Breaking News

ರಾಷ್ಟ್ರೀಯ

ದೈಹಿಕ ಹಲ್ಲೆಗೈದು ಸಹಿ ಪಡೆಯಲಾಗಿದೆ, ದಾಖಲಿಸಿರುವ ಹೇಳಿಕೆಗಳಿಗೆ ಸಮ್ಮತಿಯಿಲ್ಲ: ಡಿಆರ್‌ಐ ಎಡಿಜಿಗೆ ರನ್ಯಾ ರಾವ್ ಪತ್ರ

ಬೆಂಗಳೂರು : ಚಿನ್ನ ಕಳ್ಳಸಾಗಾಣಿಕೆ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಸದ್ಯ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ರನ್ಯಾ ರಾವ್‌ ಅವರು ಜೈಲಿನಿಂದಲೇ ಡಿಆರ್‌ಐ ಅಡಿಷನಲ್ ಡೈರಕ್ಟರ್ ಜನರಲ್‌ಗೆ ಸುದೀರ್ಘವಾದ ಮನವಿ ಪತ್ರ ಬರೆದಿದ್ದಾರೆ. ಏಳು ಅಂಶಗಳ ಕುರಿತು ಪ್ರಸ್ತಾಪಿಸಿ ರನ್ಯಾ ರಾವ್ ಬರೆದಿರುವ ಮನವಿ ಪತ್ರವನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು ಡಿಆರ್‌ಐ ಎಡಿಜಿಯವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ರನ್ಯಾ ರಾವ್ ಮನವಿ ಪತ್ರದಲ್ಲೇನಿದೆ ? ದುಬೈನಿಂದ ಬಂದಿಳಿದ ನನ್ನ ವಿರುದ್ಧ ಚಿನ್ನ …

Read More »

ಕಾರಿನ ಮೇಲೆ ಬಿದ್ದ ಕಾಂಕ್ರೀಟ್ ಮಿಕ್ಸರ್ ವಾಹನ

ಬೆಳಗಾವಿ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ವಾಹನ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ ಎಂಬಂತೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಳಗಾವಿ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ನಡೆದಿದೆ. ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಹರಸಾಹಸಪಟ್ಟು ಕಾರಿನೊಳಗೆ ಸಿಲುಕಿದ್ದ ಇಬ್ಬರು ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಧಾರವಾಡ ಮೂಲದ ಪರಪ್ಪ ಬಾಳಿಕಾಯಿ, …

Read More »

ಕೆಪಿಸಿಸಿ ಅಧ್ಯಕ್ಷರು ಕರೆದಾಗ ಭಾಗವಹಿಸಲೇಬೇಕಾಗುತ್ತದೆ,:ಸತೀಶ್ ಜಾರಕಿಹೊಳಿ

ಬೆಂಗಳೂರು, 15 ಮಾರ್ಚ್ : ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಲೊಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ, ಡಿಕೆ ಶಿವಕುಮಾರ್ ಆಯೋಜಿಸಿದ ಔತಣಕೂಟದಲ್ಲಿ (Dinner party) ಭಾಗವಹಿಸಿದ್ದರ ಬಗ್ಗೆ ಮಾತಾಡುತ್ತಾ, ಅದರಲ್ಲಿ ಅಂಥ ವಿಶೇಷವೇನೂ ಇಲ್ಲ, ಕೆಪಿಸಿಸಿ ಅಧ್ಯಕ್ಷರು ಕರೆದಾಗ ಭಾಗವಹಿಸಲೇಬೇಕಾಗುತ್ತದೆ, ಬಿಜೆಪಿ ನಾಯಕರು ಹೇಳುವ ಮಾತುಗಳನ್ನು ನಂಬುವ ಅವಶ್ಯಕತೆ ಇಲ್ಲ, ಯಾಕೆಂದರೆ ಅವರು ಸಿದ್ದರಾಮಯ್ಯ ಎಷ್ಟುದಿನ ಮುಖ್ಯಮಂತ್ರಿಯಾಗಿರುತ್ತಾರೆ ಅಂತ ಹೇಳಿಕೆಗಳನ್ನು ನೀಡುತ್ತಿರುತ್ತಾರೆ, ಇವತ್ತೊಂದು ಹೇಳುತ್ತಾರೆ, ನಾಳೆ ಮತ್ತೊಂದು ಹೇಳುತ್ತಾರೆ ಎಂದು ಹೇಳಿದರು.

Read More »

ಅರಳಿಮಟ್ಟಿ ಸರಕಾರಿ ಪ್ರಾಥಮಿಕ ಶಾಲೆ ಈಗ ಪಿಎಂ ಶ್ರೀ ಯೋಜನೆಗೆ- ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಮೂಡಲಗಿ ಶೈಕ್ಷಣಿಕ ವಲಯಕ್ಕೆ ಮತ್ತೊಂದು ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಶಾಲೆಯು ಆಯ್ಕೆಯಾಗಿದ್ದು, ತಾಲ್ಲೂಕಿನ ಅರಳಿಮಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೇಂದ್ರ ಪುರಸ್ಕೃತ ಪಿಎಂಶ್ರೀ ಶಾಲೆಯನ್ನಾಗಿ ಪರಿವರ್ತನೆಗೊಳ್ಳಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ದೇಶದಲ್ಲಿನ ಗ್ರಾಮೀಣ ಪ್ರದೇಶದ ಶಾಲೆಗಳನ್ನು ಕೇಂದ್ರೀಯ ಶಾಲೆಗಳ ರೀತಿಯಲ್ಲಿ ಸ್ಥಾಪಿಸಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದಿಂದ ಗ್ರಾಮೀಣ ಪ್ರದೇಶಗಳಲ್ಲಿ ಪಿಎಂಶ್ರೀ ಹೆಸರಿನ ಶಾಲೆಗಳನ್ನು ಸ್ಥಾಪಿಸಲಾಗುತ್ತಿದ್ದು, ಮೂಡಲಗಿ ವಲಯದಲ್ಲಿ ಒಟ್ಟು …

Read More »

ವಿಕಲಚೇತನರಿಗೆ ಒಂದು ಲಕ್ಷದವರೆಗೂ ವೈದ್ಯಕೀಯ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಶುಕ್ರವಾರ ವಿಧಾನಪರಿಷತ್ ಕಲಾಪದಲ್ಲಿ ವೈ.ಎಂ.ಸತೀಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಕಲಚೇತನರಿಗಾಗಿ ಪ್ರಮುಖ ಮೂರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು. ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿ …

Read More »

ವಿಧಾನಸಭೆಯಲ್ಲಿ ಸದ್ದು ಮಾಡಿದ ಬೀದಿನಾಯಿಗಳ ಕಾಟದ ವಿಚಾರ; ಗಮನ ಸೆಳೆದ ನಾಗರಹಾವು ಪ್ರಸ್ತಾಪ

ಬೆಂಗಳೂರು : ರಾಜಧಾನಿ ಬೆಂಗಳೂರು ನಗರದಲ್ಲಿ ಬೀದಿ ನಾಯಿಗಳಿಂದಾಗುತ್ತಿರುವ ತೊಂದರೆಯ ವಿಚಾರ ವಿಧಾನಸಭೆಯಲ್ಲಿ ಇಂದು ಪ್ರತಿಧ್ವನಿಸಿ ಸದಸ್ಯರ ನಡುವೆ ಸ್ವಾರಸ್ಯಕರ ಚರ್ಚೆ ನಡೆಯಿತು. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ: ಇಂದು ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ವಿಷಯ ಪ್ರಸ್ತಾಪಿಸಿ, ಬೀದಿನಾಯಿಗಳ ಹಾವಳಿಯಿಂದ ತೊಂದರೆಯಾಗುತ್ತಿದೆ. ಸನ್ಸಿಟಿ ಅಪಾರ್ಟ್​ಮೆಂಟ್ 18ನೇ ಮಹಡಿಗೆ ಬೀದಿನಾಯಿಗಳನ್ನು ಮಹಿಳೆಯೊಬ್ಬರು ಕರೆದೊಯ್ದಿದ್ದಾರೆ. ಇದರಿಂದ ತೊಂದರೆಯಾಗುತ್ತಿದೆ. ಅಲ್ಲಿನ ನಿವಾಸಿಗಳಿಗೆ ಆ ಬೀದಿ ನಾಯಿಗಳು ಕಚ್ಚಿವೆ. ಬಿಬಿಎಂಪಿ ಗಮನಕ್ಕೆ ತಂದರೂ …

Read More »

BJP ಅವಧಿಯಲ್ಲಿನ 40% ಕಮಿಷನ್ ಆರೋಪ: 20 ಸಾವಿರ ಪುಟದ ವರದಿ

ಬೆಂಗಳೂರು, (ಮಾರ್ಚ್​ 13): ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಪ್ರಮುಖ ಕಾಮಗಾರಿ ನಡೆಸುವ ಐದು ಇಲಾಖೆಗಳಲ್ಲಿ 40 ಪರ್ಸೆಂಟ್‌ ಭ್ರಷ್ಟಾಚಾರ(40 percent commission )ನಡೆಯುತ್ತಿದೆ ಎಂಬ ರಾಜ್ಯ ಗುತ್ತಿಗೆದಾರರ ಸಂಘದ ಆರೋಪ ಕುರಿತ ತನಿಖೆಗೆ ರಚಿಸಲಾಗಿದ್ದ ನಿವೃತ್ತಿ ನ್ಯಾಯಮೂರ್ತಿ ಎಚ್.ಎನ್‌.ನಾಗಮೋಹನ್‌ ದಾಸ್‌ (Nagamohan Das) ನೇತೃತ್ವದ ವಿಚಾರಣಾ ಆಯೋಗವು 20,000 ಪುಟಗಳ ಬೃಹತ್‌ ತನಿಖಾ ವರದಿಯನ್ನು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿದೆ.  ಬಿಜೆಪಿ ಅವಧಿಯಲ್ಲಿನ ಕಾಮಗಾರಿಗಳ ಬಗ್ಗೆ ತನಿಖಾ ವರದಿಯನ್ನ ಸಲ್ಲಿಸಲಾಗಿದ್ದು, …

Read More »

ದಕ್ಷಿಣ ಕನ್ನಡದಲ್ಲಿ ಆಲಿಕಲ್ಲು ಮಳೆ

ಬೆಳ್ತಂಗಡಿಯಲ್ಲಿ ಆಲಿಕಲ್ಲು ಮಳೆ: ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಬುಧವಾರ ರಾತ್ರಿ ಆಲಿಕಲ್ಲು ಮಳೆ ಸುರಿದಿದೆ. ಉಜಿರೆ, ಕಕ್ಕಿಂಜೆ, ಚಾರ್ಮಾಡಿ ಭಾಗದಲ್ಲಿ ಸುರಿದ ಮಳೆಯಲ್ಲಿ ಭಾರೀ ಪ್ರಮಾಣದಲ್ಲಿ ಆಲಿಕಲ್ಲು ಬಿದ್ದಿದೆ. ವಿಮಾನಗಳು ಡೈವರ್ಟ್: ಭಾರೀ ಮಳೆಯ ಪರಿಣಾಮ ಮಂಗಳೂರಿನಲ್ಲಿ ಕಳೆದ ರಾತ್ರಿ ಇಳಿಯಬೇಕಿದ್ದ ಮೂರು ವಿಮಾನಗಳನ್ನು ಕೇರಳಕ್ಕೆ ಡೈವರ್ಟ್ ಮಾಡಲಾಗಿತ್ತು. ಹೈದರಾಬಾದ್​​ನ ಒಂದು ವಿಮಾನ ಮತ್ತು ಬೆಂಗಳೂರಿನ ಎರಡು ವಿಮಾನಗಳನ್ನು ಕೇರಳದ ಕಣ್ಣೂರಿಗೆ ಡೈವರ್ಟ್ ಮಾಡಲಾಯಿತು. ವಾತಾವರಣ ಸರಿಯಾದ ಬಳಿಕ ಮತ್ತೆ …

Read More »

ಸಮುದ್ರದಲ್ಲಿ ಮೀನುಗಾರರಿಂದ ವಿನೂತನ ಪ್ರತಿಭಟನೆ

ಕಾರವಾರ: ಅಂಕೋಲಾದ ಕೇಣಿಯಲ್ಲಿ ಗ್ರೀನ್‌ಫೀಲ್ಡ್ ಬಂದರು ವಿರೋಧಿಸಿ ಸ್ಥಳೀಯ ಮೀನುಗಾರರ ಆಕ್ರೋಶ ಮತ್ತೆ ಜೋರಾಗಿದೆ. ಉದ್ದೇಶಿತ ಈ ವಾಣಿಜ್ಯ ಬಂದರನ್ನು ಕೈ ಬಿಡುವಂತೆ ಒತ್ತಾಯಿಸಿ ಅಂಕೋಲಾದ ಬೇಲೆಕೇರಿ ಕಡಲತೀರದಲ್ಲಿ ನೂರಾರು ಮೀನುಗಾರರು ಮಾನವ ಸರಪಳಿ ನಿರ್ಮಿಸಿ ಹಾಗೂ ಬೋಟ್‌ಗಳ ಮೂಲಕ ಸಮುದ್ರಕ್ಕೆ ತೆರಳಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಕೇಣಿ ಹಾಗೂ ಭಾವಿಕೇರಿ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿರುವ ಕಾರಣ ತಾಲೂಕಿನ ಬೇಲೆಕೇರಿ ಕಡಲತೀರದಲ್ಲಿ ಮೀನುಗಾರಿಕೆ ಹಾಗೂ ಮೀನು ಮಾರಾಟ …

Read More »

ರಾಜ್ಯದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ. ಇದರ ಜೊತೆಗೆ, ಬಾಲ್ಯ ವಿವಾಹ ಪ್ರಕರಣಗಳು ಏರಿಕೆ ಕಾಣುತ್ತಿರುವ ಆತಂಕಕಾರಿ ವಿಚಾರವನ್ನು ರಾಜ್ಯ ಸರ್ಕಾರ ತಿಳಿಸಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಾದ ಮಕ್ಕಳ ದೌರ್ಜನ್ಯ ಪ್ರಕರಣಗಳ ಬಗ್ಗೆ ಮಾಹಿತಿ ಕೇಳಿದ್ದ ಬಿಜೆಪಿ ಶಾಸಕ ಚನ್ನಬಸಪ್ಪ ಅವರ ಪ್ರಶ್ನೆಗೆ ರಾಜ್ಯ ಸರ್ಕಾರ ಈ ಆತಂಕಕಾರಿ ಉತ್ತರ ನೀಡಿದೆ. ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ನಡೆದ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ ಕಂಡಿರುವುದಾಗಿ …

Read More »