Breaking News

ರಾಷ್ಟ್ರೀಯ

ಬೆಳಗಾವಿ: ಜಿಲ್ಲೆಯಲ್ಲಿ ನಾಲ್ಕೇ ತಿಂಗಳಲ್ಲಿ 4,665 ಜಾನುವಾರು ಮೃತಪಟ್ಟಿವೆ

ಬೆಳಗಾವಿ: ಜಿಲ್ಲೆಯಲ್ಲಿ ಚರ್ಮಗಂಟು (ಲಂಪಿಸ್ಕಿನ್‌) ರೋಗ ವ್ಯಾಪಕವಾಗಿ ಹರಡುತ್ತಿದ್ದು, ನಾಲ್ಕೇ ತಿಂಗಳಲ್ಲಿ 4,665 ಜಾನುವಾರು ಮೃತಪಟ್ಟಿವೆ. ಆದರೆ, ಬಹುಪಾಲು ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಕೆಲವರಿಗೆ ಮಾತ್ರ ಅಲ್ಪಮೊತ್ತದ ಹಣ ನೀಡಿದ್ದು ಅಸಮಾಧಾನಕ್ಕೆ ಕಾರಣವಾಗಿದೆ.   ‘ಚರ್ಮಗಂಟು ರೋಗ ಶಾಪವಾಗಿ ಪರಿಣಮಿಸಿದೆ. ಈ ಸೋಂಕಿನಿಂದ ಮೃತಪಟ್ಟಿರುವ 1 ವರ್ಷದೊಳಗಿನ ಕರುವಿಗೆ ತಲಾ ₹5 ಸಾವಿರ, ಆಕಳಿಗೆ ₹20 ಸಾವಿರ ಮತ್ತು ಎತ್ತಿಗೆ ₹30 ಸಾವಿರ ಪರಿಹಾರ ನಿಗದಿಪಡಿಸಲಾಗಿದೆ. ಇದು ಏತಕ್ಕೂ …

Read More »

ಸಕ್ಕರೆ ಲಾಬಿಗೆ ಮಣಿದ ಸರ್ಕಾರ: ಕೆಪಿಸಿಸಿ ವಕ್ತಾರ ಪಿ.ಎಚ್. ನೀರಲಕೇರಿ ಆರೋಪ

ಚನ್ನಮ್ಮನ ಕಿತ್ತೂರು: ‘ಸಕ್ಕರೆ ಲಾಬಿಗೆ ಮಣಿದ ಸರ್ಕಾರ ಕಬ್ಬು ಬೆಳೆಗಾರರನ್ನು ಸಂಕಷ್ಟಕ್ಕೆ ದೂಡಿದೆ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಎರಡೂವರೆ ತಿಂಗಳು ವಿಳಂಬವಾಗಿ ಕಾರ್ಖಾನೆ ಪ್ರಾರಂಭವಾಗಿವೆ’ ಎಂದು ಕೆಪಿಸಿಸಿ ವಕ್ತಾರ ಪಿ.ಎಚ್. ನೀರಲಕೇರಿ ದೂರಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗುಜರಾತ್ ಮಾದರಿಯಲ್ಲಿ ಕರ್ನಾಟಕದ ವಿಧಾನಸಭೆ ಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಮೋದಿ ಅಲೆ ಎಲ್ಲಿಯೂ ಇಲ್ಲ. ಮುಕ್ತವಾಗಿ ಚುನಾವಣೆ ನಡೆಸದೆ ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಬಿಜೆಪಿ …

Read More »

“ಗೋಲಿ ಮಾರ್ ದೂಂಗಾ..”: ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಗೆ ಜೀವ ಬೆದರಿಕೆ

ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಕೊಲೆ ಬೆದರಿಕೆ ಹಾಕಲಾಗಿದೆ. ಪವಾರ್ ಅವರ ಸಿಲ್ವರ್ ಓಕ್ಸ್ ಮನೆಗೆ ಕರೆ ಮಾಡಿದ ವ್ಯಕ್ತಿ, ಮುಂಬೈಗೆ ಬಂದು ಕಂಟ್ರಿಮೇಡ್ ಪಿಸ್ತೂಲ್ ನಿಂದ ಶೂಟ್ ಮಾಡುವುದಾಗಿ ಹಿಂದಿಯಲ್ಲಿ ಬೆದರಿಕೆ ಹಾಕಿದ್ದಾನೆ.   “ಮುಂಬೈ ಆಯುಂಗಾ ಔರ್ ದೇಸಿ ಪಿಸ್ತೂಲ್ ಸೆ ಗೋಲಿ ಮಾರ್ ದೂಂಗಾ” ಎಂದು ಅಪರಿಚಿತ ವ್ಯಕ್ತಿಯೊಬ್ಬ ದೂರವಾಣಿ ಕರೆಯಲ್ಲಿ …

Read More »

ಕಾಲುವೆಗೆ ಹಾರಿ ಎರಡು ಹೆಣ್ಣುಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡ ತಾಯಿ

ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ನಡೆದಿದೆ‌. ಗ್ರಾಮದ ಹೊರ ಭಾಗದಲ್ಲಿರೋ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಗೆ ಹಾರಿ ಸಾವನ್ನಪ್ಪಿದ್ದಾಳೆ‌. ತುಂಬಿ ಹರಿಯುತ್ತಿದ್ದ ಕಾಲುವೆಯಲ್ಲಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಹಾರಿದ್ದಾಳೆ. ರೇಣುಕಾ ಅಮೀನಪ್ಪ ಕೋನಿನ್ (26 ), ಯಲ್ಲವ್ವ (2) ಅಮೃತಾ (1) ಮೃತರಾದ ದುರ್ದೈಗಳು. ಕಳೆದ ಎರಡು ದಿನಗಳ …

Read More »

ಮಹದಾಯಿ ಸಮಸ್ಯೆಗೆ ಕಾಂಗ್ರೆಸ್ ಕಾರಣ: ಸಿಎಂಬೊಮ್ಮಾಯಿ

ಮೈಸೂರು: ಕಾಂಗ್ರೆಸ್ ಜನರಿಗೆ ಮರೆವಿದೆ ಎಂದು ತಿಳಿದಂತಿದೆ. ಆದರೆ ಕಾಂಗ್ರೆಸ್ ನ ಪರಿಚಯ ಜನರಿಗಿದೆ. ಮಹದಾಯಿ ಸಮಸ್ಯೆ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.   ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಒಟ್ಟಾಗಿ ಹೋಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಒಟ್ಟಾಗಿ ಹೋಗುವುದು ಅವರಿಗೆ ಸಂಬಂಧಿಸಿದ ಆಂತರಿಕ ವಿಚಾರ. ನಾವು ಹೇಳುವುದೇನೂ ಇಲ್ಲ. ಮಹದಾಯಿ, ಕೃಷ್ಣಾ ಹಾಗೂ …

Read More »

ಪ್ರಯಾಣಿಕರಿಗೆ ಬಿಗ್ ಶಾಕ್ : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮತ್ತೆ ‘KSRTC’ ನೌಕರರ ಪ್ರತಿಭಟನೆ..!

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಗೆಕೆ ಆಗ್ರಹಿಸಿ ಮತ್ತೆ ‘KSRTC’ ನೌಕರರು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದು, ಮತ್ತೆ ಪ್ರಯಾಣಿಕರಿಗೆ ಬಸ್ ಮುಷ್ಕರದ ಬಿಸಿ ತಟ್ಟಲಿದೆ ಎನ್ನಲಾಗಿದೆ. ಹೌದು, ವಿವಿಧ ಬೇಡಿಕೆಗಳ ಈಡೇರಿಗೆಕೆ ಆಗ್ರಹಿಸಿ ಮತ್ತೆ ‘KSRTC’ ನೌಕರರು ಪ್ರತಿಭಟನೆಗೆ ಸಿದ್ಧತೆ ನಡೆಸಲು ಮುಂದಾಗಿದ್ದು, ವಿವಿಧ ಬೇಡಿಕೆಗಳೊಂದಿಗೆ ರಾಜ್ಯವ್ಯಾಪಿ ಮುಷ್ಕರ ನಡೆಸಲು ಸಾರಿಗೆ ಸಿಬ್ಬಂದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬೆಳಗಾವಿಯ ಚಳಿಗಾಲದ ಅಧಿವೇಶನದ ವೇಳೆ ನಾಲ್ಕು ನಿಗಮದ ಸಾವಿರಾರು ನೌಕರರು ಉಪವಾಸ …

Read More »

ಮುರುಘಾ ಶರಣರ ಜಾಮೀನು ಅರ್ಜಿ ಸೆಷನ್ಸ್‌ ಕೋರ್ಟ್‌ಗೆ?

ಬೆಂಗಳೂರು: ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮಂಗಳವಾರಕ್ಕೆ (ಡಿ.13) ಮುಂದೂಡಿದೆ.   ಈ ಸಂಬಂಧ ಶಿವಮೂರ್ತಿ ಶರಣರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ …

Read More »

ಮಧ್ಯಾಹ್ನದ ‘ಬಿಸಿಯೂಟ’ ವೇಳಾಪಟ್ಟಿಯಲ್ಲಿ ಮಹತ್ವದ ಮಾರ್ಪಾಡು; ಇಲ್ಲಿದೆ ವಿವರ

ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ವೇಳಾಪಟ್ಟಿಯಲ್ಲಿ ಮಹತ್ವದ ಮಾರ್ಪಾಡು ಮಾಡಲಾಗಿದ್ದು, ಇದರ ವಿವರ ಇಲ್ಲಿದೆ. ಏಕಕಾಲದಲ್ಲಿ ಮಕ್ಕಳ ದಟ್ಟಣೆ ಆಗುವುದನ್ನು ತಡೆಗಟ್ಟುವ ಸಲುವಾಗಿ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸಮಯವನ್ನು ನಿಗದಿಪಡಿಸಲಾಗಿದೆ.   ಈ ವೇಳಾಪಟ್ಟಿ ಅನ್ವಯ 1ರಿಂದ 5ನೇ ತರಗತಿ ವಿದ್ಯಾರ್ಥಿಗಳು ಮಧ್ಯಾಹ್ನ 1 ಗಂಟೆಯಿಂದ 1.45 ರ ವರೆಗೆ ಬಿಸಿಯೂಟ ಸ್ವೀಕರಿಸಲಿದ್ದರೆ, 6 ರಿಂದ 10 ನೇ …

Read More »

ಗ್ರ್ಯಾಂಡ್‌ ಫೈನಲ್‌ಗಿಂತ ಸೆಮಿಫೈನಲೇ ಹೆಚ್ಚು ರೋಚಕ

2023 ವಿಧಾನಸಭೆ ಚುನಾವಣೆಗಳ ವರ್ಷ. 2024ರ ಮಹಾ ಚುನಾವಣೆಗೆ ಇದು ಸೆಮಿಫೈನಲ್‌. ಇದೇ ಹೆಚ್ಚು ರೋಚಕವಾಗಿದೆ. ಬಿಜೆಪಿಯ ತ್ರಿಮೂರ್ತಿಗಳು ಹಾಗೂ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಸೆಮಿಫೈನಲ್‌ ಮಹಾ ಸವಾಲು. ಕೈಯಲ್ಲಿದ್ದ ಪಕ್ಷಿಗಳನ್ನು ಉಳಿಸಿಕೊಂಡೇ ಮತ್ತಷ್ಟು ಹಕ್ಕಿಗಳಿಗೆ ಪಂಜರ ಹೊಂದಿಸಬೇಕಾದ ಅನಿವಾರ್ಯತೆ. ಖರ್ಗೆಯವರಿಗಂತೂ ತಮ್ಮ ತವರಿನಲ್ಲೇ ವಿಜಯ ಧ್ವಜ ನೆಡುವಂಥ ಬೆಟ್ಟದಂಥ ಸವಾಲಿದೆ. ದಿಲ್ಲಿಯ ಕಡೆಗಿನ ಈ ಪಯಣದಲ್ಲಿ ಎಷ್ಟು ದೂರದವರೆಗೆ ಗುಜರಾತ್‌ ಮತ್ತು ಹಿಮಾಚಲ …

Read More »

ರಾಜ್ಯ ವಿಧಾನಸಭೆ ಚುನಾವಣಾ ವಿಶ್ಲೇಷಣೆ: ಕಾಂಗ್ರೆಸ್ ಪಕ್ಷಕ್ಕೆ 55-60 ಸ್ಥಾನ ಖಚಿತ; ಬಿಜೆಪಿ 70-75 ಕ್ಷೇತ್ರ ಗೆಲ್ಲಲು ಶಕ್ತ; 15-20ಕ್ಕೆ ಜೆಡಿಎಸ್ ತೃಪ್ತ!

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷದ ಕನಸು ನನಸಾಗುವುದಿಲ್ಲ. ಏಕೆಂದರೆ ಕಾಂಗ್ರೆಸ್ ಕೇವಲ 55 ರಿಂದ 60 ಕ್ಷೇತ್ರಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯ ಎಂದು ವಿಶ್ಲೇಷಣೆ ತಿಳಿಸಿದೆ. ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷದ ಕನಸು ನನಸಾಗುವುದಿಲ್ಲ. ಏಕೆಂದರೆ ಕಾಂಗ್ರೆಸ್ ಕೇವಲ 55 ರಿಂದ 60 ಕ್ಷೇತ್ರಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯ …

Read More »