Breaking News

ರಾಷ್ಟ್ರೀಯ

ಭಾರತ್ ಜೋಡೋ: ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ ಆದಿತ್ಯ ಠಾಕ್ರೆ

ಹಿಂಗೋಲಿ: ನೆರೆಯ ನಾಂದೇಡ್ ಜಿಲ್ಲೆಯಿಂದ ಆಗಮಿಸಿದ ಕಾಂಗ್ರೆಸ್‌ನ ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ ಅವರು ಶುಕ್ರವಾರ ಪಾಲ್ಗೊಂಡಿದ್ದಾರೆ. ಹಿಂಗೋಲಿಯ ಕಳಮ್ನೂರಿನಲ್ಲಿ ಯಾತ್ರೆಗೆ ಸೇರ್ಪಡೆಗೊಂಡ ಆದಿತ್ಯ ಅವರು ರಾಹುಲ್ ಗಾಂಧಿ ಅವರೊಂದಿಗೆ ಪಾದಯಾತ್ರೆ ನಡೆಸಿದರು. ಆದಿತ್ಯ ಠಾಕ್ರೆ ಅವರನ್ನು ಪಕ್ಷದ ಸಹೋದ್ಯೋಗಿಗಳಾದ ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಅಂಬಾದಾಸ್ ದಾನ್ವೆ ಮತ್ತು ಮಾಜಿ ಶಾಸಕ ಸಚಿನ್ …

Read More »

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಒಟ್ಟು 6ಅಪರಾಧಿಗಳನ್ನು ಸುಪ್ರೀಂಕೋರ್ಟ್ ಬಿಡುಗಡೆ ಮಾಡಿ ಆದೇಶ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಒಟ್ಟು ೬ ಅಪರಾಧಿಗಳನ್ನು ಸುಪ್ರೀಂಕೋರ್ಟ್ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಮೇ ೨೧, ೧೯೯೧ ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕೊಲೆ ಪ್ರಕರಣದಕ್ಕೆ ಸಂಬಂಧಿಸಿದಂತೆ ಅವರನ್ನು ಬಿಡುಗಡೆ ಮಾಡಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಒಂದು ವೇಳೆ ರಾಜ್ಯಪಾಲರು ದೀರ್ಘಕಾಲದಿಂದ ಕ್ರಮಕೈಗೊಳ್ಳದಿದ್ದರೆ ನಾವು ತೆಗೆದುಕೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿದೆ. ಈ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಪೆರಾರಿವಾಲನ್ ಬಿಡುಗಡೆ ಆದೇಶವು …

Read More »

ಕರ್ನಾಟಕವನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಬೆಂಗಳೂರು: ಕೆಂಪೇಗೌಡರು ಹೇಗೆ ಕಲ್ಪನೆ ಮಾಡಿದ್ದರೋ ಹಾಗೆ ಬೆಂಗಳೂರಿನ ಅಭಿವೃದ್ಧಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ. ಕರ್ನಾಟಕವು ಡಬಲ್ ಇಂಜಿನ್ ಬಲದಲ್ಲಿ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ವಂದೇ ಭಾರತ್ ರೈಲು, ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ಮಿನಲ್ ಉದ್ಘಾಟನೆ ಮತ್ತು ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ”ಕರ್ನಾಟಕ ಸಮಸ್ತ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು.” ಎಂದು ಕನ್ನಡದಲ್ಲಿ ಮಾತು ಆರಂಭಿಸಿದರು. …

Read More »

ಒಂದು ವೇಳೆ ಟಿಪ್ಪುಸುಲ್ತಾನ್ ಪುತ್ಥಳಿ ನಿರ್ಮಾಣ ಮಾಡಿದರೆ ಬಾಬರಿ ಮಸೀದಿ ರೀತಿಯಲ್ಲಿ ಒಡೆದು‌ ಹಾಕುತ್ತೇವೆ

ಮೈಸೂರಿನಲ್ಲಿ ಟಿಪ್ಪುಸುಲ್ತಾನ್ ಪುತ್ಥಳಿ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಒಂದು ವೇಳೆ ನಿರ್ಮಾಣ ಮಾಡಿದರೆ ಬಾಬರಿ ಮಸೀದಿ ರೀತಿಯಲ್ಲಿ ಒಡೆದು‌ ಹಾಕುತ್ತೇವೆ ಎಂದು ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ ಗುಡುಗಿದರು. ಇಲ್ಲಿನ ಈದ್ಗಾ ಮೈದಾನದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಶಾಸಕ ತನ್ವೀರ್ ಶೇಟ್ ಟಿಪ್ಪು ಪುತ್ಥಳಿ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ. ಅದಕ್ಕೆ ಅವಕಾಶ ನೀಡಬಾರದು. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ …

Read More »

ಪಾಶ್ಚಾಪೂರ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೋಳಿಯವರ ಹೇಳಿಕೆಯನ್ನು ಸಮರ್ಥಿಸಿ ಭಾರತಿಯ ಜನತಾ ಪಕ್ಷದ ವಿರುದ್ಧ ಕಿಡಿಕಾರಿ ಪ್ರತಿಭಟನೆ

ಹುಕ್ಕೇರಿ ತಾಲೂಕಿನ ಪಾಶ್ಚಾಪೂರ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೋಳಿಯವರ ಹೇಳಿಕೆಯನ್ನು ಸಮರ್ಥಿಸಿ ಭಾರತಿಯ ಜನತಾ ಪಕ್ಷದ ವಿರುದ್ಧ ಕಿಡಿಕಾರಿ ಪ್ರತಿಭಟನೆ ಜರುಗಿಸಿದ ಕಾಂಗ್ರೆಸ್ ಕಾರ್ಯಕರ್ತರು. ಪಟ್ಟಣದ ಬಸ್ ನಿಲ್ದಾಣ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ರಾಜ್ಯ ಸರ್ಕಾರ ವಿರುದ್ದ ಘೋಷಣೆ ಕೂಗಿ ಶಾಸಕ ಸತೀಶ ಜಾರಕಿಹೋಳಿ ಯವರ ಹೇಳಿಕೆಯನ್ನು ಸಮರ್ಥಿಸಿಕೊಂಡರು. ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಮಾಜಿ ಜಿಲ್ಲಾ ಚಾಯತ ಸದಸ್ಯ ಮಂಜುನಾಥ ಪಾಟೀಲ ನಿಪ್ಪಾಣಿಯಲ್ಲಿ ಜರುಗಿದ ಬುದ್ದ …

Read More »

ಸಚಿವ ಸಂಪುಟ ಸೇರಲು ಶಾಸಕರು ಹಿಂದೇಟು

ಬೆಂಗಳೂರು,ನ.9- ಸಾಮಾನ್ಯವಾಗಿ ಸಚಿವ ಸಂಪುಟ ಸೇರ್ಪಡೆಯಾಗಲು ಅನೇಕರು ತುದಿಗಾಲಲ್ಲಿ ನಿಂತಿರುತ್ತಾರೆ. ಇನ್ನು ಕೆಲವರು ತಮ್ಮ ತಮ್ಮ ಗಾಡ್ ಫಾದರ್ ಗಳ ಮೂಲಕ ಒತ್ತಡದ ತಂತ್ರ ಅನುಸರಿಸುತ್ತಾರೆ. ಆದರೆ ಇದಕ್ಕೆ ವ್ಯತಿರಿಕ್ತ ಎನ್ನುವಂತೆ ಕರೆದು ಕೊಡುತ್ತೇನೆ ಎಂದರೂ ಪ್ರಸ್ತುತ ಬಿಜೆಪಿಯಲ್ಲಿ ಸಚಿವ ಸ್ಥಾನ ಯಾರಿಗೂ ಬೇಡವಾಗಿದೆ.   ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗಿನಿಂದಲೂ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಆಕಾಂಕ್ಷಿಗಳು ನಿರಂತರ ಒತ್ತಡ ಹೇರುತ್ತಲೇ ಬಂದಿದ್ದರು. ಹಲವಾರು ಕಾರಣಗಳಿಂದ ಬಿಜೆಪಿ ವರಿಷ್ಠರು …

Read More »

ಕುತೂಹಲ ಕೆರಳಿಸಿದೆ ಬಾಲಚಂದ್ರ ಜಾರಕಿಹೊಳಿ- ಹೆಚ್ಡಿಕೆ ಮಾತುಕತೆ

ಬೆಂಗಳೂರು,ನ.9- ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಆಡಳಿತಾರೂಢ ಬಿಜೆಪಿಯ ಶಾಸಕ ಬಾಲಚಂದ್ರ ಜಾರಕೊಹೊಳಿ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ.   KMF ಅಧ್ಯಕ್ಷರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಕುಮಾರಸ್ವಾಮಿ ಅವರು ಈಗಾಗಲೇ ಎರಡು-ಮೂರು ಸುತ್ತಿನ ಮಾತುಕತೆ ನಡೆಸಿದ್ದು, ಯಾವ ರಾಜಕೀಯ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದು ಇನ್ನೂ ನಿಗೂಢವಾಗಿ ಉಳಿದಿದೆ. ಬಾಲಚಂದ್ರ ಜಾರಕಿಹೊಳಿ ಮರಳಿ ಜೆಡಿಎಸ್‍ಗೆ ಬರುತ್ತಾರೆಯೇ ಅಥವಾ ಬಿಜೆಪಿಯಲ್ಲೆ ಉಳಿಯಲಿದ್ದಾರೆಯೇ …

Read More »

ಭಾರೀ ಕುತೂಹಲ ಕೆರಳಿಸಿದೆ. ಬಾಲಚಂದ್ರ ಜಾರಕೊಹೊಳಿ ಮತ್ತು ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ

ಬೆಂಗಳೂರು,ನ.9- ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಆಡಳಿತಾರೂಢ ಬಿಜೆಪಿಯ ಶಾಸಕ ಬಾಲಚಂದ್ರ ಜಾರಕೊಹೊಳಿ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ.   KMF ಅಧ್ಯಕ್ಷರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಕುಮಾರಸ್ವಾಮಿ ಅವರು ಈಗಾಗಲೇ ಎರಡು-ಮೂರು ಸುತ್ತಿನ ಮಾತುಕತೆ ನಡೆಸಿದ್ದು, ಯಾವ ರಾಜಕೀಯ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದು ಇನ್ನೂ ನಿಗೂಢವಾಗಿ ಉಳಿದಿದೆ. ಬಾಲಚಂದ್ರ ಜಾರಕಿಹೊಳಿ ಮರಳಿ ಜೆಡಿಎಸ್‍ಗೆ ಬರುತ್ತಾರೆಯೇ ಅಥವಾ ಬಿಜೆಪಿಯಲ್ಲೆ ಉಳಿಯಲಿದ್ದಾರೆಯೇ …

Read More »

ಕಾಂಗ್ರೆಸ್‌ನ ‘ಭಾರತ್‌ ಜೋಡೊ ಯಾತ್ರೆ’ಯಲ್ಲಿ ಶರದ್ ಪವಾರ್, ಆದಿತ್ಯ ಠಾಕ್ರೆ ಭಾಗಿ

ಮುಂಬೈ: ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ನೇತೃತ್ವದ ‘ಭಾರತ್‌ ಜೋಡೊ ಯಾತ್ರೆ’ಯಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಹಾಗೂ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಭಾಗಿಯಾಗಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಅಶೋಕ್‌ ಚವಾಣ್‌ ಮಾಹಿತಿ ನೀಡಿದ್ದಾರೆ.   ನವೆಂಬರ್‌ 11 ರಂದು ಈ ಇಬ್ಬರು ಭಾರತ್‌ ಜೋಡೊ ಯಾತ್ರೆಯಲ್ಲಿ ಪಾಲು ಪಡೆಯಲಿದ್ದಾರೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿಯ ಜಯಂತ್‌ ಪಾಟೀಲ್‌, ಸಂಸದೆ ಸುಪ್ರಿಯಾ ಸುಳೆ ಹಾಗೂ …

Read More »

ನ.20 ರಿಂದ ನ.28 ರವರೆಗೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಗೋವಾದ ಪಣಜಿಯಲ್ಲಿ ನಡೆಯಲಿದೆ.

ಪಣಜಿ: ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು ನವೆಂಬರ್ 20 ರಿಂದ ನವೆಂಬರ್ 28 ರವರೆಗೆ ಗೋವಾದ ಪಣಜಿಯಲ್ಲಿ ನಡೆಯಲಿದೆ. ಅಂತರಾಷ್ಟ್ರೀಯ ಸ್ಪರ್ಧಾತ್ಮಕ ವಿಭಾಗದಲ್ಲಿ 15 ಚಲನಚಿತ್ರಗಳು ಪ್ರತಿಷ್ಠಿತ ಸುವರ್ಣ ಮಯೂರ್ ಪ್ರಶಸ್ತಿ ಸ್ಫರ್ಧೆಯಲ್ಲಿದೆ. ಅಂತರಾಷ್ಟ್ರೀಯ ಚಲನಚಿತ್ರೋತ್ಸವವು ಆಸ್ಟ್ರಿಯನ್ ನಿರ್ದೇಶಕ ಡೈಟರ್ ಬರ್ನರ್ ಅವರ ಚಲನಚಿತ್ರದೊಂದಿಗೆ ಪ್ರಾರಂಭವಾಗಲಿದೆ. ಅಂತರಾಷ್ಟ್ರೀಯ ಚಲನಚಿತ್ರೋತ್ಸವು ಆಸ್ಟ್ರಿಯಾದ ನಿರ್ದೇಶಕ ಡೈಟರ್ ಬರ್ನರ್ ಅವರ ‘ಅಲ್ಮಾ ಮತ್ತು ಆಸ್ಕರ್’ ಚಿತ್ರದೊಂದಿಗೆ ಪ್ರಾರಂಭವಾಗಲಿದೆ. ಗೋಲ್ಡನ್ ಪೀಕಾಕ್ ಪ್ರಶಸ್ತಿಗೆ ವಿಜೇತರನ್ನು ಆಯ್ಕೆ ಮಾಡುವ ಜ್ಯೂರಿಯಲ್ಲಿ …

Read More »