Breaking News

ರಾಷ್ಟ್ರೀಯ

ಶಿಕ್ಷಕರ ಮಕ್ಕಳಿಗೆ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಸಲು ಜ.20 ಕೊನೇ ದಿನ

ಬೆಂಗಳೂರು: ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಶಿಕ್ಷಕರ ಮಕ್ಕಳಿಗೆ ‘ಪ್ರತಿಭಾವಂತ ವಿದ್ಯಾರ್ಥಿ ವೇತನ’ ಮಂಜೂರು ಮಾಡಲು ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಿದೆ. ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಎಸ್ಸೆಸ್ಸೆಲ್ಸಿಯಿಂದ ಸ್ನಾತಕೋತ್ತರ ಪದವಿವರೆಗೆ ಅತಿ ಹೆಚ್ಚು ಅಂಕ ಪಡೆದಿರುವ ಶಿಕ್ಷಕರ, ಉಪನ್ಯಾಸಕರ/ಪ್ರಾಂಶುಪಾಲರ, ನಿವೃತ್ತ ಶಿಕ್ಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. 2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸಿಬಿಎಸ್​ಇ/ ಐಸಿಎಸ್​ಇ ವ್ಯಾಸಂಗ ಮಾಡುತ್ತಿರುವ ಮಕ್ಕಳು ಅರ್ಹರಾಗಿರುವುದಿಲ್ಲ. …

Read More »

ಸುಪ್ರೀಂನಲ್ಲಿ ಬೆಳಗಾವಿ ಗಡಿ ವಿವಾದದ ಬಗ್ಗೆ ಹೋರಾಡಲು ಸರ್ವಸನ್ನದ್ಧ: ಬೊಮ್ಮಾಯಿ

ಬೆಂಗಳೂರು: ಸುಪ್ರೀಂಕೋರ್ಟ್‌ನಲ್ಲಿ ಬೆಳಗಾವಿ ಗಡಿ ವಿವಾದದ ಬಗ್ಗೆ ಹೋರಾಡಲು ರಾಜ್ಯ ಸರ್ಕಾರ ಸರ್ವಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಾಳೆ (ನ.23) ಸುಪ್ರಿಂಕೋರ್ಟ್‌ನಲ್ಲಿ ಬೆಳಗಾವಿ ಗಡಿ ವಿವಾದ 18 ವರ್ಷಗಳ ಬಳಿಕ ವಿಚಾರಣೆಗೆ ಬರುವುದರಿಂದ, ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿ ಈ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.   ‘ಕರ್ನಾಟಕದ ಪರ ತೀರ್ಪು ಬರುವಂತೆ ನಮ್ಮ ವಕೀಲರ ತಂಡವನ್ನು ಸಿದ್ಧಗೊಳಿಸಲಾಗಿದೆ’ ಎಂದು …

Read More »

ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು,ರಾಜ್ಯದಲ್ಲಿಯೂ ಕಠಿಣ ಕ್ರಮ : ಅಭಯ್ ಪಾಟೀಲ

ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು ತಂದು ತೀವ್ರತರವಾದ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ಯುಪಿ ಮಾದರಿಯಲ್ಲಿ ರಾಜ್ಯದಲ್ಲಿಯೂ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಆಗ್ರಹಿಸಿದರು. ಮಂಗಳವಾರ ಬೆಳಗಾವಿಯ ಖಾಸಗಿ ಹೋಟೆಲ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ಅಭಯ್ ಪಾಟೀಲ್ ರಾಜ್ಯ ಮತ್ತು ದೇಶ ವಿರೋಧಿ ಕೃತ್ಯದಲ್ಲಿ ತೊಡಗಿದ ಜನರ ವಿರುದ್ಧ ಉಗ್ರ ಕ್ರಮ ಆಗಬೇಕು ಎಂದು ನಾವು ಮೊದಲಿನಿಂದ ಒತ್ತಾಯಿಸುತ್ತಿದ್ದೇವೆ. ಈ …

Read More »

ಎಸ್.ಟಿ ಮೀಸಲಾತಿಗೆ ಆಗ್ರಹಿಸಿ ಕುರುಬ ಸಮುದಾಯದವರ ಪ್ರತಿಭಟನೆ

ಬೆಂಗಳೂರು: ‘ಎಸ್.ಟಿ ಮೀಸಲಾತಿ ನೀಡಬೇಕು’ ಎಂದು ಆಗ್ರಹಿಸಿ ಕುರುಬ ಸಮುದಾಯದವರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಸೋಮವಾರ ಬೆಳಿಗ್ಗೆ ಉದ್ಯಾನಕ್ಕೆ ಆಗಮಿಸಿರುವ ಸಮುದಾಯದ ಜನ, ‘ಎಸ್.ಟಿ ಮೀಸಲಾತಿ ಬೇಕು’ ಎಂದು ಘೋಷಣೆ ಕೂಗುತ್ತಿದ್ದಾರೆ. ಕುರುಬ ಸಮುದಾಯದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಹಾಲುಮತ ಮಹಾಸಭಾ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ‘ಕುರುಬ ಸಮುದಾಯಕ್ಕೆ ಎಸ್.ಟಿ ಮೀಸಲಾತಿ ನೀಡುವ ಸಂಬಂಧ ರಾಜ್ಯ ಬುಡಕಟ್ಟು ಸಂಶೋಧನಾ ಕೇಂದ್ರವು ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿದೆ. ಈ ವರದಿಯನ್ನು …

Read More »

ಮೀಸಲಾತಿ ಪರ ಹೇಳಿಕೆ ನೀಡುವಾಗ ಎಚ್ಚರದಿಂದ ಇರಿ: ಕಾಂಗ್ರೆಸ್ ವರಿಷ್ಠರ ಸೂಚನೆ

ನವದೆಹಲಿ: ‘ಪಂಚಮಸಾಲಿ ಲಿಂಗಾಯತರು, ಒಕ್ಕಲಿಗರು, ಕುರುಬರು ಹೀಗೆ ವಿವಿಧ ಸಮುದಾಯದವರ ಮೀಸಲಾತಿ ಬೇಡಿಕೆಗೆ ಸಂಬಂಧಿಸಿದಂತೆ ಹೇಳಿಕೆ ನೀಡುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕು’ ಎಂದು ಕಾಂಗ್ರೆಸ್‌ ವರಿಷ್ಠರು ಕರ್ನಾಟಕದ ನಾಯಕರಿಗೆ ಸೂಚನೆ ನೀಡಿದ್ದಾರೆ.   ಭ್ರಷ್ಟಾಚಾರ, ಶೇ 40 ಕಮಿಷನ್ ಆರೋಪ, ನೇಮಕಾತಿ ಹಗರಣ, ಪ್ರವಾಹ ಪರಿಸ್ಥಿತಿ ನಿರ್ವಹಣೆಯಲ್ಲಿನ ವೈಫಲ್ಯ, ದುರಾಡಳಿತ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟು ಕೊಂಡು ರಾಜ್ಯ ನಾಯಕರು ಆಡಳಿತಾರೂಢ ಬಿಜೆಪಿ ಮೇಲೆ ವಾಗ್ದಾಳಿ ನಡೆಸುತ್ತಿದ್ದು, ಇದನ್ನು ಮುಂದುವರಿಸುವಂತೆ …

Read More »

ಮಂಗಳೂರು ಸ್ಫೋಟಕ್ಕೂ ಪ್ರೇಮರಾಜ್‌ಗೂ ಸಂಬಂಧವಿಲ್ಲ: ಡಿಜಿಪಿ

ಮಂಗಳೂರು: ನಗರದ ಗರೋಡಿಯಲ್ಲಿ ಆಟೊರಿಕ್ಷಾದಲ್ಲಿ ಶನಿವಾರ ಸಂಜೆ ಸಂಭವಿಸಿದ ಸ್ಪೋಟ ಪ್ರಕರಣಕ್ಕೂ ಪ್ರೇಮರಾಜ್‌ಗೂ ಸಂಬಂಧವಿಲ್ಲ ಎಂದು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಭಾನುವಾರ ಟ್ವೀಟ್‌ ಮಾಡಿರುವ ಅವರು, ‘ಪ್ರೇಮರಾಜ್‌ ದಾಖಲೆಗಳು ಕಳವಾಗಿದ್ದವು. ಅವರಿಗೂ ಈ ಸ್ಫೋಟ ಪ್ರಕರಣಕ್ಕೂ ಸಂಬಂಧ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಕೃತ್ಯದ ಸ್ಥಳದಲ್ಲಿ ಪ್ರೇಮರಾಜ್‌ ಹುಟಗಿ ಅವರ ಆಧಾರ್‌ ಕಾರ್ಡ್‌ ಪತ್ತೆಯಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಬಿತ್ತಿರಿಸಿದ್ದವು. ಸ್ಫೋಟ ಸಂಭವಿಸುವಾಗ …

Read More »

ವಿದ್ಯಾರ್ಥಿಗಳಿಗೆ ಸಂವಹನ ಕಲೆ ಮುಖ್ಯ: ಕತ್ತಿ

ಹುಕ್ಕೇರಿ: ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಜಾಣರಿದ್ದರೂ, ಆ ಜಾಣತನವನ್ನು ಬಿಂಬಿಸುವ ಸಂವಹನ ಕಲೆಯ ಕೊರತೆಯಿಂದ ಉದ್ಯೋಗಾವಕಾಶ ಕಳೆದುಕೊಳ್ಳುತ್ತಿದ್ದಾರೆಂದು ಮಾಜಿ ಸಂಸದರು ಹಾಗೂ ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ರಮೇಶ ಕತ್ತಿ ಅಸಮಾಧಾನ ವ್ಯಕ್ತಪಡಿಸಿದರು.   ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2022-23 ನೇ ಶೈಕ್ಷಣಿಕ ಸಾಲಿನ ವಿವಿಧ ಸಂಘಗಳ ಕಾರ್ಯ ಚಟುವಟಿಕೆ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕನ್ನಡದ ಜತೆ ಇಂಗ್ಲಿಷ್‌ ಕಲಿಯಬೇಕು. ಶಿಕ್ಷಣ ಪಡೆದು ಇನ್ನೊಬ್ಬರ ಕೈಯಲ್ಲಿ ನೌಕರಿ ಮಾಡುವ …

Read More »

ನವಿಲುತೀರ್ಥ ಜಲಾಶಯ: ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಪಟ್ನಾಳ ಗ್ರಾಮದಲ್ಲಿ ಗೃಹಿಣಿಯೊಬ್ಬರು ತಮ್ಮ ಇಬ್ಬರು ಮಕ್ಕಳನ್ನು ನವಿಲುತೀರ್ಥ ಜಲಾಶಯದ ಹಿನ್ನೀರಿನಲ್ಲಿ ಮುಳುಗಿಸಿ ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮದುರ್ಗ ತಾಲ್ಲೂಕಿನ ಚುಂಚನೂರು ಗ್ರಾಮದ ಶಶಿಕಲಾ ಉರೂಫ್‌ ತನುಜಾ ಪರಸಪ್ಪ ಗೋಡಿ (32) ಮಕ್ಕಳಾದ ಸುದೀಪ (4) ರಾಧಿಕಾ (3) ಸಾವಿಗೀಡಾದವರು.   ಗೃಹಿಣಿ ಗುರುವಾರ ರಾತ್ರಿ ತಮ್ಮ ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳಗಿಸಿ ಕೊಲೆ ಮಾಡಿದರು. ಬಳಿಕ ತಾವೂ ನೀರಿಗೆ ಹಾರಿದರು. ಕುಟುಂಬದವರು ರಾತ್ರಿಯಿಡೀ …

Read More »

ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್… ಸರ್ವೋತ್ತಮ ಜಾರಕಿಹೊಳಿ

ಗೋಕಾಕ: ಜನರ ಆಶೀರ್ವಾದವೇ ನಮ್ಮ ಕುಟುಂಬಕ್ಕೆ ಶ್ರೀರಕ್ಷೆಯಾಗಿದೆ. ಕಳೆದ ನಾಲ್ಕು ದಶಕಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿರುವ ನಮ್ಮ ಕುಟುಂಬಕ್ಕೆ ಎಲ್ಲ ರೀತಿಯ ಸಹಕಾರ ಹಾಗೂ ಬೆಂಬಲ ನೀಡುತ್ತಿರುವ ಜನರೇ ನಮ್ಮ ಕುಟುಂಬಕ್ಕೆ ಬ್ರ್ಯಾಂಡ್ ಆಗಿದ್ದಾರೆಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಮಹಾಲಕ್ಷ್ಮೀ ದೇವಸ್ಥಾನದ ಸಭಾ ಭವನದಲ್ಲಿ ನಡೆದ ತಮ್ಮ 23ನೇ ಹುಟ್ಟು ಹಬ್ಬದ ಸಮಾರಂಭದಲ್ಲಿ ಅಭಿಮಾನಿಗಳಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಜನರ ಪ್ರೀತಿ ವಿಶ್ವಾಸಕ್ಕೆ …

Read More »

ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲಾಧಾರಿಗಳಿಗೆ ಅಚ್ಚುಕಟ್ಟಿನ ವ್ಯವಸ್ಥೆ: ಶಶಿಕಲಾ ಜೊಲ್ಲೆ

ಕೊಪ್ಪಳ: ಐತಿಹಾಸಿಕ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಡಿಸೆಂಬರ್‌ 5 ರಂದು 2 ಲಕ್ಷದಷ್ಟು ಹನುಮ ಮಾಲಾಧಾರಿಗಳು ಆಗಮಿಸುವ ನಿರೀಕ್ಷೆಯಿದ್ದು, ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಚ್ಚುಕಟ್ಟಿನ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ ಇಲಾಖೆ ಕಲ್ಪಿಸುವತ್ತ ಕ್ರಮ ವಹಿಸುವಂತೆ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ಸೂಚನೆ ನೀಡಿದರು.   ಇಂದು ಕೊಪ್ಪಳದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲೆಯ ಪ್ರಮುಖ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ …

Read More »