Breaking News

ರಾಷ್ಟ್ರೀಯ

ಜಾತಿ ಗಣತಿ ವರದಿ ದೋಷಪೂರಿತ, ಲಿಂಗಾಯತರಿಗೆ ಅನ್ಯಾಯ: ತೋಂಟದಾರ್ಯ ಶ್ರೀ ಅಸಮಾಧಾನ

ಗದಗ: ”ಜಾತಿ ಗಣತಿ ವರದಿಯು ದೋಷಪೂರಿತವಾಗಿದೆ. ವರದಿಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ. ಹೀಗಾಗಿ, ಸರ್ಕಾರ ಇನ್ನೊಮ್ಮೆ ಸಮೀಕ್ಷೆ ನಡೆಸಿ, ವರದಿ ಸಿದ್ಧಪಡಿಸಬೇಕು” ಎಂದು ಗದಗದ ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ಸಿದ್ದರಾಮ ಶ್ರೀಗಳು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ”ಜಾತಿ ಗಣತಿ ವರದಿಯು ಸಾರ್ವಜನಿಕರಲ್ಲಿ ಸಂದೇಹ ಹುಟ್ಟುಹಾಕಿದೆ. 10 ವರ್ಷಗಳ ಹಿಂದೆ ಗಣತಿ ನಡೆಸಿ, ಈ ವರದಿ ಮಾಡಿದ್ದಾರೆ. ವರದಿಯು ಸಮರ್ಪಕವಾಗಿಲ್ಲ. ಅದನ್ನು ಸಿದ್ದಪಡಿಸಿದವರು ಕರ್ನಾಟಕದ ಪ್ರತಿಯೊಬ್ಬ ವ್ಯಕ್ತಿಯನ್ನೂ ಸಂಪರ್ಕಿಸಿಲ್ಲವೆಂಬ ಆರೋಪವಿದೆ” …

Read More »

ಕೊಪ್ಪಳದ ಇಟಗಿ ಮಹಾದೇವ ದೇವಾಲಯವನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಪತ್ರ

ಕೊಪ್ಪಳ: ಐತಿಹಾಸಿಕ ಹಿನ್ನೆಲೆಯುಳ್ಳ ಕೊಪ್ಪಳ ಜಿಲ್ಲೆಯಲ್ಲಿ ಅನೇಕ ಸ್ಮಾರಕಗಳು, ಶಿಲಾ ಶಾಸನಗಳು ಕಾಣಸಿಗುತ್ತವೆ. ಅದರಲ್ಲೂ ಶಿಲ್ಪಕಲಾ ವೈಭವವನ್ನು ಬಿಂಬಿಸುವ, ದೇವಾಲಯಗಳ ತೊಟ್ಟಿಲು ಎಂದೇ ಪ್ರಸಿದ್ಧಿ ಪಡೆದಿರುವ ಕುಕನೂರ ತಾಲೂಕಿನ ಇಟಗಿಯ ಮಹಾದೇವ ದೇವಾಲಯವನ್ನು ವಿಶ್ವ ಪಾರಂಪರಿಕ ಪಟ್ಟಿಗೆ ನಾಮನಿರ್ದೇಶನ ಮಾಡಲು ಪ್ರಸ್ತಾವ ಕಳುಹಿಸುವಂತೆ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಕಾರ್ಯದರ್ಶಿಗೆ ಪುರಾತತ್ವ ಇಲಾಖೆ ಪತ್ರ ಬರೆದಿದೆ. ಈಗಾಗಲೇ ಕರ್ನಾಟಕದ ಹಂಪಿ, ಬೇಲೂರು, ಹಳೇಬೀಡು ಸೇರಿ ಹಲವು ಪ್ರದೇಶಗಳು ವಿಶ್ವವಿಖ್ಯಾತಿ ಹೊಂದಿವೆ. …

Read More »

ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ*: *ಮುಖ್ಯಮಂತ್ರಿ ಸಿದ್ದರಾಮಯ್ಯ*

ಜಾತಿ ಸಾಮಾಜಿಕ ಸಮೀಕ್ಷೆ: ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ: ಸಿಎಂ* ಕಲಬುರ್ಗಿ : ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ …

Read More »

ಶಬರಿಮಲೆಗೆ ತೆರಳಿದ್ದ ಹಾವೇರಿಯ ಗುರುಸ್ವಾಮಿ ರಸ್ತೆ ಅಪಘಾತದಲ್ಲಿ ಸಾವು

ಎರಿಮಲೈ/ಹಾವೇರಿ: ಕೇರಳ ರಾಜ್ಯದ ಎರಿಮಲೈ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಹಾನಗಲ್ ಪಟ್ಟಣದ 51 ವರ್ಷದ ಮಾರುತಿ ಎಂ ಹರಿಹರ ಎಂದು ಗುರುತಿಸಲಾಗಿದೆ. ಕೇರಳ ರಾಜ್ಯದಲ್ಲಿರುವ ಶಬರಿಮಲೆಗೆ ಹಾವೇರಿ ಜಿಲ್ಲೆಯಿಂದ 25 ಪ್ರಯಾಣಿಕರು ತೆರಳಿದ್ದರು. ಯಾತ್ರೆಗೆ ತೆಗೆದುಕೊಂಡಿದ್ದ ಮಿನಿ ಬಸ್ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಮಾರುತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10 ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. 20 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ …

Read More »

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಎಸಗಿದ ಆರೋಪಿ ಕೊನೆಗೂ ಅರೆಸ್ಟ್

*ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಎಸಗಿದ ಆರೋಪಿ ಕೊನೆಗೂ ಅರೆಸ್ಟ್* ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಅಪಘಾತ ಎಸಗಿದ ‌ಲಾರಿ ಚಾಲಕ ಅರೆಸ್ಟ್ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ‌ ಗ್ರಾಮದ ಮಧುಕರ ಸೋಮವಂಶಿ ಅರೆಸ್ಟ್ ಅಪಘಾತ ಎಸಗಿದ ಲಾರಿಯನ್ನೂ ಜಪ್ತಿ ಮಾಡಿದ ಕಿತ್ತೂರು ಠಾಣೆ ಪೊಲೀಸರು ಜ. 14 ರಂದು ಬೆಳಗಿನ ಜಾವ ಸಚಿವೆ ಹೆಬ್ಬಾಳ್ಕರ್ ಕಾರಿಗೆ ತಾಗಿಸಿ ಪರಾರಿಯಾಗಿದ್ದ ಚಾಲಕ ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಕಿತ್ತೂರು ಸಮೀಪದ …

Read More »

ಕಾವೇರಿಯಲ್ಲಿ ಇಂದು ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಅಹವಾಲನ್ನು ಆಲಿಸಿದೆ.

ಕಾವೇರಿಯಲ್ಲಿ ಇಂದು ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಅಹವಾಲನ್ನು ಆಲಿಸಿದೆ. ಈ ಸಭೆಯ ಮುಖ್ಯಾಂಶಗಳು: * ಈ ಬಾರಿ ಬಜೆಟ್‌ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡುತ್ತೇನೆ. * ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. …

Read More »

ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲ:ಮಧು ಬಂಗಾರಪ್ಪ

ಬೆಂಗಳೂರು, ಏಪ್ರಿಲ್ 16: ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ (Karnataka Education Department) ತುಸು ಸಡಿಲಗೊಳಿಸಿದೆ. 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಘೋಷಿಸಿದರು. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. …

Read More »

ಏಪ್ರೀಲ್ 29 ರಂದು ಬೆಳಗಾವಿಯಲ್ಲಿ ಶಿವಜಯಂತಿ…ಮೇ. 1 ರಂದು ರೂಪಕಗಳ ಮೆರವಣಿಗೆ ಮಧ್ಯವರ್ತಿ ಶಿವಜಯಂತಿ ಉತ್ಸವ ಮಂಡಳದ ಸಭೆಯಲ್ಲಿ ಮಾಹಿತಿ

ಏಪ್ರೀಲ್ 29 ರಂದು ಬೆಳಗಾವಿಯಲ್ಲಿ ಶಿವಜಯಂತಿ…ಮೇ. 1 ರಂದು ರೂಪಕಗಳ ಮೆರವಣಿಗೆ ಮಧ್ಯವರ್ತಿ ಶಿವಜಯಂತಿ ಉತ್ಸವ ಮಂಡಳದ ಸಭೆಯಲ್ಲಿ ಮಾಹಿತಿ ಹಿಂದವಿ ಸ್ವರಾಜ್ಯದ ಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ನಿಮಿತ್ಯ ಮೇ 1 ರಂದು ಬೆಳಗಾವಿ ನಗರದಲ್ಲಿ ಐತಿಹಾಸಿಕ ಶಿವ ಜಯಂತಿ ರೂಪಕಗಳ ಮೆರವಣಿಗೆಯನ್ನು ನಡೆಸುವ ನಿರ್ಧಾರವನ್ನು ಮಧ್ಯವರ್ತಿ ಶಿವ ಜಯಂತಿ ಉತ್ಸವ ಮಂಡಳದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಬೆಳಗಾವಿಯ ಶ್ರೀ ಜತ್ತಿಮಠ ದೇವಸ್ಥಾನದಲ್ಲಿ ಶಿವಜಯಂತಿಯ ಪೂರ್ವಸಿದ್ಧತಾ ಸಭೆಯನ್ನು ಕರೆಯಲಾಗಿತ್ತು. …

Read More »

ಪೈಪ್‌ಲೈನ್ ಕಾಮಗಾರಿಯ ಸಂದರ್ಭದಲ್ಲಿ ಮೂಡಲಗಿ ತಾಲೂಕಿನ ಇಬ್ಬರು ಕಾರ್ಮಿಕರು ಮಣ್ಣು ಕುಸಿದು ಮೃತಪಟ್ಟಿರುವ ಹೃದಯ ವಿದ್ರಾವಕ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ.:ಸತೀಶ್ ಜಾರಕಿಹೊಳಿ

ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ ಆ್ಯಂಡ್ ಟಿ ಕಂಪನಿಯ ಸಬ್‌ಗುತ್ತಿಗೆದಾರರಿಂದ ಅನುಷ್ಠಾನಗೊಳ್ಳುತ್ತಿದ್ದ ಒಳಚರಂಡಿ ಪೈಪ್‌ಲೈನ್ ಕಾಮಗಾರಿಯ ಸಂದರ್ಭದಲ್ಲಿ ಮೂಡಲಗಿ ತಾಲೂಕಿನ ಇಬ್ಬರು ಕಾರ್ಮಿಕರು ಮಣ್ಣು ಕುಸಿದು ಮೃತಪಟ್ಟಿರುವ ಹೃದಯ ವಿದ್ರಾವಕ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಶಿವಲಿಂಗ ಮಾರುತಿ ಸರವೆ (ವಯಸ್ಸು 20) ಮತ್ತು ಬಸವರಾಜ ಸರವೆ (ವಯಸ್ಸು 38) ಎಂಬ ಕೂಲಿ ಕಾರ್ಮಿಕರು ಈ ದುರ್ಘಟನೆಯಲ್ಲಿ ದುರ್ಮರಣ ಹೊಂದಿದ್ದು, ಅವರ ಕುಟುಂಬದವರಿಗೆ …

Read More »

“ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯ ಹಾಗೂ ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ?

ದಾವಣಗೆರೆ, ಏಪ್ರಿಲ್​ 15: ಜಾತಿಗಣತಿ ವರದಿ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸ್ವಪಕ್ಷದ ವಿರುದ್ಧವೇ ವಾಗ್ದಾಳಿ ಮಾಡಿದ್ದಾರೆ. “ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯ ಹಾಗೂ ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ? ಅವರು ಸುಮ್ಮನೇ ವರದಿ ಬಿಡುಗಡೆ ಮಾಡುತ್ತೇವೆ ಅಂತ ಹೇಳುತ್ತಿದ್ದಾರೆ. ರಾಜ್ಯದಲ್ಲಿ ಫಸ್ಟ್ ಲಿಂಗಾಯತರು, ಸೆಕೆಂಡ್ ಒಕ್ಕಲಿಗರು ಇದ್ದಾರೆ. ಅವರು ನಮ್ಮನ್ನು …

Read More »