ನವದೆಹಲಿ: ಇತ್ತೀಚಿನ ಎಲೆಕ್ಟ್ರಿಕ್ ವಾಹನಗಳ ಅಗ್ನಿ ಅವಘಡ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ತಮ್ಮ ಹೊಸ ದ್ವಿಚಕ್ರ ವಾಹನಗಳ ಬಿಡುಗಡೆ ಯೋಜನೆಗಳನ್ನು ಮುಂದೂಡುವಂತೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳ ಸಭೆಯಲ್ಲಿ ಮೌಖಿಕವಾಗಿ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಯಾವುದೇ ಒಂದು ವಾಹನಕ್ಕೆ ಬೆಂಕಿ ತಗುಲಿದ ವರದಿ ಬಂದರೆ ಸಂಪೂರ್ಣ ಬ್ಯಾಚ್ನ ವಾಹನಗಳನ್ನು ಹಿಂಪಡೆದುಕೊಳ್ಳುವಂತೆ ಸೂಚಿಸಲಾಗಿದೆ. ‘ತನಿಖಾ ವರದಿಗಳ ಆಧಾರದ ಮೇಲೆ ಎಲೆಕ್ಟ್ರಿಕ್ ವಾಹನಗಳಿಗೆ ಹೊಸ ಮಾರ್ಗಸೂಚಿಗಳನ್ನು …
Read More »ಯಾರ ಮೇಲೂ ಹಿಂದಿ ಹೇರುವುದಿಲ್ಲ
ಬೆಂಗಳೂರು: ಹಿಂದಿ ವಿಚಾರವಾಗಿ ಕನ್ನಡ ನಟ ಸುದೀಪ್ ಹೇಳಿಕೆಗೆ ಟ್ವೀಟ್ ಮಾಡಿ ಅತಿರೇಕ ತೋರಿದ್ದ ಬಾಲಿವುಡ್ ನಟ ಅಜಯ್ ದೇವಗನ್ ವಿರುದ್ಧ ರಾಜಕಾರಣಿಗಳು, ಚಿತ್ರರಂಗ ಸೇರಿ ಕನ್ನಡಿಗರು ಸಿಡಿದೆದ್ದಿರುವ ಬೆನ್ನಲ್ಲೇ, ಹಿಂದಿಯನ್ನು ರಾಷ್ಟ್ರಭಾಷೆ ಎಂದು ಕಡ್ಡಾಯ ಮಾಡಿಲ್ಲ, ಹಿಂದೆ ಹೇರಿಕೆಗೆ ಯಾರ ಮೇಲೂ ಒತ್ತಡ ಹಾಕಿಲ್ಲ ಎಂದು ಕೇಂದ್ರ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಧಮೇಂದ್ರ ಪ್ರಧಾನ್ ಸ್ಪಷ್ಟನೆ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ)ಜಾರಿ ಸಂಬಂಧ ಗುರುವಾರ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನೆ …
Read More »2011 ಸಾಲಿನಲ್ಲಿ ಆಯ್ಕೆಯಾದ 30 ಅಭ್ಯರ್ಥಿಗಳಿಗೆ ತಹಶೀಲ್ದಾರ್ ಗ್ರೇಡ್ -2 ವೃಂದದ ಗ್ರೂಪ್ ಬಿ ಹುದ್ದೆಗೆ ನೇಮಕ ಮಾಡಿ ಆದೇಶ
ಬೆಂಗಳೂರು: 2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ ಆಯ್ಕೆ ಪಟ್ಟಿಯಲ್ಲಿನ 30 ಅಭ್ಯರ್ಥಿಗಳಿಗೆ ತಹಶೀಲ್ದಾರ್ ಗ್ರೇಡ್ 2 ವೃಂದದ ಗ್ರೂಪ್ ಬಿ ಹುದ್ದೆಗೆ ನೇಮಕ ಮಾಡಿ ಆದೇಶಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ ಮುಖಾಂತರ 2011ನೇ ಸಾಲಿನಲ್ಲಿ ಕಂದಾಯ ಇಲಾಖೆಯ ಕರ್ನಾಟಕ ಆಡಳಿತ ಸೇವೆಗೆ ಸೇರಿದ ಗ್ರೂಪ್ ಬಿ ವೃಂದದ ತಹಶೀಲ್ದಾರ್ ಗ್ರೂಪ್-2 ವೃಂದದ ಹುದ್ದೆಗೆ 57 ಮಂದಿ ಆಯ್ಕೆಯಾಗಿದ್ದರು. ಅಕ್ರಮದ ಹಿನ್ನೆಲೆ 2011 ಸಾಲಿನ ನೇಮಕಾತಿಯನ್ನು ಅಸಿಂಧುಗೊಳಿಸಲಾಗಿತ್ತು. ಆದರೆ 2011ನೇ ಸಾಲಿನ ಗೆಜೆಟೆಡ್ …
Read More »ಗ್ರಾ.ಪಂ. ಚುನಾವಣೆ: ವೇಳಾಪಟ್ಟಿ ಪ್ರಕಟ
ಬೆಂಗಳೂರು: ಅವಧಿ ಮುಕ್ತಾಯವಾದ ಒಂದು ಗ್ರಾಮ ಪಂಚಾಯಿತಿ ಹಾಗೂ ಕಳೆದ ಸಾರ್ವತ್ರಿಕ ಚುನಾವಣೆ ವೇಳೆ ನಾಮಪತ್ರ ಸಲ್ಲಿಕೆಯಾಗದ ಕಾರಣಕ್ಕೆ ಚುನಾವಣೆ ನಡೆಯದ 2 ಗ್ರಾಮ ಪಂಚಾಯಿತಿಗಳು ಸೇರಿದಂತೆ ವಿವಿಧ ಕಾರಣಗಳಿಗೆ ತೆರವಾಗಿದ್ದ 201 ಗ್ರಾ.ಪಂ. ಸದಸ್ಯ ಸ್ಥಾನಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಅವಧಿ ಮುಕ್ತಾಯವಾಗಿರುವ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಚಾಕಲಬ್ಬಿ ಹಾಗೂ ಹಿಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರ ಬಾರದೇ ಇರುವ ಕಾರಣಕ್ಕೆ ಚುನಾವಣೆ ನಡೆಯದ …
Read More »ಜಮೀನಲ್ಲಿ ಕೆಲಸ ಮಾಡುತ್ತಿದ್ದ ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ: ಬಿಜೆಪಿ ಮುಂಖಡನ ಹೀನ ಕೃತ್ಯ ಬಯಲು
ಗದಗ : ಗದಗ ಜಿಲ್ಲಾ ಬಿಜೆಪಿ ಅಲ್ಪ ಸಂಖ್ಯಾತರ ಮೋರ್ಚಾ ಮಂಡಳಿ ಉಪಾಧ್ಯಕ್ಷ ಸಿಕಂದರ್ ಬಾಪುನವರ್ ವಿರುದ್ಧ ಆತ್ಯಾಚಾರ ಆರೋಪ ಕೇಳಿ ಬಂದಿದೆ. ಗದಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹುಬ್ಬಳ್ಳಿಗೆ ಕರೆದೊಯ್ದು ಸಿಕಂದರ್ ಅತ್ಯಾಚಾರ ಮಾಡಿದ್ದ ಅನ್ನೋ ಆರೋಪ ಇದೆ. 42 ವರ್ಷದ ಸಿಕಂದರ್, ತಮ್ಮ ಜಮೀನಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿ ಮೇಲೆ ಆರು ತಿಂಗಳಿಂದ ನಿರಂತರ ಅತ್ಯಾಚಾರ ಮಾಡಿದ್ದಾನಂತೆ. ಮದ್ವೆಯಾಗೋದಾಗಿಯೂ ಬಾಲಕಿಗೆ ನಂಬಿಸಿದ್ದ ಎನ್ನಲಾಗಿದೆ. ತಂದೆ ತಾಯಿ ಇಲ್ಲದ …
Read More »ರಾಜ್ಯದಲ್ಲಿ ಯುಪಿ ಮಾದರಿ ಚುನಾವಣೆಗೆ ಬಿಜೆಪಿ ಸಿದ್ಧತೆ
ಬೆಂಗಳೂರು: ಇತ್ತೀಚೆಗೆ ನಡೆದ ಪಂಚ ರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಮರಳಿ ಅಧಿಕಾರ ಪಡೆದಿರುವ ಬಿಜೆಪಿ, ದಕ್ಷಿಣದ ಹೆಬ್ಟಾಗಿಲು ಕರ್ನಾಟಕದಲ್ಲೂ ಅಧಿಕಾರ ಉಳಿಸಿಕೊಳ್ಳಲು ಉತ್ತರ ಪ್ರದೇಶ ಮಾದರಿಯನ್ನು ಅಳವಡಿಸಲು ನಿರ್ಧರಿಸಿದೆ. ಅದಕ್ಕಾಗಿ ಅಭಿವೃದ್ಧಿ ಮಂತ್ರವನ್ನೇ ಮುಂದಿಟ್ಟುಕೊಂಡು “ಸೈಲೆಂಟ್ ಓಟರ್’ಗಳನ್ನು ಗಟ್ಟಿಗೊಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸಿದೆ. ರಾಜ್ಯದ ಈಗಿನ ಪರಿಸ್ಥಿತಿಯಲ್ಲಿ ಬಿಜೆಪಿ ಮೂರಂಕಿ ಮುಟ್ಟುವುದು ಕಷ್ಟ ಎಂಬ ಮಾಹಿತಿ ಪಕ್ಷದ ವರಿಷ್ಠರಿಗೆ ಲಭ್ಯವಾಗಿದ್ದು, 150 ಸ್ಥಾನಗಳ ಗುರಿ ಮುಟ್ಟಲು ಉತ್ತರ ಪ್ರದೇಶ ಮಾದರಿ ಅನುಸರಿಸಲು …
Read More »ರಾಯಚೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಸಹಿತ ಮಳೆ- ಧರೆಗುರುಳಿದ ಬೃಹತ್ ಮರ
ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ ಸುರಿದ ಆಲಿಕಲ್ಲು ಸಹಿತ ಮಳೆಯಿಂದ ಬಿಸಿಲಿಗೆ ತತ್ತರಿಸಿರುವ ಜಿಲ್ಲೆ ತಂಪಾಗಿದ್ದರು, ಬೆಳೆ ಕಟಾವು ಮಾಡಿದ್ದ ರೈತರು ಕಂಗಾಲಾಗಿದ್ದಾರೆ.ಜಿಲ್ಲೆಯ ಲಿಂಗಸುಗೂರು, ಹಟ್ಟಿ, ಮುದಗಲ್ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾರೀ ಮಳೆಯಾಗಿದೆ. ಲಿಂಗಸುಗೂರು ತಾಲೂಕಿನ ಆಮದಿಹಾಳ ಗ್ರಾಮದ ಬಳಿಯ ರಾಯಚೂರು-ಬೆಳಗಾವಿ ಹೆದ್ದಾರಿಯಲ್ಲಿ ಬೃಹತ್ ಮರ ಧರೆಗುರುಳಿದೆ. ಗಾಳಿ ಸಹಿತ ಮಳೆ ಜೋರಾಗಿದ್ದರಿಂದ ಬೃಹತ್ ಮರ ಧರೆಗುರುಳಿದೆ. ಮರ ರಸ್ತೆಗೆ ಉರುಳಿ ಬಿದ್ದಿದ್ದರಿಂದ ವಾಹನಗಳ ಸಂಚಾರ ಅಸ್ತವ್ಯಸ್ತವಾಗಿದೆ. ಇನ್ನೂ ಹಟ್ಟಿ ಪಟ್ಟಣದಲ್ಲಿ …
Read More »PSI ನೇಮಕಾತಿ ಕ್ವೀನ್ಪಿನ್ ದಿವ್ಯಾ ಹಾಗರಗಿ ಅರೆಸ್ಟ್
ಬೆಳಗಾವಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಕ್ವೀನ್ಪಿನ್ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ತಲೆ ಮರೆಸಿಕೊಂಡಿದ್ದರು. ಆದರೆ ಇಂದು ಸಿಐಡಿ ಎಸ್ಪಿ. ರಾಘವೇಂದ್ರ ಹೆಗಡೆ, ಡಿವೈಎಸ್ಪಿ, ಪ್ರಕಾಶ್ ರಾಠೋಡ್, ಡಿವೈಎಸ್ಪಿ ಶಂಕರಗೌಡ ನೇತೃತ್ವದ ತಂಡದಿಂದ ಮಹಾರಾಷ್ಟ್ರದ ಪುಣೆಯ ಹೋಟೆಲ್ವೊಂದರ ಬಳಿ ದಿವ್ಯಾ ಹಾಗರಗಿಯನ್ನು …
Read More »ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಟಕ್ಕುಂಟು ಲೆಕ್ಕಕ್ಕಿಲ್ಲವೇ ಎಂದು ರಾಜ್ಯ ಬಿಜೆಪಿ ಟಾಂಗ್
ಬೆಂಗಳೂರು: ಕಾಂಗ್ರೆಸ್ ನಲ್ಲಿ ಎಲ್ಲವೂ ಸಿದ್ದರಾಮಯ್ಯ ಹೇಳಿದಂತೆ ನಡೆಯುತ್ತಿದೆ. ಹಾಗಾದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಟಕ್ಕುಂಟು ಲೆಕ್ಕಕ್ಕಿಲ್ಲವೇ ಎಂದು ರಾಜ್ಯ ಬಿಜೆಪಿ ಟಾಂಗ್ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಒಂದು ಕಡೆ ಕೆಪಿಸಿಸಿ ಅಧ್ಯಕ್ಷರು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎಂದು ಹೇಳುತ್ತಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರ ಮೂಲಕ ʼಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆʼ ಎಂದು ಹೇಳಿಸುತ್ತಿದ್ದಾರೆ. ಬುರುಡೆ ರಾಮಯ್ಯ ಅವರೇ, ಜಾಣ …
Read More »ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಗುಡ್ ನ್ಯೂಸ್: 6.5 ಲಕ್ಷ ಎಕರೆ ಡೀಮ್ಡ್ ಫಾರೆಸ್ಟ್ ನಿಂದ ಹೊರಗೆ
ಮಂಗಳೂರು: ಡೀಮ್ಡ್ ಫಾರೆಸ್ಟ್ ನಿಯಮ ಸರಳಗೊಳಿಸಿ ರಾಜ್ಯದ ರೈತರ ಆತಂಕ ದೂರ ಮಾಡಲು ಸರ್ಕಾರ ಕ್ರಮಕೈಗೊಂಡಿದೆ. ಮೂಡಬಿದರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 6.5 ಲಕ್ಷ ಎಕರೆ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ನಿಂದ ಹೊರಗಿಡಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ರಾಜ್ಯದ ರೈತರಿಗೆ ಅನೇಕ ವರ್ಷಗಳಿಂದ ಡೀಮ್ಡ್ ಫಾರೆಸ್ಟ್ ನಿಯಮದಿಂದ ಆತಂಕ ಉಂಟಾಗಿತ್ತು. ಇದನ್ನು ಕೈಬಿಡಬೇಕೆಂದು ರೈತರು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದರು. ಇದರ ಅನ್ವಯ 6.5 ಲಕ್ಷ …
Read More »