿರಿ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಬ್ಯಾನರ್ ಅಳವಡಿಕೆ ಸಂಬಂಧ ಎರಡು ಗುಂಪುಗಳ ನಡುವೆ ಉಂಟಾದ ಘರ್ಷಣೆಯ ಹಿನ್ನೆಲೆಯಲ್ಲಿ ಇಂದು ಬಳ್ಳಾರಿಗೆ ಆಗಮಿಸಿದ ಅವರು, ಗಾಯಗೊಂಡ ಬಿಜೆಪಿ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಸತೀಶ್ ರೆಡ್ಡಿ ಅನ್ನೋ ವ್ಯಕ್ತಿ ಖಾಸಗಿ ವ್ಯಕ್ತಿಗಳನ್ನು ಬಳಸಿ ಫೈರ್ ಮಾಡಿರುವ ಮಾಹಿತಿ ಇದೆ. …
Read More »ಕಾಲ್ತುಳಿತದಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಕ್ರಿಕೆಟ್ ಟೂರ್ನಿ ನಡೆಸಬೇಕು ಎಂದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ
ಬೆಂಗಳೂರು: ಕಾಲ್ತುಳಿತ ದುರಂತ ಆಗಿದೆ ಎಂಬ ಕಾರಣಕ್ಕೆ ಕ್ರಿಕೆಟ್ ಪಂದ್ಯಾವಳಿ ನಿಲ್ಲಿಸುವುದು ಪರಿಹಾರವಲ್ಲ ಎಂದು ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, “ಕಾಲ್ತುಳಿತ ದುರಂತ ಆಗಿದೆ ಎಂಬ ಕಾರಣಕ್ಕೆ ಪಂದ್ಯಾವಳಿ ನಿಲ್ಲಿಸೋದು ಪರಿಹಾರವಲ್ಲ. ಮತ್ತೆ ಅಂತಹ ಘಟನೆಗಳು ನಡೆಯದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಆಟವಾಡಿಸಬೇಕು. ಪಂದ್ಯಾವಳಿ ನಡೆಯಬೇಕೆಂಬುದು ಎಲ್ಲರ ಬಯಕೆ. ದುರಂತ ಆಗಬಾರದಾಗಿತ್ತು, ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಈ ನೋವು ಸಾವನ್ನಪ್ಪಿದ ಕುಟುಂಬದವರಿಗೆ ಇದೆ” ಎಂದರು. ಕರ್ನಾಟಕ …
Read More »ಹಿರಿಯ ಲೇಖಕರಾದ ಶ್ರೀ ಯುತ ಜಿಬಿ ಪಾಟೀಲ್ ಅವರ ಸಮಯೋಚಿತ ಲೇಖನವಿದು ವಿಜಾಪುರದ ‘ಸಂಜಿವಿನಿ’ಗೆ ಸಂಚಕಾರ:
ಇದು ಸರಕಾರವೋ ಅಥವಾ ಸಾರ್ವಜನಿಕ ಆಸ್ತಿಯ ದಲ್ಲಾಳಿಯೋ? “ಬಡವನ ಆಸ್ತಿ ನುಂಗುವವನೇ ನಾಯಕ, ನ್ಯಾಯ ಕೇಳುವವನೇ ದೇಶದ್ರೋಹಿ!” – ಇದೇನಾ ನವ ಭಾರತದ ಪರಿಕಲ್ಪನೆ? ವಿಜಾಪುರದ ಬಿಸಿಲ ನಾಡಿನಲ್ಲಿ ಬಡವರ ಪಾಲಿಗೆ ಆಸರೆಯಾಗಿದ್ದ ೧೫೦ ಎಕರೆ ವಿಸ್ತೀರ್ಣದ ಸರಕಾರಿ ಆಸ್ಪತ್ರೆಯ ಜಮೀನು ಇಂದು ರಾಜಕಾರಣಿಗಳ ಮತ್ತು ಭೂಮಾಫಿಯಾದ ಕೆಟ್ಟ ಕಣ್ಣಿಗೆ ಬಿದ್ದಿದೆ. ಬ್ರಿಟಿಷರ ಕಾಲದ ಮಹಾತ್ಮರು ಬಡವರಿಗಾಗಿ ದಾನ ನೀಡಿದ ಈ ‘ಬಂಗಾರದ ಭೂಮಿ’ಯನ್ನು ‘ಪಿಪಿಪಿ’ (PPP) ಎಂಬ ಮುಸುಕಿನಡಿ …
Read More »ಬಳ್ಳಾರಿ ಗಲಭೆಯ ಬಗ್ಗೆ ತನಿಖೆಗೆ ಸೂಚನೆ ನೀಡಿದ್ದೇನೆ: ಸಿಎಂ
ಬೆಂಗಳೂರು: “ಬಳ್ಳಾರಿ ಗಲಭೆ ಪ್ರಕರಣವನ್ನು ತನಿಖೆ ಮಾಡುವುದಕ್ಕೆ ಹೇಳಿದ್ದೇನೆ. ಯಾರ ಗನ್ನಿಂದ ಬುಲೆಟ್ ಬಂದಿದೆ ಅನ್ನೋದು ಗೊತ್ತಾಗಬೇಕಲ್ವಾ?. ಬಿಜೆಪಿಯವರ ಗನ್ನಿಂದಲೋ ಅಥವಾ ಕಾಂಗ್ರೆಸ್ನವರ ಗನ್ನಿಂದ ಬಂದಿದ್ಯಾ ಎನ್ನುವುದು ಗೊತ್ತಾಗಬೇಕು. ಅದಕ್ಕೋಸ್ಕರ ತನಿಖೆ ಮಾಡಲು ಹೇಳಿದ್ದೇನೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಖಾಸಗಿ ಬುಲೆಟ್ ಎಂದು ಎಸ್ಪಿ ಮಾಹಿತಿ ನೀಡಿರುವ ವಿಚಾರಕ್ಕೆ, “ಅವರ ಸೆಕ್ಯುರಿಟಿಗಾಗಿ ಗನ್ ಇಟ್ಟುಕೊಂಡಿದ್ದಾರೆ. ಏರ್ನಲ್ಲಿ ಗನ್ ಫೈರ್ ಮಾಡಿದ್ದಾರೆ. ಫೈರ್ ಮಾಡಿರೋದು …
Read More »ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ
ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ಆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬೆಂಗಳೂರಿನ ಉತ್ತರ ಭಾಗದ ಜನರಿಗೆ ವಾಹನ ಸಂಚಾರ ಸುಗಮವಾಗಲಿದೆ. ಇದೇ ವೇಳೆ ಮಾತನಾಡಿದ ಅವರು, “ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬೆಂಗಳೂರಿನ ಉತ್ತರ ಭಾಗದ ಜನರ ಸುಗಮ ವಾಹನ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಇಂದು ಉದ್ಘಾಟನೆ ಮಾಡಿದ್ದೇವೆ. ಈ ಭಾಗದ ಜನರು ಹೆಬ್ಬಾಳ ಮೇಲ್ಸೇತುವೆ ಬಳಿ …
Read More »
Laxmi News 24×7