Breaking News

ರಾಷ್ಟ್ರೀಯ

ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ನೌಕಾಪಡೆಯ ತುಕಡಿಗೆ ಮಂಗಳೂರಿನ ದಿಶಾ ಕ್ಯಾಪ್ಟನ್‌

ಮಂಗಳೂರು: ಇಲ್ಲಿನ ತಿಲಕನಗರದ ದಿಶಾ ಅಮೃತ್‌ ಅವರು, ಇದೇ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸಲಿದ್ದಾರೆ. ನೌಕಾಪಡೆಯ 144 ಸೈನಿಕರನ್ನು ಒಳಗೊಂಡ ತುಕಡಿ ಹಾಗೂ ಸ್ತಬ್ಧಚಿತ್ರವು ಈ ಕವಾಯತಿನಲ್ಲಿ ‘ನಾರಿಶಕ್ತಿ’ಯನ್ನು ಪ್ರದರ್ಶಿಸಲಿದೆ.   ಅಂಡಮಾನ್‌ ನಿಕೋಬಾರ್‌ನಲ್ಲಿ ನೌಕಾಪಡೆಯಲ್ಲಿ ಲೆಫ್ಟಿನೆಂಟ್‌ ಕಮಾಂಡರ್‌ ಆಗಿರುವ ಮಗಳು ಗಣರಾಜ್ಯೋತ್ಸವ ಪರೇಡ್‌ನಲ್ಲಿ ತುಕಡಿಯ ನಾಯಕಿಯಾಗಿ ಹೆಜ್ಜೆಹಾಕುವುದನ್ನು ಕಣ್ತುಂಬಿಕೊಳ್ಳಲು ಆಕೆಯ ತಂದೆತಾಯಿ ಅಮೃತ್ ಕುಮಾರ್‌- ಲೀಲಾ ದಂಪತಿ ನವದೆಹಲಿಗೆ ತೆರಳಿದ್ದಾರೆ. ಮಗಳ ಸಾಧನೆ …

Read More »

ವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರದ ಆರೋಪದ ಕುರಿತು ಕಾಂಗ್ರೆಸ್‌ನಿಂದ ಬೆಂಗಳೂರಿನ 300 ಸ್ಥಳಗಳಲ್ಲಿ ನಾಳೆ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರದ ಆರೋಪದ ಕುರಿತು ಕ್ರಮಕ್ಕೆ ಆಗ್ರಹಿಸಿ ಬೆಂಗಳೂರಿನ 300 ಸ್ಥಳಗಳಲ್ಲಿ ಕಾಂಗ್ರೆಸ್ ಸೋಮವಾರ ಪ್ರತಿಭಟನೆ ನಡೆಸಲಿದೆ. ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಅವರೊಂದಿಗೆ ಭಾನುವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎನ್.ಎ.‌ಹ್ಯಾರಿಸ್, ‘ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಹಾಸುಹೊಕ್ಕಾಗಿದೆ. ಆರೋಪಗಳು ಬಂದರೂ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರದಲ್ಲಿನ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸುವುದಕ್ಕಾಗಿ ಬೆಂಗಳೂರಿನ 51 ಮೆಟ್ರೊ ರೈಲು ನಿಲ್ದಾಣಗಳು, 26 ಮೇಲುಸೇತುವೆಗಳು, 200 ಟ್ರಾಫಿಕ್ ಸಿಗ್ನಲ್ …

Read More »

ಬೆಳಗಾವಿ: ಬಾನಂಗಳದಲ್ಲಿ ಗಾಳಿಪಟ ಚಿತ್ತಾರ

ಬೆಳಗಾವಿ: ಇಲ್ಲಿನ ಬಿ.ಎಸ್‌. ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿಯಲ್ಲಿ ಶನಿವಾರ ಆರಂಭಗೊಂಡ ಅಂತರರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ಹಾರಾಡಿದ ಬಗೆಬಗೆಯ ವಿನ್ಯಾಸಗಳ ಗಾಳಿಪಟಗಳು ಬಾನಂಗಳದಲ್ಲಿ ಚಿತ್ತಾರ ಮೂಡಿಸಿದವು. ಕಾಂತಾರ, ಇಂಡಿಯನ್‌ ಲಿಫ್ಟರ್‌, ಕವ್‌, ಮಾಂತಾ ರೇ, ರಿಂಗ್‌ ಮಾದರಿಯ ಪತಂಗ ಕಣ್ಮನಸೆಳೆದವು. ಗಾಳಿಪಟಗಳ ಹಾರಾಟ ನೋಡಿ ಬಾನಲ್ಲಿ ಜನರ ಮನ ತೇಲಿತು. ಪ್ರತಿವರ್ಷ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಅಂತರರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜಿಸಲಾಗುತ್ತಿತ್ತು. ಕೊರೊನಾ ಆತಂಕದಿಂದಾಗಿ ಕಳೆದ ಎರಡು ವರ್ಷ ರದ್ದಾಗಿತ್ತು. …

Read More »

ಬೆಳಗಾವಿ: ”ಸಾಹಿತ್ಯದಿಂದ ಸೈನಿಕರ ಸ್ಥೈರ್ಯ ಹೆಚ್ಚಳ’: ದಯಾಲನ್

ಬೆಳಗಾವಿ: ‘ದೇಶದ ಗಡಿ ಕಾಯುವ ಸೈನಿಕರಿಗೆ ಸಾಹಿತಿ ನೀಲಗಂಗಾ ಚರಂತಿಮಠ ಅವರಿ ತಮ್ಮ ಕೃತಿಗಳಲ್ಲಿ ದೊಡ್ಡ ಗೌರವ ನೀಡಿದ್ದಾರೆ. ಇಂಥ ಪುಸ್ತಕಗಳಿಂದ ಸೈನಿಕರ ನೈತಿಕ ಸ್ಥೈರ್ಯ ಹೆಚ್ಚುತ್ತದೆ’ ಎಂದು ಕಮಾಂಡೆಂಟ್‌ ಪಿ.ಸಿ. ವಿಂಗ್‌ನ ಬ್ರಿಗೇಡಿಯರ್ ದಯಾಲನ್ ಹೇಳಿದರು.   ಸಾಹಿತಿ ನೀಲಗಂಗಾ ಚರಂತಿಮಠ ಅವರ ‘ಧಾರಿಣಿ’, ‘ಜನನಿ ಜನ್ಮಭೂಮಿ’, ‘ಒಂದೇ ಮಾತರಂ’ ಮತ್ತು ‘ಪ್ರಣಾಮ್’ ಎಂಬ ನಾಲ್ಕು ಪುಸ್ತಕಗಳನ್ನು ಗುರುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎಸ್.ಎಂ. …

Read More »

ಆಸ್ಪತ್ರೆ ನಿರ್ಮಾಣಕ್ಕೆ ₹27 ಕೋಟಿ ಬಿಡುಗಡೆ:ಶಾಸಕ ಅನಿಲ ಬೆನಕೆ

ಬೆಳಗಾವಿ: ನಗರದಲ್ಲಿ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಫ್ರಾಸ್ಟ್ರಕ್ಚರ್ ಮಿಷನ್ ಅಡಿಯಲ್ಲಿ ₹27 ಕೋಟಿ ಅನುದಾನ ನೀಡಲಾಗಿದೆ. ಶಾಸಕ ಅನಿಲ ಬೆನಕೆ ಪ್ರಯತ್ನ ಮಾಡಿ ಈ ಅನುದಾನ ಮಂಜೂರು ಮಾಡಿಸಿದ್ದಾರೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.   ಜಿಲ್ಲಾಸ್ಪತ್ರೆ ಅಭಿವೃದ್ಧಿ, ಮಲ್ಟಿ ಸೂಪರ್ ಸ್ಪೆಷಾಲಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ಆರೋಗ್ಯ ಕ್ಷೇತ್ರದಲ್ಲಿ ವಿಶೇಷ ಒತ್ತು ನೀಡಿರುವ ಶಾಸಕ ಅನಿಲ ಬೆನಕೆ, ಬೆಳಗಾವಿಯಲ್ಲಿ ನಡೆದ ಅಧಿವೇಶನ …

Read More »

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಪಿಎಸ್‌ಐ ಹಗರಣದ ಆರೋಪಿ ಒಲವು

ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿ, ಆರ್.ಡಿ.ಪಾಟೀಲ ಶುಕ್ರವಾರ ಮಧ್ಯರಾತ್ರಿ ಅಜ್ಞಾತ ಸ್ಥಳದಿಂದ ವಿಡಿಯೊ ಮಾಡಿ, ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. 7 ನಿಮಿಷ 14 ಸೆಕೆಂಡ್‌ಗಳ ವಿಡಿಯೊದಲ್ಲಿ ಪಾಟೀಲ, ‘8-9 ತಿಂಗಳು ಕೆಲ ರಾಜಕೀಯ ಮುಖಂಡರು ಕುತಂತ್ರದಿಂದ ನನ್ನನ್ನು ಹಾಗೂ ನನ್ನ ಸಹೋದರ ಮಹಾಂತೇಶ ಪಾಟೀಲ ಅವರನ್ನು ಪಿಎಸ್‌ಐ ಪ್ರಕರಣದಲ್ಲಿ ಉದ್ದೇಶ ಪೂರ್ವಕವಾಗಿ ಸಿಲುಕಿಸಿದ್ದಾರೆ. ಸಮಾಜ ಸೇವೆ, ಚುನಾವಣಾ ಸ್ಪರ್ಧೆಗೆ ಬರಬಹುದು ಎಂಬ ಭಯದಿಂದ ನಮ್ಮನ್ನು ಈ ಪ್ರಕರಣದಲ್ಲಿ ಸಿಲುಕಿಸಿದ್ದಾರೆ’ …

Read More »

ಅನ್ನಭಾಗ್ಯಕ್ಕೆ ಮತ್ತೆ ವಕ್ಕರಿಸಿದ ಸರ್ವರ್ ಭೂತ: ಪಡಿತರ ಪಡೆಯಲು ಕಾರ್ಡ್‌ದಾರರ ಪರದಾಟ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಮತ್ತೆ ಸರ್ವರ್ ಭೂತ ವಕ್ಕರಿಸಿದೆ. ನಾಲ್ಕೈದು ದಿನಗಳಿಂದ ಸರ್ವರ್ ಸಮಸ್ಯೆಯಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ರಾಜ್ಯಾದ್ಯಂತ ಕಾರ್ಡ್‌ದಾರರು ಪರದಾಡುವಂತಾಗಿದೆ. ಯೋಜನೆಗೆ ‘ಸರ್ವರ್ ಡೌನ್’ಸಮಸ್ಯೆ ನಿರಂತರವಾಗಿ ಕಾಡುತ್ತಿದ್ದರೂ ಶಾಶ್ವತ ಪರಿಹಾರ ಕಂಡುಕೊಳ್ಳಲು ಆಹಾರ ಇಲಾಖೆ ಹೆಣಗಾಡುವಂತಾಗಿದೆ. ಇದರಿಂದಾಗಿ ಪ್ರತಿ ನಿತ್ಯ ನ್ಯಾಯಬೆಲೆ ಅಂಗಡಿಗಳಿಗೆ ಕಾರ್ಡ್‌ದಾರರು ಹೋಗಿ ಬರುವಂತಾಗಿದೆ. 2022ರ ಸೆ.15ರಿಂದ 10 ದಿನವರೆಗೆ ಸರ್ವರ್ ಡೌನ್ ಗುಮ್ಮ ಕಾಡಿತ್ತು. ಈಗ ಮತ್ತೆ ಜನಪ್ರಿಯ ಯೋಜನೆಗೆ ನೂರೆಂಟು ತೊಂದರೆಯಾಗುತ್ತಿದೆ. …

Read More »

2023ರಲ್ಲಿ ಜೆಡಿಎಸ್‌ ಪಕ್ಷ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ..!

ಹೊಳೆನರಸೀಪುರ : ಕರ್ನಾಟಕ ರಾಜ್ಯದಾದ್ಯಂತ ಹೆಚ್.ಡಿ.ಕುಮಾರಸ್ವಾಮಿ ನೇತ್ರತ್ವದಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆಗೆ ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ವ್ಯಕವಾಗಿದ್ದು 2023 ರ ವಿಧಾನಸಭಾ ಚುನಾವಣೆಯಲ್ಲಿ ಜೆ.ಡಿ.ಎಸ್. ಪಕ್ಷವು ಸಂಪೂರ್ಣ ಬಹುಮತದೊಂದಿಗೆ ಜನಪರ ಸರ್ಕಾರವನ್ನು ರಚಿಸಲಿದೆ ಎಂದು ಶಾಸಕ ಹೆಚ್.ಡಿ.ರೇವಣ್ಣನವರು ತಿಳಿಸಿದರು.   ಅವರು ಇಂದು ಪಟ್ಟಣದ ಚೆನ್ನಾಂಬಿಕ ಕನ್ವೆನ್ಷನ್ ಹಾಲ್ ನಲ್ಲಿ ತಾಲೂಕು ಜೆ.ಡಿ.ಎಸ್. ಪಕ್ಷದ ಕಾರ್ಯಕರ್ತರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು. ತಮ್ಮ ಜೆ.ಡಿ.ಎಸ್. ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸ್ತ್ರೀ …

Read More »

ಡಬಲ್ ಇಂಜಿನ್ ಸರ್ಕಾರದಲ್ಲಿ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣವೇ ಬರುತ್ತಿಲ್ಲ

ಬೆಂಗಳೂರು: ಇನ್ನೂ ಕೆಲವೇ ದಿನಗಳಲ್ಲಿ ರಾಜ್ಯದ ಚುನಾವಣೆ ಬರಲಿದೆ. ಪ್ರತಿಪಕ್ಷಗಳ ಮೇಲೆ ಜವಾಬ್ದಾರಿ ಇದೆ. ರಾಜ್ಯದ ಜನರಿಗೆ ಬಿಜೆಪಿ ಸರ್ಕಾರ ಮಾಡಿರುವ ಅನ್ಯಾಯಗಳನ್ನ ತೆರದಿಡುವ ಪ್ರಯತ್ನ ಮಾಡುತ್ತಿದ್ದೇವೆ. ಡಬಲ್ ಇಂಜಿನ್ ಸರ್ಕಾರ ಬಂದ್ರೆ ಅಭಿವೃದ್ಧಿ ರಾಜ್ಯವಾಗುತ್ತೆ , ಅನುದಾನ ಹೆಚ್ಚು ಸಿಗುತ್ತೆ ಎಂದು ಬಿಜೆಪಿ ಭರವಸೆ ನೀಡಿ ಓಟು ಹಾಕಿಸಿಕೊಂಡಿದೆ. ಆದ್ರೆ ಬಿಜೆಪಿ ಡಬಲ್ ಇಂಜಿನ್ ಸರ್ಕಾರದಲ್ಲಿ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣವೇ ಬರುತ್ತಿಲ್ಲ ಎಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ …

Read More »

ಈ ಬಾರಿ ಗಣರಾಜ್ಯೋತ್ಸವ ಪೆರೇಡ್ ನ ಟಿಕೆಟ್ ಗಳು ಆನ್ಲೈನ್ ನಲ್ಲಿ ಲಭ್ಯ

ನವದೆಹಲಿ: ಈ ವರ್ಷ ಗಣರಾಜ್ಯೋತ್ಸವ ಆಚರಣೆಗಳು ಪರಿಷ್ಕೃತ ಸೆಂಟ್ರಲ್ ವಿಸ್ಟಾ ಅವೆನ್ಯೂದಲ್ಲಿ ನಡೆಯಲಿದ್ದು, ಸರ್ಕಾರವು ಜನಸಾಮಾನ್ಯರಿಗಾಗಿ ಆನ್‌ಲೈನ್‌ನಲ್ಲಿ 32,000 ಟಿಕೆಟ್‌ಗಳನ್ನು ಮಾರಾಟಕ್ಕೆ ಇರಿಸಿದೆ ಎಂದು ರಕ್ಷಣಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.     ಮೊದಲ ಬಾರಿಗೆ ಸಮಾರಂಭದ ಎಲ್ಲಾ ಅಧಿಕೃತ ಆಹ್ವಾನಗಳನ್ನು ಆನ್‌ಲೈನ್‌ನಲ್ಲಿ ಕಳುಹಿಸಲಾಗುವುದು ಎಂದು ಅವರು ಹೇಳಿದರು.ಕಳೆದ ವರ್ಷ ರಾಜಪಥವನ್ನು ‘ಕರ್ತವ್ಯ ಪಥ’ಎಂದು ಮರುನಾಮಕರಣ ಮಾಡಿದ ನಂತರ ಔಪಚಾರಿಕ ಬೌಲೆವಾರ್ಡ್‌ನಲ್ಲಿ ಆಯೋಜಿಸಲಾದ ಮೊದಲ ಗಣರಾಜ್ಯೋತ್ಸವ ಸಮಾರಂಭ ಇದಾಗಿದೆ.ಗಣರಾಜ್ಯೋತ್ಸವದ ಅಂಗವಾಗಿ ಜನವರಿ …

Read More »