ಅನೇಕಲ್, ಮಾರ್ಚ್ 16: ಬೆಂಗಳೂರು ಹೊರವಲಯ ಆನೇಕಲ್ (Anekal) ತಾಲ್ಲೂಕಿನ ಸರ್ಜಾಪುರ (Sarjapur) ಬಾಗಲೂರು ರಸ್ತೆಯ ಪೋರ್ ವಾಲ್ಸ್ ಅವೆನ್ಯೂ ಹೆಸರಿನ ನಿರ್ಮಾಣ ಹಂತದ ಅಪಾರ್ಟ್ಮೆಂಟ್ನಲ್ಲಿ ಮೂವರ ಬರ್ಬರ ಹತ್ಯೆಯಾಗಿದೆ. ಬಿಹಾರ (Bihar) ಮೂಲದ ಅನ್ಸು (19), ರಾಧೆಶ್ಯಾಮ್ (20), ದೀಪು (22), ಮೃತಪಟ್ಟರು. ಹೋಳಿ ಹಬ್ಬದ ಅಂಗವಾಗಿ ಬಿಹಾರ ಮೂಲದ ಕಟ್ಟಡ ಕಾರ್ಮಿಕರಿಗೆ ರಜೆ ನೀಡಲಾಗಿತ್ತು. ಇದೇ ಖುಷಿಯಲ್ಲಿ, ದೊಡ್ಡ ಕನ್ನಲ್ಲಿ ಬಳಿಅಪಾರ್ಟ್ಮೆಂಟ್ನಲ್ಲಿ ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿದ್ದ ತಮ್ಮದೇ ಊರಿನವರನ್ನು ಆರೋಪಿ ಸೋನಾ …
Read More »ಕೆಜಿಎಫ್ನಲ್ಲಿವೆ ಸಾಕಷ್ಟು ಚಿನ್ನದ ನಿಕ್ಷೇಪಗಳು! ಸಂಶೋಧನೆಗಳಿಂದ ತಿಳಿದುಬಂತು ಅಚ್ಚರಿಯ ಅಂಶ
ಕೋಲಾರ, ಮಾರ್ಚ್ 16: ಅದು 24 ವರ್ಷಗಳ ಹಿಂದೆ, ಅಂದರೆ 2001 ಮಾರ್ಚ್ 1 ರಲ್ಲಿ ನಷ್ಟದ ನೆಪವೊಡ್ಡಿ ಕೇಂದ್ರ ಸರ್ಕಾರ ಕೋಲಾರ (Kolar) ಚಿನ್ನದ ಗಣಿಗೆ (Gold Mine) ಬೀಗ ಹಾಕಿತ್ತು. ಆದರೆ ಚಿನ್ನದ ಗಣಿಗೆ ಬೀಗ ಹಾಕುವ ಸಂದರ್ಭದಲ್ಲಿ ಚಿನ್ನದ ಗಣಿ ಕಾರ್ಮಿಕರ ವೇತನ ಬಾಕಿ, ನಿವೃತ್ತಿ ವೇತನ ಸೇರಿ 58 ಕೋಟಿ ರೂಪಾಯಿ ಬಾಕಿ ಇತ್ತು. ಹೀಗಿರುವಾಗಲೇ ಬೀದಿಗೆ ಬಿದ್ದ ಹಲವಾರು ಕಾರ್ಮಿಕ ಸಂಘಟನೆಗಳು ತಮಗಾದ ಅನ್ಯಾಯವನ್ನು ಪ್ರಶ್ನಿಸಿ ನ್ಯಾಯಾಲಯದ …
Read More »ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಅಪಹಾಸ್ಯ: ಆತ್ಮಹತ್ಯೆಗೆ ಶರಣಾದ ಪತಿ ಪರಶಿವಮೂರ್ತಿ
ಚಾಮರಾಜನಗರ, ಮಾರ್ಚ್ 16: ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿಯ (Wife) ಕಿರುಕುಳಕ್ಕೆ ಬೇಸತ್ತು ಡೆತ್ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆಗೆ (death) ಶರಣಾಗಿರುವಂತಹ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ಪರಶಿವಮೂರ್ತಿ(32) ಮೃತ ಪತಿ. ತಲೆಯಲ್ಲಿ ಕೂದಲಿಲ್ಲ ಎಂದು ಪರಶಿವಮೂರ್ತಿಗೆ ಪತ್ನಿ ಮಮತಾ ಅಪಹಾಸ್ಯ ಮಾಡುತ್ತಿದ್ದರು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಮರಾಜನಗರ ಗ್ರಾಮೀಣ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷದ ಹಿಂದೆ ಪರಶಿವಮೂರ್ತಿ ಮತ್ತು ಮಮತಾ ಮದುವೆಯಾಗಿದ್ದರು. ವೃತ್ತಿಯಲ್ಲಿ ಪರಶಿವಮೂರ್ತಿ …
Read More »75 ಕೋಟಿ ರೂಪಾಯಿಯ MDMA ವಶಕ್ಕೆ ಪಡೆದ ಮಂಗಳೂರು ಪೊಲೀಸರು
ಮಂಗಳೂರು: ಮಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 75 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ರಾಜ್ಯ ಪೊಲೀಸ್ ಇತಿಹಾಸದಲ್ಲೇ ಗರಿಷ್ಠ ಪ್ರಮಾಣದ ಮಾದಕ ವಸ್ತು ವಶಕ್ಕೆ ಪಡೆದ ಕಾರ್ಯಾಚರಣೆ ಇದಾಗಿದೆ. ಈ ಕಾರ್ಯಾಚರಣೆಯಲ್ಲಿ ದೇಶಾದ್ಯಂತ ಎಂಡಿಎಂಎ ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾದ ಮಹಿಳಾ ಪ್ರಜೆಗಳಿಬ್ಬರನ್ನು ಬಂಧಿಸಲಾಗಿದೆ. ಬೆಂಬಾ ಫೆಂಟಾ ಅಲಿಯಾಸ್ ಅಡೋನಿಸ್ (31) ಮತ್ತು ಅಬಿಗಾಲಿ ಅಡೋನಿಸ್ (30) ಬಂಧಿತರು.ಡ್ರಗ್ಸ್ ಫ್ರಿ ಮಂಗಳೂರು” ಮಾಡುವ …
Read More »ಮೃತ ಯುವತಿಯ ಮನೆಗೆ ಸಂಸದ ಬಸವರಾಜ ಬೊಮ್ಮಾಯಿ ಭೇಟಿ
ಹಾವೇರಿ : ಇದೇ ತಿಂಗಳ 3 ರಂದು ಮೂವರು ಯುವಕರಿಂದ ಕೊಲೆಯಾದ ಯುವತಿ ಸ್ವಾತಿ ಮನೆಗೆ ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಶನಿವಾರ ಭೇಟಿ ನೀಡಿದ್ದರು. ಜಿಲ್ಲೆಯ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದಲ್ಲಿರುವ ಸ್ವಾತಿ ಬ್ಯಾಡಗಿ ನಿವಾಸಕ್ಕೆ ಭೇಟಿ ನೀಡಿದ ಬೊಮ್ಮಾಯಿ ಅವರು ಸ್ವಾತಿ ತಾಯಿ ಮತ್ತು ಸಂಬಂಧಿಕರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು, ಸ್ವಾತಿ ಬ್ಯಾಡಗಿ ಹತ್ಯೆ ಆಘಾತ ಉಂಟು ಮಾಡಿದೆ. ಸ್ವಾತಿ ತಾಯಿ …
Read More »ಸಿದ್ದರಾಮಯ್ಯ ಜಾತಿ-ಜಾತಿಗಳ ಮಧ್ಯ ಜಗಳ ತಂದಿಡುವ ದುಸ್ಸಾಹಸಕ್ಕೆ ಕೈಹಾಕಿದ್ದಾರೆ : ವಿಜಯೇಂದ್ರ
ಬೆಳಗಾವಿ : ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡುವ ಮೂಲಕ ಜಾತಿ ಜಾತಿಗಳ ನಡುವೆ ಜಗಳ ಹಚ್ಚುವ, ಒಡಕು ಮೂಡಿಸುವ ದುಸ್ಸಾಹಸ ಮತ್ತು ಷಡ್ಯಂತ್ರಕ್ಕೆ ಸಿಎಂ ಸಿದ್ದರಾಮಯ್ಯ ಕೈಹಾಕಿದ್ದಾರೆ. ಮುಸ್ಲಿಂರ ಓಲೈಕೆ ದುರ್ದೈವದ ಸಂಗತಿ. ಇದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಸದನದ ಹೊರಗೆ ಮತ್ತು ಒಳಗೆ ಎರಡೂ ಕಡೆ ಇದರ ವಿರುದ್ಧ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಎಚ್ಚರಿಸಿದರು. ಇಂದು ನಗರದ ಸಾಂಬ್ರಾ ವಿಮಾನ …
Read More »ಹಾಸನದಲ್ಲಿ ದೈತ್ಯ ಒಂಟಿಸಲಗ ಅನುಮಾನಾಸ್ಪದ ಸಾವು
ಹಾಸನ : ಅರಕಲಗೂಡು ತಾಲೂಕಿನ ನೆಲಬಳ್ಳಿ ಗ್ರಾಮದಲ್ಲಿ ದೈತ್ಯಾಕಾರದ ಒಂಟಿಸಲಗವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ (ಮಾ.15) ಬೆಳಕಿಗೆ ಬಂದಿದೆ. ಸುಮಾರು 25 ವರ್ಷದ ಗಂಡಾನೆಯ ಕಳೇಬರ ರೈತರ ಜಮೀನಿನಲ್ಲಿ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ವಿದ್ಯುತ್ ಶಾಕ್ ಅಥವಾ ಗುಂಡೇಟಿನಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ರೈತರು ಬೆಳಗ್ಗೆ ತಮ್ಮ ಜಮೀನಿಗೆ ತೆರಳಿದಾಗ ಆನೆ ಕಳೇಬರ ಪತ್ತೆಯಾಗಿದೆ. ನಂತರ ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ …
Read More »ಎಂ. ಪಿ ರೇಣುಕಾಚಾರ್ಯ ಅಂಡ್ ಟೀಂ ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಮಹಾಸಂಗಮ ಸಮಾವೇಶ ನಡೆಸಲು ಪ್ಲಾನ್
ದಾವಣಗೆರೆ : ರಾಜ್ಯ ಬಿಜೆಪಿಯಲ್ಲಿ ದಿನದಿಂದ ದಿನಕ್ಕೆ ಬಣ ಬಡಿದಾಟ ಹೆಚ್ಚಾಗುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರರನ್ನು ಗುರಿಯಾಗಿಸಿಕೊಂಡು ಯತ್ನಾಳ್ ಬಣ ವಾಗ್ಬಾಣ ಬಿಡ್ತಿದೆ. ಇತ್ತ ಅದೇ ವಿಜಯೇಂದ್ರ ಹಾಗೂ ಬಿ ಎಸ್ ಯಡಿಯೂರಪ್ಪ ಅವರ ಪರವಾಗಿ ರೇಣುಕಾಚಾರ್ಯ ಅಂಡ್ ಟೀಂ ಟೊಂಕ ಕಟ್ಟಿ ನಿಂತಿದೆ. ಎಂ ಪಿ ರೇಣುಕಾಚಾರ್ಯ ಅವರ ಟೀಂ ‘ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಮಹಾಸಂಗಮ’ ಸಮಾವೇಶ ಮಾಡಲು ಪ್ಲಾನ್ ಮಾಡಿದೆ. ಬರುವ ಮೇ 15 ರ …
Read More »ದೈಹಿಕ ಹಲ್ಲೆಗೈದು ಸಹಿ ಪಡೆಯಲಾಗಿದೆ, ದಾಖಲಿಸಿರುವ ಹೇಳಿಕೆಗಳಿಗೆ ಸಮ್ಮತಿಯಿಲ್ಲ: ಡಿಆರ್ಐ ಎಡಿಜಿಗೆ ರನ್ಯಾ ರಾವ್ ಪತ್ರ
ಬೆಂಗಳೂರು : ಚಿನ್ನ ಕಳ್ಳಸಾಗಾಣಿಕೆ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಸದ್ಯ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ರನ್ಯಾ ರಾವ್ ಅವರು ಜೈಲಿನಿಂದಲೇ ಡಿಆರ್ಐ ಅಡಿಷನಲ್ ಡೈರಕ್ಟರ್ ಜನರಲ್ಗೆ ಸುದೀರ್ಘವಾದ ಮನವಿ ಪತ್ರ ಬರೆದಿದ್ದಾರೆ. ಏಳು ಅಂಶಗಳ ಕುರಿತು ಪ್ರಸ್ತಾಪಿಸಿ ರನ್ಯಾ ರಾವ್ ಬರೆದಿರುವ ಮನವಿ ಪತ್ರವನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು ಡಿಆರ್ಐ ಎಡಿಜಿಯವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ರನ್ಯಾ ರಾವ್ ಮನವಿ ಪತ್ರದಲ್ಲೇನಿದೆ ? ದುಬೈನಿಂದ ಬಂದಿಳಿದ ನನ್ನ ವಿರುದ್ಧ ಚಿನ್ನ …
Read More »ಕಾರಿನ ಮೇಲೆ ಬಿದ್ದ ಕಾಂಕ್ರೀಟ್ ಮಿಕ್ಸರ್ ವಾಹನ
ಬೆಳಗಾವಿ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ವಾಹನ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ ಎಂಬಂತೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಳಗಾವಿ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ನಡೆದಿದೆ. ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಹರಸಾಹಸಪಟ್ಟು ಕಾರಿನೊಳಗೆ ಸಿಲುಕಿದ್ದ ಇಬ್ಬರು ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಧಾರವಾಡ ಮೂಲದ ಪರಪ್ಪ ಬಾಳಿಕಾಯಿ, …
Read More »
Laxmi News 24×7