Breaking News

ರಾಷ್ಟ್ರೀಯ

ಮುರುಘಾ ಶರಣರ ಜಾಮೀನು ಅರ್ಜಿ ಸೆಷನ್ಸ್‌ ಕೋರ್ಟ್‌ಗೆ?

ಬೆಂಗಳೂರು: ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮಂಗಳವಾರಕ್ಕೆ (ಡಿ.13) ಮುಂದೂಡಿದೆ.   ಈ ಸಂಬಂಧ ಶಿವಮೂರ್ತಿ ಶರಣರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ …

Read More »

ಮಧ್ಯಾಹ್ನದ ‘ಬಿಸಿಯೂಟ’ ವೇಳಾಪಟ್ಟಿಯಲ್ಲಿ ಮಹತ್ವದ ಮಾರ್ಪಾಡು; ಇಲ್ಲಿದೆ ವಿವರ

ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ವೇಳಾಪಟ್ಟಿಯಲ್ಲಿ ಮಹತ್ವದ ಮಾರ್ಪಾಡು ಮಾಡಲಾಗಿದ್ದು, ಇದರ ವಿವರ ಇಲ್ಲಿದೆ. ಏಕಕಾಲದಲ್ಲಿ ಮಕ್ಕಳ ದಟ್ಟಣೆ ಆಗುವುದನ್ನು ತಡೆಗಟ್ಟುವ ಸಲುವಾಗಿ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸಮಯವನ್ನು ನಿಗದಿಪಡಿಸಲಾಗಿದೆ.   ಈ ವೇಳಾಪಟ್ಟಿ ಅನ್ವಯ 1ರಿಂದ 5ನೇ ತರಗತಿ ವಿದ್ಯಾರ್ಥಿಗಳು ಮಧ್ಯಾಹ್ನ 1 ಗಂಟೆಯಿಂದ 1.45 ರ ವರೆಗೆ ಬಿಸಿಯೂಟ ಸ್ವೀಕರಿಸಲಿದ್ದರೆ, 6 ರಿಂದ 10 ನೇ …

Read More »

ಗ್ರ್ಯಾಂಡ್‌ ಫೈನಲ್‌ಗಿಂತ ಸೆಮಿಫೈನಲೇ ಹೆಚ್ಚು ರೋಚಕ

2023 ವಿಧಾನಸಭೆ ಚುನಾವಣೆಗಳ ವರ್ಷ. 2024ರ ಮಹಾ ಚುನಾವಣೆಗೆ ಇದು ಸೆಮಿಫೈನಲ್‌. ಇದೇ ಹೆಚ್ಚು ರೋಚಕವಾಗಿದೆ. ಬಿಜೆಪಿಯ ತ್ರಿಮೂರ್ತಿಗಳು ಹಾಗೂ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಸೆಮಿಫೈನಲ್‌ ಮಹಾ ಸವಾಲು. ಕೈಯಲ್ಲಿದ್ದ ಪಕ್ಷಿಗಳನ್ನು ಉಳಿಸಿಕೊಂಡೇ ಮತ್ತಷ್ಟು ಹಕ್ಕಿಗಳಿಗೆ ಪಂಜರ ಹೊಂದಿಸಬೇಕಾದ ಅನಿವಾರ್ಯತೆ. ಖರ್ಗೆಯವರಿಗಂತೂ ತಮ್ಮ ತವರಿನಲ್ಲೇ ವಿಜಯ ಧ್ವಜ ನೆಡುವಂಥ ಬೆಟ್ಟದಂಥ ಸವಾಲಿದೆ. ದಿಲ್ಲಿಯ ಕಡೆಗಿನ ಈ ಪಯಣದಲ್ಲಿ ಎಷ್ಟು ದೂರದವರೆಗೆ ಗುಜರಾತ್‌ ಮತ್ತು ಹಿಮಾಚಲ …

Read More »

ರಾಜ್ಯ ವಿಧಾನಸಭೆ ಚುನಾವಣಾ ವಿಶ್ಲೇಷಣೆ: ಕಾಂಗ್ರೆಸ್ ಪಕ್ಷಕ್ಕೆ 55-60 ಸ್ಥಾನ ಖಚಿತ; ಬಿಜೆಪಿ 70-75 ಕ್ಷೇತ್ರ ಗೆಲ್ಲಲು ಶಕ್ತ; 15-20ಕ್ಕೆ ಜೆಡಿಎಸ್ ತೃಪ್ತ!

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷದ ಕನಸು ನನಸಾಗುವುದಿಲ್ಲ. ಏಕೆಂದರೆ ಕಾಂಗ್ರೆಸ್ ಕೇವಲ 55 ರಿಂದ 60 ಕ್ಷೇತ್ರಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯ ಎಂದು ವಿಶ್ಲೇಷಣೆ ತಿಳಿಸಿದೆ. ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷದ ಕನಸು ನನಸಾಗುವುದಿಲ್ಲ. ಏಕೆಂದರೆ ಕಾಂಗ್ರೆಸ್ ಕೇವಲ 55 ರಿಂದ 60 ಕ್ಷೇತ್ರಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯ …

Read More »

ರಸ್ತೆಗೆ ಇಳಿದು ಸಂಚಾರ ಸೇವೆ ಸಲ್ಲಿಸಬೇಕಿದ್ದ ಬಸ್ಸುಗಳು ಈಗ ಡಿಪೋದಲ್ಲಿಯೇ ನಿಂತು ಪ್ರಯಾಣಿಕ ಪರದಾಡುತ್ತಿದ್ದಾರೆ.

ಅದು ಉತ್ತರ ಕರ್ನಾಟಕದ ಜನರಿಗೆ ಜೀವನಾಡಿ ಆಗಬೇಕಿದ್ದ ಸಾರಿಗೆ ಸಂಸ್ಥೆ. ಆದರೆ ಒಂದಿಲ್ಲೊಂದು ರೀತಿಯಲ್ಲಿ ಜನರ ಜೀವ ಹಿಂಡಲು ಮುಂದಾಗಿದೆ. ದಿನದಿಂದ ದಿನಕ್ಕೆ ಜನದಟ್ಟಣೆ, ಜನರ ಸಂಚಾರ ಹೆಚ್ಚಾಗುತ್ತಿದೆ. ಜನರಿಗೆ ಅವಶ್ಯಕ ಇರುವ ಸಂದರ್ಭದಲ್ಲಿಯೇ ಸಾರಿಗೆ ಸಂಸ್ಥೆ ಬೇರೆ ಬೇರೆ ನೆಪವೊಡ್ಡಿ ಆಟ ಆಡುತ್ತಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ದಿನದಿಂದ ದಿನಕ್ಕೆ ಒಂದಿಲ್ಲೊಂದು ರೀತಿಯಲ್ಲಿ ಸಮಸ್ಯೆ ಸುಳಿಯಲ್ಲಿ ಸಿಲುಕಿಕೊಳ್ಳುವುದು ಮಾತ್ರವಲ್ಲದೆ ಜನಜೀವನದ ಜೊತೆಗೆ ಆಟವಾಡುತ್ತಿದೆ. ರಸ್ತೆಗೆ ಇಳಿದು …

Read More »

ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದಿಂದ ಯಡವಟ್ಟು, ಬಿಕಾಂ ವಿದ್ಯಾರ್ಥಿಗಳಿಗೆ ಆಪತ್ತು

ಧಾರವಾಡ, ಡಿಸೆಂಬರ್‌, 09: ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸದಾ ಒಂದಿಲ್ಲೊಂದು ಯಡವಟ್ಟು ಆಗುತ್ತಲೇ ಇರುತ್ತದೆ. ಇದೀಗ ಯುಜಿ ಪರೀಕ್ಷೆಯ ಅಂಕಪಟ್ಟಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ದೊಡ್ಡ ಯಡವಟ್ಟು ಮಾಡಿಕೊಂಡಿದೆ. ಬಿಕಾಂ ಕೋರ್ಸ್‌ನ ಅಂತಿಮ ವರ್ಷದ ಪರೀಕ್ಷಾ ಫಲಿತಾಂಶದ ಅಂಕಪಟ್ಟಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಯಡವಟ್ಟು ಮಾಡಿಕೊಂಡಿದ್ದು, ಇದೀಗ ಅದನ್ನು ಸರಿಪಡಿಸಿಕೊಳ್ಳಲು ಮುಂದಾಗಿದೆ.   ಕೋರ್ಸ್‌ ವಿಷಯ ಅಲ್ಲದ ಅಂಕಗಳ ಸೇರ್ಪಡೆ ಬಿಕಾಂ ವಿದ್ಯಾರ್ಥಿಗಳ ಅಂತಿಮ ವರ್ಷದ ಒಟ್ಟಾರೆ ಪರೀಕ್ಷಾ ಫಲಿತಾಂಶಕ್ಕೆ ಕೋರ್ಸ್‌ …

Read More »

ಬೆಟ್ಟ ಕುರುಬರಿಗೆ ಎಸ್‌ಟಿ ಸ್ಥಾನ; ಲೋಕಸಭೆಯಲ್ಲಿ ಮಸೂದೆ ಮಂಡನೆ

ಹೊಸದಿಲ್ಲಿ: ಕರ್ನಾಟಕದ ಮೈಸೂರು, ಚಾಮರಾಜನಗರ, ಕೊಡಗು ಸುತ್ತಲಿನ ಪ್ರದೇಶಗಳಲ್ಲಿ ವಾಸವಿರುವ ಬೆಟ್ಟ ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡುವ ಪರಿಷ್ಕೃತ ಎಸ್‌ಟಿ ಪಟ್ಟಿಯನ್ನು ಲೋಕಸಭೆಯಲ್ಲಿ ಕೇಂದ್ರ ಸರಕಾರ ಶುಕ್ರವಾರ ಮಂಡಿಸಿದೆ.   ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಸಂವಿಧಾನ (ಪರಿಶಿಷ್ಟ ಪಂಗಡ) ಆದೇಶ, 1950ಕ್ಕೆ ತಿದ್ದುಪಡಿ ತರುವ ಮಸೂದೆ ಯನ್ನು ಮಂಡಿಸಿದ್ದಾರೆ. ಇದರಲ್ಲಿ ಈಗಾಗಲೇ ಎಸ್‌ಟಿ ಪಟ್ಟಿಯಲ್ಲಿರುವ ಕರ್ನಾಟಕದ ಕಾಡು ಕುರುಬರೇ ಬೆಟ್ಟ ಕುರುಬರು ಎಂಬುದನ್ನು ಸೇರಿಸಲಾಗಿದೆ. …

Read More »

ಕೇಂದ್ರದಿಂದ ಸಿಹಿ ಸುದ್ದಿ: 50 ಸಾವಿರ ರೂ. ಸಾಲ ಸೌಲಭ್ಯದ ಪಿಎಂ ಸ್ವನಿಧಿ ಯೋಜನೆ 2 ವರ್ಷ ವಿಸ್ತರಣೆ

ನವದೆಹಲಿ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯನ್ನು 2024ರ ಡಿಸೆಂಬರ್ ವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಹರ್ ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಸಂಸದರೊಬ್ಬರ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ ಸಚಿವರು, ಬೀದಿ ಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ರೂಪಿಸಿದ ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಎರಡು ವರ್ಷ ವಿಸ್ತರಿಸಲಾಗಿದೆ ಎಂದರು.   ಬೀದಿ ಬದಿ ವ್ಯಾಪಾರಿಗಳನ್ನು ಸ್ವಾವಲಂಬಿಗೊಳಿಸುವ …

Read More »

ವಿಜಯ್ ದೇವರಕೊಂಡ ಮನೆಯಲ್ಲಿ ಜಾಹ್ನವಿ..!

ವಿಜಯ್ ದೇವರಕೊಂಡ ಹೆಸರಿನ ಜೊತೆ ಯಾವಾಗಲೂ ಒಂದಲ್ಲ ಒಂದು ನಟಿಯರ ಹೆಸರು ತಳುಕು ಹಾಕಿಕೊಂಡೇ ಇರುತ್ತದೆ. ಅದ್ಯಾಕೋ ಗೊತ್ತಿಲ್ಲ. ಯಾವುದೇ ಹೊಸ ನಟಿಯ ಜೊತೆ ಸಿನಿಮಾ ಮಾಡಿದರೂ ಇಬ್ಬರು ಡೇಟಿಂಗ್ ನಲ್ಲಿ ಇದ್ದಾರಾ ಅನ್ನೋ ಗಾಸಿಪ್ ಬಂದೇ ಬರುತ್ತದೆ. ಇತ್ತೀಚೆಗಷ್ಟೆ ರಶ್ಮಿಕಾ ಮಂದಣ್ಣ ಜೊತೆ ಡೇಟಿಂಗ್ ನಲ್ಲಿ ಇದ್ದಾರಾ ಅನ್ನೋ ಗಾಸಿಪ್ ಬೆನ್ನಲ್ಲೇ ಮತ್ತೊಂದು ಬೆಳವಣಿಗೆ ಇದೀಗ ಆಗಿದೆ.   ಹೌದು, ಬಾಲಿವುಡ್ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ …

Read More »

ಹೆಚ್. ವಿಶ್ವನಾಥ್ – ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಕುತೂಹಲ ಕೆರಳಿಸಿದೆ ‘ಬಾಂಬೆ ಬಾಯ್ಸ್’ ನಡೆ.!

ಜೆಡಿಎಸ್ – ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾಗಿದ್ದ ‘ಬಾಂಬೆ ಬಾಯ್ಸ್’ ಈಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಪೈಕಿ ಬಹುತೇಕರು ಮಂತ್ರಿಯಾಗಿದ್ದು, ಹೆಚ್. ವಿಶ್ವನಾಥ್ ಅವರಿಗೆ ಅವಕಾಶ ಸಿಕ್ಕಿಲ್ಲ. ವಿಧಾನಸಭಾ ಚುನಾವಣೆಗೆ ಇನ್ನು ಐದಾರು ತಿಂಗಳು ಬಾಕಿ ಇದ್ದು, ರಾಜ್ಯ ರಾಜಕಾರಣದಲ್ಲಿ ಕೆಲವೊಂದು ಬದಲಾವಣೆಗಳಾಗುತ್ತಿವೆ.   ಇದರ ಮಧ್ಯೆ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಅಚ್ಚರಿ …

Read More »