ಬೆಳಗಾವಿ: ನಾಡಿನ ಖ್ಯಾತ ಸಾಹಿತಿ ಡಾ. ಡಿ. ಎಸ್. ಕರ್ಕಿಯವರಿಗೆ ಇದುವರೆಗೆ ಯಾವ ಪ್ರಶಸ್ತಿಯನ್ನೂ ನೀಡಿಲ್ಲ, ಈಗ ಮರಣೋತ್ತರವಾದರೂ ಅವರಿಗೆ ಪಂಪ ಪ್ರಶಸ್ತಿ ನೀಡಬೇಕು ಎಂದು ಜಾನಪದ ವಿದ್ವಾಂಸರಾದ ಡಾ| ಬಸವರಾಜ ಜಗಜಂಪಿ ಆಗ್ರಹಿಸಿದರು. ಎಸ್. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಸಭಾಗೃಹದಲ್ಲಿ ರವಿವಾರ ಡಾ. ಡಿ. ಎಸ್. ಕರ್ಕಿ ಪ್ರತಿ,ಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಡಾ. ಡಿ. ಎಸ್. ಕರ್ಕಿಯವರ 115ನೇ ಜನ್ಮ ದಿನೋತ್ಸವ ಹಾಗೂ ರಾಜ್ಯ ಮಟ್ಟದ ಕಾವ್ಯ ಪ್ರಶಸ್ತಿ …
Read More »ಸೇವ್ ಮಹದಾಯಿ..; ಗೋವಾ ವಿಧಾನಸಭೆಯಲ್ಲಿ ಪ್ರತಿಪಕ್ಷಗಳಿಂದ ಕೋಲಾಹಲ
ಪಣಜಿ: ಗೋವಾ ವಿಧಾನಸಭೆಯಲ್ಲಿ ಸೋಮವಾರ ಬೆಳಗ್ಗೆ ರಾಜ್ಯಪಾಲರ ಭಾಷಣದ ವೇಳೆ ಪ್ರತಿಪಕ್ಷಗಳಿಂದ ಗದ್ದಲ ಉಂಟಾಯಿತು. ಇದರ ನಂತರ, ಮಾರ್ಷಲ್ಗಳು ಧರಣಿ ನಿರತ ವಿರೋಧ ಪಕ್ಷದ ಶಾಸಕರನ್ನು ಸಭಾಂಗಣದಿಂದ ಹೊರಕ್ಕೆ ಕರೆದೊಯ್ದರು. ಪ್ರತಿಪಕ್ಷದ ಶಾಸಕರು ”ಸೇವ್ ಮಹದಾಯಿ ಸೇವ್ ಗೋವಾ” ಬ್ಯಾನರ್ ಗಳೊಂದಿಗೆ ಸದನದ ಬಾವಿಗಿಳಿದು ಬಂದು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಮಹದಾಯಿ ಸಮಸ್ಯೆ ಮತ್ತು ಇತರ ವಿಷಯಗಳ ಕುರಿತು ಪ್ರತಿಪಕ್ಷಗಳು ಸರ್ಕಾರವನ್ನು ಸುತ್ತುವರಿಯಲು ಸಿದ್ಧವಾಗಿವೆ ಮತ್ತು ಸೋಮವಾರದಿಂದ ಪ್ರಾರಂಭಗೊಂಡಿರುವ ನಾಲ್ಕು …
Read More »ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ.!
ಬೆಂಗಳೂರು: ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿ, ಮಹಿಳೆಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿರುವ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಪ್ರತಿ ಮನೆಯ ಗೃಹಿಣಿಗೆ ‘ಗೃಹ ಲಕ್ಷ್ಮಿ’ ಯೋಜನೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಅಗತ್ಯ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಣೆ ಮಾಡಲು ರಾಜ್ಯ ಕಾಂಗ್ರೆಸ್ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ …
Read More »ಯತ್ನಾಳ್ಗೆ ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್
ಬೆಂಗಳೂರು: ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ತಾರಕಕ್ಕೇರಿತ್ತು. ಇಬ್ಬರು ನಾಯಕರ ನಡುವೆ ಸಾಕಷ್ಟು ಟೀಕೆ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು. ಇದು ಬಿಜೆಪಿ ಸರ್ಕಾರಕ್ಕೆ ಮುಜುಗರವನ್ನೂ ತಂದಿತ್ತು. ಇದೀಗ ಮುರುಗೇಶ್ ನಿರಾಣಿ ಸೇರಿದಂತೆ ಮುಖ್ಯಮಂತ್ರಿ, ಸಚಿವರು ಸೇರಿದಂತೆ ಪಕ್ಷದ ಹಿರಿಯ ನಾಯಕರ ವಿರುದ್ಧ ಸಾರ್ವಜನಿಕವಾಗಿ ಮುಜುಗರ ತರುವಂತಹ ಟೀಕೆ ಮಾಡುತ್ತಾ ಬಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಕೇಂದ್ರ ಶಿಸ್ತು …
Read More »ವಿವಾದಾತ್ಮಕ ಹೇಳಿಕೆ ನೀಡದಂತೆ ಸೂಚನೆ: ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ‘ಯಾವುದೇ ವಿವಾದಾತ್ಮಕ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡದಂತೆ ವರಿಷ್ಠರು ಭಾನುವಾರ ಬೆಳಿಗ್ಗೆ ಫೋನ್ ಮಾಡಿ ತಿಳಿಸಿದ್ದಾರೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಪಂಚಮಸಾಲಿ 2ಎ ಮೀಸಲಾತಿ ಹೋರಾಟ ವಿಷಯವಾಗಿ ಚರ್ಚಿಸುವ ಸಂಬಂಧ ದೆಹಲಿಗೆ ಬರುವಂತೆಯೂ ಪಕ್ಷದ ವರಿಷ್ಠರು ನನಗೆ ಆಹ್ವಾನಿಸಿದ್ದಾರೆ. ಮೀಸಲಾತಿ ಕುರಿತಂತೆ ಕೇಂದ್ರದಿಂದ ಸಿಹಿ ಸುದ್ದಿ ಸಿಗುವ ಆಶಾಭಾವ ಇದೆ’ ಎಂದು ಹೇಳಿದರು. ‘ಪಕ್ಷದಲ್ಲಿ ಇರಲು ಸಾಧ್ಯವಿಲ್ಲದಿದ್ದರೆ …
Read More »ಸಂಕ್ರಾಂತಿ ಹಬ್ಬಕ್ಕೆ ಭರ್ಜರಿ ಗಿಫ್ಟ್ ಪಾಲಿಟಿಕ್ಸ್ : ತಟ್ಟೆ, ಲೋಟ, ಸ್ಪೂನ್ ಕೊಟ್ಟ MLA ರಘು
ಬೆಂಗಳೂರು : ಮುಂದಿನ ವಿಧಾನ ಸಭೆ ಚುನಾವಣೆ ಹಿನ್ನೆಲೆ ಸಂಕ್ರಾಂತಿ ಹಬ್ಬಕ್ಕೆ ಭರ್ಜರಿ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದ್ದು, ಮನೆಮನೆಗಳಿಗೆ ಸಿವಿ ರಾಮನ್ ನಗರದಲ್ಲಿ ಸ್ಥಳೀಯ ಶಾಸಕ ರಘು ಜನ್ರಿಗೆ ತಟ್ಟೆ, ಲೋಟ, ಸ್ಪೂನ್ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಸಿಲಿಕಾನ್ ಸಿಟಿಯ ಕೆಲ ಭಾಗಗಳಲ್ಲಿ ರಾಜಕೀಯ ನಾಯಕರು ಚುನಾವಣೆಗಾಗಿ ಸಕಲ ಸಿದ್ದತೆಯಲ್ಲಿ ತೊಡಗಿದ್ದು, ಜನರಿಗೆ ಗಿಫ್ಟ್ ನೀಡುವ ಮೂಲಕ ಮತ ಪಡೆಯೋದಕ್ಕೆ ಮುಂದಾಗಿದ್ದಾರೆ. ಅದರಲ್ಲೂ …
Read More »IAS ಪಾಸ್ ಮಾಡಲು ಎಷ್ಟು ಗಂಟೆ ಓದಬೇಕು? ಸೆಲೆಬ್ರಿಟಿ ಅಧಿಕಾರಿ ಟೀನಾ ಡಾಬಿ ಕೊಟ್ಟ ಉತ್ತರ ವೈರಲ್
ನವದೆಹಲಿ: ಐಎಎಸ್ ಅಧಿಕಾರಿಯಾಗಲು ದಿನಕ್ಕೆ ಎಷ್ಟು ಗಂಟೆ ಅಧ್ಯಯನ ಮಾಡಬೇಕು ಎಂ ವಿದ್ಯಾರ್ಥಿನಿಯ ಪ್ರಶ್ನೆಗೆ ಸೆಲೆಬ್ರಿಟಿ ಐಎಎಸ್ ಅಧಿಕಾರಿ ಟೀನಾ ಡಾಬಿ ಅವರು ನೀಡಿರುವ ಉತ್ತರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಟೀನಾ ಡಾಬಿ ಅವರು ಪ್ರಸ್ತುತ ರಾಜಸ್ಥಾನದ ಜೈಸಲ್ಮೇರ್ನ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಯೋನಿರ್ ಜೈಸನ್ ಶಕ್ತಿ (ಮಹಿಳೆಯರು ಮೊದಲು) ಕಾರ್ಯಕ್ರಮದ ಭಾಗವಾಗಿ ಜೈಸಲ್ಮೇರ್ನ ಇಂಧಿರಾ ಗಾಂಧಿ ಇಂದೋರ್ ಸ್ಟೇಡಿಯಂನಲ್ಲಿ ವಿದ್ಯಾರ್ಥಿನಿಯರಿಗೆ ವೃತ್ತಿ ಸಮಾಲೋಚನೆ ಕುರಿತು ಹಮ್ಮಿಕೊಳ್ಳಲಾಗಿದ್ದ …
Read More »ವೇಷದ ಜತೆಗೆ ಭಾಷೆಯನ್ನೂ ಬದಲಾಯಿಸಿದ್ದ ಸ್ಯಾಂಟ್ರೋ ರವಿ! ಈತನ ಮಾತು ಕೇಳಿ ಪೊಲೀಸರೇ ಅರೆಕ್ಷಣ ಗಲಿಬಿಲಿ
ಮೈಸೂರು: ಅತ್ಯಾಚಾರ, ಪತ್ನಿಗೆ ವಂಚನೆ ಪ್ರಕರಣದ ಆರೋಪಿ ಸ್ಯಾಂಟ್ರೋ ರವಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಗುಜರಾತ್ನ ಅಹಮದಾಬಾದ್ನಲ್ಲಿ ತಲೆಮರೆಸಿಕೊಂಡಿದ್ದ. 11 ದಿನದ ಬಳಿಕ ಪೊಲೀಸರು ಆತನನ್ನು ಪತ್ತೆ ಮಾಡಿ ಮೈಸೂರಿಗೆ ಕರೆತಂದಿದ್ದಾರೆ. ಬಂಧನದ ವೇಳೆಯೂ ಅಹಮದಾಬಾದ್ನಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದ್ದ. ಪೊಲೀಸರಿಗೆ ತನ್ನ ಗುರುತು ಸಿಗಬಾರದು ಎಂಬ ಕಾರಣಕ್ಕೆ ಆತ ತನ್ನ ವೇಷ ಬದಲಾಯಿಸಿದ್ದು ಮಾತ್ರವಲ್ಲದೆ ಭಾಷೆಯನ್ನೂ ಬದಲಾಯಿಸಿದ್ದ! ತಲೆಯ ವಿಗ್ ತೆಗೆದು ಮೀಸೆ ಬೋಳಿಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನ ಗುರುತಿರುಸುವುದು ಕಷ್ಟವಾಗಿತ್ತು. …
Read More »ಉಪೇಂದ್ರ ನಿರ್ದೇಶನದ ‘ಯುಐ’ ಚಿತ್ರತಂಡದಿಂದ ಸಂಕ್ರಾಂತಿಗೆ ಡಿಫರೆಂಟ್ ವಿಷ್!
ಬೆಂಗಳೂರು: ಯಾವಾಗಲೂ ತನ್ನ ವೈಶಿಷ್ಟ್ಯದೊಂದಿಗೇ ಗಮನ ಸೆಳೆಯುವ ನಟ-ನಿರ್ದೇಶಕ ಉಪೇಂದ್ರ, ಇದೀಗ ತಮ್ಮ ನಿರ್ದೇಶನದ ಹೊಸ ಸಿನಿಮಾ ‘ಯುಐ’ ತಂಡದಿಂದ ಸಂಕ್ರಾಂತಿ ಶುಭಾಶಯ ಕೋರುವುದರಲ್ಲೂ ಡಿಫರೆಂಟ್ ಎನಿಸಿಕೊಂಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಸಿನಿಮಾದ ಟೈಟಲ್ಗಳೇ ಡಿಫರೆಂಟ್ ಆಗಿರುತ್ತವೆ. ಅದೇ ರೀತಿ ಅವರು ನಿರ್ದೇಶನ ಮಾಡುತ್ತಿರುವ ನೂತನ ಸಿನಿಮಾ ಹೆಸರೇ ‘ನಾಮ’ದ ರೂಪದಲ್ಲಿದ್ದು ಘೋಷಣೆ ಆದಾಗಲೇ ಭಾರಿ ಗಮನ ಸೆಳೆಯಲಾಗಿತ್ತು. ದೇವರ ನಾಮದ ರೂಪದಲ್ಲಿ ವಿನ್ಯಾಸ ಮಾಡಲಾಗಿರುವ ಈ ಚಿತ್ರದ ಶೀರ್ಷಿಕೆಯನ್ನು …
Read More »ಪ್ರಕೃತಿ ಆರಾಧನೆ ಈ ಹಬ್ಬ ಮಕರ ಸಂಕ್ರಾಂತಿ ಈ ದಿನದ ವಿಶೇಷ ಏನು
ಕ್ಯಾಲೆಂಡರ್ ಪ್ರಕಾರ ವರ್ಷದ ಮೊದಲ ಹಬ್ಬವಾಗಿರುವ ಮಕರ ಸಂಕ್ರಾಂತಿ (Makar Sankranti 2023) ಹಿಂದುಗಳ ಹಬ್ಬವಾಗಿದೆ. ಅದರಲ್ಲೂ ಸಂಕ್ರಾಂತಿಯನ್ನು ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುತ್ತದೆ. ಪ್ರಕೃತಿ ಆರಾಧನೆ ಈ ಹಬ್ಬ ಭಾಗವಾಗಿದೆ. ಮಕರ ಸಂಕ್ರಾಂತಿಯನ್ನು ಉತ್ತರಾಯಣದ ಹಬ್ಬವೆಂತಲೂ ಕರೆಯುತ್ತಾರೆ. ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ಕ್ಷಣ ಇದಾಗಿದೆ. ಸಮೃದ್ಧಿಯ ಸಂಕೇತವಾಗಿರುವ ಮಕರ ಸಂಕ್ರಾಂತಿಯನ್ನು ದಾನದ ವಿಶೇಷ ಅವಧಿ ಎಂದು ಪರಿಗಣಿಸಲಾಗುತ್ತದೆ. ಈ ದಿನ ದಾನ ಮಾಡುವುದರಿಂದ ಶುಭ ಫಲಗಳು ದೊರೆಯುತ್ತವೆ. ಉತ್ತರಾಯಣ …
Read More »